Homeಮುಖಪುಟ’ಅಗ್ನಿವೀರರಿಗೆ ಬಿಜೆಪಿ ಕಚೇರಿಯಲ್ಲಿ ಗಾರ್ಡ್ ಕೆಲಸ’: ಬಿಜೆಪಿ ನಾಯಕ ವಿಜಯವರ್ಗಿಯ ವಿವಾದಿತ ಹೇಳಿಕೆಗೆ ಖಂಡನೆ

’ಅಗ್ನಿವೀರರಿಗೆ ಬಿಜೆಪಿ ಕಚೇರಿಯಲ್ಲಿ ಗಾರ್ಡ್ ಕೆಲಸ’: ಬಿಜೆಪಿ ನಾಯಕ ವಿಜಯವರ್ಗಿಯ ವಿವಾದಿತ ಹೇಳಿಕೆಗೆ ಖಂಡನೆ

’ಈ ಹೇಳಿಕೆಗಳು ಕೂಡ ‘ಫ್ರಿಂಜ್’ ಅಂಶಗಳ ಹೇಳಿಕೆಗಳೇ ಎಂಬುದನ್ನು ಪ್ರಧಾನಿ ಸ್ಪಷ್ಟಪಡಿಸಬೇಕು’ ಟಿಎಂಸಿ ಆಗ್ರಹ

- Advertisement -
- Advertisement -

ಒಕ್ಕೂಟ ಸರ್ಕಾರ ಘೋಷಿಸಿರುವ ಅಗ್ನಿಪಥ ಯೋಜನೆ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿರುವ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಅವರು ಬಿಜೆಪಿ ಕಚೇರಿಗಳಿಗೆ ಭದ್ರತಾ ಸಿಬ್ಬಂದಿಯನ್ನು ನೇಮಿಸಿಕೊಳ್ಳುವಾಗ ಅಗ್ನಿವೀರರಿಗೆ ಆದ್ಯತೆ ನೀಡಲಾಗುವುದು’ ಎಂದು ವಿವಾದಿತ ಹೇಳಿಕೆ ನೀಡಿದ್ದಾರೆ.

“ಶಿಸ್ತು ಮತ್ತು ಆಜ್ಞೆಗಳು ಪಾಲಿಸುವುದು ಮಿಲಿಟರಿ ತರಬೇತಿಯ ಅವಿಭಾಜ್ಯ ಅಂಗವಾಗಿದೆ. ಅಗ್ನಿವೀರರು 25 ವರ್ಷ ವಯಸ್ಸಿನಲ್ಲಿ ನಾಲ್ಕು ವರ್ಷಗಳ ಕಾಲ ರಕ್ಷಣಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಹೊರಬಂದಾಗ, ಅವರ ಬಳಿ 11 ಲಕ್ಷ ರೂಪಾಯಿ ಇರುತ್ತದೆ. ಅವರು ಹೆಮ್ಮೆಯಿಂದ ಪ್ರದರ್ಶಿಸಬಹುದಾದ ಅಗ್ನಿವೀರರ ಟ್ಯಾಗ್ ಹೊಂದಿರುತ್ತಾರೆ. ನಾನು ಬಿಜೆಪಿ ಕಚೇರಿಗೆ ಭದ್ರತಾ ಸಿಬ್ಬಂದಿಯನ್ನು ನೇಮಿಸಲು ಬಯಸಿದರೆ, ನಾನು ಅಗ್ನಿವೀರರಿಗೆ ಆದ್ಯತೆ ನೀಡುತ್ತೇನೆ” ಎಂದು ಬಿಜೆಪಿಯ ಹಿರಿಯ ನಾಯಕ ವಿಜಯವರ್ಗಿಯವರು ಇಂದೋರ್‌ನ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಸಾಯಿ ಪಲ್ಲವಿಯವರಿಂದ ಮಾಧ್ಯಮಗಳು ಕಲಿಯುವುದು ಬಹಳಷ್ಟಿದೆ: ಬೆಂಬಲಕ್ಕೆ ನಿಂತ ನಟ ಕಿಶೋರ್

ವಿಜಯವರ್ಗಿಯ ಅವರ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಈ ಹೇಳಿಕೆಗೆ ವಿವಿಧ ವಲಯಗಳಿಂದ ಖಂಡನೆ ವ್ಯಕ್ತವಾಗಿದೆ. ಬಿಜೆಪಿ ಸಂಸದ ವರುಣ್ ಗಾಂಧಿ ಟ್ವಿಟ್ಟರ್‌ನಲ್ಲಿ ವಿಡಿಯೊ ಹಂಚಿಕೊಂಡಿದ್ದು, ರಾಜಕೀಯ ಪಕ್ಷದ ಕಚೇರಿಗಳನ್ನು ಕಾವಲು ಕಾಯಲು ಭಾರತೀಯ ಸೈನಿಕರನ್ನು ಆಹ್ವಾನಿಸಿರುವುದನ್ನು ಟೀಕಿಸಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್‌ ಕೂಡ ಖಂಡನೆ ವ್ಯಕ್ತಪಡಿಸಿದೆ. “ಭಾರತದ ಯುವಕರು ಬಿಜೆಪಿ ಕಚೇರಿಯ ಬಾಗಿಲ ಕಾಯುವ ದ್ವಾರಪಾಲಕರಾಗಬಾರದು, ಯುವ ಶಕ್ತಿ ಮೋದಿ ಸರ್ಕಾರಕ್ಕಿಂತ ಭಿನ್ನವಾಗಿ ಈ ದೇಶಕ್ಕೆ ಸೇವೆ ಸಲ್ಲಿಸಲು ಬಯಸುತ್ತದೆ. ಇವೂ ಕೂಡ ‘ಫ್ರಿಂಜ್’ ಅಂಶಗಳ ಹೇಳಿಕೆಗಳೇ ಎಂಬುದನ್ನು ಪ್ರಧಾನಿ ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದೆ.

ಇದನ್ನೂ ಓದಿ: 60 ಲಕ್ಷ ಹುದ್ದೆಗಳು ಖಾಲಿಯಿದ್ದರೂ ವಿದ್ಯಾವಂತ ಯುವಕರು ಇ-ರಿಕ್ಷಾ ಓಡಿಸುತ್ತಿದ್ದಾರೆ: BJP ಸಂಸದ ವರುಣ್ ಗಾಂಧಿ ಆಕ್ರೋಶ

 

ಮಧ್ಯಪ್ರದೇಶ ಕಾಂಗ್ರೆಸ್ ಕೂಡ ವಿಜಯವರ್ಗಿಯವರ ಹೇಳಿಕೆಯನ್ನು ಟೀಕಿಸಿದೆ. ಇದರ ರಾಜ್ಯ ಘಟಕದ ಅಧ್ಯಕ್ಷ ಕೆ.ಕೆ.ಮಿಶ್ರಾ ಮಾತನಾಡಿ, ’ಈ ಹೇಳಿಕೆಯು ಕೇವಲ ದೇಶದ ಯುವಕರಲ್ಲದೇ ಭಾರತೀಯ ಸೇನೆಯ ಶೌರ್ಯಕ್ಕೆ ಮಾಡಿದ ಘೋರ ಅವಮಾನವಾಗಿದ್ದು, ಪ್ರತಿಭಟನೆ ನಡೆಸುತ್ತಿರುವ ಯುವಕರ ಗಾಯದ ಮೇಲೆ ಉಪ್ಪು ಸವರುವ ಅವಿವೇಕದ ಪ್ರಯತ್ನವಾಗಿದೆ’ ಎಂದಿದ್ದಾರೆ.

ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. “ತರಬೇತಿ ಪಡೆದ ಗುತ್ತಿಗೆ ಸೈನಿಕರನ್ನು ಅವರ ಕಚೇರಿಗಳಿಗೆ ಚೌಕಿದಾರರನ್ನಾಗಿ ನೇಮಿಸಿಕೊಳ್ಳುತ್ತೇವೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ. ಇದು ಗೌರವದ ವೃತ್ತಿಯಾಗಿರುವ ಸೈನ್ಯಕ್ಕೆ ಮತ್ತು ಸೈನಿಕರಿಗೆ ಮೋದಿಯವರ ಪಕ್ಷ ನೀಡುವ ಗೌರವವೇ? ದೇಶದಲ್ಲಿ ಈ ರೀತಿಯ ಆಡಳಿತ ಪಕ್ಷವಿರುವುದು ವಿಷಾದನೀಯ” ಎಂದಿದ್ದಾರೆ.


ಇದನ್ನೂ ಓದಿ: ಅಗ್ನಿಪಥ್ ವಿರೋಧಿಸಿ ಇಂದು ಭಾರತ್ ಬಂದ್: ಬಿಹಾರದಲ್ಲಿ 350 ರೈಲುಗಳ ಸಂಚಾರ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಒಬ್ಬ ಮೂರ್ಖನಿಗೂ ಗೊತ್ತಿಲ್ಲ ಅಗ್ನಿಪಥ ಯೋಜನೆ ಬಗ್ಗೆ ಆದ್ರೂ ಬಾಯಿಗೆ ಬಂದಂಗೆ ಬೊಗಳೋದು ನಿಲ್ಲಸಲ್ಲ,, ಓ ಮೂರ್ಖರೆ ಮೊದಲು ಅಗ್ನಿಪಥ ಅಂದ್ರೆ ಏನು ಅದರ ಒಳ ಷಡ್ಯಂತ್ರಗಳು ಏನು ಅಂತ ನೀವು ತಿಳ್ಕೊಳಿ ಜನರಿಗೆ ಎಲ್ಲ ಅರ್ಥ ಆಗಿದೆ,, ಯಾರೋ ಊದಿದ ಪುಂಗಿಗೆ ಸ್ಕ್ರಿಪ್ಟ್ ಬರೆಯೋಕೆ ಬರೋಕು ಮುಂಚೆ ಮನೇಲಿ ಸ್ವಲ್ಪ ನಿಮಗಿಂತ ಹೆಚ್ಚು ಓದಿರುವ ನಿಮ್ಮ ಆಪ್ತ ಸಲಹೆಗಾರರ ಹತ್ತಿರ ಸಲಹೆ ಪಡೆಯೋದು ಉತ್ತಮ ಅನ್ಸುತ್ತೆ ಅಲ್ವಾ ಅವಿವೇಕಿಗಳೆ..?
    ಕೆಲವು ನಾಯಿಗಳು ಯಾವಾಗ್ಲೂ ಬೊಗಳ್ತಾವೆ ಬರಿ ಸಾಬರ್ ಬಗ್ಗೆ ಮಾತ್ರ,, ದೇಶದ ಒಳಿತಿಗಾಗಿ ಒಂದು ಮಾತು ಬರಲ್ಲ ಎಂಜಲು ಅಲ್ಲ ಕ್ಷಮಿಸಿ ಹೇಸಿಗೆ ತಿನ್ನೋ ನಾಯಿಗಳು.. ಈಗ ಬೊಗಳರೋ ಹೇಸಿಗೆ ನಾಯಿಗಳ ದೇಶದ ಮಾನ ಹೋಯ್ತು ಈಗ ದೇಶದ ಯುವಕರು ಏನ್ ಮಾಡಬೇಕು ಬೊಗಳರೋ 2 ರೂಪಾಯಿ ಬಿಖಾರಿಗಳೇ….

  2. ಹೀಗೊಂದು ಪಕ್ಷದ ಒಬ್ಬ ಮೂರ್ಖನಿಗೂ ಗೊತ್ತಿಲ್ಲ ಅಗ್ನಿಪಥ ಯೋಜನೆ ಬಗ್ಗೆ ಆದ್ರೂ ಬಾಯಿಗೆ ಬಂದಂಗೆ ಬೊಗಳೋದು ನಿಲ್ಲಸಲ್ಲ,, ಓ ಮೂರ್ಖರೆ ಮೊದಲು ಅಗ್ನಿಪಥ ಅಂದ್ರೆ ಏನು ಅದರ ಒಳ ಷಡ್ಯಂತ್ರಗಳು ಏನು ಅಂತ ನೀವು ತಿಳ್ಕೊಳಿ ಜನರಿಗೆ ಎಲ್ಲ ಅರ್ಥ ಆಗಿದೆ,, ಯಾರೋ ಊದಿದ ಪುಂಗಿಗೆ ಸ್ಕ್ರಿಪ್ಟ್ ಬರೆಯೋಕೆ ಬರೋಕು ಮುಂಚೆ ಮನೇಲಿ ಸ್ವಲ್ಪ ನಿಮಗಿಂತ ಹೆಚ್ಚು ಓದಿರುವ ನಿಮ್ಮ ಆಪ್ತ ಸಲಹೆಗಾರರ ಹತ್ತಿರ ಸಲಹೆ ಪಡೆಯೋದು ಉತ್ತಮ ಅನ್ಸುತ್ತೆ ಅಲ್ವಾ ಅವಿವೇಕಿಗಳೆ..?
    ಕೆಲವು ನಾಯಿಗಳು ಯಾವಾಗ್ಲೂ ಬೊಗಳ್ತಾವೆ ಬರಿ ಸಾಬರ್ ಬಗ್ಗೆ ಮಾತ್ರ,, ದೇಶದ ಒಳಿತಿಗಾಗಿ ಒಂದು ಮಾತು ಬರಲ್ಲ ಎಂಜಲು ಅಲ್ಲ ಕ್ಷಮಿಸಿ ಹೇಸಿಗೆ ತಿನ್ನೋ ನಾಯಿಗಳು.. ಈಗ ಬೊಗಳರೋ ಹೇಸಿಗೆ ನಾಯಿಗಳ ದೇಶದ ಮಾನ ಹೋಯ್ತು ಈಗ ದೇಶದ ಯುವಕರು ಏನ್ ಮಾಡಬೇಕು ಬೊಗಳರೋ 2 ರೂಪಾಯಿ ಬಿಖಾರಿಗಳೇ….

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...