Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣ: ಆರೋಪಿಗಳ ಡಿವೈಸ್‌ಗಳಿಗೆ ಪೊಲೀಸರಿಂದಲೇ ನಕಲಿ ದಾಖಲೆ ವರ್ಗಾವಣೆ!?

ಭೀಮಾ ಕೋರೆಗಾಂವ್ ಪ್ರಕರಣ: ಆರೋಪಿಗಳ ಡಿವೈಸ್‌ಗಳಿಗೆ ಪೊಲೀಸರಿಂದಲೇ ನಕಲಿ ದಾಖಲೆ ವರ್ಗಾವಣೆ!?

ರೋನಾ ವಿಲ್ಸನ್, ವರವರ ರಾವ್ ಮತ್ತು ಹನಿ ಬಾಬು ಅವರ ಎಲೆಕ್ಟ್ರಾನಿಕ್‌ ಡಿವೈಸ್‌ಗಳಿಗೆ ಪೊಲೀಸರೇ ನಕಲಿ ದಾಖಲೆಗಳನ್ನು ತುರುಕಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮ ‘ವೈರ್ಡ್ ಮ್ಯಾಗಜೀನ್’ ವರದಿ ಮಾಡಿದೆ.

- Advertisement -
- Advertisement -

ಹೋರಾಟಗಾರರಾದ ರೋನಾ ವಿಲ್ಸನ್, ವರವರ ರಾವ್ ಮತ್ತು ಹನಿ ಬಾಬು ಅವರಿಗೆ ಸೇರಿದ ಎಲೆಕ್ಟ್ರಾನಿಕ್ ಸಾಧನಗಳನ್ನು ಹ್ಯಾಕ್ ಮಾಡಿದ ಪುಣೆ ಪೊಲೀಸರು, ಅವುಗಳಲ್ಲಿ ನಕಲಿ ಪುರಾವೆಗಳನ್ನು ಹಾಕಿದ್ದಾರೆ ಎಂದು ಯುಎಸ್ ಮೂಲದ ಸೈಬರ್ ಸೆಕ್ಯುರಿಟಿ ಕಂಪನಿಯೊಂದು ಹೇಳಿರುವುದಾಗಿ ಅಮೆರಿಕ ಮೂಲದ ‘ವೈರ್ಡ್ ಮ್ಯಾಗಜೀನ್’ ವರದಿ ಮಾಡಿದೆ.

2018ರ ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಚು ರೂಪಿಸಿದ ಆರೋಪವನ್ನು ವಿಲ್ಸನ್, ರಾವ್ ಮತ್ತು ಬಾಬು ಅವರ ಮೇಲೆ ಹೊರಿಸಲಾಗಿದೆ.

ಈ ಹೋರಾಟಗಾರರನ್ನು ಬಂಧಿಸಿದ ವ್ಯಕ್ತಿಗಳಿಗೂ, ನಕಲಿ ಪುರಾವೆಗಳನ್ನು ವಾಮಮಾರ್ಗದಲ್ಲಿ ಎಲೆಕ್ಟ್ರಾನಿಕ್‌ ಡಿವೈಸ್‌ಗಳಿಗೆ ಹಾಕಿದ ವ್ಯಕ್ತಿಗಳಿಗೂ ಸಂಬಂಧವಿದೆ ಎಂದು ಸೈಬರ್‌ ಸೆಕ್ಯುರಿಟಿ ಸಂಸ್ಥೆ ಸೆಂಟಿನೆಲ್‌ಒನ್‌ನ ಭದ್ರತಾ ಸಂಶೋಧಕ ಜುವಾನ್ ಆಂಡ್ರೆಸ್ ಗೆರೆರೊ-ಸಾಡೆ ಅವರು ‘ದಿ ವೈರ್ಡ್‌’ಗೆ ತಿಳಿಸಿದ್ದಾರೆ.

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ವಕೀಲರು, ಹೋರಾಟಗಾರರು ಸೇರಿದಂತೆ 16 ಮಂದಿಯನ್ನು ಪುಣೆ ಪೊಲೀಸರು ಬಂಧಿಸಿದ್ದರು.

ಯುನೈಟೆಡ್ ಸ್ಟೇಟ್ಸ್ ಮೂಲದ ಡಿಜಿಟಲ್ ಫೊರೆನ್ಸಿಕ್ಸ್ ಕಂಪನಿಯಾದ ಆರ್ಸೆನಲ್ ಕನ್ಸಲ್ಟಿಂಗ್, ಫೆಬ್ರವರಿ 2021ರಲ್ಲಿ ಆತಂಕಕಾರಿ ಸಂಗತಿಯೊಂದನ್ನು ಹೊರಗೆಡವಿತ್ತು. ವಿಲ್ಸನ್ ಅವರ ಲ್ಯಾಪ್‌ಟಾಪ್‌ಗೆ ನುಸುಳಲು ಹ್ಯಾಕರ್‌ಗಳು ಮಾಲ್‌ವೇರ್ ಬಳಸಿದ್ದಾರೆ. ಕನಿಷ್ಠ 10 ದೋಷಾರೋಪಣೆ ಪತ್ರಗಳನ್ನು ಡಿವೈಸ್‌ನಲ್ಲಿ ಇರಿಸಿದ್ದಾರೆ ಎಂದು ವರದಿ ಹೇಳಿತ್ತು.

ಬಂದೂಕು ಮತ್ತು ಮದ್ದುಗುಂಡುಗಳ ಅಗತ್ಯವನ್ನು ಚರ್ಚಿಸಿ ನಿಷೇಧಿತ ಮಾವೋವಾದಿ ಉಗ್ರಗಾಮಿ ಗುಂಪಿಗೆ ಉದ್ದೇಶಿಸಿ ಬರೆದ ಪತ್ರ, ಪ್ರಧಾನಿ ನರೇಂದ್ರ ಮೋದಿಯನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿದೆ ಎಂಬ ವಿವರಗಳೂ ಈ ದಾಖಲೆಗಳಲ್ಲಿ ಇದ್ದವು.

ಜೂನ್ 2018ರಲ್ಲಿ ಬಂಧಿಸುವ ಮೊದಲು ವಿಲ್ಸನ್ ಅವರನ್ನು ಎರಡು ಪ್ರತ್ಯೇಕ ಹ್ಯಾಕರ್‌ಗಳ ಗುಂಪುಗಳು ಟಾರ್ಗೆಟ್ ಮಾಡಿಕೊಂಡಿದ್ದವು ಎಂದು ಸೆಂಟಿನೆಲ್ ಒನ್ ಹೇಳಿಕೊಂಡಿದೆ.

ಸೆಂಟಿನೆಲ್ ಒನ್ ಪ್ರಕಾರ, ಹ್ಯಾಕಿಂಗ್ ನಡೆಸಿದ ಗುಂಪುಗಳಲ್ಲಿ ಒಂದಾದ ModifiedElephant (ಮಾಡಿಫೈಯ್ಡ್‌‌ ಎಲಿಫೆಂಟ್‌) ವಿಲ್ಸನ್ ಅವರ ಎಲೆಕ್ಟ್ರಾನಿಕ್‌ ಸಾಧನಗಳಲ್ಲಿ ನಕಲಿ ದಾಖಲೆಗಳನ್ನು ತುರುಕಿದೆ. ಇನ್ನೊಂದು ಗುಂಪನ್ನು ಸೈಬರ್‌ ಸೆಕ್ಯುರಿಟಿ ಸಂಸ್ಥೆಯು ‘ಸೈಡ್‌ವಿಂಡರ್‌’ ಎಂದು ಗುರುತಿಸಿರುವುದಾಗಿ ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ.

ದಾಳಿಯನ್ನು ಯಾರು ನಡೆಸಿದರು ಅಥವಾ ದಾಳಿ ನಡೆಸಲು ಯಾರು ಆದೇಶಿಸಿದರು ಎಂದು ಸೆಂಟಿನೆಲ್ ಒನ್ ಸಂಸ್ಥೆ ಹೇಳಿಲ್ಲ. ಆದರೆ ಮಾಡಿಫೈಯ್ಡ್‌‌ ಎಲಿಫೆಂಟ್‌ ಗುಂಪಿನ ಚಟುವಟಿಕೆಯು ಭಾರತ ಸರ್ಕಾರದೊಂದಿಗೆ ಹಿಸಾಸಕ್ತಿ ಹೊಂದಿರುವಂತೆ ಕಾಣುತ್ತಿರುವುದಾಗಿ ತನಿಖೆ ಬಹಿರಂಗಪಡಿಸಿದೆ.

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಭಾಗಿಯಾಗಿರುವ ಪುಣೆ ಪೊಲೀಸ್ ಅಧಿಕಾರಿಯೊಬ್ಬರು  ಹ್ಯಾಕಿಂಗ್‌ನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಸೆಂಟಿನೆಲ್ ಒನ್ ಹೇಳಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...