Homeಕರ್ನಾಟಕಆನಂದಸಿಂಗ್ ರಾಜಿನಾಮೆ ಬ್ಲ್ಯಾಕ್‍ಮೇಲ್ ತಂತ್ರವೋ? ಅಸಲಿ ಕಾರಣ ಇದಲ್ಲವೇ?

ಆನಂದಸಿಂಗ್ ರಾಜಿನಾಮೆ ಬ್ಲ್ಯಾಕ್‍ಮೇಲ್ ತಂತ್ರವೋ? ಅಸಲಿ ಕಾರಣ ಇದಲ್ಲವೇ?

ರಾಜ್ಯ ಸರ್ಕಾರದ ಹೊಸ ಮೈನಿಂಗ್ ಲೀಸ್ ನೀತಿಯ ಪ್ರಕಾರ ಫ್ಯಾಕ್ಟರಿ ಇರುವ ಕಂಪನಿಗಳಿಗೆ ಮಾತ್ರ ಲೀಸ್ ನೀಡಲಾಗುವುದು ಎಂಬ ನಿಯಮವಿದೆ ಎನ್ನಲಾಗಿದೆ. ಹೀಗಾದರೆ ಆನಂದಸಿಂಗ್, ಲಾಡ್ ಮುಂತಾದವರಿಗೆ ಹೊಸ ಲೀಸ್ ಸಿಗುವುದು ಅಸಾಧ್ಯ.

- Advertisement -
- Advertisement -

| ಮಲ್ಲನಗೌಡರ್ |

ಇವತ್ತು ಮುಂಜಾನೆಯಿಂದ ಸರ್ಕಾರ ಬೀಳುವ/ ಬೀಳಿಸುವ ಆಟ ಹೊರನೋಟಕ್ಕೆ ಐಪಿಎಲ್ ಮ್ಯಾಚಿನ ಖದರು ಕಳೆಗಟ್ಟಿಕೊಂಡಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅಮೆರಿಕದಲ್ಲಿರುವಾಗ ದಿಢೀರನೆ ರಾಜಿನಾಮೆಯ ಕರಿಮೋಡಗಳು ಕಾಣತೋಡಗಿದ್ದು ಇವು ಮಳೆ ಸುರಿಸುತ್ತವಾ ಅಥವಾ ಎಂದಿನಂತೆ ಹಾಗೆ ಬಂದಂತೆ ಹೀಗೆ ತೇಲಿ ಹೋಗುತ್ತವಾ ಎಂಬ ಪ್ರಶ್ನೆ ಎದ್ದಿದೆ.

ಈ ರಾಜಿನಾಮೆ ಕ್ಲೈಮೇಟಿನಲ್ಲಿ ಎದ್ದು ಹೊಡೆಯುತ್ತಿರುವುದು ಹೊಸಪೇಟೆಯ ಶಾಸಕ ಆಂದ್‍ಸಿಂಗ್ ನಡವಳಿಕೆ. ಅವರೀಗ ಸ್ಪೀಕರ್ ಪಿ.ಎಸ್‍ಗೆ ರಾಜಿನಾಮೆ ಕೊಟ್ಟು ಮಾಧ್ಯಮಗಳ ಎದುರು ಅವರು ಸ್ಪೀಕರ್ ಹೆಸರಲ್ಲಿ ಬರೆದ ರಾಜಿನಾಮೆ ಪತ್ರವನ್ನು ಪ್ರದರ್ಶಿಸಿದ್ದಾರೆ. ಇದಕ್ಕೂ ಮೊದಲು ಅವರು ರಾಜಿನಾಮೆಯನ್ನು ರಾಜ್ಯಪಾಲರಿಗೆ ಕೊಟ್ಟಿದ್ದು ವಿಚಿತ್ರವೂ ಆಗಿತ್ತು, ಹಾಸ್ಯಾಸ್ಪದವೂ ಆಗಿತ್ತು. ಬಹುಷ ಅದು ಸರ್ಕಾರದ ಮೇಲೆ ಒತ್ತಡ ಹೇರಿ ತಮ್ಮ ಕೆಲಸ ಮಾಡಿಸಿಕೊಳ್ಳುವ ತಂತ್ರವಾಗಿದೆ. ಜಿಂದಾಲ್ ಕಂಪನಿಗೂ ಆನಂದಸಿಂಗ್‍ರಿಗೂ ವ್ಯವಹಾರದ ಮಟ್ಟಿಗೆ ಸರಿಯಿಲ್ಲ.

ಜಿಂದಾಲ್‍ಗೆ ಭೂಮಿ ಮಾರಾಟ ಮಾಡಬಾರದು ಎಂದು ಬಹಿರಂಗವಾಗಿ ಹೇಳಿದ ಏಕೈಕ ಬಳ್ಳಾರಿ ಶಾಸಕ ಅವರು. ಹಿಂದೆಯೂ ಒಮ್ಮೆ ಅವರು ಹೊಸಪೇಟೆ ಡ್ಯಾಂನಲ್ಲಿ ನೀರಿನ ಮಟ್ಟ ಕಡಿಮೆ ಇದ್ದಾಗ ಜಿಂದಾಲ್‍ಗೆ ನೀರು ಬಿಡಬಾರದು ಎಂದಿದ್ದರು.

ಈಗ ಜಿಂದಾಲ್‍ಗೆ ಭೂಮಿ ಮಾರಾಟ ವಿಷಯದ ಮರುಪರಿಶೀಲನೆ ಮಾಡಲು ರಚಿಸಿರುವ ಎಂಬಿ ಪಾಟೀಲ್ ನೇತೃತ್ವದ ಸಚಿವ ಸಂಪುಟ ಉಪಸಮಿತಿಯ ಮೇಲೆ ಒತ್ತಡ ಹೇರಲು, ಆ ಮೂಲಕ ಜಿಂದಾಲ್‍ಗೆ ಭೂಮಿ ಮಾರಾಟ ಆಗದಂತೆ ತಡೆಯುವ ಪ್ರಯತ್ನವನ್ನು ಆನಂದಸಿಂಗ್ ಮಾಡುತ್ತಿರುವ ಸಾಧ್ಯತೆ ಇದೆ. ತಮಗೆ ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ಬೆಂಬಲವೂ ಇದೆ ಎಂದು ಆನಂದಸಿಂಗ್ ಹೇಳುತ್ತಿರುವುದು ಕುತೂಹಲಕರವಾಗಿದೆ. ಹೊಸಪೇಟೆ ಕೇಂದ್ರವಾಗಿಸಿ ವಿಜಯನಗರ ಹೊಸ ಜಿಲ್ಲೆ ರಚಿಸಬೇಕೆಂಬ ಬೇಡಿಕೆಗಾಗಿ ರಾಜಿನಾಮೆ ನಿಡುತ್ತಿರುವುದಾಗಿಯೂ ಆನಂದಸಿಂಗ್ ಹೇಳಲು ಶುರು ಮಾಡಿದ್ದಾರೆ.

ಇಲ್ಲಿ ಒಂದು ಸೂಕ್ಷ್ಮ ವಿಷಯವೂ ಇದೆ. ರಾಜ್ಯ ಸರ್ಕಾರದ ಹೊಸ ಮೈನಿಂಗ್ ಲೀಸ್ ನೀತಿಯ ಪ್ರಕಾರ ಫ್ಯಾಕ್ಟರಿ ಇರುವ ಕಂಪನಿಗಳಿಗೆ ಮಾತ್ರ ಲೀಸ್ ನೀಡಲಾಗುವುದು ಎಂಬ ನಿಯಮವಿದೆ ಎನ್ನಲಾಗಿದೆ. ಹೀಗಾದರೆ ಆನಂದಸಿಂಗ್, ಲಾಡ್ ಮುಂತಾದವರಿಗೆ ಹೊಸ ಲೀಸ್ ಸಿಗುವುದು ಅಸಾಧ್ಯ. ಹೊಸ ಲೀಸ್‍ಗಳೆಲ್ಲ ಜಿಂದಾಲ್ ಪಾಲಾಗುವ ಸಾಧ್ಯತೆಯೇ ಹೆಚ್ಚು ಎನ್ನಲಾಗುತ್ತಿದೆ. ಈ ಹೊಸ ನಿಯಮ ತಿದ್ದುಪಡಿ ಮಾಡಿ ಫ್ಯಾಕ್ಟರಿ ಇಲ್ಲದ ಮೈನಿಂಗ್ ಕಂಪನಿಗಳಿಗೂ ಲೀಸ್ ನೀಡುವ ಅವಕಾಶ ಮಾಡಿಕೊಡಿ ಎಂಬ ಒತ್ತಡ ಹೇರುವ ತಂತ್ರವಾಗಿಯೂ ಇದನ್ನು ನೋಡಬಹುದು.

ತಮ್ಮ ವೈಯಕ್ತಿಕ ಲಾಭಕ್ಕಾಗಿ ತಾವಿರುವ ಪಕ್ಷದ ಮೇಲೆ ಒತ್ತಡ ಹೇರಲು ಹಿಂದೆ ಇಂತಹ ಹಲವಾರು ಬ್ಲ್ಯಾಕ್‍ಮೇಲ್ ತಂತ್ರಗಳನ್ನು ಆನಂದಸಿಂಗ್ ಅನುಸರಿಸಿದ್ದಾರೆ. ಅವರು ಬಿಜೆಪಿ ಶಾಸಕರಾಗಿದ್ದಾಗ ಮಂತ್ರಿ ಪದವಿ ಪಡೆಯಲು ಒತ್ತಡ ಹೇರುವ ಸಲುವಾಗಿ ಹೊಸಪೇಟೆಯಲ್ಲಿ ಭವ್ಯವಾಗಿ ಟಿಪ್ಪು ಜಯಂತಿ ಆಚರಿಸಿದ್ದರು. ಕಾಂಗ್ರೆಸ್ ಶಾಸಕರಾದ ಮೇಲೆ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಲು ಒತ್ತಡ ಹೇರಲು ಹನುಮ ಮಾಲೆ ಜಯಂತಿಯಲ್ಲಿ ಭಾಗವಹಿಸಿ ಕಾಂಗ್ರೆಸ್ ನಾಯಕರಲ್ಲಿ ದಿಗಿಲು ಮೂಡಿಸಿದ್ದರು. ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಗಿಟ್ಟಿಸಲು ರಮೇಶ ಜಾರಕಿಹೊಳಿ ಗುಂಪಿನೊಂದಿಗೆ ಮುಂಬೈ ಸುತ್ತಾಡಿ ಬಂದಿದ್ದ ಅವರು, ಬಹುಮತ ಸಾಬೀತುಪಡಿಸುವ ವೇಳೆಗೆ ಕಾಂಗ್ರೆಸ್ ಗುಂಪಿನಲ್ಲಿ ಕಾಣಿಸಿಕೊಂಡಿದ್ದರು. ಡಿಸೆಂಬರ್‍ನಲ್ಲಿ ಆಪರೇಷನ್ ಕಮಲ ವಿಫಲವಾದ ನಂತರ ರೆಸಾರ್ಟಿನಲ್ಲಿ ಗದ್ದಲ ಮಾಡಿಕೊಂಡು ಹಲ್ಲೆಗೊಳಗಾಗಿದ್ದರು.

ಇದಾದ ಮೇಲೆ ಅವರು ಸುದ್ದಿಯಾಗಿದ್ದು ಜಿಂದಾಲ್‍ಗೆ ಭೂಮಿ ಮಾರಾಟ ಮಾಡಬಾರದೆಂದು ಸರ್ಕಾರಕ್ಕೆ ಆಗ್ರಹಿಸುವ ಮೂಲಕ. ಹೊಸ ಮೈನಿಂಗ್ ನೀತಿಯಲ್ಲಿ ಮಾರ್ಪಾಟು ಮಾಡಿಸಲು ಈಗ ರಾಜಿನಾಮೆ ತಂತ್ರ ಹೂಡಿದ್ದಾರೋ ಅಥವಾ ಜಿಂದಾಲ್‍ಗೆ ಭೂಮಿ ಮಾರಾಟ ತಡೆಯಲು ಯತ್ನಿಸುವುದು, ಆಗದಿದ್ದರೆ ಆ ಕಡೆಯಿಂದ ‘ಫೇವರ್’ ಪಡೆಯುವ ಉದ್ದೇಶವೂ ಇದರ ಹಿಂದಿರಬಹುದೇ?

ಸುದ್ದಿ ಮಾಧ್ಯಮಗಳ ಪ್ರಕಾರ, ಸರ್ಕಾರ ಬೀಳುವುದು ಗ್ಯಾರಂಟಿ ಎಂಬ ಭಾವವನ್ನಂತೂ ಜನರಲ್ಲಿ ತೇಲಿ ಬಿಡಲಾಗಿದೆ. ಇದರ ಮೂಲ ಮಾತ್ರ ಆನಂದಸಿಂಗ್ ಹೊರಡಿಸಿದ ಗುಡುಗಿನ ಆರ್ಭಟವಷ್ಟೇ. ಹಿಂದಿನಂತೆ ಈ ಭಿನ್ನಮತ ಮಳೆ ಸುರಿಸದೇ ಹೋಗಬಹುದು. ರಾಷ್ಟ್ರೀಯ ಬಿಜೆಪಿಯಲ್ಲಿರುವ ಅಧಿಕಾರ ಮತ್ತು ಹಣಬಲದಿಂದ ಕೃತಕ ಮೋಡಬಿತ್ತನೆಯೂ ಆಗಿ ಮಳೆ ಸುರಿಸಲೂಬಹುದು. ಆಗಲೂ ಬಿತ್ತನೆಗೆ ಬೇಕಾದಷ್ಟು ಮಣ್ಣು ಹಸಿ (ಸರ್ಕಾರ ಕೆಡವಲು ಅಗತ್ಯವಾದ ಸಂಖ್ಯೆ) ಆಗುವುದೇ ಎಂಬ ಸಂಶಯ ಎಂದಿನಂತೆ ಇದ್ದೇ ಇದೆ,  ಅಧಿಕಾರದ ಆಟದಲ್ಲಿ ಏನು ಬೇಕಾದರೂ ಸಂಭವಿಸಬಹುದು. ಕಾದು ನೋಡುವುದಷ್ಟೇ ರಾಜ್ಯದ ಜನರ ಕರ್ಮ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...