Homeಮುಖಪುಟ’ಅಗ್ನಿವೀರರಿಗೆ ಬಿಜೆಪಿ ಕಚೇರಿಯಲ್ಲಿ ಗಾರ್ಡ್ ಕೆಲಸ’: ಬಿಜೆಪಿ ನಾಯಕ ವಿಜಯವರ್ಗಿಯ ವಿವಾದಿತ ಹೇಳಿಕೆಗೆ ಖಂಡನೆ

’ಅಗ್ನಿವೀರರಿಗೆ ಬಿಜೆಪಿ ಕಚೇರಿಯಲ್ಲಿ ಗಾರ್ಡ್ ಕೆಲಸ’: ಬಿಜೆಪಿ ನಾಯಕ ವಿಜಯವರ್ಗಿಯ ವಿವಾದಿತ ಹೇಳಿಕೆಗೆ ಖಂಡನೆ

’ಈ ಹೇಳಿಕೆಗಳು ಕೂಡ ‘ಫ್ರಿಂಜ್’ ಅಂಶಗಳ ಹೇಳಿಕೆಗಳೇ ಎಂಬುದನ್ನು ಪ್ರಧಾನಿ ಸ್ಪಷ್ಟಪಡಿಸಬೇಕು’ ಟಿಎಂಸಿ ಆಗ್ರಹ

- Advertisement -
- Advertisement -

ಒಕ್ಕೂಟ ಸರ್ಕಾರ ಘೋಷಿಸಿರುವ ಅಗ್ನಿಪಥ ಯೋಜನೆ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿರುವ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಅವರು ಬಿಜೆಪಿ ಕಚೇರಿಗಳಿಗೆ ಭದ್ರತಾ ಸಿಬ್ಬಂದಿಯನ್ನು ನೇಮಿಸಿಕೊಳ್ಳುವಾಗ ಅಗ್ನಿವೀರರಿಗೆ ಆದ್ಯತೆ ನೀಡಲಾಗುವುದು’ ಎಂದು ವಿವಾದಿತ ಹೇಳಿಕೆ ನೀಡಿದ್ದಾರೆ.

“ಶಿಸ್ತು ಮತ್ತು ಆಜ್ಞೆಗಳು ಪಾಲಿಸುವುದು ಮಿಲಿಟರಿ ತರಬೇತಿಯ ಅವಿಭಾಜ್ಯ ಅಂಗವಾಗಿದೆ. ಅಗ್ನಿವೀರರು 25 ವರ್ಷ ವಯಸ್ಸಿನಲ್ಲಿ ನಾಲ್ಕು ವರ್ಷಗಳ ಕಾಲ ರಕ್ಷಣಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಹೊರಬಂದಾಗ, ಅವರ ಬಳಿ 11 ಲಕ್ಷ ರೂಪಾಯಿ ಇರುತ್ತದೆ. ಅವರು ಹೆಮ್ಮೆಯಿಂದ ಪ್ರದರ್ಶಿಸಬಹುದಾದ ಅಗ್ನಿವೀರರ ಟ್ಯಾಗ್ ಹೊಂದಿರುತ್ತಾರೆ. ನಾನು ಬಿಜೆಪಿ ಕಚೇರಿಗೆ ಭದ್ರತಾ ಸಿಬ್ಬಂದಿಯನ್ನು ನೇಮಿಸಲು ಬಯಸಿದರೆ, ನಾನು ಅಗ್ನಿವೀರರಿಗೆ ಆದ್ಯತೆ ನೀಡುತ್ತೇನೆ” ಎಂದು ಬಿಜೆಪಿಯ ಹಿರಿಯ ನಾಯಕ ವಿಜಯವರ್ಗಿಯವರು ಇಂದೋರ್‌ನ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಸಾಯಿ ಪಲ್ಲವಿಯವರಿಂದ ಮಾಧ್ಯಮಗಳು ಕಲಿಯುವುದು ಬಹಳಷ್ಟಿದೆ: ಬೆಂಬಲಕ್ಕೆ ನಿಂತ ನಟ ಕಿಶೋರ್

ವಿಜಯವರ್ಗಿಯ ಅವರ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಈ ಹೇಳಿಕೆಗೆ ವಿವಿಧ ವಲಯಗಳಿಂದ ಖಂಡನೆ ವ್ಯಕ್ತವಾಗಿದೆ. ಬಿಜೆಪಿ ಸಂಸದ ವರುಣ್ ಗಾಂಧಿ ಟ್ವಿಟ್ಟರ್‌ನಲ್ಲಿ ವಿಡಿಯೊ ಹಂಚಿಕೊಂಡಿದ್ದು, ರಾಜಕೀಯ ಪಕ್ಷದ ಕಚೇರಿಗಳನ್ನು ಕಾವಲು ಕಾಯಲು ಭಾರತೀಯ ಸೈನಿಕರನ್ನು ಆಹ್ವಾನಿಸಿರುವುದನ್ನು ಟೀಕಿಸಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್‌ ಕೂಡ ಖಂಡನೆ ವ್ಯಕ್ತಪಡಿಸಿದೆ. “ಭಾರತದ ಯುವಕರು ಬಿಜೆಪಿ ಕಚೇರಿಯ ಬಾಗಿಲ ಕಾಯುವ ದ್ವಾರಪಾಲಕರಾಗಬಾರದು, ಯುವ ಶಕ್ತಿ ಮೋದಿ ಸರ್ಕಾರಕ್ಕಿಂತ ಭಿನ್ನವಾಗಿ ಈ ದೇಶಕ್ಕೆ ಸೇವೆ ಸಲ್ಲಿಸಲು ಬಯಸುತ್ತದೆ. ಇವೂ ಕೂಡ ‘ಫ್ರಿಂಜ್’ ಅಂಶಗಳ ಹೇಳಿಕೆಗಳೇ ಎಂಬುದನ್ನು ಪ್ರಧಾನಿ ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದೆ.

ಇದನ್ನೂ ಓದಿ: 60 ಲಕ್ಷ ಹುದ್ದೆಗಳು ಖಾಲಿಯಿದ್ದರೂ ವಿದ್ಯಾವಂತ ಯುವಕರು ಇ-ರಿಕ್ಷಾ ಓಡಿಸುತ್ತಿದ್ದಾರೆ: BJP ಸಂಸದ ವರುಣ್ ಗಾಂಧಿ ಆಕ್ರೋಶ

 

ಮಧ್ಯಪ್ರದೇಶ ಕಾಂಗ್ರೆಸ್ ಕೂಡ ವಿಜಯವರ್ಗಿಯವರ ಹೇಳಿಕೆಯನ್ನು ಟೀಕಿಸಿದೆ. ಇದರ ರಾಜ್ಯ ಘಟಕದ ಅಧ್ಯಕ್ಷ ಕೆ.ಕೆ.ಮಿಶ್ರಾ ಮಾತನಾಡಿ, ’ಈ ಹೇಳಿಕೆಯು ಕೇವಲ ದೇಶದ ಯುವಕರಲ್ಲದೇ ಭಾರತೀಯ ಸೇನೆಯ ಶೌರ್ಯಕ್ಕೆ ಮಾಡಿದ ಘೋರ ಅವಮಾನವಾಗಿದ್ದು, ಪ್ರತಿಭಟನೆ ನಡೆಸುತ್ತಿರುವ ಯುವಕರ ಗಾಯದ ಮೇಲೆ ಉಪ್ಪು ಸವರುವ ಅವಿವೇಕದ ಪ್ರಯತ್ನವಾಗಿದೆ’ ಎಂದಿದ್ದಾರೆ.

ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. “ತರಬೇತಿ ಪಡೆದ ಗುತ್ತಿಗೆ ಸೈನಿಕರನ್ನು ಅವರ ಕಚೇರಿಗಳಿಗೆ ಚೌಕಿದಾರರನ್ನಾಗಿ ನೇಮಿಸಿಕೊಳ್ಳುತ್ತೇವೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ. ಇದು ಗೌರವದ ವೃತ್ತಿಯಾಗಿರುವ ಸೈನ್ಯಕ್ಕೆ ಮತ್ತು ಸೈನಿಕರಿಗೆ ಮೋದಿಯವರ ಪಕ್ಷ ನೀಡುವ ಗೌರವವೇ? ದೇಶದಲ್ಲಿ ಈ ರೀತಿಯ ಆಡಳಿತ ಪಕ್ಷವಿರುವುದು ವಿಷಾದನೀಯ” ಎಂದಿದ್ದಾರೆ.


ಇದನ್ನೂ ಓದಿ: ಅಗ್ನಿಪಥ್ ವಿರೋಧಿಸಿ ಇಂದು ಭಾರತ್ ಬಂದ್: ಬಿಹಾರದಲ್ಲಿ 350 ರೈಲುಗಳ ಸಂಚಾರ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಒಬ್ಬ ಮೂರ್ಖನಿಗೂ ಗೊತ್ತಿಲ್ಲ ಅಗ್ನಿಪಥ ಯೋಜನೆ ಬಗ್ಗೆ ಆದ್ರೂ ಬಾಯಿಗೆ ಬಂದಂಗೆ ಬೊಗಳೋದು ನಿಲ್ಲಸಲ್ಲ,, ಓ ಮೂರ್ಖರೆ ಮೊದಲು ಅಗ್ನಿಪಥ ಅಂದ್ರೆ ಏನು ಅದರ ಒಳ ಷಡ್ಯಂತ್ರಗಳು ಏನು ಅಂತ ನೀವು ತಿಳ್ಕೊಳಿ ಜನರಿಗೆ ಎಲ್ಲ ಅರ್ಥ ಆಗಿದೆ,, ಯಾರೋ ಊದಿದ ಪುಂಗಿಗೆ ಸ್ಕ್ರಿಪ್ಟ್ ಬರೆಯೋಕೆ ಬರೋಕು ಮುಂಚೆ ಮನೇಲಿ ಸ್ವಲ್ಪ ನಿಮಗಿಂತ ಹೆಚ್ಚು ಓದಿರುವ ನಿಮ್ಮ ಆಪ್ತ ಸಲಹೆಗಾರರ ಹತ್ತಿರ ಸಲಹೆ ಪಡೆಯೋದು ಉತ್ತಮ ಅನ್ಸುತ್ತೆ ಅಲ್ವಾ ಅವಿವೇಕಿಗಳೆ..?
    ಕೆಲವು ನಾಯಿಗಳು ಯಾವಾಗ್ಲೂ ಬೊಗಳ್ತಾವೆ ಬರಿ ಸಾಬರ್ ಬಗ್ಗೆ ಮಾತ್ರ,, ದೇಶದ ಒಳಿತಿಗಾಗಿ ಒಂದು ಮಾತು ಬರಲ್ಲ ಎಂಜಲು ಅಲ್ಲ ಕ್ಷಮಿಸಿ ಹೇಸಿಗೆ ತಿನ್ನೋ ನಾಯಿಗಳು.. ಈಗ ಬೊಗಳರೋ ಹೇಸಿಗೆ ನಾಯಿಗಳ ದೇಶದ ಮಾನ ಹೋಯ್ತು ಈಗ ದೇಶದ ಯುವಕರು ಏನ್ ಮಾಡಬೇಕು ಬೊಗಳರೋ 2 ರೂಪಾಯಿ ಬಿಖಾರಿಗಳೇ….

  2. ಹೀಗೊಂದು ಪಕ್ಷದ ಒಬ್ಬ ಮೂರ್ಖನಿಗೂ ಗೊತ್ತಿಲ್ಲ ಅಗ್ನಿಪಥ ಯೋಜನೆ ಬಗ್ಗೆ ಆದ್ರೂ ಬಾಯಿಗೆ ಬಂದಂಗೆ ಬೊಗಳೋದು ನಿಲ್ಲಸಲ್ಲ,, ಓ ಮೂರ್ಖರೆ ಮೊದಲು ಅಗ್ನಿಪಥ ಅಂದ್ರೆ ಏನು ಅದರ ಒಳ ಷಡ್ಯಂತ್ರಗಳು ಏನು ಅಂತ ನೀವು ತಿಳ್ಕೊಳಿ ಜನರಿಗೆ ಎಲ್ಲ ಅರ್ಥ ಆಗಿದೆ,, ಯಾರೋ ಊದಿದ ಪುಂಗಿಗೆ ಸ್ಕ್ರಿಪ್ಟ್ ಬರೆಯೋಕೆ ಬರೋಕು ಮುಂಚೆ ಮನೇಲಿ ಸ್ವಲ್ಪ ನಿಮಗಿಂತ ಹೆಚ್ಚು ಓದಿರುವ ನಿಮ್ಮ ಆಪ್ತ ಸಲಹೆಗಾರರ ಹತ್ತಿರ ಸಲಹೆ ಪಡೆಯೋದು ಉತ್ತಮ ಅನ್ಸುತ್ತೆ ಅಲ್ವಾ ಅವಿವೇಕಿಗಳೆ..?
    ಕೆಲವು ನಾಯಿಗಳು ಯಾವಾಗ್ಲೂ ಬೊಗಳ್ತಾವೆ ಬರಿ ಸಾಬರ್ ಬಗ್ಗೆ ಮಾತ್ರ,, ದೇಶದ ಒಳಿತಿಗಾಗಿ ಒಂದು ಮಾತು ಬರಲ್ಲ ಎಂಜಲು ಅಲ್ಲ ಕ್ಷಮಿಸಿ ಹೇಸಿಗೆ ತಿನ್ನೋ ನಾಯಿಗಳು.. ಈಗ ಬೊಗಳರೋ ಹೇಸಿಗೆ ನಾಯಿಗಳ ದೇಶದ ಮಾನ ಹೋಯ್ತು ಈಗ ದೇಶದ ಯುವಕರು ಏನ್ ಮಾಡಬೇಕು ಬೊಗಳರೋ 2 ರೂಪಾಯಿ ಬಿಖಾರಿಗಳೇ….

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....