Homeಮುಖಪುಟಮಹಾರಾಷ್ಟ್ರ ಪರಿಷತ್ ಚುನಾವಣೆ: ಮಹಾವಿಕಾಸ್ ಅಘಾಡಿ ಮತ್ತು ಬಿಜೆಪಿ ನಡುವೆ ಮತ್ತೆ ಫೈಟ್

ಮಹಾರಾಷ್ಟ್ರ ಪರಿಷತ್ ಚುನಾವಣೆ: ಮಹಾವಿಕಾಸ್ ಅಘಾಡಿ ಮತ್ತು ಬಿಜೆಪಿ ನಡುವೆ ಮತ್ತೆ ಫೈಟ್

- Advertisement -
- Advertisement -

ಮಹಾರಾಷ್ಟ್ರದ ರಾಜ್ಯಸಭೆ ಚುನಾವಣೆಯಲ್ಲಿ ತೀವ್ರ ಪೈಪೋಟಿ ನಡೆದ ನಂತರ ಇಂದು ನಡೆಯುವ ವಿಧಾನಸಭೆಯಿಂದ ಪರಿಷತ್ ಆಯ್ಕೆಯಾಗುವ ಚುನಾವಣೆಯಲ್ಲಿ ಮತ್ತೊಮ್ಮೆ ಮಹಾವಿಕಾಸ್ ಅಘಾಡಿ ಮತ್ತು ಬಿಜೆಪಿ ನಡುವೆ ಮತ್ತೆ ಫೈಟ್ ನಡೆಯುತ್ತಿದೆ. 10 ಸ್ಥಾನಗಳಿಗೆ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು ತೀವ್ರ ಕಸರತ್ತಿಗೆ ಕಾರಣವಾಗಿದೆ.

ಮಹಾವಿಕಾಸ್ ಅಘಾಡಿಯ ವತಿಯಿಂದ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ತಲಾ ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಮತ್ತೊಂದೆಡೆ ಬಿಜೆಪಿ ಐವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಒಟ್ಟು 11 ಜನರಲ್ಲಿ 9 ಅಭ್ಯರ್ಥಿಗಳು ಸುಲಭವಾಗಿ ಆಯ್ಕೆಯಾಗಲಿದ್ದು, ಉಳಿದ ಒಂದು ಸ್ಥಾನಕ್ಕಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಯ ನಡುವೆ ಪೈಪೋಟಿ ನಡೆಯುತ್ತಿದೆ.

ಕಾಂಗ್ರೆಸ್‌ನ ಮುಂಬೈ ಅಧ್ಯಕ್ಷ ಭಾಯ್ ಜಗ್ಪಪ್ ಮತ್ತು ಬಿಜೆಪಿಯ ಪ್ರಸಾದ್ ಲಾಡ್ 10 ನೇ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಆಯ್ಕೆಯಾಗಲು ತೀವ್ರ ಕಸರತ್ತು ನಡೆಸಿದ್ದಾರೆ.

ಇಂದಿನ ವಿಧಾನಪರಿಷತ್ ಚುನಾವಣೆಯಲ್ಲಿ ಆಯ್ಕೆಯಾಗಲು ಪ್ರತಿ ಅಭ್ಯರ್ಥಿಯು ವಿಧಾನ ಸಭೆಯ 26 ಅಭ್ಯರ್ಥಿಗಳ ಮತ ಪಡೆಯಬೇಕು. ಮಹಾರಾಷ್ಟ್ರ ವಿಧಾನಸಭೆಯಲ್ಲಿ 29  ಪಕ್ಷೇತರ ಅಭ್ಯರ್ಥಿಗಳು ಇರುವುದರಿಂದ ಮತಗಳು ಹಂಚಿಹೋಗುವ ಸಾಧ್ಯತೆಯಿದ್ದು ನೇರಾ ನೇರಾ ಪೈಪೋಟಿ ಏರ್ಪಟ್ಟಿದೆ.

106 ಸದಸ್ಯ ಬಲ ಹೊಂದಿರುವ ಬಿಜೆಪಿ 4 ಅಭ್ಯರ್ಥಿಗಳನ್ನು ಸುಲಭವಾಗಿ ಆಯ್ಕೆ ಮಾಡಬಹುದು. ಆದರೆ 5ನೇ ಅಭ್ಯರ್ಥಿಯ ಗೆಲುವಿಗಾಗಿ ಪಕ್ಷೇತರರು ಮತ್ತು ಇತರ ಪಕ್ಷಗಳ ಶಾಸಕರ ಮತಗಳ ಮೇಲೆ ಕಣ್ಣಿಟ್ಟಿದೆ. ಇತ್ತೀಚಿಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿಯೂ ಅದು ತನ್ನ ಮೂರನೇ ಅಭ್ಯರ್ಥಿಯನ್ನು ಹಾಗೆ ಗೆಲ್ಲಿಸಿಕೊಂಡ ಹುಮ್ಮಸ್ಸಿನಲ್ಲಿದೆ.

ಆಡಳಿತರೂಢ ಮಹಾವಿಕಾಸ್ ಅಘಾಡಿಯಲ್ಲಿ ಶಿವಸೇನೆ ಪಕ್ಷವು 55 ಶಾಸಕರನ್ನು ಹೊಂದಿದ್ದು ತನ್ನ ಇಬ್ಬರು ಅಭ್ಯರ್ಥಿಗಳನ್ನು ಸುಲಭವಾಗಿ ಗೆಲ್ಲಿಸಿಕೊಳ್ಳಲಿದೆ. ಆ ನಂತರವು ಹೆಚ್ಚುವರಿಯಾಗಿ 3 ಶಾಸಕರನ್ನು ಹೊಂದಿದೆ. ಎನ್‌ಸಿಪಿ ಸಹ 51 ಸದಸ್ಯ ಬಲವನ್ನು ಹೊಂದಿದ್ದು ಇನ್ನೊಂದು ಶಿವಸೇನೆಯ ಮತದೊಂದಿಗೆ ತನ್ನ ಇಬ್ಬರೂ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ವಿಶ್ವಾಸ ಹೊಂದಿದೆ. ಆದರೆ ಕಾಂಗ್ರೆಸ್ ಕೇವಲ 44 ಸದಸ್ಯ ಬಲವನ್ನು ಹೊಂದಿದೆ. ಮೊದಲನೇ ಅಭ್ಯರ್ಥಿ ಸುಲಭವಾಗಿ ಜಯಸಿದರೆ ಎರಡನೇ ಅಭ್ಯರ್ಥಿಯ ಗೆಲುವಿಗಾಗಿ ಮೊದಲ ಪ್ರಶಾಸ್ತ್ಯದ 8 ಮತಗಳ ಕೊರತೆ ಬಿದ್ದಿದೆ. ಮಿತ್ರ ಪಕ್ಷ ಶಿವಸೇನೆಯ ಬಳಿ 1 ಹೆಚ್ಚುವರಿ ಮತವಿದ್ದರೆ ಇನ್ನೂ 7 ಮತಗಳನ್ನು ಪಕ್ಷೇತರರಿಂದ ನಿರೀಕ್ಷೆ ಮಾಡುತ್ತಿದೆ.

ಇದನ್ನೂ ಓದಿ: ಅಗ್ನಿಪಥ್ ವಿರೋಧಿಸಿ ಇಂದು ಭಾರತ್ ಬಂದ್: ಬಿಹಾರದಲ್ಲಿ 350 ರೈಲುಗಳ ಸಂಚಾರ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...