Homeಮುಖಪುಟ’ಅಗ್ನಿವೀರರಿಗೆ ಬಿಜೆಪಿ ಕಚೇರಿಯಲ್ಲಿ ಗಾರ್ಡ್ ಕೆಲಸ’: ಬಿಜೆಪಿ ನಾಯಕ ವಿಜಯವರ್ಗಿಯ ವಿವಾದಿತ ಹೇಳಿಕೆಗೆ ಖಂಡನೆ

’ಅಗ್ನಿವೀರರಿಗೆ ಬಿಜೆಪಿ ಕಚೇರಿಯಲ್ಲಿ ಗಾರ್ಡ್ ಕೆಲಸ’: ಬಿಜೆಪಿ ನಾಯಕ ವಿಜಯವರ್ಗಿಯ ವಿವಾದಿತ ಹೇಳಿಕೆಗೆ ಖಂಡನೆ

’ಈ ಹೇಳಿಕೆಗಳು ಕೂಡ ‘ಫ್ರಿಂಜ್’ ಅಂಶಗಳ ಹೇಳಿಕೆಗಳೇ ಎಂಬುದನ್ನು ಪ್ರಧಾನಿ ಸ್ಪಷ್ಟಪಡಿಸಬೇಕು’ ಟಿಎಂಸಿ ಆಗ್ರಹ

- Advertisement -
- Advertisement -

ಒಕ್ಕೂಟ ಸರ್ಕಾರ ಘೋಷಿಸಿರುವ ಅಗ್ನಿಪಥ ಯೋಜನೆ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿರುವ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಅವರು ಬಿಜೆಪಿ ಕಚೇರಿಗಳಿಗೆ ಭದ್ರತಾ ಸಿಬ್ಬಂದಿಯನ್ನು ನೇಮಿಸಿಕೊಳ್ಳುವಾಗ ಅಗ್ನಿವೀರರಿಗೆ ಆದ್ಯತೆ ನೀಡಲಾಗುವುದು’ ಎಂದು ವಿವಾದಿತ ಹೇಳಿಕೆ ನೀಡಿದ್ದಾರೆ.

“ಶಿಸ್ತು ಮತ್ತು ಆಜ್ಞೆಗಳು ಪಾಲಿಸುವುದು ಮಿಲಿಟರಿ ತರಬೇತಿಯ ಅವಿಭಾಜ್ಯ ಅಂಗವಾಗಿದೆ. ಅಗ್ನಿವೀರರು 25 ವರ್ಷ ವಯಸ್ಸಿನಲ್ಲಿ ನಾಲ್ಕು ವರ್ಷಗಳ ಕಾಲ ರಕ್ಷಣಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಹೊರಬಂದಾಗ, ಅವರ ಬಳಿ 11 ಲಕ್ಷ ರೂಪಾಯಿ ಇರುತ್ತದೆ. ಅವರು ಹೆಮ್ಮೆಯಿಂದ ಪ್ರದರ್ಶಿಸಬಹುದಾದ ಅಗ್ನಿವೀರರ ಟ್ಯಾಗ್ ಹೊಂದಿರುತ್ತಾರೆ. ನಾನು ಬಿಜೆಪಿ ಕಚೇರಿಗೆ ಭದ್ರತಾ ಸಿಬ್ಬಂದಿಯನ್ನು ನೇಮಿಸಲು ಬಯಸಿದರೆ, ನಾನು ಅಗ್ನಿವೀರರಿಗೆ ಆದ್ಯತೆ ನೀಡುತ್ತೇನೆ” ಎಂದು ಬಿಜೆಪಿಯ ಹಿರಿಯ ನಾಯಕ ವಿಜಯವರ್ಗಿಯವರು ಇಂದೋರ್‌ನ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಸಾಯಿ ಪಲ್ಲವಿಯವರಿಂದ ಮಾಧ್ಯಮಗಳು ಕಲಿಯುವುದು ಬಹಳಷ್ಟಿದೆ: ಬೆಂಬಲಕ್ಕೆ ನಿಂತ ನಟ ಕಿಶೋರ್

ವಿಜಯವರ್ಗಿಯ ಅವರ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಈ ಹೇಳಿಕೆಗೆ ವಿವಿಧ ವಲಯಗಳಿಂದ ಖಂಡನೆ ವ್ಯಕ್ತವಾಗಿದೆ. ಬಿಜೆಪಿ ಸಂಸದ ವರುಣ್ ಗಾಂಧಿ ಟ್ವಿಟ್ಟರ್‌ನಲ್ಲಿ ವಿಡಿಯೊ ಹಂಚಿಕೊಂಡಿದ್ದು, ರಾಜಕೀಯ ಪಕ್ಷದ ಕಚೇರಿಗಳನ್ನು ಕಾವಲು ಕಾಯಲು ಭಾರತೀಯ ಸೈನಿಕರನ್ನು ಆಹ್ವಾನಿಸಿರುವುದನ್ನು ಟೀಕಿಸಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್‌ ಕೂಡ ಖಂಡನೆ ವ್ಯಕ್ತಪಡಿಸಿದೆ. “ಭಾರತದ ಯುವಕರು ಬಿಜೆಪಿ ಕಚೇರಿಯ ಬಾಗಿಲ ಕಾಯುವ ದ್ವಾರಪಾಲಕರಾಗಬಾರದು, ಯುವ ಶಕ್ತಿ ಮೋದಿ ಸರ್ಕಾರಕ್ಕಿಂತ ಭಿನ್ನವಾಗಿ ಈ ದೇಶಕ್ಕೆ ಸೇವೆ ಸಲ್ಲಿಸಲು ಬಯಸುತ್ತದೆ. ಇವೂ ಕೂಡ ‘ಫ್ರಿಂಜ್’ ಅಂಶಗಳ ಹೇಳಿಕೆಗಳೇ ಎಂಬುದನ್ನು ಪ್ರಧಾನಿ ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದೆ.

ಇದನ್ನೂ ಓದಿ: 60 ಲಕ್ಷ ಹುದ್ದೆಗಳು ಖಾಲಿಯಿದ್ದರೂ ವಿದ್ಯಾವಂತ ಯುವಕರು ಇ-ರಿಕ್ಷಾ ಓಡಿಸುತ್ತಿದ್ದಾರೆ: BJP ಸಂಸದ ವರುಣ್ ಗಾಂಧಿ ಆಕ್ರೋಶ

 

ಮಧ್ಯಪ್ರದೇಶ ಕಾಂಗ್ರೆಸ್ ಕೂಡ ವಿಜಯವರ್ಗಿಯವರ ಹೇಳಿಕೆಯನ್ನು ಟೀಕಿಸಿದೆ. ಇದರ ರಾಜ್ಯ ಘಟಕದ ಅಧ್ಯಕ್ಷ ಕೆ.ಕೆ.ಮಿಶ್ರಾ ಮಾತನಾಡಿ, ’ಈ ಹೇಳಿಕೆಯು ಕೇವಲ ದೇಶದ ಯುವಕರಲ್ಲದೇ ಭಾರತೀಯ ಸೇನೆಯ ಶೌರ್ಯಕ್ಕೆ ಮಾಡಿದ ಘೋರ ಅವಮಾನವಾಗಿದ್ದು, ಪ್ರತಿಭಟನೆ ನಡೆಸುತ್ತಿರುವ ಯುವಕರ ಗಾಯದ ಮೇಲೆ ಉಪ್ಪು ಸವರುವ ಅವಿವೇಕದ ಪ್ರಯತ್ನವಾಗಿದೆ’ ಎಂದಿದ್ದಾರೆ.

ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. “ತರಬೇತಿ ಪಡೆದ ಗುತ್ತಿಗೆ ಸೈನಿಕರನ್ನು ಅವರ ಕಚೇರಿಗಳಿಗೆ ಚೌಕಿದಾರರನ್ನಾಗಿ ನೇಮಿಸಿಕೊಳ್ಳುತ್ತೇವೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ. ಇದು ಗೌರವದ ವೃತ್ತಿಯಾಗಿರುವ ಸೈನ್ಯಕ್ಕೆ ಮತ್ತು ಸೈನಿಕರಿಗೆ ಮೋದಿಯವರ ಪಕ್ಷ ನೀಡುವ ಗೌರವವೇ? ದೇಶದಲ್ಲಿ ಈ ರೀತಿಯ ಆಡಳಿತ ಪಕ್ಷವಿರುವುದು ವಿಷಾದನೀಯ” ಎಂದಿದ್ದಾರೆ.


ಇದನ್ನೂ ಓದಿ: ಅಗ್ನಿಪಥ್ ವಿರೋಧಿಸಿ ಇಂದು ಭಾರತ್ ಬಂದ್: ಬಿಹಾರದಲ್ಲಿ 350 ರೈಲುಗಳ ಸಂಚಾರ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಒಬ್ಬ ಮೂರ್ಖನಿಗೂ ಗೊತ್ತಿಲ್ಲ ಅಗ್ನಿಪಥ ಯೋಜನೆ ಬಗ್ಗೆ ಆದ್ರೂ ಬಾಯಿಗೆ ಬಂದಂಗೆ ಬೊಗಳೋದು ನಿಲ್ಲಸಲ್ಲ,, ಓ ಮೂರ್ಖರೆ ಮೊದಲು ಅಗ್ನಿಪಥ ಅಂದ್ರೆ ಏನು ಅದರ ಒಳ ಷಡ್ಯಂತ್ರಗಳು ಏನು ಅಂತ ನೀವು ತಿಳ್ಕೊಳಿ ಜನರಿಗೆ ಎಲ್ಲ ಅರ್ಥ ಆಗಿದೆ,, ಯಾರೋ ಊದಿದ ಪುಂಗಿಗೆ ಸ್ಕ್ರಿಪ್ಟ್ ಬರೆಯೋಕೆ ಬರೋಕು ಮುಂಚೆ ಮನೇಲಿ ಸ್ವಲ್ಪ ನಿಮಗಿಂತ ಹೆಚ್ಚು ಓದಿರುವ ನಿಮ್ಮ ಆಪ್ತ ಸಲಹೆಗಾರರ ಹತ್ತಿರ ಸಲಹೆ ಪಡೆಯೋದು ಉತ್ತಮ ಅನ್ಸುತ್ತೆ ಅಲ್ವಾ ಅವಿವೇಕಿಗಳೆ..?
    ಕೆಲವು ನಾಯಿಗಳು ಯಾವಾಗ್ಲೂ ಬೊಗಳ್ತಾವೆ ಬರಿ ಸಾಬರ್ ಬಗ್ಗೆ ಮಾತ್ರ,, ದೇಶದ ಒಳಿತಿಗಾಗಿ ಒಂದು ಮಾತು ಬರಲ್ಲ ಎಂಜಲು ಅಲ್ಲ ಕ್ಷಮಿಸಿ ಹೇಸಿಗೆ ತಿನ್ನೋ ನಾಯಿಗಳು.. ಈಗ ಬೊಗಳರೋ ಹೇಸಿಗೆ ನಾಯಿಗಳ ದೇಶದ ಮಾನ ಹೋಯ್ತು ಈಗ ದೇಶದ ಯುವಕರು ಏನ್ ಮಾಡಬೇಕು ಬೊಗಳರೋ 2 ರೂಪಾಯಿ ಬಿಖಾರಿಗಳೇ….

  2. ಹೀಗೊಂದು ಪಕ್ಷದ ಒಬ್ಬ ಮೂರ್ಖನಿಗೂ ಗೊತ್ತಿಲ್ಲ ಅಗ್ನಿಪಥ ಯೋಜನೆ ಬಗ್ಗೆ ಆದ್ರೂ ಬಾಯಿಗೆ ಬಂದಂಗೆ ಬೊಗಳೋದು ನಿಲ್ಲಸಲ್ಲ,, ಓ ಮೂರ್ಖರೆ ಮೊದಲು ಅಗ್ನಿಪಥ ಅಂದ್ರೆ ಏನು ಅದರ ಒಳ ಷಡ್ಯಂತ್ರಗಳು ಏನು ಅಂತ ನೀವು ತಿಳ್ಕೊಳಿ ಜನರಿಗೆ ಎಲ್ಲ ಅರ್ಥ ಆಗಿದೆ,, ಯಾರೋ ಊದಿದ ಪುಂಗಿಗೆ ಸ್ಕ್ರಿಪ್ಟ್ ಬರೆಯೋಕೆ ಬರೋಕು ಮುಂಚೆ ಮನೇಲಿ ಸ್ವಲ್ಪ ನಿಮಗಿಂತ ಹೆಚ್ಚು ಓದಿರುವ ನಿಮ್ಮ ಆಪ್ತ ಸಲಹೆಗಾರರ ಹತ್ತಿರ ಸಲಹೆ ಪಡೆಯೋದು ಉತ್ತಮ ಅನ್ಸುತ್ತೆ ಅಲ್ವಾ ಅವಿವೇಕಿಗಳೆ..?
    ಕೆಲವು ನಾಯಿಗಳು ಯಾವಾಗ್ಲೂ ಬೊಗಳ್ತಾವೆ ಬರಿ ಸಾಬರ್ ಬಗ್ಗೆ ಮಾತ್ರ,, ದೇಶದ ಒಳಿತಿಗಾಗಿ ಒಂದು ಮಾತು ಬರಲ್ಲ ಎಂಜಲು ಅಲ್ಲ ಕ್ಷಮಿಸಿ ಹೇಸಿಗೆ ತಿನ್ನೋ ನಾಯಿಗಳು.. ಈಗ ಬೊಗಳರೋ ಹೇಸಿಗೆ ನಾಯಿಗಳ ದೇಶದ ಮಾನ ಹೋಯ್ತು ಈಗ ದೇಶದ ಯುವಕರು ಏನ್ ಮಾಡಬೇಕು ಬೊಗಳರೋ 2 ರೂಪಾಯಿ ಬಿಖಾರಿಗಳೇ….

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...