Homeಮುಖಪುಟಉಕ್ರೇನ್ ನಿರಾಶ್ರಿತ ಮಕ್ಕಳ ನೆರವಿಗೆ ನೊಬೆಲ್ ಪ್ರಶಸ್ತಿ ಹರಾಜಿಗಿಟ್ಟ ರಷ್ಯಾ ಪತ್ರಕರ್ತ

ಉಕ್ರೇನ್ ನಿರಾಶ್ರಿತ ಮಕ್ಕಳ ನೆರವಿಗೆ ನೊಬೆಲ್ ಪ್ರಶಸ್ತಿ ಹರಾಜಿಗಿಟ್ಟ ರಷ್ಯಾ ಪತ್ರಕರ್ತ

- Advertisement -
- Advertisement -

ರಷ್ಯಾದ ಸ್ವತಂತ್ರ ಪತ್ರಿಕೆಯಾದ ‘ನೊವಾಯಾ ಗೆಜೆಟಾ’ದ ಸಂಪಾದಕರು ತಮಗೆ ದೊರೆತ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಹರಾಜು ಹಾಕಿದ್ದಾರೆ. ಉಕ್ರೇನ್‌ನಲ್ಲಿ ಯುದ್ಧದಿಂದ ಸ್ಥಳಾಂತರಗೊಂಡ ಮಕ್ಕಳಿಗೆ ಸಹಾಯ ಮಾಡಲು ಹರಾಜು ಹಾಕಲು ಮುಂದಾಗಿದ್ದಾರೆ ಎಂದು ‘ದಿ ಗಾರ್ಡಿಯನ್’ ವರದಿ ಮಾಡಿದೆ.

ಉಕ್ರೇನ್ ಮೇಲಿನ ಆಕ್ರಮಣದ ನಂತರದಲ್ಲಿ ಸಾಕಷ್ಟು ಸವಾಲುಗಳ ನಡುವೆ ವ್ಲಾಡಿಮಿರ್ ಪುಟಿನ್ ಅವರ ಸರ್ಕಾರವನ್ನು ಟೀಕಿಸುವ ಕೊನೆಯ ಪ್ರಮುಖ ಸ್ವತಂತ್ರ ಮಾಧ್ಯಮವನ್ನು ಡಿಮಿಟ್ರಿ ಮುರಾಟೋವ್ ಮುನ್ನಡೆಸಿದ್ದರು.

ಕಳೆದ ಅಕ್ಟೋಬರ್‌ನಲ್ಲಿ ಮುರಾಟೋವ್ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಯಿತು. ತಮಗೆ ದೊರೆತ 500,000 ಡಾಲರ್‌ ಬಹುಮಾನದ ಹಣವನ್ನು ನಿರಾಶ್ರಿತ ಮಕ್ಕಳ ಭವಿಷ್ಯ ರೂಪಿಸಲು ಚಾರಿಟಿಗೆ ದಾನ ಮಾಡುವುದಾಗಿ ಘೋಷಿಸಿದರು. 23-ಕ್ಯಾರಟ್ ಚಿನ್ನದ ನೊಬೆಲ್ ಪದಕವನ್ನು ನ್ಯೂಯಾರ್ಕ್‌ನಲ್ಲಿ ಸೋಮವಾರ ಸಂಜೆ 7 ಗಂಟೆಗೆ ವಿಶ್ವ ನಿರಾಶ್ರಿತರ ದಿನದಂದು ಮಾರಾಟ ಮಾಡಲಿದ್ದಾರೆ. ಹರಾಜಿನಲ್ಲಿ ಬರುವ ಎಲ್ಲಾ ಹಣವೂ ಯುನಿಸೆಫ್‌ಗೆ ನೀಡಲಾಗುತ್ತಿದೆ. ಉಕ್ರೇನ್‌ನ ನಿರಾಶ್ರಿತ ಮಕ್ಕಳಿಗೆ ಸಹಾಯ ಮಾಡಲಾಗುತ್ತದೆ.

ಕಳೆದ ತಿಂಗಳು ಸಂದರ್ಶನವೊಂದರಲ್ಲಿ ಮುರಾಟೋವ್ ಮಾತನಾಡುತ್ತಾ, ರಷ್ಯಾದ ಆಕ್ರಮಣದಿಂದ ಸ್ಥಳಾಂತರಗೊಂಡ 14 ಮಿಲಿಯನ್ ಉಕ್ರೇನಿಯನ್ನರ ಪರ ಒಲವು ತೋರಿಸಿದರು. ಈ ಸ್ಥಳಾಂತರವನ್ನು “ದುರಂತ” ಎಂದು ಕರೆದಿದ್ದರು.

“ನಿರಾಶ್ರಿತರ ಸಂಖ್ಯೆಯನ್ನು ನೋಡಿದರೆ, ನಾವು ಮೂಲತಃ ಮೂರನೇ ಮಹಾಯುದ್ಧದಲ್ಲಿದ್ದೇವೆ. ಇದು ಸ್ಥಳೀಯವಾದ ಸಂಘರ್ಷವಲ್ಲ” ಎಂದಿದ್ದರು. “ಪ್ರಮಾದವಾಗಿದೆ. ನಾವು ಅದನ್ನು ಕೊನೆಗೊಳಿಸಬೇಕಾಗಿದೆ” ಎಂದಿದ್ದರು.

ಸೋವಿಯತ್ ಒಕ್ಕೂಟದ ವಿಭಜನೆಯ ನಂತರ 1993 ರಲ್ಲಿ ಸ್ಥಾಪಿತವಾದ ನೊವಾಯಾ ಗೆಜೆಟಾ, ರಷ್ಯಾದ ಒಳಗೆ ಮತ್ತು ಹೊರಗೆ ಭ್ರಷ್ಟಾಚಾರವನ್ನು ಹೊರಗೆಳೆಯಿತು. ಚೆಚೆನ್ಯಾದಲ್ಲಿ ಸುದೀರ್ಘ ಯುದ್ಧಗಳ ಕುರಿತು ತನಿಖಾ ವರದಿ ಮಾಡಿತು. ಮುರಾಟೋವ್ ಅವರು ನೊಬೆಲ್‌ ಪ್ರಶಸ್ತಿಯನ್ನು ತಮ್ಮ ಕೆಲಸದ ಕೆಲಸದ ಕಾರಣಕ್ಕೆ ಹತ್ಯೆಯಾದ ಪತ್ರಿಕೆಯ ಆರು ಪತ್ರಕರ್ತರಿಗೆ ಅರ್ಪಿಸಿದರು.

“ನಾನು ಉಕ್ರೇನ್‌ನಿಂದ ಬರೆಯುತ್ತಿದ್ದೇನೆ. ನಾನು ಕಳೆದ ಆರು ತಿಂಗಳಿಂದ ಅಲ್ಲಿದ್ದೇನೆ. ಸಂಘರ್ಷದ ನಿರ್ಮಾಣ ಮತ್ತು ಯುದ್ಧದ ಕಠೋರ ವಾಸ್ತವತೆಯ ಬಗ್ಗೆ ವರದಿ ಮಾಡಿದ್ದೇನೆ. ಇದು ನನ್ನ 30 ವರ್ಷಗಳ ವೃತ್ತಿಜೀವನದ ಅತ್ಯಂತ ತೀವ್ರವಾದ ಸಮಯ. ಡಿಸೆಂಬರ್‌ನಲ್ಲಿ ನಾನು ಉಕ್ರೇನಿಯನ್ ಸೈನ್ಯದೊಂದಿಗೆ ಡೊನೆಟ್ಸ್‌ಕ್ನ ಪ್ರದೇಶಗಳಿವೆ ಭೇಟಿ ಮಾಡಿದ್ದೇನೆ. ಜನವರಿಯಲ್ಲಿ ನಾನು ಮರಿಯುಪೋಲ್ಗೆ ಹೋದೆ. ನಂತರ ಕ್ರೈಮಿಯಾಗೆ ಬಂದೆ. ಫೆಬ್ರವರಿ 24 ರಂದು ರಷ್ಯಾದ ಬಾಂಬ್‌ಗಳು ಬಿದ್ದಾಗ ನಾನು ಉಕ್ರೇನಿಯನ್ ರಾಜಧಾನಿಯಲ್ಲಿ ಇತರ ಸಹೋದ್ಯೋಗಿಗಳೊಂದಿಗೆ ಇದ್ದೆ” ಎಂದಿದ್ದರು.

“1945ರ ನಂತರದಲ್ಲಿ ಯುರೋಪಿನಲ್ಲಿ ನಡೆದ ಅತಿ ದೊಡ್ಡ ಯುದ್ಧವಾಗಿದೆ. ಇದು ಉಕ್ರೇನಿಯನ್ನರಿಗೆ ಅಸ್ತಿತ್ವದ ಹೋರಾಟವಾಗಿದೆ. ಈ ಯುದ್ಧವು ಎಲ್ಲಿಯವರೆಗೆ ಇರುತ್ತದೆಯೋ ಅಲ್ಲಿಯವರೆಗೆ ಅದನ್ನು ಕವರ್ ಮಾಡಲು ನಮ್ಮ ವರದಿಗಾರರು ಮತ್ತು ಸಂಪಾದಕೀಯ ತಂಡವು ಉದ್ದೇಶಿಸಿದೆ. ಯುದ್ಧದಲ್ಲಿ ಸಿಕ್ಕಿಬಿದ್ದವರ ಕಥೆಗಳನ್ನು, ಅಂತಾರಾಷ್ಟ್ರೀಯ ಆಯಾಮವನ್ನು ಹೇಳಲು ನಾವು ಬದ್ಧರಾಗಿದ್ದೇವೆ” ಎಂದಿದ್ದರು ಮುರಾಟೋವ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...