Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣ: ಆರೋಪಿಗಳ ಡಿವೈಸ್‌ಗಳಿಗೆ ಪೊಲೀಸರಿಂದಲೇ ನಕಲಿ ದಾಖಲೆ ವರ್ಗಾವಣೆ!?

ಭೀಮಾ ಕೋರೆಗಾಂವ್ ಪ್ರಕರಣ: ಆರೋಪಿಗಳ ಡಿವೈಸ್‌ಗಳಿಗೆ ಪೊಲೀಸರಿಂದಲೇ ನಕಲಿ ದಾಖಲೆ ವರ್ಗಾವಣೆ!?

ರೋನಾ ವಿಲ್ಸನ್, ವರವರ ರಾವ್ ಮತ್ತು ಹನಿ ಬಾಬು ಅವರ ಎಲೆಕ್ಟ್ರಾನಿಕ್‌ ಡಿವೈಸ್‌ಗಳಿಗೆ ಪೊಲೀಸರೇ ನಕಲಿ ದಾಖಲೆಗಳನ್ನು ತುರುಕಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮ ‘ವೈರ್ಡ್ ಮ್ಯಾಗಜೀನ್’ ವರದಿ ಮಾಡಿದೆ.

- Advertisement -
- Advertisement -

ಹೋರಾಟಗಾರರಾದ ರೋನಾ ವಿಲ್ಸನ್, ವರವರ ರಾವ್ ಮತ್ತು ಹನಿ ಬಾಬು ಅವರಿಗೆ ಸೇರಿದ ಎಲೆಕ್ಟ್ರಾನಿಕ್ ಸಾಧನಗಳನ್ನು ಹ್ಯಾಕ್ ಮಾಡಿದ ಪುಣೆ ಪೊಲೀಸರು, ಅವುಗಳಲ್ಲಿ ನಕಲಿ ಪುರಾವೆಗಳನ್ನು ಹಾಕಿದ್ದಾರೆ ಎಂದು ಯುಎಸ್ ಮೂಲದ ಸೈಬರ್ ಸೆಕ್ಯುರಿಟಿ ಕಂಪನಿಯೊಂದು ಹೇಳಿರುವುದಾಗಿ ಅಮೆರಿಕ ಮೂಲದ ‘ವೈರ್ಡ್ ಮ್ಯಾಗಜೀನ್’ ವರದಿ ಮಾಡಿದೆ.

2018ರ ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಚು ರೂಪಿಸಿದ ಆರೋಪವನ್ನು ವಿಲ್ಸನ್, ರಾವ್ ಮತ್ತು ಬಾಬು ಅವರ ಮೇಲೆ ಹೊರಿಸಲಾಗಿದೆ.

ಈ ಹೋರಾಟಗಾರರನ್ನು ಬಂಧಿಸಿದ ವ್ಯಕ್ತಿಗಳಿಗೂ, ನಕಲಿ ಪುರಾವೆಗಳನ್ನು ವಾಮಮಾರ್ಗದಲ್ಲಿ ಎಲೆಕ್ಟ್ರಾನಿಕ್‌ ಡಿವೈಸ್‌ಗಳಿಗೆ ಹಾಕಿದ ವ್ಯಕ್ತಿಗಳಿಗೂ ಸಂಬಂಧವಿದೆ ಎಂದು ಸೈಬರ್‌ ಸೆಕ್ಯುರಿಟಿ ಸಂಸ್ಥೆ ಸೆಂಟಿನೆಲ್‌ಒನ್‌ನ ಭದ್ರತಾ ಸಂಶೋಧಕ ಜುವಾನ್ ಆಂಡ್ರೆಸ್ ಗೆರೆರೊ-ಸಾಡೆ ಅವರು ‘ದಿ ವೈರ್ಡ್‌’ಗೆ ತಿಳಿಸಿದ್ದಾರೆ.

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ವಕೀಲರು, ಹೋರಾಟಗಾರರು ಸೇರಿದಂತೆ 16 ಮಂದಿಯನ್ನು ಪುಣೆ ಪೊಲೀಸರು ಬಂಧಿಸಿದ್ದರು.

ಯುನೈಟೆಡ್ ಸ್ಟೇಟ್ಸ್ ಮೂಲದ ಡಿಜಿಟಲ್ ಫೊರೆನ್ಸಿಕ್ಸ್ ಕಂಪನಿಯಾದ ಆರ್ಸೆನಲ್ ಕನ್ಸಲ್ಟಿಂಗ್, ಫೆಬ್ರವರಿ 2021ರಲ್ಲಿ ಆತಂಕಕಾರಿ ಸಂಗತಿಯೊಂದನ್ನು ಹೊರಗೆಡವಿತ್ತು. ವಿಲ್ಸನ್ ಅವರ ಲ್ಯಾಪ್‌ಟಾಪ್‌ಗೆ ನುಸುಳಲು ಹ್ಯಾಕರ್‌ಗಳು ಮಾಲ್‌ವೇರ್ ಬಳಸಿದ್ದಾರೆ. ಕನಿಷ್ಠ 10 ದೋಷಾರೋಪಣೆ ಪತ್ರಗಳನ್ನು ಡಿವೈಸ್‌ನಲ್ಲಿ ಇರಿಸಿದ್ದಾರೆ ಎಂದು ವರದಿ ಹೇಳಿತ್ತು.

ಬಂದೂಕು ಮತ್ತು ಮದ್ದುಗುಂಡುಗಳ ಅಗತ್ಯವನ್ನು ಚರ್ಚಿಸಿ ನಿಷೇಧಿತ ಮಾವೋವಾದಿ ಉಗ್ರಗಾಮಿ ಗುಂಪಿಗೆ ಉದ್ದೇಶಿಸಿ ಬರೆದ ಪತ್ರ, ಪ್ರಧಾನಿ ನರೇಂದ್ರ ಮೋದಿಯನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿದೆ ಎಂಬ ವಿವರಗಳೂ ಈ ದಾಖಲೆಗಳಲ್ಲಿ ಇದ್ದವು.

ಜೂನ್ 2018ರಲ್ಲಿ ಬಂಧಿಸುವ ಮೊದಲು ವಿಲ್ಸನ್ ಅವರನ್ನು ಎರಡು ಪ್ರತ್ಯೇಕ ಹ್ಯಾಕರ್‌ಗಳ ಗುಂಪುಗಳು ಟಾರ್ಗೆಟ್ ಮಾಡಿಕೊಂಡಿದ್ದವು ಎಂದು ಸೆಂಟಿನೆಲ್ ಒನ್ ಹೇಳಿಕೊಂಡಿದೆ.

ಸೆಂಟಿನೆಲ್ ಒನ್ ಪ್ರಕಾರ, ಹ್ಯಾಕಿಂಗ್ ನಡೆಸಿದ ಗುಂಪುಗಳಲ್ಲಿ ಒಂದಾದ ModifiedElephant (ಮಾಡಿಫೈಯ್ಡ್‌‌ ಎಲಿಫೆಂಟ್‌) ವಿಲ್ಸನ್ ಅವರ ಎಲೆಕ್ಟ್ರಾನಿಕ್‌ ಸಾಧನಗಳಲ್ಲಿ ನಕಲಿ ದಾಖಲೆಗಳನ್ನು ತುರುಕಿದೆ. ಇನ್ನೊಂದು ಗುಂಪನ್ನು ಸೈಬರ್‌ ಸೆಕ್ಯುರಿಟಿ ಸಂಸ್ಥೆಯು ‘ಸೈಡ್‌ವಿಂಡರ್‌’ ಎಂದು ಗುರುತಿಸಿರುವುದಾಗಿ ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ.

ದಾಳಿಯನ್ನು ಯಾರು ನಡೆಸಿದರು ಅಥವಾ ದಾಳಿ ನಡೆಸಲು ಯಾರು ಆದೇಶಿಸಿದರು ಎಂದು ಸೆಂಟಿನೆಲ್ ಒನ್ ಸಂಸ್ಥೆ ಹೇಳಿಲ್ಲ. ಆದರೆ ಮಾಡಿಫೈಯ್ಡ್‌‌ ಎಲಿಫೆಂಟ್‌ ಗುಂಪಿನ ಚಟುವಟಿಕೆಯು ಭಾರತ ಸರ್ಕಾರದೊಂದಿಗೆ ಹಿಸಾಸಕ್ತಿ ಹೊಂದಿರುವಂತೆ ಕಾಣುತ್ತಿರುವುದಾಗಿ ತನಿಖೆ ಬಹಿರಂಗಪಡಿಸಿದೆ.

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಭಾಗಿಯಾಗಿರುವ ಪುಣೆ ಪೊಲೀಸ್ ಅಧಿಕಾರಿಯೊಬ್ಬರು  ಹ್ಯಾಕಿಂಗ್‌ನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಸೆಂಟಿನೆಲ್ ಒನ್ ಹೇಳಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...