Homeಕರ್ನಾಟಕಹಿಂದೆ ಇದ್ದಂತೆ ಎಲ್ಲ ಕನ್ನಡ ಸಿನಿಮಾಗಳಿಗೂ ತೆರಿಗೆ ವಿನಾಯಿತಿ ನೀಡಿ: ಸಿಎಂಗೆ ನಿರ್ದೇಶಕ ಮಂಸೋರೆ ಆಗ್ರಹ

ಹಿಂದೆ ಇದ್ದಂತೆ ಎಲ್ಲ ಕನ್ನಡ ಸಿನಿಮಾಗಳಿಗೂ ತೆರಿಗೆ ವಿನಾಯಿತಿ ನೀಡಿ: ಸಿಎಂಗೆ ನಿರ್ದೇಶಕ ಮಂಸೋರೆ ಆಗ್ರಹ

’ಕೇವಲ ಒಂದು ಸಿನೆಮಾಗೆ ತೆರಿಗೆ ವಿನಾಯಿತಿ ನೀಡುವುದು ನಮ್ಮೆಲ್ಲರ ಮೆಚ್ಚಿನ ಅಣ್ಣಾವ್ರ ಆಶಯಕ್ಕೆ ತದ್ವಿರುದ್ಧವಾದದ್ದು’

- Advertisement -
- Advertisement -

ಇತ್ತೀಚೆಗೆ ಬಿಡುಗಡೆಯಾದ ನಟ, ನಿರ್ಮಾಪಕ ರಕ್ಷಿತ್‌ ಶೆಟ್ಟಿ ಅವರ ಚಾರ್ಲಿ 777 ಸಿನಿಮಾವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೀಕ್ಷಿಸಿ, ಭಾವುಕರಾಗಿದ್ದರು. ಇದಾದ ಬಳಿಕ ಈ ಸಿನಿಮಾಗೆ ಶೇಕಡಾ 100 ರಷ್ಟು ಜಿಎಸ್‌ಟಿ ತೆರಿಗೆ ವಿನಾಯಿತಿ ನೀಡಿ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ, “ಕನ್ನಡ ನೆಲದಲ್ಲಿ ಶ್ವಾನದಷ್ಟೇ ಅಮೂಲ್ಯವಾದ ಜೀವ ಪಡೆದಿರುವ ಮಾನವೀಯ, ಮನುಷ್ಯತ್ವದ ಅಂಶ ಎತ್ತಿ ಹಿಡಿಯುವ ನೂರಾರು ಕನ್ನಡ ಸಿನೆಮಾಗಳು ಪ್ರತೀ ವರ್ಷ ತಯಾರಾಗುತ್ತಿವೆ. ಎಲ್ಲಾ ಸಿನಿಮಾಗಳಿಗೂ ಹಿಂದೆ ಇದ್ದಂತೆ ತೆರಿಗೆ ವಿನಾಯಿತಿ ನೀಡಿ” ಎಂದು ಆಗ್ರಹಿಸಿದ್ದಾರೆ.

ನಿರ್ದೇಶಕ ಮಂಸೋರೆ ಅವರ ಪತ್ರದ ವಿವರ ಹೀಗಿದೆ.

“ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ನಮಸ್ಕಾರ. ತಾವು ಕನ್ನಡ ಸಿನೆಮಾ, ಚಾರ್ಲಿ 777 ಗೆ ನಿರ್ಮಾಪಕರ ಕೋರಿಕೆಯ ಮೇರೆಗೆ ಸದರಿ ಸಿನೆಮಾಗೆ 100% ಜಿಎಸ್‌ಟಿ ಇಂದ ವಿನಾಯಿತಿ ಕೊಟ್ಟಿರುವುದು ತುಂಬಾ ಸಂತೋಷದ ವಿಷಯ. ಕನ್ನಡ ಸಿನೆಮಾಗಳ ಏಳಿಗೆಗೆ ಇದು ಅತ್ಯವಶ್ಯಕ. ಜೊತೆಗೆ ಈ ಹಿಂದೆ ಯಾವುದೋ ಅನ್ಯ ಭಾಷೆಯ ಸಿನೆಮಾಗು ತಾವು 100% ಜಿಎಸ್‌ಟಿ ತೆರಿಗೆ ವಿನಾಯಿತಿ ಕೊಟ್ಟಿದ್ದೀರಿ ಎಂದು ಯಾವುದೋ ಸುದ್ದಿ ಪತ್ರಿಕೆಯಲ್ಲಿ ಓದಿದ ನೆನಪು. ಈಗ ಈ ಪತ್ರವನ್ನು ತಮಗೆ ಬರೆಯುತ್ತಿರುವುದರ ಕಾರಣವನ್ನು ಮೊದಲಿಗೆ ತಮಗೆ ವಿವರಿಸುತ್ತೇನೆ”.

“ತಾವು ಮುಖ್ಯಮಂತ್ರಿ ಆಗುವ ಮೊದಲು, ತಮ್ಮ ಬಿಜೆಪಿ ಸರ್ಕಾರ ಬರುವ ಮೊದಲು ಕನ್ನಡದ ಸಿನೆಮಾಗಳಿಗೆ ಕನ್ನಡದ ನೆಲದಲ್ಲೇ ಸಂಪೂರ್ಣವಾಗಿ ತಯಾರಾಗುವ (ಹೊರ ರಾಜ್ಯದಲ್ಲಿ ಚಿತ್ರೀಕರಣವಾಗುವುದಾದರೆ ಅದಕ್ಕೆ ಸೂಕ್ತ ಕಾರಣ ಕೊಡಬೇಕಿತ್ತು) ಎಲ್ಲಾ ಕನ್ನಡ ಸಿನೆಮಾಗಳಿಗೆ 100% ತೆರಿಗೆ ವಿನಾಯಿತಿ ಇತ್ತು ಎಂಬ ವಿಷಯ ತಮಗೆ ಗೊತ್ತಿತ್ತೇ..? ಕನ್ನಡದ ಸಿನೆಮಾಗಳಿಗೆ ಇದ್ದ ಈ ವಿನಾಯಿತಿಯನ್ನು ಕನ್ನಡಿಗರ ಕೈಯಿಂದ (ಕನ್ನಡದ ನಿರ್ಮಾಪಕರ ಹೊಟ್ಟೆ ಮೇಲೆ ಹೊಡೆದು ಕಿತ್ತುಕೊಂಡಿದ್ದು) ನಿಮ್ಮದೇ ಆದ ಬಿಜೆಪಿ ಸರ್ಕಾರ ಎಂಬುದು ನಿಮಗೆ ತಿಳಿದಿದೆಯೇ..? ಅದು ಜಿಎಸ್‌ಟಿ ಎಂಬ ಹೆಮ್ಮಾರಿಯ ಹೆಸರಲ್ಲಿ ಎಂಬುದು ತಮಗೆ ತಿಳಿದಿದೆಯೇ..?”

ಇದನ್ನೂ ಓದಿ: ಪೊಲೀಸ್ ವ್ಯವಸ್ಥೆಯ ವಾಸ್ತವಗಳತ್ತ ತಮಿಳು, ಮಲಯಾಳಂ ಚಿತ್ರರಂಗ

“ಈ ಹಿಂದೆ ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗಡೆ ಅವರು ಕನ್ನಡ ಸಿನೆಮಾಗಳ ಮೇಲೆ ಮನರಂಜನಾ ತೆರಿಗೆ ವಿಧಿಸಲು ಹೋದಾಗ, ನಮ್ಮೆಲ್ಲರ ಪಾಲಿನ ಅಣ್ಣಾವ್ರು, ಡಾ. ರಾಜ್‌ಕುಮಾರ್ ಅವರು ಕನ್ನಡ ಚಿತ್ರರಂಗವನ್ನೇ ತ್ಯಜಿಸಿ ತಮ್ಮ ಹಳ್ಳಿಗೆ ಹೋಗುವ ನಿರ್ಧಾರ ಮಾಡುತ್ತಾರೆ, ಆಗ ಮುಖ್ಯಮಂತ್ರಿಗಳೇ ಅಣ್ಣಾವ್ರ ಮನೆಗೆ ಹೋಗಿ ಅವರ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಅವರ ಮನವೊಲಿಸಿ ಅವರು ತಮ್ಮ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಒಪ್ಪಿಸುತ್ತಾರೆ ಹಾಗು ತೆರಿಗೆ ವಿಧಿಸುವ ತಮ್ಮ ನಿಲುವನ್ನು ಹಿಂತೆಗೆದುಕೊಳ್ಳುತ್ತಾರೆ. (ಹಿರಿಯ ಪತ್ರಕರ್ತರಾದ ಬಿ.ವಿ.ವೈಕುಂಠರಾಜು ರವರ ಸಿನೆಮಾತು ಪುಸ್ತಕದಲ್ಲಿ ಇದರ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ) ಅದೇ ಮುಂದೆ ಕನ್ನಡ ಹಾಗೂ ಕನ್ನಡ ನೆಲದಲ್ಲಿ ತಯಾರಾಗುವ ಎಲ್ಲಾ ಸಿನೆಮಾಗಳಿಗೂ ೧೦೦% ತೆರಿಗೆ ವಿನಾಯಿತಿ ನೀಡಲಾಗುವ ನಿರ್ಧಾರ ಕೈಗೊಳ್ಳಲಾಗುತ್ತದೆ. ಅಂತಹ ಮಹಾನುಭಾವರ ನಿರ್ಧಾರದಿಂದ ಕನ್ನಡ ಚಿತ್ರರಂಗಕ್ಕೆ ಸಿಕ್ಕಿದ್ದ ಸೌಲಭ್ಯವನ್ನು ಕಿತ್ತುಕೊಂಡಿದ್ದು ಜಿಎಸ್‌ಟಿ ನೆಪದಲ್ಲಿ ನಿಮ್ಮದೇ ಬಿಜೆಪಿ ಸರ್ಕಾರ ಎಂಬುದು ತಮಗೆ ತಿಳಿದಿದೆಯೇ..?”

“ಈಗ ವಾಪಸ್ಸು ನಿಮ್ಮ ಆಡಳಿತದ ಸರ್ಕಾರದ ವಿಷಯಕ್ಕೆ ಬರುವುದಾದರೆ, ಶ್ವಾನದ ಕಾಳಜಿಯಿಂದ ತಾವು ಆ ‘ಒಂದು’ ಕನ್ನಡ ಸಿನೆಮಾಗೆ ಮಾತ್ರ 100% ಜಿಎಸ್‌ಟಿ ತೆರಿಗೆ ವಿನಾಯಿತಿ ನೀಡಲು ಆ ಹಣವನ್ನು ತಾವು ತಮ್ಮ ಜೇಬಿನಿಂದ ನೀಡುತ್ತಿದ್ದೀರ ಎಂದು ತಿಳಿಯಲು ಡಾ.ಬಿ.ಆರ್.ಅಂಬೇಡ್ಕರ್ ಸರ್ ಬರೆದಿರುವ, ಸಾಂವಿಧಾನಿಕ ಹಕ್ಕನ್ನು ಪಡೆದಿರುವ ಕರ್ನಾಟಕದ ಪ್ರಜೆಗಳಾಗಿ ಕೇಳಿತ್ತಿದ್ದೇನೆ, ದಯವಿಟ್ಟು ತಿಳಿಸಿ”.

“ಶ್ವಾನದಷ್ಟೇ ಅಮೂಲ್ಯವಾದ ಜೀವ ಪಡೆದಿರುವ ಮಾನವೀಯ, ಮನುಷ್ಯತ್ವದ ಅಂಶ ಎತ್ತಿ ಹಿಡಿಯುವ ನೂರಾರು ಕನ್ನಡ ಸಿನೆಮಾಗಳು ಪ್ರತೀ ವರ್ಷ ತಯಾರಾಗುತ್ತಿವೆ. ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶನವಾಗುತ್ತಿರುವ ಅನೇಕ ಕನ್ನಡ ಚಿತ್ರಗಳು ಕನ್ನಡ ನೆಲದಲ್ಲಿ ತಯಾರಾಗುತ್ತಿವೆ. ಉದಾಹರಣೆಗೆ ಪೆಡ್ರೋ, ಕೋಳಿತಾಲ್, ಡೊಳ್ಳು, ದಾರಿ ಯಾವುದಯ್ಯ ವೈಕುಂಟಕ್ಕೆ, ಅಮೃತಮತಿ, ನೀಲಿ ಹಕ್ಕಿ ಇನ್ನೂ ಬಹಳಷ್ಟು ಸಿನೆಮಾ ಇದೆ. ಜೊತೆಗೆ ಅಂತರ್ರಾಷ್ಟ್ರೀಯ ಚಿತ್ರೋತ್ಸವಕ್ಕೆ ಹೋಗದಿದ್ದರೂ ಸಹ, ಅನೇಕ ಕನ್ನಡ ಸಿನೆಮಾಗಳು ಅತ್ತ್ಯುತ್ತಮವಾದ ಮಾನವೀಯ ಗುಣವುಳ್ಳ ಸಿನೆಮಾಗಳು ಕಳೆದ ನಾಲ್ಲೈದು ವರ್ಷಗಳಲ್ಲೇ ಸಾಕಷ್ಟಿವೆ, ಅದು ಯಾವುದಕ್ಕೂ ನೀಡದ 100% ತೆರಿಗೆ ವಿನಾಯಿತಿ ಕೇವಲ ಒಂದು ಸಿನೆಮಾಗೆ ನೀಡುವುದು ನಮ್ಮೆಲ್ಲರ ಮೆಚ್ಚಿನ ಅಣ್ಣಾವ್ರ ಆಶಯಕ್ಕೆ ತದ್ವಿರುದ್ಧವಾದದ್ದು ಎಂದು ತಮಗೆ ಮನವರಿಕೆ ಮಾಡಲು ಇಚ್ಚಿಸುತ್ತೇನೆ”.

“ಚಾರ್ಲಿ ಸಿನೆಮಾದ ನಿರ್ಮಾಪಕರೂ ಸೇರಿದಂತೆ ಕನ್ನಡದ ಯಾರೊಬ್ಬ ನಿರ್ಮಾಪಕರು ಅಣ್ಣಾವ್ರ ಆಶಯ ಮೀರಿ, ಕನ್ನಡ ಚಿತ್ರರಂಗವನ್ನು ಹೊರಗಿಟ್ಟು, ಸ್ವಾರ್ಥಿಗಳಂತೆ ತಮ್ಮ ಸಿನೆಮಾಗೆ ಮಾತ್ರ 100% ತೆರಿಗೆ ವಿನಾಯಿತಿ ಕೊಡಬೇಕೆಂದು ಹಂಬಲಿಸಲಾರರು, ತಮ್ಮಲ್ಲಿ ಬೇಡಿಕೊಳ್ಳಲಾರರು ಎಂದು ನನ್ನ ಬಲವಾದ ನಂಬಿಕೆ. ಇದು ಕನ್ನಡ ಚಿತ್ರರಂಗದ ಏಳಿಗೆಗಾಗಿ ಶ್ರಮಿಸುತ್ತಿರುವ ಪ್ರತಿಯೊಬ್ಬ ನಿರ್ಮಾಪಕರ, ತಂತ್ರಜ್ಞ, ಶ್ರಮಿಕ ಹಾಗೂ ಕಲಾವಿದರ ಅನ್ನದ ಪ್ರಶ್ನೆಯಾಗಿರುವುದರಿಂದ ಹಾಗೂ ನಮ್ಮ ನೆಚ್ಚಿನ ಅಣ್ಣಾವ್ರು ಡಾ. ರಾಜ್‌ಕುಮಾರ್ ಅವರ ಆಶಯವೂ ಆಗಿರುವ ಕಾರಣದಿಂದಾಗಿ ಕನ್ನಡದ, ಕನ್ನಡದ ನೆಲದಲ್ಲೇ ಸಂಪೂರ್ಣವಾಗಿ ತಯಾರಾಗುವ ಪ್ರತೀ ಸಿನೆಮಾಗೂ ಈ ಹಿಂದೆ ಇದ್ದಂತೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುತ್ತೀರಾ ಎಂಬ ನಂಬಿಕೆಯಿಂದ ಈ ಪತ್ರ ಬರೆಯುತ್ತಿದ್ದೇನೆ” ಎಂದಿದ್ದಾರೆ.

ಪತ್ರದ ಜೊತೆಗೆ ಚಾರ್ಲಿ 777 ಸಿನಿಮಾಗೆ ನೀಡಿರುವ ತೆರಿಗೆ ವಿನಾಯಿತಿಯ ಆದೇಶ ಪತ್ರವನ್ನು ಮಂಸೋರೆ ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: ‘ಚಾರ್ಲಿ 777’ ಭಾವುಕತೆಯಾಚೆಗೆ ತೆರೆದುಕೊಳ್ಳದ ಸರಳರೇಖೆಯ ಸಿನಿಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....