Homeಕರ್ನಾಟಕಹಿಂದೆ ಇದ್ದಂತೆ ಎಲ್ಲ ಕನ್ನಡ ಸಿನಿಮಾಗಳಿಗೂ ತೆರಿಗೆ ವಿನಾಯಿತಿ ನೀಡಿ: ಸಿಎಂಗೆ ನಿರ್ದೇಶಕ ಮಂಸೋರೆ ಆಗ್ರಹ

ಹಿಂದೆ ಇದ್ದಂತೆ ಎಲ್ಲ ಕನ್ನಡ ಸಿನಿಮಾಗಳಿಗೂ ತೆರಿಗೆ ವಿನಾಯಿತಿ ನೀಡಿ: ಸಿಎಂಗೆ ನಿರ್ದೇಶಕ ಮಂಸೋರೆ ಆಗ್ರಹ

’ಕೇವಲ ಒಂದು ಸಿನೆಮಾಗೆ ತೆರಿಗೆ ವಿನಾಯಿತಿ ನೀಡುವುದು ನಮ್ಮೆಲ್ಲರ ಮೆಚ್ಚಿನ ಅಣ್ಣಾವ್ರ ಆಶಯಕ್ಕೆ ತದ್ವಿರುದ್ಧವಾದದ್ದು’

- Advertisement -
- Advertisement -

ಇತ್ತೀಚೆಗೆ ಬಿಡುಗಡೆಯಾದ ನಟ, ನಿರ್ಮಾಪಕ ರಕ್ಷಿತ್‌ ಶೆಟ್ಟಿ ಅವರ ಚಾರ್ಲಿ 777 ಸಿನಿಮಾವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೀಕ್ಷಿಸಿ, ಭಾವುಕರಾಗಿದ್ದರು. ಇದಾದ ಬಳಿಕ ಈ ಸಿನಿಮಾಗೆ ಶೇಕಡಾ 100 ರಷ್ಟು ಜಿಎಸ್‌ಟಿ ತೆರಿಗೆ ವಿನಾಯಿತಿ ನೀಡಿ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ, “ಕನ್ನಡ ನೆಲದಲ್ಲಿ ಶ್ವಾನದಷ್ಟೇ ಅಮೂಲ್ಯವಾದ ಜೀವ ಪಡೆದಿರುವ ಮಾನವೀಯ, ಮನುಷ್ಯತ್ವದ ಅಂಶ ಎತ್ತಿ ಹಿಡಿಯುವ ನೂರಾರು ಕನ್ನಡ ಸಿನೆಮಾಗಳು ಪ್ರತೀ ವರ್ಷ ತಯಾರಾಗುತ್ತಿವೆ. ಎಲ್ಲಾ ಸಿನಿಮಾಗಳಿಗೂ ಹಿಂದೆ ಇದ್ದಂತೆ ತೆರಿಗೆ ವಿನಾಯಿತಿ ನೀಡಿ” ಎಂದು ಆಗ್ರಹಿಸಿದ್ದಾರೆ.

ನಿರ್ದೇಶಕ ಮಂಸೋರೆ ಅವರ ಪತ್ರದ ವಿವರ ಹೀಗಿದೆ.

“ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ನಮಸ್ಕಾರ. ತಾವು ಕನ್ನಡ ಸಿನೆಮಾ, ಚಾರ್ಲಿ 777 ಗೆ ನಿರ್ಮಾಪಕರ ಕೋರಿಕೆಯ ಮೇರೆಗೆ ಸದರಿ ಸಿನೆಮಾಗೆ 100% ಜಿಎಸ್‌ಟಿ ಇಂದ ವಿನಾಯಿತಿ ಕೊಟ್ಟಿರುವುದು ತುಂಬಾ ಸಂತೋಷದ ವಿಷಯ. ಕನ್ನಡ ಸಿನೆಮಾಗಳ ಏಳಿಗೆಗೆ ಇದು ಅತ್ಯವಶ್ಯಕ. ಜೊತೆಗೆ ಈ ಹಿಂದೆ ಯಾವುದೋ ಅನ್ಯ ಭಾಷೆಯ ಸಿನೆಮಾಗು ತಾವು 100% ಜಿಎಸ್‌ಟಿ ತೆರಿಗೆ ವಿನಾಯಿತಿ ಕೊಟ್ಟಿದ್ದೀರಿ ಎಂದು ಯಾವುದೋ ಸುದ್ದಿ ಪತ್ರಿಕೆಯಲ್ಲಿ ಓದಿದ ನೆನಪು. ಈಗ ಈ ಪತ್ರವನ್ನು ತಮಗೆ ಬರೆಯುತ್ತಿರುವುದರ ಕಾರಣವನ್ನು ಮೊದಲಿಗೆ ತಮಗೆ ವಿವರಿಸುತ್ತೇನೆ”.

“ತಾವು ಮುಖ್ಯಮಂತ್ರಿ ಆಗುವ ಮೊದಲು, ತಮ್ಮ ಬಿಜೆಪಿ ಸರ್ಕಾರ ಬರುವ ಮೊದಲು ಕನ್ನಡದ ಸಿನೆಮಾಗಳಿಗೆ ಕನ್ನಡದ ನೆಲದಲ್ಲೇ ಸಂಪೂರ್ಣವಾಗಿ ತಯಾರಾಗುವ (ಹೊರ ರಾಜ್ಯದಲ್ಲಿ ಚಿತ್ರೀಕರಣವಾಗುವುದಾದರೆ ಅದಕ್ಕೆ ಸೂಕ್ತ ಕಾರಣ ಕೊಡಬೇಕಿತ್ತು) ಎಲ್ಲಾ ಕನ್ನಡ ಸಿನೆಮಾಗಳಿಗೆ 100% ತೆರಿಗೆ ವಿನಾಯಿತಿ ಇತ್ತು ಎಂಬ ವಿಷಯ ತಮಗೆ ಗೊತ್ತಿತ್ತೇ..? ಕನ್ನಡದ ಸಿನೆಮಾಗಳಿಗೆ ಇದ್ದ ಈ ವಿನಾಯಿತಿಯನ್ನು ಕನ್ನಡಿಗರ ಕೈಯಿಂದ (ಕನ್ನಡದ ನಿರ್ಮಾಪಕರ ಹೊಟ್ಟೆ ಮೇಲೆ ಹೊಡೆದು ಕಿತ್ತುಕೊಂಡಿದ್ದು) ನಿಮ್ಮದೇ ಆದ ಬಿಜೆಪಿ ಸರ್ಕಾರ ಎಂಬುದು ನಿಮಗೆ ತಿಳಿದಿದೆಯೇ..? ಅದು ಜಿಎಸ್‌ಟಿ ಎಂಬ ಹೆಮ್ಮಾರಿಯ ಹೆಸರಲ್ಲಿ ಎಂಬುದು ತಮಗೆ ತಿಳಿದಿದೆಯೇ..?”

ಇದನ್ನೂ ಓದಿ: ಪೊಲೀಸ್ ವ್ಯವಸ್ಥೆಯ ವಾಸ್ತವಗಳತ್ತ ತಮಿಳು, ಮಲಯಾಳಂ ಚಿತ್ರರಂಗ

“ಈ ಹಿಂದೆ ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗಡೆ ಅವರು ಕನ್ನಡ ಸಿನೆಮಾಗಳ ಮೇಲೆ ಮನರಂಜನಾ ತೆರಿಗೆ ವಿಧಿಸಲು ಹೋದಾಗ, ನಮ್ಮೆಲ್ಲರ ಪಾಲಿನ ಅಣ್ಣಾವ್ರು, ಡಾ. ರಾಜ್‌ಕುಮಾರ್ ಅವರು ಕನ್ನಡ ಚಿತ್ರರಂಗವನ್ನೇ ತ್ಯಜಿಸಿ ತಮ್ಮ ಹಳ್ಳಿಗೆ ಹೋಗುವ ನಿರ್ಧಾರ ಮಾಡುತ್ತಾರೆ, ಆಗ ಮುಖ್ಯಮಂತ್ರಿಗಳೇ ಅಣ್ಣಾವ್ರ ಮನೆಗೆ ಹೋಗಿ ಅವರ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಅವರ ಮನವೊಲಿಸಿ ಅವರು ತಮ್ಮ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಒಪ್ಪಿಸುತ್ತಾರೆ ಹಾಗು ತೆರಿಗೆ ವಿಧಿಸುವ ತಮ್ಮ ನಿಲುವನ್ನು ಹಿಂತೆಗೆದುಕೊಳ್ಳುತ್ತಾರೆ. (ಹಿರಿಯ ಪತ್ರಕರ್ತರಾದ ಬಿ.ವಿ.ವೈಕುಂಠರಾಜು ರವರ ಸಿನೆಮಾತು ಪುಸ್ತಕದಲ್ಲಿ ಇದರ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ) ಅದೇ ಮುಂದೆ ಕನ್ನಡ ಹಾಗೂ ಕನ್ನಡ ನೆಲದಲ್ಲಿ ತಯಾರಾಗುವ ಎಲ್ಲಾ ಸಿನೆಮಾಗಳಿಗೂ ೧೦೦% ತೆರಿಗೆ ವಿನಾಯಿತಿ ನೀಡಲಾಗುವ ನಿರ್ಧಾರ ಕೈಗೊಳ್ಳಲಾಗುತ್ತದೆ. ಅಂತಹ ಮಹಾನುಭಾವರ ನಿರ್ಧಾರದಿಂದ ಕನ್ನಡ ಚಿತ್ರರಂಗಕ್ಕೆ ಸಿಕ್ಕಿದ್ದ ಸೌಲಭ್ಯವನ್ನು ಕಿತ್ತುಕೊಂಡಿದ್ದು ಜಿಎಸ್‌ಟಿ ನೆಪದಲ್ಲಿ ನಿಮ್ಮದೇ ಬಿಜೆಪಿ ಸರ್ಕಾರ ಎಂಬುದು ತಮಗೆ ತಿಳಿದಿದೆಯೇ..?”

“ಈಗ ವಾಪಸ್ಸು ನಿಮ್ಮ ಆಡಳಿತದ ಸರ್ಕಾರದ ವಿಷಯಕ್ಕೆ ಬರುವುದಾದರೆ, ಶ್ವಾನದ ಕಾಳಜಿಯಿಂದ ತಾವು ಆ ‘ಒಂದು’ ಕನ್ನಡ ಸಿನೆಮಾಗೆ ಮಾತ್ರ 100% ಜಿಎಸ್‌ಟಿ ತೆರಿಗೆ ವಿನಾಯಿತಿ ನೀಡಲು ಆ ಹಣವನ್ನು ತಾವು ತಮ್ಮ ಜೇಬಿನಿಂದ ನೀಡುತ್ತಿದ್ದೀರ ಎಂದು ತಿಳಿಯಲು ಡಾ.ಬಿ.ಆರ್.ಅಂಬೇಡ್ಕರ್ ಸರ್ ಬರೆದಿರುವ, ಸಾಂವಿಧಾನಿಕ ಹಕ್ಕನ್ನು ಪಡೆದಿರುವ ಕರ್ನಾಟಕದ ಪ್ರಜೆಗಳಾಗಿ ಕೇಳಿತ್ತಿದ್ದೇನೆ, ದಯವಿಟ್ಟು ತಿಳಿಸಿ”.

“ಶ್ವಾನದಷ್ಟೇ ಅಮೂಲ್ಯವಾದ ಜೀವ ಪಡೆದಿರುವ ಮಾನವೀಯ, ಮನುಷ್ಯತ್ವದ ಅಂಶ ಎತ್ತಿ ಹಿಡಿಯುವ ನೂರಾರು ಕನ್ನಡ ಸಿನೆಮಾಗಳು ಪ್ರತೀ ವರ್ಷ ತಯಾರಾಗುತ್ತಿವೆ. ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶನವಾಗುತ್ತಿರುವ ಅನೇಕ ಕನ್ನಡ ಚಿತ್ರಗಳು ಕನ್ನಡ ನೆಲದಲ್ಲಿ ತಯಾರಾಗುತ್ತಿವೆ. ಉದಾಹರಣೆಗೆ ಪೆಡ್ರೋ, ಕೋಳಿತಾಲ್, ಡೊಳ್ಳು, ದಾರಿ ಯಾವುದಯ್ಯ ವೈಕುಂಟಕ್ಕೆ, ಅಮೃತಮತಿ, ನೀಲಿ ಹಕ್ಕಿ ಇನ್ನೂ ಬಹಳಷ್ಟು ಸಿನೆಮಾ ಇದೆ. ಜೊತೆಗೆ ಅಂತರ್ರಾಷ್ಟ್ರೀಯ ಚಿತ್ರೋತ್ಸವಕ್ಕೆ ಹೋಗದಿದ್ದರೂ ಸಹ, ಅನೇಕ ಕನ್ನಡ ಸಿನೆಮಾಗಳು ಅತ್ತ್ಯುತ್ತಮವಾದ ಮಾನವೀಯ ಗುಣವುಳ್ಳ ಸಿನೆಮಾಗಳು ಕಳೆದ ನಾಲ್ಲೈದು ವರ್ಷಗಳಲ್ಲೇ ಸಾಕಷ್ಟಿವೆ, ಅದು ಯಾವುದಕ್ಕೂ ನೀಡದ 100% ತೆರಿಗೆ ವಿನಾಯಿತಿ ಕೇವಲ ಒಂದು ಸಿನೆಮಾಗೆ ನೀಡುವುದು ನಮ್ಮೆಲ್ಲರ ಮೆಚ್ಚಿನ ಅಣ್ಣಾವ್ರ ಆಶಯಕ್ಕೆ ತದ್ವಿರುದ್ಧವಾದದ್ದು ಎಂದು ತಮಗೆ ಮನವರಿಕೆ ಮಾಡಲು ಇಚ್ಚಿಸುತ್ತೇನೆ”.

“ಚಾರ್ಲಿ ಸಿನೆಮಾದ ನಿರ್ಮಾಪಕರೂ ಸೇರಿದಂತೆ ಕನ್ನಡದ ಯಾರೊಬ್ಬ ನಿರ್ಮಾಪಕರು ಅಣ್ಣಾವ್ರ ಆಶಯ ಮೀರಿ, ಕನ್ನಡ ಚಿತ್ರರಂಗವನ್ನು ಹೊರಗಿಟ್ಟು, ಸ್ವಾರ್ಥಿಗಳಂತೆ ತಮ್ಮ ಸಿನೆಮಾಗೆ ಮಾತ್ರ 100% ತೆರಿಗೆ ವಿನಾಯಿತಿ ಕೊಡಬೇಕೆಂದು ಹಂಬಲಿಸಲಾರರು, ತಮ್ಮಲ್ಲಿ ಬೇಡಿಕೊಳ್ಳಲಾರರು ಎಂದು ನನ್ನ ಬಲವಾದ ನಂಬಿಕೆ. ಇದು ಕನ್ನಡ ಚಿತ್ರರಂಗದ ಏಳಿಗೆಗಾಗಿ ಶ್ರಮಿಸುತ್ತಿರುವ ಪ್ರತಿಯೊಬ್ಬ ನಿರ್ಮಾಪಕರ, ತಂತ್ರಜ್ಞ, ಶ್ರಮಿಕ ಹಾಗೂ ಕಲಾವಿದರ ಅನ್ನದ ಪ್ರಶ್ನೆಯಾಗಿರುವುದರಿಂದ ಹಾಗೂ ನಮ್ಮ ನೆಚ್ಚಿನ ಅಣ್ಣಾವ್ರು ಡಾ. ರಾಜ್‌ಕುಮಾರ್ ಅವರ ಆಶಯವೂ ಆಗಿರುವ ಕಾರಣದಿಂದಾಗಿ ಕನ್ನಡದ, ಕನ್ನಡದ ನೆಲದಲ್ಲೇ ಸಂಪೂರ್ಣವಾಗಿ ತಯಾರಾಗುವ ಪ್ರತೀ ಸಿನೆಮಾಗೂ ಈ ಹಿಂದೆ ಇದ್ದಂತೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುತ್ತೀರಾ ಎಂಬ ನಂಬಿಕೆಯಿಂದ ಈ ಪತ್ರ ಬರೆಯುತ್ತಿದ್ದೇನೆ” ಎಂದಿದ್ದಾರೆ.

ಪತ್ರದ ಜೊತೆಗೆ ಚಾರ್ಲಿ 777 ಸಿನಿಮಾಗೆ ನೀಡಿರುವ ತೆರಿಗೆ ವಿನಾಯಿತಿಯ ಆದೇಶ ಪತ್ರವನ್ನು ಮಂಸೋರೆ ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: ‘ಚಾರ್ಲಿ 777’ ಭಾವುಕತೆಯಾಚೆಗೆ ತೆರೆದುಕೊಳ್ಳದ ಸರಳರೇಖೆಯ ಸಿನಿಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...