Homeಮುಖಪುಟಪ್ರವಾದಿ ನಿಂದನೆ: ಮುಂಬೈ ಪೊಲೀಸರ ಕೈಗೆ ಸಿಗದ ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ

ಪ್ರವಾದಿ ನಿಂದನೆ: ಮುಂಬೈ ಪೊಲೀಸರ ಕೈಗೆ ಸಿಗದ ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ

- Advertisement -
- Advertisement -

ಸುದ್ದಿ ವಾಹಿನಿಯೊಂದರಲ್ಲಿ ಪ್ರವಾದಿ ಮುಹಮ್ಮದ್ ಕುರಿತು ಅವಹೇಳನಾಕಾರಿ ಹೇಳಿಕೆ ನೀಡಿ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾರನ್ನು ಮುಂಬೈ ಪೊಲೀಸ್ ತಂಡ ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

ನೂಪುರ್‌ ಶರ್ಮಾ ಹೇಳಿಕೆ ವಿರುದ್ಧ ಹಲವಾರು ರಾಜ್ಯಗಳಲ್ಲಿ ಅವರ ವಿರುದ್ಧ ಪೊಲೀಸ್ ಪ್ರಕರಣಗಳನ್ನು ದಾಖಲಿಸಲಾಗಿದೆ. ಶರ್ಮಾರನ್ನು ವಿಚಾರಣೆಗೆ ಒಳಪಡಿಸಲು ದೆಹಲಿಯಲ್ಲಿರುವ ಮುಂಬೈ ಪೊಲೀಸ್ ತಂಡವು ಅವರನ್ನು ಹುಡುಕಿದ್ದು, ಅವರನ್ನು ಪತ್ತೆಹಚ್ಚಲಾಗುತ್ತಿಲ್ಲ ಎಂದು ತಿಳಿದು ಬಂದಿದೆ.

ಅವರ ಹೇಳಿಕೆ ಭಾರತ ಮತ್ತು ಗಲ್ಫ್ ರಾಷ್ಟ್ರಗಳಲ್ಲಿ ಆಕ್ರೋಶಕ್ಕೆ ಕಾರಣವಾದ ಬಳಿಕ ಮುಸ್ಲಿಮ್ ಸಂಘಟನೆಯಾದ ರಾಝಾ ಅಕಾಡೆಮಿಯ ಜಂಟಿ ಕಾರ್ಯದರ್ಶಿ ಇರ್ಫಾನ್ ಶೇಖ್ ಅವರ ದೂರಿನ ಆಧಾರದ ಮೇಲೆ ಮುಂಬೈ ಪೊಲೀಸರು ಮೇ 28 ರಂದು ದೆಹಲಿ ನಿವಾಸಿ ನೂಪುರ್ ಶರ್ಮಾ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು.

ನೂಪುರ್‌ ಶರ್ಮಾರನ್ನು ಬಂಧಿಸಲು ಮುಂಬೈ ಪೊಲೀಸರ ಬಳಿ ಸಾಕಷ್ಟು ಪುರಾವೆಗಳಿವೆ ಎಂದು ಮಹಾರಾಷ್ಟ್ರ ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ. ಮುಂಬೈ ಪೊಲೀಸ್ ತಂಡ ಕಳೆದ ಐದು ದಿನಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ತಂಗಿದ್ದು, ನೂಪುರ್ ಶರ್ಮಾ ಅವರನ್ನು ಹುಡುಕುತ್ತಿದೆ.

ಇದನ್ನೂ ಓದಿ: ‘ಬಿಜೆಪಿ ಪದಾಧಿಕಾರಿಗಳ ಆಕ್ಷೇಪಾರ್ಹ ಹೇಳಿಕೆಗೆ ವಿರೋಧವಿದೆ’: ಪ್ರವಾದಿ ನಿಂದನೆಯನ್ನು ಖಂಡಿಸಿದ ಅಮೆರಿಕ

ತೃಣಮೂಲ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಅಬುಲ್ ಸೊಹೈಲ್ ಅವರ ದೂರಿನ ಆಧಾರದ ಮೇಲೆ ಕೋಲ್ಕತ್ತಾ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಜೂನ್ 20 ರಂದು ತನ್ನ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಕೋಲ್ಕತ್ತಾ ಪೊಲೀಸರು ಆಕೆಗೆ ಸಮನ್ಸ್ ನೀಡಿದ್ದಾರೆ.

ಇತ್ತ ಪ್ರವಾದಿ ಮೊಹಮ್ಮದ್ ಕುರಿತು ಹೇಳಿಕೆ ನೀಡಿರುವ ನೂಪುರ್‌ ಶರ್ಮಾ ವಿರುದ್ಧ ದೆಹಲಿ ಪೊಲೀಸರು ಮತ್ತೊಂದು ಎಫ್‌ಐಆರ್ ದಾಖಲಿಸಿದ್ದಾರೆ.

ಟಿವಿಯಲ್ಲಿ ಪ್ರವಾದಿ ಮುಹಮ್ಮದ್ ಕುರಿತು ಮಾಡಿದ ಹೇಳಿಕೆಗಳಿಗಾಗಿ ಇರಾನ್, ಇರಾಕ್, ಕುವೈತ್, ಕತಾರ್ ಮತ್ತು ಸೌದಿ ಅರೇಬಿಯಾ ಸೇರಿದಂತೆ 15ಕ್ಕಿಂತ ಹೆಚ್ಚು ರಾಷ್ಟ್ರಗಳಿಂದ ತೀವ್ರ ಪ್ರತಿಕ್ರಿಯೆಗಳು ಮತ್ತು ಅಧಿಕೃತ ಪ್ರತಿಭಟನೆಗಳು ಬಂದ ನಂತರ ನೂಪುರ್‌ ಶರ್ಮಾ ಅವರನ್ನು ಬಿಜೆಪಿ ಅಮಾನತುಗೊಳಿಸಿದೆ. ಹಲವಾರು ಗಲ್ಫ್ ರಾಷ್ಟ್ರಗಳು ಭಾರತೀಯ ರಾಯಭಾರಿಗಳನ್ನು ಕರೆಸಿ ಬಿಜೆಪಿ ವಕ್ತಾರರ “ಇಸ್ಲಾಂ ವಿರೋಧಿ ಹೇಳಿಕೆಗಳು” ಎಂದು ಖಂಡನೆ ವ್ಯಕ್ತಪಡಿಸಿದ್ದವು. ಇದೀಗ ಅಮೆರಿಕಾ ಕೂಡಾ ಧಾರ್ಮಿಕ ವ್ಯಕ್ತಿಗೆ ಮಾಡಿರುವ ಅವಮಾನವನ್ನು ಗುರುವಾರ ಖಂಡಿಸಿದೆ.

“ಇಬ್ಬರು ಬಿಜೆಪಿ ಪದಾಧಿಕಾರಿಗಳು ಮಾಡಿದ ಆಕ್ಷೇಪಾರ್ಹ ಹೇಳಿಕೆಗಳನ್ನು ನಾವು ಖಂಡಿಸುತ್ತೇವೆ. ಪಕ್ಷವು ಆ ಹೇಳಿಕೆಗಳನ್ನು ಸಾರ್ವಜನಿಕವಾಗಿ ಖಂಡಿಸುವುದನ್ನು ನೋಡಿ ನಮಗೆ ಸಂತೋಷವಾಯಿತು” ಎಂದು ವಿದೇಶಾಂಗ ಇಲಾಖೆಯ ವಕ್ತಾರ ನೆಡ್ ಪ್ರೈಸ್ ಸುದ್ದಿಗಾರರಿಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಪ್ರವಾದಿ ನಿಂದನೆ: ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾಗೆ ಕೋಲ್ಕತ್ತಾ ಪೊಲೀಸರ ಸಮನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...