Homeರಾಷ್ಟ್ರೀಯಅಗ್ನಿವೀರರಿಗೆ ‘ಬಟ್ಟೆ ಒಗೆಯುವ & ಕ್ಷೌರ ತರಬೇತಿ’ ನೀಡುತ್ತೇವೆ: ಒಕ್ಕೂಟ ಸರ್ಕಾರದ ಸಚಿವ

ಅಗ್ನಿವೀರರಿಗೆ ‘ಬಟ್ಟೆ ಒಗೆಯುವ & ಕ್ಷೌರ ತರಬೇತಿ’ ನೀಡುತ್ತೇವೆ: ಒಕ್ಕೂಟ ಸರ್ಕಾರದ ಸಚಿವ

- Advertisement -
- Advertisement -

ಅಗ್ನಿಪಥ್‌ ಯೋಜನೆಗೆ ನೇಮಕಾತಿಯಾಗುವವರಿಗೆ ಚಾಲನೆ, ಎಲೆಕ್ಟ್ರಿಷಿಯನ್, ಬಟ್ಟೆ ಒಗೆಯುವ ಮತ್ತು ಕ್ಷೌರ ಕೌಶಲ್ಯಗಳ ತರಬೇತಿ ನೀಡಲಾಗುವುದು ಎಂದು ಒಕ್ಕೂಟ ಸರ್ಕಾರದ ಸಚಿವ ಜಿ. ಕಿಶನ್ ರೆಡ್ಡಿ ಅವರು ಹೇಳಿ ವಿವಾದ ಸೃಷ್ಟಿಸಿದ್ದು, “ಅಗ್ನಿವೀರರು ತಮ್ಮ ನಾಲ್ಕು ವರ್ಷಗಳ ಅವಧಿ ಮುಗಿದ ನಂತರ, ಹುದ್ದೆಗಳಿಗೆ ಸೇರಲು ಅವರಿಗೆ ಈ ಕೌಶಲ್ಯ ಸಹಾಯಕವಾಗುತ್ತದೆ” ಎಂದು ಹೇಳಿದ್ದಾರೆ.

ಸಚಿವರು ಪತ್ರಿಕಾಗೋಷ್ಠಿಯಲ್ಲಿ ನೀಡಿದ್ದ ಹೇಳಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ಭಾರಿ ಆಕ್ರೋಶ ವ್ಯಕ್ತವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಟೀಕೆಗಳಿಗೆ ಪ್ರತಿಕ್ರಿಯಿಸಿರುವ ಶಿವಸೇನಾ ನಾಯಕಿ, ಸಂಸದೆ ಪ್ರಿಯಾಂಕಾ ಚತುರ್ವೇದಿ, “ಸಶಸ್ತ್ರ ಪಡೆಗಳು ಈಗ ಅಗ್ನಿಪಥ್ ನೇಮಕಾತಿ ಯೋಜನೆಯಡಿ ಚಾಲನೆ, ಎಲೆಕ್ಟ್ರಿಷಿಯನ್ ಮುಂತಾದ ದೇಶಕ್ಕೆ ಕೌಶಲ್ಯಪೂರ್ಣ ಕಾರ್ಮಿಕರಿಗೆ ತರಬೇತಿ ಕೇಂದ್ರವಾಗಲಿದೆ. ಹೊಸ ಸಾಧನೆಯೊಂದು ಹೊರಹೊಮ್ಮಿದೆ!” ಎಂದು ಅವರು ಹೇಳಿದ್ದಾರೆ.

ಈ ವಿಡಿಯೋವನ್ನು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ನಾಯಕ ಕ್ರಿಶಾಂಕ್ ಮನ್ನೆ ಕೂಡ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ಹಿಂಸಾಚಾರದಲ್ಲಿ ಭಾಗಿಯಾದವರು ಸೇನೆ ಸೇರಲು ಸಾಧ್ಯವಿಲ್ಲ- ಲೆ. ಜನರಲ್ ಪುರಿ

ಅಗ್ನಿಪಥ್ ಯೋಜನೆ ಎಂದರೇನು?

ಒಕ್ಕೂಟ ಸರ್ಕಾರದವು ಮಂಗಳವಾರ ಅಗ್ನಿಪಥ್ ಯೋಜನೆಯನ್ನು ಅನಾವರಣಗೊಳಿಸಿದೆ. ಹೊಸ ಸೇನಾ ನೇಮಕಾತಿ ಯೋಜನೆಯಡಿ ಹದಿನೇಳುವರೆಯಿಂದ 21 ವರ್ಷ ವಯಸ್ಸಿನ ಯುವಕರನ್ನು ನಾಲ್ಕು ವರ್ಷಗಳ ಅವಧಿಗೆ ಸೈನ್ಯಕ್ಕೆ ಸೇರಿಸಲಾಗುತ್ತದೆ.

ಈ ರೀತಿ ಸೇರಿದ 25% ಜನರನ್ನು ಮಾತ್ರ ನಾಲ್ಕು ವರ್ಷಗಳ ನಂತರ ಖಾಯಂ ಮಾಡಲಾಗುತ್ತದೆ. ಉಳಿದವರು ಒಂದಿಷ್ಟು ಪರಿಹಾರದೊಂದಿಗೆ ಕಡ್ಡಾಯ ನಿವೃತ್ತಿಯನ್ನು ಪಡೆಯಬೇಕಾಗುತ್ತದೆ. ಆದರೆ ಅವರಿಗೆ ಯಾವುದೇ ಪಿಂಚಣಿ ನೀಡಲಾಗುವುದಿಲ್ಲ. ಹೊಸ ಯೋಜನೆಯಡಿ ನೇಮಕಗೊಳ್ಳುವ ಯುವಕರನ್ನು ಅಗ್ನಿವೀರ್ ಎಂದು ಕರೆಯಲಾಗುತ್ತದೆ.

ಉದ್ಯೋಗದ ಮೊದಲ ವರ್ಷದಲ್ಲಿ ಅಗ್ನಿವೀರ್‌ನ ಮಾಸಿಕ ವೇತನವು 30,000 ರೂ. ಆಗಿರುತ್ತದೆ. ಆದರೆ ಅವರ ಕೈಗೆ ಪ್ರತಿ ತಿಂಗಳು ಸಿಗುವ ಮೊತ್ತ 21,000 ರೂ. ಆಗಿದ್ದು, ಉಳಿದ 9 ಸಾವಿರ ರೂ.ಗಳನ್ನು ಉಳಿಸಿ ನಾಲ್ಕು ವರ್ಷಗಳ ನಂತರ ನೀಡಲಾಗುತ್ತದೆ. ಇದರ ನಂತರ ಎರಡನೇ, ಮೂರನೇ ಮತ್ತು ನಾಲ್ಕನೇ ವರ್ಷದಲ್ಲಿ ಮಾಸಿಕ ವೇತನವು 33 ಸಾವಿರ ರೂ., 36,500 ರೂ. ಮತ್ತು 40,000 ಆಗಿರುತ್ತದೆ.

ಇದನ್ನೂ ಓದಿ:ಅಗ್ನಿಪಥ್ ವಿರೋಧಿಸಿ ಇಂದು ಭಾರತ್ ಬಂದ್: ಬಿಹಾರದಲ್ಲಿ 350 ರೈಲುಗಳ ಸಂಚಾರ ರದ್ದು 

ಸರ್ಕಾರದ ಈ ಯೋಜನೆಯ ವಿರುದ್ಧ ದೇಶದಾದ್ಯಂತ ಸೇನಾ ಉದ್ಯೋಗಾಕಾಂಕ್ಷಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭಾರಿ ಪ್ರತಿಭಟನೆ ಭುಗಿಲೆದ್ದಿದ್ದು, ಹಿಂಸೆಗೆ ತಿರುಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...