Homeಮುಖಪುಟಮಹಾರಾಷ್ಟ್ರ ಪರಿಷತ್ ಚುನಾವಣೆ: ಮಹಾವಿಕಾಸ್ ಅಘಾಡಿ ಮತ್ತು ಬಿಜೆಪಿ ನಡುವೆ ಮತ್ತೆ ಫೈಟ್

ಮಹಾರಾಷ್ಟ್ರ ಪರಿಷತ್ ಚುನಾವಣೆ: ಮಹಾವಿಕಾಸ್ ಅಘಾಡಿ ಮತ್ತು ಬಿಜೆಪಿ ನಡುವೆ ಮತ್ತೆ ಫೈಟ್

- Advertisement -
- Advertisement -

ಮಹಾರಾಷ್ಟ್ರದ ರಾಜ್ಯಸಭೆ ಚುನಾವಣೆಯಲ್ಲಿ ತೀವ್ರ ಪೈಪೋಟಿ ನಡೆದ ನಂತರ ಇಂದು ನಡೆಯುವ ವಿಧಾನಸಭೆಯಿಂದ ಪರಿಷತ್ ಆಯ್ಕೆಯಾಗುವ ಚುನಾವಣೆಯಲ್ಲಿ ಮತ್ತೊಮ್ಮೆ ಮಹಾವಿಕಾಸ್ ಅಘಾಡಿ ಮತ್ತು ಬಿಜೆಪಿ ನಡುವೆ ಮತ್ತೆ ಫೈಟ್ ನಡೆಯುತ್ತಿದೆ. 10 ಸ್ಥಾನಗಳಿಗೆ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು ತೀವ್ರ ಕಸರತ್ತಿಗೆ ಕಾರಣವಾಗಿದೆ.

ಮಹಾವಿಕಾಸ್ ಅಘಾಡಿಯ ವತಿಯಿಂದ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ತಲಾ ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಮತ್ತೊಂದೆಡೆ ಬಿಜೆಪಿ ಐವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಒಟ್ಟು 11 ಜನರಲ್ಲಿ 9 ಅಭ್ಯರ್ಥಿಗಳು ಸುಲಭವಾಗಿ ಆಯ್ಕೆಯಾಗಲಿದ್ದು, ಉಳಿದ ಒಂದು ಸ್ಥಾನಕ್ಕಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಯ ನಡುವೆ ಪೈಪೋಟಿ ನಡೆಯುತ್ತಿದೆ.

ಕಾಂಗ್ರೆಸ್‌ನ ಮುಂಬೈ ಅಧ್ಯಕ್ಷ ಭಾಯ್ ಜಗ್ಪಪ್ ಮತ್ತು ಬಿಜೆಪಿಯ ಪ್ರಸಾದ್ ಲಾಡ್ 10 ನೇ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಆಯ್ಕೆಯಾಗಲು ತೀವ್ರ ಕಸರತ್ತು ನಡೆಸಿದ್ದಾರೆ.

ಇಂದಿನ ವಿಧಾನಪರಿಷತ್ ಚುನಾವಣೆಯಲ್ಲಿ ಆಯ್ಕೆಯಾಗಲು ಪ್ರತಿ ಅಭ್ಯರ್ಥಿಯು ವಿಧಾನ ಸಭೆಯ 26 ಅಭ್ಯರ್ಥಿಗಳ ಮತ ಪಡೆಯಬೇಕು. ಮಹಾರಾಷ್ಟ್ರ ವಿಧಾನಸಭೆಯಲ್ಲಿ 29  ಪಕ್ಷೇತರ ಅಭ್ಯರ್ಥಿಗಳು ಇರುವುದರಿಂದ ಮತಗಳು ಹಂಚಿಹೋಗುವ ಸಾಧ್ಯತೆಯಿದ್ದು ನೇರಾ ನೇರಾ ಪೈಪೋಟಿ ಏರ್ಪಟ್ಟಿದೆ.

106 ಸದಸ್ಯ ಬಲ ಹೊಂದಿರುವ ಬಿಜೆಪಿ 4 ಅಭ್ಯರ್ಥಿಗಳನ್ನು ಸುಲಭವಾಗಿ ಆಯ್ಕೆ ಮಾಡಬಹುದು. ಆದರೆ 5ನೇ ಅಭ್ಯರ್ಥಿಯ ಗೆಲುವಿಗಾಗಿ ಪಕ್ಷೇತರರು ಮತ್ತು ಇತರ ಪಕ್ಷಗಳ ಶಾಸಕರ ಮತಗಳ ಮೇಲೆ ಕಣ್ಣಿಟ್ಟಿದೆ. ಇತ್ತೀಚಿಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿಯೂ ಅದು ತನ್ನ ಮೂರನೇ ಅಭ್ಯರ್ಥಿಯನ್ನು ಹಾಗೆ ಗೆಲ್ಲಿಸಿಕೊಂಡ ಹುಮ್ಮಸ್ಸಿನಲ್ಲಿದೆ.

ಆಡಳಿತರೂಢ ಮಹಾವಿಕಾಸ್ ಅಘಾಡಿಯಲ್ಲಿ ಶಿವಸೇನೆ ಪಕ್ಷವು 55 ಶಾಸಕರನ್ನು ಹೊಂದಿದ್ದು ತನ್ನ ಇಬ್ಬರು ಅಭ್ಯರ್ಥಿಗಳನ್ನು ಸುಲಭವಾಗಿ ಗೆಲ್ಲಿಸಿಕೊಳ್ಳಲಿದೆ. ಆ ನಂತರವು ಹೆಚ್ಚುವರಿಯಾಗಿ 3 ಶಾಸಕರನ್ನು ಹೊಂದಿದೆ. ಎನ್‌ಸಿಪಿ ಸಹ 51 ಸದಸ್ಯ ಬಲವನ್ನು ಹೊಂದಿದ್ದು ಇನ್ನೊಂದು ಶಿವಸೇನೆಯ ಮತದೊಂದಿಗೆ ತನ್ನ ಇಬ್ಬರೂ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ವಿಶ್ವಾಸ ಹೊಂದಿದೆ. ಆದರೆ ಕಾಂಗ್ರೆಸ್ ಕೇವಲ 44 ಸದಸ್ಯ ಬಲವನ್ನು ಹೊಂದಿದೆ. ಮೊದಲನೇ ಅಭ್ಯರ್ಥಿ ಸುಲಭವಾಗಿ ಜಯಸಿದರೆ ಎರಡನೇ ಅಭ್ಯರ್ಥಿಯ ಗೆಲುವಿಗಾಗಿ ಮೊದಲ ಪ್ರಶಾಸ್ತ್ಯದ 8 ಮತಗಳ ಕೊರತೆ ಬಿದ್ದಿದೆ. ಮಿತ್ರ ಪಕ್ಷ ಶಿವಸೇನೆಯ ಬಳಿ 1 ಹೆಚ್ಚುವರಿ ಮತವಿದ್ದರೆ ಇನ್ನೂ 7 ಮತಗಳನ್ನು ಪಕ್ಷೇತರರಿಂದ ನಿರೀಕ್ಷೆ ಮಾಡುತ್ತಿದೆ.

ಇದನ್ನೂ ಓದಿ: ಅಗ್ನಿಪಥ್ ವಿರೋಧಿಸಿ ಇಂದು ಭಾರತ್ ಬಂದ್: ಬಿಹಾರದಲ್ಲಿ 350 ರೈಲುಗಳ ಸಂಚಾರ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...