Homeಕರ್ನಾಟಕಆನಂದಸಿಂಗ್ ರಾಜಿನಾಮೆ ಬ್ಲ್ಯಾಕ್‍ಮೇಲ್ ತಂತ್ರವೋ? ಅಸಲಿ ಕಾರಣ ಇದಲ್ಲವೇ?

ಆನಂದಸಿಂಗ್ ರಾಜಿನಾಮೆ ಬ್ಲ್ಯಾಕ್‍ಮೇಲ್ ತಂತ್ರವೋ? ಅಸಲಿ ಕಾರಣ ಇದಲ್ಲವೇ?

ರಾಜ್ಯ ಸರ್ಕಾರದ ಹೊಸ ಮೈನಿಂಗ್ ಲೀಸ್ ನೀತಿಯ ಪ್ರಕಾರ ಫ್ಯಾಕ್ಟರಿ ಇರುವ ಕಂಪನಿಗಳಿಗೆ ಮಾತ್ರ ಲೀಸ್ ನೀಡಲಾಗುವುದು ಎಂಬ ನಿಯಮವಿದೆ ಎನ್ನಲಾಗಿದೆ. ಹೀಗಾದರೆ ಆನಂದಸಿಂಗ್, ಲಾಡ್ ಮುಂತಾದವರಿಗೆ ಹೊಸ ಲೀಸ್ ಸಿಗುವುದು ಅಸಾಧ್ಯ.

- Advertisement -
- Advertisement -

| ಮಲ್ಲನಗೌಡರ್ |

ಇವತ್ತು ಮುಂಜಾನೆಯಿಂದ ಸರ್ಕಾರ ಬೀಳುವ/ ಬೀಳಿಸುವ ಆಟ ಹೊರನೋಟಕ್ಕೆ ಐಪಿಎಲ್ ಮ್ಯಾಚಿನ ಖದರು ಕಳೆಗಟ್ಟಿಕೊಂಡಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅಮೆರಿಕದಲ್ಲಿರುವಾಗ ದಿಢೀರನೆ ರಾಜಿನಾಮೆಯ ಕರಿಮೋಡಗಳು ಕಾಣತೋಡಗಿದ್ದು ಇವು ಮಳೆ ಸುರಿಸುತ್ತವಾ ಅಥವಾ ಎಂದಿನಂತೆ ಹಾಗೆ ಬಂದಂತೆ ಹೀಗೆ ತೇಲಿ ಹೋಗುತ್ತವಾ ಎಂಬ ಪ್ರಶ್ನೆ ಎದ್ದಿದೆ.

ಈ ರಾಜಿನಾಮೆ ಕ್ಲೈಮೇಟಿನಲ್ಲಿ ಎದ್ದು ಹೊಡೆಯುತ್ತಿರುವುದು ಹೊಸಪೇಟೆಯ ಶಾಸಕ ಆಂದ್‍ಸಿಂಗ್ ನಡವಳಿಕೆ. ಅವರೀಗ ಸ್ಪೀಕರ್ ಪಿ.ಎಸ್‍ಗೆ ರಾಜಿನಾಮೆ ಕೊಟ್ಟು ಮಾಧ್ಯಮಗಳ ಎದುರು ಅವರು ಸ್ಪೀಕರ್ ಹೆಸರಲ್ಲಿ ಬರೆದ ರಾಜಿನಾಮೆ ಪತ್ರವನ್ನು ಪ್ರದರ್ಶಿಸಿದ್ದಾರೆ. ಇದಕ್ಕೂ ಮೊದಲು ಅವರು ರಾಜಿನಾಮೆಯನ್ನು ರಾಜ್ಯಪಾಲರಿಗೆ ಕೊಟ್ಟಿದ್ದು ವಿಚಿತ್ರವೂ ಆಗಿತ್ತು, ಹಾಸ್ಯಾಸ್ಪದವೂ ಆಗಿತ್ತು. ಬಹುಷ ಅದು ಸರ್ಕಾರದ ಮೇಲೆ ಒತ್ತಡ ಹೇರಿ ತಮ್ಮ ಕೆಲಸ ಮಾಡಿಸಿಕೊಳ್ಳುವ ತಂತ್ರವಾಗಿದೆ. ಜಿಂದಾಲ್ ಕಂಪನಿಗೂ ಆನಂದಸಿಂಗ್‍ರಿಗೂ ವ್ಯವಹಾರದ ಮಟ್ಟಿಗೆ ಸರಿಯಿಲ್ಲ.

ಜಿಂದಾಲ್‍ಗೆ ಭೂಮಿ ಮಾರಾಟ ಮಾಡಬಾರದು ಎಂದು ಬಹಿರಂಗವಾಗಿ ಹೇಳಿದ ಏಕೈಕ ಬಳ್ಳಾರಿ ಶಾಸಕ ಅವರು. ಹಿಂದೆಯೂ ಒಮ್ಮೆ ಅವರು ಹೊಸಪೇಟೆ ಡ್ಯಾಂನಲ್ಲಿ ನೀರಿನ ಮಟ್ಟ ಕಡಿಮೆ ಇದ್ದಾಗ ಜಿಂದಾಲ್‍ಗೆ ನೀರು ಬಿಡಬಾರದು ಎಂದಿದ್ದರು.

ಈಗ ಜಿಂದಾಲ್‍ಗೆ ಭೂಮಿ ಮಾರಾಟ ವಿಷಯದ ಮರುಪರಿಶೀಲನೆ ಮಾಡಲು ರಚಿಸಿರುವ ಎಂಬಿ ಪಾಟೀಲ್ ನೇತೃತ್ವದ ಸಚಿವ ಸಂಪುಟ ಉಪಸಮಿತಿಯ ಮೇಲೆ ಒತ್ತಡ ಹೇರಲು, ಆ ಮೂಲಕ ಜಿಂದಾಲ್‍ಗೆ ಭೂಮಿ ಮಾರಾಟ ಆಗದಂತೆ ತಡೆಯುವ ಪ್ರಯತ್ನವನ್ನು ಆನಂದಸಿಂಗ್ ಮಾಡುತ್ತಿರುವ ಸಾಧ್ಯತೆ ಇದೆ. ತಮಗೆ ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ಬೆಂಬಲವೂ ಇದೆ ಎಂದು ಆನಂದಸಿಂಗ್ ಹೇಳುತ್ತಿರುವುದು ಕುತೂಹಲಕರವಾಗಿದೆ. ಹೊಸಪೇಟೆ ಕೇಂದ್ರವಾಗಿಸಿ ವಿಜಯನಗರ ಹೊಸ ಜಿಲ್ಲೆ ರಚಿಸಬೇಕೆಂಬ ಬೇಡಿಕೆಗಾಗಿ ರಾಜಿನಾಮೆ ನಿಡುತ್ತಿರುವುದಾಗಿಯೂ ಆನಂದಸಿಂಗ್ ಹೇಳಲು ಶುರು ಮಾಡಿದ್ದಾರೆ.

ಇಲ್ಲಿ ಒಂದು ಸೂಕ್ಷ್ಮ ವಿಷಯವೂ ಇದೆ. ರಾಜ್ಯ ಸರ್ಕಾರದ ಹೊಸ ಮೈನಿಂಗ್ ಲೀಸ್ ನೀತಿಯ ಪ್ರಕಾರ ಫ್ಯಾಕ್ಟರಿ ಇರುವ ಕಂಪನಿಗಳಿಗೆ ಮಾತ್ರ ಲೀಸ್ ನೀಡಲಾಗುವುದು ಎಂಬ ನಿಯಮವಿದೆ ಎನ್ನಲಾಗಿದೆ. ಹೀಗಾದರೆ ಆನಂದಸಿಂಗ್, ಲಾಡ್ ಮುಂತಾದವರಿಗೆ ಹೊಸ ಲೀಸ್ ಸಿಗುವುದು ಅಸಾಧ್ಯ. ಹೊಸ ಲೀಸ್‍ಗಳೆಲ್ಲ ಜಿಂದಾಲ್ ಪಾಲಾಗುವ ಸಾಧ್ಯತೆಯೇ ಹೆಚ್ಚು ಎನ್ನಲಾಗುತ್ತಿದೆ. ಈ ಹೊಸ ನಿಯಮ ತಿದ್ದುಪಡಿ ಮಾಡಿ ಫ್ಯಾಕ್ಟರಿ ಇಲ್ಲದ ಮೈನಿಂಗ್ ಕಂಪನಿಗಳಿಗೂ ಲೀಸ್ ನೀಡುವ ಅವಕಾಶ ಮಾಡಿಕೊಡಿ ಎಂಬ ಒತ್ತಡ ಹೇರುವ ತಂತ್ರವಾಗಿಯೂ ಇದನ್ನು ನೋಡಬಹುದು.

ತಮ್ಮ ವೈಯಕ್ತಿಕ ಲಾಭಕ್ಕಾಗಿ ತಾವಿರುವ ಪಕ್ಷದ ಮೇಲೆ ಒತ್ತಡ ಹೇರಲು ಹಿಂದೆ ಇಂತಹ ಹಲವಾರು ಬ್ಲ್ಯಾಕ್‍ಮೇಲ್ ತಂತ್ರಗಳನ್ನು ಆನಂದಸಿಂಗ್ ಅನುಸರಿಸಿದ್ದಾರೆ. ಅವರು ಬಿಜೆಪಿ ಶಾಸಕರಾಗಿದ್ದಾಗ ಮಂತ್ರಿ ಪದವಿ ಪಡೆಯಲು ಒತ್ತಡ ಹೇರುವ ಸಲುವಾಗಿ ಹೊಸಪೇಟೆಯಲ್ಲಿ ಭವ್ಯವಾಗಿ ಟಿಪ್ಪು ಜಯಂತಿ ಆಚರಿಸಿದ್ದರು. ಕಾಂಗ್ರೆಸ್ ಶಾಸಕರಾದ ಮೇಲೆ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಲು ಒತ್ತಡ ಹೇರಲು ಹನುಮ ಮಾಲೆ ಜಯಂತಿಯಲ್ಲಿ ಭಾಗವಹಿಸಿ ಕಾಂಗ್ರೆಸ್ ನಾಯಕರಲ್ಲಿ ದಿಗಿಲು ಮೂಡಿಸಿದ್ದರು. ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಗಿಟ್ಟಿಸಲು ರಮೇಶ ಜಾರಕಿಹೊಳಿ ಗುಂಪಿನೊಂದಿಗೆ ಮುಂಬೈ ಸುತ್ತಾಡಿ ಬಂದಿದ್ದ ಅವರು, ಬಹುಮತ ಸಾಬೀತುಪಡಿಸುವ ವೇಳೆಗೆ ಕಾಂಗ್ರೆಸ್ ಗುಂಪಿನಲ್ಲಿ ಕಾಣಿಸಿಕೊಂಡಿದ್ದರು. ಡಿಸೆಂಬರ್‍ನಲ್ಲಿ ಆಪರೇಷನ್ ಕಮಲ ವಿಫಲವಾದ ನಂತರ ರೆಸಾರ್ಟಿನಲ್ಲಿ ಗದ್ದಲ ಮಾಡಿಕೊಂಡು ಹಲ್ಲೆಗೊಳಗಾಗಿದ್ದರು.

ಇದಾದ ಮೇಲೆ ಅವರು ಸುದ್ದಿಯಾಗಿದ್ದು ಜಿಂದಾಲ್‍ಗೆ ಭೂಮಿ ಮಾರಾಟ ಮಾಡಬಾರದೆಂದು ಸರ್ಕಾರಕ್ಕೆ ಆಗ್ರಹಿಸುವ ಮೂಲಕ. ಹೊಸ ಮೈನಿಂಗ್ ನೀತಿಯಲ್ಲಿ ಮಾರ್ಪಾಟು ಮಾಡಿಸಲು ಈಗ ರಾಜಿನಾಮೆ ತಂತ್ರ ಹೂಡಿದ್ದಾರೋ ಅಥವಾ ಜಿಂದಾಲ್‍ಗೆ ಭೂಮಿ ಮಾರಾಟ ತಡೆಯಲು ಯತ್ನಿಸುವುದು, ಆಗದಿದ್ದರೆ ಆ ಕಡೆಯಿಂದ ‘ಫೇವರ್’ ಪಡೆಯುವ ಉದ್ದೇಶವೂ ಇದರ ಹಿಂದಿರಬಹುದೇ?

ಸುದ್ದಿ ಮಾಧ್ಯಮಗಳ ಪ್ರಕಾರ, ಸರ್ಕಾರ ಬೀಳುವುದು ಗ್ಯಾರಂಟಿ ಎಂಬ ಭಾವವನ್ನಂತೂ ಜನರಲ್ಲಿ ತೇಲಿ ಬಿಡಲಾಗಿದೆ. ಇದರ ಮೂಲ ಮಾತ್ರ ಆನಂದಸಿಂಗ್ ಹೊರಡಿಸಿದ ಗುಡುಗಿನ ಆರ್ಭಟವಷ್ಟೇ. ಹಿಂದಿನಂತೆ ಈ ಭಿನ್ನಮತ ಮಳೆ ಸುರಿಸದೇ ಹೋಗಬಹುದು. ರಾಷ್ಟ್ರೀಯ ಬಿಜೆಪಿಯಲ್ಲಿರುವ ಅಧಿಕಾರ ಮತ್ತು ಹಣಬಲದಿಂದ ಕೃತಕ ಮೋಡಬಿತ್ತನೆಯೂ ಆಗಿ ಮಳೆ ಸುರಿಸಲೂಬಹುದು. ಆಗಲೂ ಬಿತ್ತನೆಗೆ ಬೇಕಾದಷ್ಟು ಮಣ್ಣು ಹಸಿ (ಸರ್ಕಾರ ಕೆಡವಲು ಅಗತ್ಯವಾದ ಸಂಖ್ಯೆ) ಆಗುವುದೇ ಎಂಬ ಸಂಶಯ ಎಂದಿನಂತೆ ಇದ್ದೇ ಇದೆ,  ಅಧಿಕಾರದ ಆಟದಲ್ಲಿ ಏನು ಬೇಕಾದರೂ ಸಂಭವಿಸಬಹುದು. ಕಾದು ನೋಡುವುದಷ್ಟೇ ರಾಜ್ಯದ ಜನರ ಕರ್ಮ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...