Homeಕರ್ನಾಟಕಮಣ್ಣು ಉಳಿಸುತ್ತೇವೆ: ರಾಜ್ಯ ಸರ್ಕಾರದೊಂದಿಗೆ ಜ್ಞಾಪನಪತ್ರಕ್ಕೆ ಸಹಿ ಹಾಕಿದ ಈಶಾ ಫೌಂಡೇಷನ್‌

ಮಣ್ಣು ಉಳಿಸುತ್ತೇವೆ: ರಾಜ್ಯ ಸರ್ಕಾರದೊಂದಿಗೆ ಜ್ಞಾಪನಪತ್ರಕ್ಕೆ ಸಹಿ ಹಾಕಿದ ಈಶಾ ಫೌಂಡೇಷನ್‌

ಈ ಹಿಂದೆ ‘ಕಾವೇರಿ ಕೂಗು’ ನಡೆಸಿ ಗಿಡ ನೆಡುವುದಾಗಿ ಹೇಳಿದ್ದ ಜಗ್ಗಿ ವಾಸುದೇವ್‌ ಕೋಟ್ಯಂತರ ಹಣ ಸಂಗ್ರಹಿಸಿರುವ ಆರೋಪ ಎದುರಿಸುತ್ತಿದ್ದಾರೆ. ಈಗ ‘ಮಣ್ಣು ಉಳಿಸಿ’ ಅಭಿಯಾನ ನಡೆಸುತ್ತಿದ್ದಾರೆ.

- Advertisement -
- Advertisement -

ಈಶಾ ಫೌಂಡೇಶನ್ ತನ್ನ ಸೇವ್ ಸಾಯಿಲ್‌ (ಮಣ್ಣು ಉಳಿಸಿ) ಅಭಿಯಾನದ ಭಾಗವಾಗಿ ಮಣ್ಣಿನ ಆರೋಗ್ಯ ಸುಧಾರಿಸುತ್ತೇವೆ ಎಂದು ಕರ್ನಾಟಕ ಸರ್ಕಾರದೊಂದಿಗೆ ಭಾನುವಾರ ಜ್ಞಾಪನ ಪತ್ರಕ್ಕೆ (ಎಂಒಯು) ಸಹಿ ಹಾಕಿದೆ.

ಜ್ಞಾಪಕ ಪತ್ರವು ಎರಡು ಅಥವಾ ಹೆಚ್ಚಿನ ಪಕ್ಷಗಳ ನಡುವಿನ ಒಪ್ಪಂದವಾಗಿದೆ. ಇದು ಕಾನೂನುಬದ್ಧ ಕ್ರಮವೇನೂ ಅಲ್ಲ. ಆದರೆ ಒಪ್ಪಂದದೊಂದಿಗೆ ಮುಂದುವರಿಯಲು ಉಭಯ ಪಕ್ಷಗಳ ಇಚ್ಛೆಯನ್ನು ಸಂಕೇತಿಸುತ್ತದೆ.

‘ಮಣ್ಣು ಉಳಿಸಿ’ ಅಭಿಯಾನ ಆರಂಭಿಸಿರುವ ಸ್ವಯಂ ಘೋಷಿತ ದೇವಗುರು ಜಗ್ಗಿ ವಾಸುದೇವ್ ತಮ್ಮ 100 ದಿನಗಳ ಮೋಟಾರ್ ಸೈಕಲ್ ಪ್ರಯಾಣದ ಅಂಗವಾಗಿ ಭಾನುವಾರ ಬೆಂಗಳೂರಿಗೆ ಆಗಮಿಸಿ, ಕಾರ್ಯಕ್ರಮದಲ್ಲಿ ಭಾಗಿಯಾದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲಂಡನ್ ನಿಂದ ಆರಂಭವಾದ ಅಭಿಯಾನ ಕೊನೆಗೂ ಕಾವೇರಿ ತಲುಪುತ್ತಿದೆ ಎಂದು ಜಗ್ಗಿ ಹೇಳಿದ್ದಾರೆ. ಅಭಿಯಾನದ ಭಾಗವಾಗಿ 27,278 ಕಿ.ಮೀ. ಕ್ರಮಿಸಿದ್ದಾರೆ. ಕಳೆದ 94 ದಿನಗಳಲ್ಲಿ ನಡೆದ 593 ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.

ಈಶಾ ಫೌಂಡೇಷನ್‌ ಪ್ರತಿ ದೇಶದ ವಿಶಿಷ್ಟತೆಗಳ ಆಧಾರದ ಮೇಲೆ 193 ರಾಷ್ಟ್ರಗಳಿಗೆ ಪ್ರತ್ಯೇಕ ‘ಮಣ್ಣು ಉಳಿಸಿ’ ನೀತಿಗಳನ್ನು ರೂಪಿಸಿದೆ. ಆ ದೇಶಗಳಿಗೆ ದಾಖಲೆಗಳನ್ನು ಹಸ್ತಾಂತರಿಸಿದೆ. ವಿವಿಧ ದೇಶಗಳು ಆ ದಾಖಲೆಗಳನ್ನು ಗಂಭೀರವಾಗಿ ಪರಿಗಣಿಸಿವೆ ಎಂದು ಜಗ್ಗಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿರಿ: ಪರಿಷ್ಕೃತ ಪಠ್ಯ ಪುಸ್ತಕಗಳನ್ನು ವಿರೋಧಿಸಿ ನಡೆದ ಬೃಹತ್ ಪ್ರತಿಭಟನೆ ಚಿತ್ರಗಳಲ್ಲಿ ನೋಡಿ

74 ರಾಷ್ಟ್ರಗಳು ಶಿಫಾರಸುಗಳನ್ನು ಜಾರಿಗೆ ತರಲು ಒಪ್ಪಿಕೊಂಡಿವೆ. ಜ್ಞಾಪನ ಪತ್ರಕ್ಕೆ ಸಹಿಹಾಕಿವೆ ಎಂದು ತಿಳಿಸಿದ್ದಾರೆ. ಭಾರತದಲ್ಲಿ ಏಳೆಂಟು ರಾಜ್ಯಗಳು ಜ್ಞಾಪನ ಪತ್ರಕ್ಕೆ ಸಹಿ ಹಾಕುತ್ತಿವೆ. ಕರ್ನಾಟಕವೂ ಸಹಿ ಹಾಕಿದೆ.

“ಯುಎನ್ ಏಜೆನ್ಸಿಗಳ ಪ್ರಕಾರ ಮಣ್ಣಿನಲ್ಲಿ ಸಾವಯವ ಪ್ರಮಾಣವು ಕನಿಷ್ಠ 3 ಪ್ರತಿಶತದಷ್ಟು ಇರಬೇಕು. ಆದರೆ, ವಿಶ್ವದ ಒಂದೇ ಒಂದು ದೇಶ ಈ ಗುರಿ ತಲುಪಿಲ್ಲ” ಎಂದು ಜಗ್ಗಿ ಪ್ರತಿಪಾದಿಸಿದ್ದಾರೆ.

ಅರಮನೆ ಮೈದಾನದಲ್ಲಿ ಜಗ್ಗಿಯವರ ‘ಮಣ್ಣು ಉಳಿಸಿ’ ಕಾರ್ಯಕ್ರಮವನ್ನು ವೀಕ್ಷಿಸಲು ನೂರಾರು ಜನರು ಭಾನುವಾರ ಆಗಮಿಸಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಜಗ್ಗಿ ವಾಸುದೇವ್‌ ಜ್ಞಾಪನ ಪತ್ರಗಳ ದಾಖಲೆಗಳನ್ನು ವಿನಿಮಯ ಮಾಡಿಕೊಳ್ಳುತ್ತಿದ್ದಂತೆ “ಮಣ್ಣು ಉಳಿಸಿ” ಎಂಬ ಘೋಷಣೆಗಳನ್ನು ಕೂಗಲಾಯಿತು. ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಕೆ.ಸುಧಾಕರ್, ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭಾಗವಹಿಸಿದ್ದರು.

ಯಡಿಯೂರಪ್ಪ ಅವರು ಜಗ್ಗಿಯವರ ಪಾದ ಮುಟ್ಟಿ ಅವರ ಆಶೀರ್ವಾದ ಪಡೆದುಕೊಂಡರು. 25 ಲಕ್ಷ ರೂ. ಬೆಲೆ ಬಾಳುವ BMW 1600 GT ಸೂಪರ್‌ಬೈಕ್‌ನಲ್ಲಿ ಸವಾರಿ ಮಾಡುವ ಮೂಲಕ ಜಗ್ಗಿ ವಾಸುದೇವ್‌ ಸ್ಥಳಕ್ಕೆ ಆಗಮಿಸಿದ್ದರು.

‘ಕಾವೇರಿ ಕೂಗು’ ಹೆಸರಲ್ಲಿ ಕೋಟಿ ಕೋಟಿ ರೂ. ವಂಚನೆ!?

’ಕಾವೇರಿ ಕೂಗು’ ಅಭಿಯಾನಕ್ಕಾಗಿ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಸಂಗ್ರಹ ಮಾಡಿರುವ ಈಶಾ ಫೌಂಡೇಶನ್‌ ಸ್ಥಾಪಕ ಜಗ್ಗಿ ವಾಸುದೇವ್‌ ಅಫಿಡವಿಟ್‌ ಮೂಲಕ ಎಷ್ಟು ಹಣ ಸಂಗ್ರಹಿಸಿದ್ದಾರೆ, ಯಾವೆಲ್ಲಾ ವಿಧಾನಗಳ ಮೂಲಕ ಸಂಗ್ರಹಿಸಲಾಗಿದೆ ಎಂಬುದನ್ನು ಬಹಿರಂಗಪಡಿಸಬೇಕೆಂದು ಕರ್ನಾಟಕ ಹೈಕೋರ್ಟ್‌ ಈ ಹಿಂದೆ ಆದೇಶಿಸಿತ್ತು.

ಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕೂಡ ಕಾನೂನಿಗಿಂತ ಮಿಗಿಲಲ್ಲ ಎಂದು ಒತ್ತಿ ಹೇಳಿದ್ದ ಮುಖ್ಯ ನ್ಯಾಯಮೂರ್ತಿ ಅಭಯ್‌ ಓಕ ಮತ್ತು ಹೇಮಂತ್‌ ಚಂದನ್‌ಗೌಡರ್‌ ಅವರಿದ್ದ ಪೀಠ, ಜಗ್ಗಿ ವಾಸುದೇವ್‌ ಸಂಗ್ರಹಿಸಿರುವ ಹಣದ ಲೆಕ್ಕ ಕೊಡಬೇಕು ಎಂದು ತಾಕೀತು ಮಾಡಿತ್ತು.

ಕಾವೇರಿ ಕೂಗು ಯೋಜನೆಗೆ ಯಾವ ಕಾರಣಕ್ಕೂ ಸಾರ್ವಜನಿಕರಿಂದ ಹಣ ಸಂಗ್ರಹಿಸಬಾರದು ಎಂದು ವಕೀಲ ಎ.ವಿ. ಅಮರನಾಥನ್ ಸಲ್ಲಿಸಿದ ಸಾರ್ವಜನಿಕ ಹಿತರಕ್ಷಣಾ ಅರ್ಜಿಯ ವಿಚಾರಣೆ ನಡೆಸಿದ ಪೀಠ ಈ ತೀರ್ಮಾನಕ್ಕೆ ಬಂದಿತ್ತು.

ಯಾರಾದರೂ ಜನರಿಗೆ ಅರಿವು ಮೂಡಿಸಿದರೆ ಅದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಅದರ ನೆಪದಲ್ಲಿ ಜನರಿಂದ ಒತ್ತಾಯಪೂರ್ವಕವಾಗಿ ಹಣ ಸಂಗ್ರಹಿಸುವುದನ್ನು ಒಪ್ಪುವುದಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿತ್ತು.

ಅಕ್ರಮ ಕಟ್ಟಡ ಕುರಿತು ಪ್ರಶ್ನಿಸಿದ್ದಕ್ಕೆ ಸಂದರ್ಶನವನ್ನೇ ಬಿಟ್ಟು ಹೊರಟ ಜಗ್ಗಿ ವಾಸುದೇವ್‌

ಸ್ವಯಂಘೋಷಿತ ದೇವಮಾನವ, ಸದ್ಗುರು ಎಂದೂ ಕರೆಯಲ್ಪಡುವ ಜಗ್ಗಿ ವಾಸುದೇವ್ ಅವರು ತಾಳ್ಮೆಯ ಬಗ್ಗೆ ಅನೇಕ ಸಂದರ್ಭಗಳಲ್ಲಿ ಬೋಧನೆ ಮಾಡಿದ್ದಾರೆ. ಆದರೆ ಬಿಬಿಸಿ ತಮಿಳು ಮಾಧ್ಯಮಕ್ಕೆ ಸಂದರ್ಶನ ನೀಡುವ ವೇಳೆ ಸ್ವತಃ ಜಗ್ಗಿಯವರೇ ತಮ್ಮ ತಾಳ್ಮೆಯನ್ನು ಕಳೆದುಕೊಂಡ ಘಟನೆ ಇತ್ತೀಚೆಗೆ ನಡೆದಿತ್ತು.

ಸಂದರ್ಶನದ ಮಧ್ಯದಲ್ಲೇ ಕ್ಯಾಮೆರಾಗಳನ್ನು ಸ್ವಿಚ್ ಆಫ್ ಮಾಡಲು ಸೂಚಿಸಿದ್ದರು. ಬಿಬಿಸಿ ತಮಿಳಿನ ಕೆ.ಸುಬಗುಣಂ ಅವರು ಜಗ್ಗಿ ವಾಸುದೇವ್‌ ಅವರ ಸಂದರ್ಶನ ನಡೆಸುತ್ತಿದ್ದಾಗ ಈ ಘಟನೆ ಸಂಭವಿಸಿತ್ತು. ಸಂದರ್ಶನದ ವೀಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಪತ್ರಕರ್ತರ ಪ್ರಶ್ನೆಗಳಿಂದ ಜಗ್ಗಿ ವಿಚಲಿತರಾಗಿರುವುದು ಚರ್ಚೆಯಾಗುತ್ತಿದೆ.

ಜಗ್ಗಿ ಆರಂಭಿಸಿರುವ ‘ಮಣ್ಣು ಉಳಿಸಿ ಆಂದೋಲನ’ದ ಕುರಿತು ಸಂದರ್ಶನ ನಡೆಯುತ್ತಿತ್ತು. ಸ್ವಘೋಷಿತ ದೇವಮಾನವರಾದ ಜಗ್ಗಿ ತಮ್ಮ ದ್ವಿಚಕ್ರ ವಾಹನದಲ್ಲಿ ವಿವಿಧ ಸ್ಥಳಗಳಿಗೆ ಪ್ರಯಾಣಿಸಿ ಈ ಅಭಿಯಾನ ನಡೆಸುತ್ತಿದ್ದಾರೆ. ಆದರೆ ಜಗ್ಗಿಯವರ ಇಶಾ ಫೌಂಡೇಶನ್‌ಗೆ ಸಂಬಂಧಿಸಿದಂತೆ ಪರಿಸರ ಅನುಮತಿಯ ವಿವಾದದ ಕುರಿತು ಪ್ರಶ್ನೆಗಳು ಬರುತ್ತಿದ್ದಂತೆ ಸಿಟ್ಟಿಗೆದ್ದಿದ್ದರು. ಅಂತಿಮವಾಗಿ ಸಂದರ್ಶನವನ್ನು ಮೊಟಕುಗೊಳಿಸಲು ಸೂಚಿಸಿದ್ದರು.

ಕೊಯಮತ್ತೂರು ಜಿಲ್ಲೆಯ ಬೂಲುವಾಪಟ್ಟಿ ಗ್ರಾಮದಲ್ಲಿ ನಿರ್ಮಿಸಲಾದ ಕಟ್ಟಡಗಳಿಗೆ ಪೂರ್ವಾನುಮತಿ ಪಡೆದಿಲ್ಲ. ನಿರ್ಮಾಣ ಮುಗಿದ ಸುಮಾರು ಮೂರು ವರ್ಷಗಳ ನಂತರ ಅಗತ್ಯವಿರುವ ಅನುಮತಿಗಳನ್ನು ಕೇಳಲಾಗಿದೆ ಎಂದು 2018ರಲ್ಲಿ ಸದ್ಗುರುಗಳ ಈಶಾ ಫೌಂಡೇಶನ್ ವಿರುದ್ಧ ಕಂಟ್ರೋಲರ್ ಮತ್ತು ಆಡಿಟರ್ ಜನರಲ್‌‌ (ಸಿಎಜೆ) ಗಂಭೀರ ಆರೋಪಗಳನ್ನು ಮಾಡಿದ್ದರು.

ಇದನ್ನೂ ಓದಿರಿ: ‘ಸಾಯಿ ಪಲ್ಲವಿ ಬಾಯಿ ಮುಚ್ಕೊಂಡ್‌ ಫಿಲ್ಮ್‌ ಮಾಡಲಿ’: ಎಚ್.ಆರ್‌.ರಂಗನಾಥ್‌ ಹೇಳಿಕೆಗೆ ಜನಾಕ್ರೋಶ

ಗ್ರಾಮದಲ್ಲಿ 32,856 ಚದರ ಅಡಿ ವಿಸ್ತೀರ್ಣದ ವಿವಿಧ ಕಟ್ಟಡಗಳನ್ನು 1994 ರಿಂದ 2008 ರ ನಡುವೆ ಸೂಕ್ತ ಅನುಮತಿಯೊಂದಿಗೆ ನಿರ್ಮಿಸಲಾಗಿದೆ ಎಂದು ಸಿಎಜಿ ಹೇಳಿದ್ದರು. ಆದರೆ 2005 ಮತ್ತು 2008ರ ನಡುವೆ ಗುಡ್ಡಗಾಡು ಪ್ರದೇಶ ಸಂರಕ್ಷಣಾ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಪಡೆಯದೆ ಕಟ್ಟಗಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದ್ದರು. ಇಶಾ ಸಂಸ್ಥೆಯು 2011ರಲ್ಲಿ ನಿರ್ಮಾಣಕ್ಕೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಮತ್ತು ಅನುಮೋದನೆ ನೀಡಬೇಕೆಂದು ಅರಣ್ಯ ಇಲಾಖೆಯನ್ನು ಕೋರಿತ್ತು.

“ಈಶಾ ಫೌಂಡೇಶನ್ ಈಗ ಪರಿಸರಕ್ಕಾಗಿ ಕೆಲಸ ಮಾಡುತ್ತಿದೆ” ಎಂದು ಬಿಬಿಸಿಯ ಸುಬಗುಣಂ ಪ್ರಸ್ತಾಪಿಸುತ್ತಾ “ಕಟ್ಟಡಗಳ ನಿರ್ಮಾಣಕ್ಕೆ ಅನುಮತಿಯನ್ನು ಪಡೆದಿಲ್ಲ ಎಂಬ ಆರೋಪದ ಬಗ್ಗೆ ಸದ್ಗುರುಗಳ ಅಭಿಪ್ರಾಯವೇನು?” ಎಂದು ಕೇಳಿದ್ದರು. ಇದರಿಂದ ತಾಳ್ಮೆ ಕಳೆದುಕೊಂಡು ಸಂದರ್ಶನ ಮೊಟುಕುಗೊಳಿಸಿದ್ದರು. (ಈ ಕುರಿತ ಪೂರ್ಣ ವಿವರ ಓದಲು ಇಲ್ಲಿ ಕ್ಲಿಕ್‌ ಮಾಡಿರಿ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....