Homeಮುಖಪುಟಎಲ್ಲ ಸದಭಿರುಚಿ ಸಿನಿಮಾಗಳಿಗೆ ತೆರಿಗೆ ವಿನಾಯಿತಿ ಅಗತ್ಯ: ಫಿಲ್ಮ್‌ ಛೇಂಬರ್‌ ಅಧ್ಯಕ್ಷ ಭಾ.ಮ.ಹರೀಶ್‌ ಪ್ರತಿಕ್ರಿಯೆ

ಎಲ್ಲ ಸದಭಿರುಚಿ ಸಿನಿಮಾಗಳಿಗೆ ತೆರಿಗೆ ವಿನಾಯಿತಿ ಅಗತ್ಯ: ಫಿಲ್ಮ್‌ ಛೇಂಬರ್‌ ಅಧ್ಯಕ್ಷ ಭಾ.ಮ.ಹರೀಶ್‌ ಪ್ರತಿಕ್ರಿಯೆ

ಚಾರ್ಲಿ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಹಿನ್ನೆಲೆಯಲ್ಲಿ ಭಾ.ಮ.ಹರೀಶ್‌ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

“ಸದಭಿರುಚಿಯ ಸಿನಿಮಾಗಳಿಗೆ ತೆರಿಗೆ ವಿನಾಯಿತಿಯನ್ನು ಸರ್ಕಾರ ನೀಡಬೇಕು. ಈ ಕುರಿತು ಮುಖ್ಯಮಂತ್ರಿಯವರೊಂದಿಗೆ ಮಾತನಾಡುವೆ” ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್‌ ತಿಳಿಸಿದ್ದಾರೆ.

ರಕ್ಷಿತ್ ಶೆಟ್ಟಿ ಅಭಿನಯಿಸಿ ನಿರ್ಮಾಣ ಮಾಡಿರುವ ‘ಚಾರ್ಲಿ 777’ ಸಿನಿಮಾಕ್ಕೆ ರಾಜ್ಯ ಸರ್ಕಾರ ಎಸ್‌ಜಿಎಸ್‌ಟಿ (ರಾಜ್ಯ ಸರಕು ಮತ್ತು ಸೇವಾ ತೆರಿಗೆ) ವಿನಾಯಿತಿ ನೀಡಿದೆ. ಸರ್ಕಾರದ ನಿರ್ಧಾರವನ್ನು ತೆರೆದ ಹೃದಯದಿಂದ ಸ್ವಾಗತಿಸಿರುವ ಕನ್ನಡ ಚಿತ್ರಕರ್ಮಿಗಳು ಆಶಾಭಾವನೆಯನ್ನು ವ್ಯಕ್ತಪಡಿಸಿದ್ದಾರೆ. ನಿರ್ದೇಶಕ ಮಂಸೋರೆಯವರು ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆಯುತ್ತಾ ಇತರ ಚಿತ್ರಗಳಿಗೂ ತೆರಿಗೆ ವಿನಾಯಿತಿಯನ್ನು ಸರ್ಕಾರ ನೀಡಬೇಕು ಎಂದು ಮುಖ್ಯಮಂತ್ರಿಯವರಲ್ಲಿ ವಿನಂತಿ ಮಾಡಿದ ಬಳಿಕ ಚಿತ್ರರಂಗದ ಅನೇಕರು ಈ ಬೇಡಿಕೆಗೆ ದನಿಗೂಡಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್‌, “ಈ ವಿಚಾರವಾಗಿ ವಾರ್ತಾ ಇಲಾಖೆಯ ಆಯುಕ್ತರು ಹಾಗೂ ಮುಖ್ಯಮಂತ್ರಿಯವರ ಜೊತೆ ಚರ್ಚೆ ಮಾಡುತ್ತೇನೆ. ಕನ್ನಡದಲ್ಲಿ ಒಳ್ಳೆಯ ಸಿನಿಮಾಗಳು ಬರುತ್ತಿವೆ. ಮಂಸೋರೆಯಂಥವರು ಒಳ್ಳೆಯ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಚಾರ್ಲಿಗೆ ತೆರಿಗೆ ವಿನಾಯಿತಿ ನೀಡಿದಂತೆಯೇ ಒಳ್ಳೆಯ ಸಿನಿಮಾಗಳಿಗೆ ಸರ್ಕಾರ ತೆರಿಗೆ ವಿನಾಯಿತಿ ನೀಡಬೇಕು” ಎಂದಿದ್ದಾರೆ.

“ಕೊರೊನಾ ಬಿಕ್ಕಟ್ಟಿನ ನಂತರದಲ್ಲಿ ಚಿತ್ರರಂಗ ಸವಾಲುಗಳನ್ನು ಎದುರಿಸುತ್ತಿದೆ. ತೆರಿಗೆ ವಿನಾಯಿತಿ ನೀಡಿದರೆ ಇಡೀ ಚಿತ್ರರಂಗಕ್ಕೆ ಒಳ್ಳೆಯದಾಗುತ್ತದೆ. ಹಿರಿಯರೊಂದಿಗೆ ಚರ್ಚಿಸುವೆ” ಎಂದು ಹೇಳಿದ್ದಾರೆ.

‘ಹರಿವು’, ‘ನಾತಿಚರಾಮಿ’, ‘ಆಕ್ಟ್‌ 1978’ ಸಿನಿಮಾಗಳನ್ನು ನಿರ್ದೇಶಿಸಿರುವ ಮಂಸೋರೆಯವರು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿ ತಮ್ಮ ಅಭಿಪ್ರಾಯ ದಾಖಲಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಸೋರೆಯವರ ಪತ್ರದ ಹಿನ್ನಲೆಯಲ್ಲಿ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಚಿತ್ರಕರ್ಮಿಗಳು ಸರ್ಕಾರದ ಮುಂದೆ ಇದೇ ಬೇಡಿಕೆಯನ್ನು ಇಟ್ಟರು. ಸದಭಿರುಚಿಯ ಸಿನಿಮಾಗಳು ಹೆಚ್ಚಾಗಬೇಕಾದರೆ ಸರ್ಕಾರ ತೆರಿಗೆ ವಿನಾಯಿತಿ ನಿರ್ಧಾರವನ್ನು ವಿಸ್ತರಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿರಿ: ‘ಚಾರ್ಲಿ 777’ ಭಾವುಕತೆಯಾಚೆಗೆ ತೆರೆದುಕೊಳ್ಳದ ಸರಳರೇಖೆಯ ಸಿನಿಮಾ

ಸಮಿತಿ ರಚಿಸಿ ತೆರಿಗೆ ವಿನಾಯಿತಿಗೆ ನಿರ್ಧಾರ ಮಾಡಲಿ: ಜಯತೀರ್ಥ

‘ಒಲವೇ ಮಂದಾರ’, ‘ಬ್ಯೂಟಿಫುಲ್‌ ಮನಸುಗಳು’, ‘ಬೆಲ್‌ಬಾಟಂ’ ಸಿನಿಮಾಗಳ ನಿರ್ದೇಶಕ ಜಯತೀರ್ಥ ಅವರು ಮಾತನಾಡಿ, “ಸರ್ಕಾರ ಒಳ್ಳೆಯ ಹೆಜ್ಜೆಯನ್ನಿಟ್ಟಿದೆ. ಸದಭಿರುಚಿಯ ಸಿನಿಮಾಕ್ಕೆ ತೆರಿಗೆ ನೀಡಿದೆ. ಇದೇ ರೀತಿಯ ಒಳ್ಳೆಯ ಆಶಯ ಇರುವ ಸಿನಿಮಾಗಳಿಗೂ ಪ್ರೋತ್ಸಾಹ ನೀಡಿದರೆ ಬಹಳ ಒಳ್ಳೆಯದಾಗುತ್ತದೆ. ಅದಕ್ಕೆ ನನ್ನ ಬೆಂಬಲವೂ ಇದೆ” ಎಂದರು.

ನಿರ್ದೇಶಕ ಜಯತೀರ್ಥ

“ಒಳ್ಳೆಯ ಸಿನಿಮಾ ಯಾವುದೆಂದು ನಿರ್ಧಾರ ಮಾಡಲು ಎಲ್ಲ ಸಿನಿಮಾಗಳನ್ನು ನೋಡಲು ಮುಖ್ಯಮಂತ್ರಿಯವರಿಗೆ ಸಾಧ್ಯವಾಗುವುದಿಲ್ಲ. ಮುಖ್ಯಮಂತ್ರಿಯವರಿಗೆ ಸಂಪರ್ಕದಲ್ಲಿರುವವರು ಅವರನ್ನು ಕರೆದು ಸಿನಿಮಾ ತೋರಿಸಬಹುದಷ್ಟೇ. ಆದರೆ ಯಾವುದೇ ಪ್ರಭಾವ ಇರದೇ ಇರುವ ಸಾಮಾನ್ಯ ಕಲಾವಿದರಿಗೆ, ನಿರ್ದೇಶಕರಿಗೆ, ನಿರ್ಮಾಪಕರಿಗೆ ಇದು ಸಾಧ್ಯವಾಗದು. ಅದಕ್ಕಾಗಿ ಒಂದು ಸಮಿತಿ ಮಾಡಬಹುದು. ಗುಣಾತ್ಮಕ ಸಿನಿಮಾಗಳಿಗೆ ಸಬ್ಸಿಡಿ ನೀಡಲು ವ್ಯವಸ್ಥೆ ಮಾಡಿದ್ದಾರೆ. ಆದರೆ ಈ ಸಬ್ಸಿಡಿ ಸಿನಿಮಾ ಬಿಡುಗಡೆಯಾಗಿ ವರ್ಷಗಳು ಕಳೆದ ಮೇಲೆ ಕೈಗೆ ಸಿಗುತ್ತದೆ. ಈ ರೀತಿ ಆಗಬಾರದು. ಸೆನ್ಸಾರ್‌ ಮಂಡಳಿ ಹೇಗೆ ಸಿನಿಮಾ ನೋಡುತ್ತದೆಯೇ ಹಾಗೆಯೇ ಸಿನಿಮಾ ನೋಡುವ ಸಮಿತಿಯನ್ನು ಸರ್ಕಾರ ಮಾಡಬಹುದು. ತೆರಿಗೆ ವಿನಾಯಿತಿ ನೀಡಬೇಕು ಎಂಬುದು ನಮ್ಮ ಆಶಯ” ಎಂದು ತಿಳಿಸಿದರು.

“ಪ್ರತಿಯೊಂದು ಹಂತದಲ್ಲೂ ನಿರ್ಮಾಪಕರು ಸವಾಲನ್ನು ಎದುರಿಸುತ್ತಿದ್ದಾರೆ. ದೊಡ್ಡ ದೊಡ್ಡ ಸ್ಟಾರ್‌ ನಟರ ಸಿನಿಮಾಗಳನ್ನು ಮಾಡಿದವರು ಹೇಗೋ ಸಹಿಸಿಕೊಳ್ಳಬಹುದು. ಆದರೆ ಎಲ್ಲರಿಗೂ ಇದು ಸಾಧ್ಯವಾಗದು. ಹೀಗಾದಾಗ ಸಿನಿಮಾಗಳು ಒಟಿಟಿಗೆ ಸೀಮಿತವಾಗಿಬಿಡುತ್ತದೆ. ಸಿನಿಮಾ ಸಂಸ್ಕೃತಿ ಹೊರಟು ಹೋಗುತ್ತದೆ. ಈ ಎಲ್ಲ ದೃಷ್ಟಿಕೋನದಿಂದ ಕನ್ನಡ ಸಿನಿಮಾಗಳಿಗೆ ಪ್ರೋತ್ಸಾಹ ದೊರಕಬೇಕಿದೆ” ಎಂದು ಒತ್ತಾಯಿಸಿದರು.

ಇದನ್ನೂ ಓದಿರಿ: Film Review| ಜನ ಗಣ ಮನ: ಸಮೂಹ ಸನ್ನಿಗೊಂದು ಮದ್ದು

“ಕಲಾವಿದರು ಕೊಡುವ ಅನೇಕ ತೆರಿಗೆಯಿಂದ ಸರ್ಕಾರಕ್ಕೆ ಅನುಕೂಲವಾಗುತ್ತಿದೆ. ಒಂದು ಸಿನಿಮಾ ನೋಡಲು ಬರುವ ಪ್ರೇಕ್ಷಕ ಸಾಕಷ್ಟು ಹಣ ವ್ಯಯಿಸುತ್ತಾನೆ. ಪಾರ್ಕಿಂಗ್‌ ಶುಲ್ಕ ಕಟ್ಟುತ್ತಾನೆ, ಪೆಟ್ರೋಲ್ ಹಾಕಿಸಿಕೊಳ್ಳುತ್ತಾನೆ, ಮನರಂಜನಾ ತೆರಿಗೆ ಕಟ್ಟುತ್ತಾನೆ. ಹೀಗೆ ಇಷ್ಟೆಲ್ಲ ವೆಚ್ಚದ ನಡುವೆಯೂ ಫೈರಸಿ ಹಾವಳಿಯೂ ಇದೆ. ಈ ಪೈರಸಿ ಹಾವಳಿಯೂ ತಪ್ಪುತ್ತಿಲ್ಲ. ಸರ್ಕಾರದಿಂದಲೂ ಬೆಂಬಲ ಸಿಗುತ್ತಿಲ್ಲ” ಎಂದು ವಿಷಾದಿಸಿದರು.

ರಾಜನ ಭಾವನೆಗೆ ತಕ್ಕಂತೆ ಸಿನಿಮಾ ಮಾಡಬೇಕೆ: ಬಿ.ಎಂ.ಗಿರಿರಾಜ್‌

‘ಜಟ್ಟ’, ‘ನವಿಲಾದವರು’, ‘ಮೈತ್ರಿ’, ‘ಅಮರಾವತಿ’, ‘ಕನ್ನಡಿಗ’ ಸಿನಿಮಾಗಳ ನಿರ್ದೇಶಕ ಬಿ.ಎಂ.ಗಿರಿರಾಜ್‌ ಮಾತನಾಡಿ, “ನಾವು ಕಷ್ಟಪಟ್ಟು ಸಿನಿಮಾ ಮಾಡಿರುತ್ತೇವೆ. ನಿಮಗೆ ಇಷ್ಟವಾಗಲು ಅಥವಾ ಆಗದಿರಲು ನಿಮ್ಮದೇ ಆದ ಕಾರಣಗಳಿರುತ್ತವೆ. ಮುಖ್ಯಮಂತ್ರಿಯವರ ನಾಯಿ ತೀರಿಕೊಂಡಿದ್ದರಿಂದ ‘ಚಾರ್ಲಿ’ ಸಿನಿಮಾ ಅವರಿಗೆ ಹೆಚ್ಚು ಕನೆಕ್ಟ್ ಆಯಿತು. ಟ್ಯಾಕ್ಸ್‌ ಫ್ರೀ ಎಂದರು. ಯಾವುದೇ ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡುವುದು ಒಳ್ಳೆಯದು. ಆದರೆ ಈ ಪ್ರಕರಣ ಹೇಗಿದೆ ಎಂದರೆ, ಒಬ್ಬ ರಾಜ ಅಥವಾ ಒಡೆಯನ ಮನವೊಲಿಸಿ, ಆತನ ಮನಸ್ಸಿನ ಭಾವಕ್ಕೆ ತಕ್ಕಂತೆ ಸಿನಿಮಾ ಮಾಡಿದರೆ ಮಾತ್ರ ಉಳಿಗಾಲ ಎಂಬಂತಿದೆ” ಎಂದು ವಿವರಿಸಿದರು.

ನಿರ್ದೇಶಕ ಬಿ.ಎಂ.ಗಿರಿರಾಜ್‌

“ಕನ್ನಡ ಸಿನಿಮಾಗಳಿಗೆ ಮೊದಲು ತೆರಿಗೆ ವಿನಾಯಿತಿ ಇತ್ತು. ಇಲ್ಲಿನ ತಂತ್ರಜ್ಞರು, ಕಾರ್ಮಿಕರನ್ನು ಬಳಸಿಕೊಂಡು ಸಿನಿಮಾ ಮಾಡಬೇಕು ಎಂಬ ನಿಯಮಗಳಿದ್ದವು. ಆದರೆ ಜಿಎಸ್‌ಟಿ ಜಾರಿ ಬಳಿಕ ಬದಲಾಯಿತು. ಕೇಂದ್ರದ ವ್ಯಾಪ್ತಿಗೆ ಹೋದ ಮೇಲೆ ತೆರಿಗೆ ವಿನಾಯಿತಿ ಕಳೆದುಕೊಂಡೆವು” ಎಂದು ಹೇಳಿದರು.

“ಒಬ್ಬ ನಿರ್ಮಾಪಕ ಕಷ್ಟಪಟ್ಟು 10 ಕೋಟಿ ರೂ. ವೆಚ್ಚದಲ್ಲಿ ಒಂದು ಸಿನಿಮಾ ಮಾಡುತ್ತಾನೆ ಎಂದುಕೊಳ್ಳೋಣ. ಅದರಲ್ಲಿ 18 % ಜಿಎಸ್‌ಟಿ ಎಂದರೆ 1 ಕೋಟಿ 80 ಲಕ್ಷ ರೂ.ಗಳಾಗುತ್ತದೆ. ಬಡ್ಡಿ ಮೇಲೆ ಹಣ ತಂದಿರುತ್ತಾರೆ. ಹೀಗಿರುವಾಗ 1 ಕೋಟಿ 80 ಲಕ್ಷ ರೂ. ಮೊದಲೇ ಕಟ್ಟಿ ಎನ್ನುವುದು ಬಹಳ ಭಾರವಾಗುತ್ತದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಅತಿ ಹೆಚ್ಚು ಸಿನಿಮಾ ಬಿಡುಗಡೆ ಮಾಡಿದ ರಾಜ್ಯ ನಮ್ಮದು. ಒಂದು ರಾಜ್ಯಕ್ಕೆ ತೆರಿಗೆ ವಿನಾಯಿತಿ ನೀಡಿದರೆ ಮತ್ತೊಂದು ರಾಜ್ಯವೂ ಕೇಳುತ್ತದೆ ಎಂಬ ವಾದವನ್ನು ಮಂಡಿಸುತ್ತಾರೆ. ಆದರೆ ರಾಜ್ಯ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿರಿ: ಪೊಲೀಸ್ ವ್ಯವಸ್ಥೆಯ ವಾಸ್ತವಗಳತ್ತ ತಮಿಳು, ಮಲಯಾಳಂ ಚಿತ್ರರಂಗ

ವಿನಾಯಿತಿ ನೀಡಿದರೆ ಪ್ರೇಕ್ಷಕರು ಹೆಚ್ಚುತ್ತಾರೆ: ಕಿಶೋರ್‌‌ ಪತ್ತಿಕೊಂಡ

ಪುನೀತ್‌ ರಾಜ್‌ಕುಮಾರ್‌ ಅವರ ಕೊನೆಯ ಸಿನಿಮಾ ‘ಜೇಮ್ಸ್‌’ನ ನಿರ್ಮಾಪಕ ಹಾಗೂ ಹಂಚಿಕೆದಾರರೂ ಆಗಿರುವ ಕಿಶೋರ್ ಪತ್ತಿಕೊಂಡ ಮಾತನಾಡಿ, “ಕನ್ನಡ ಚಿತ್ರರಂಗ ಬೆಳೆಯುತ್ತಿದೆ. ಸರ್ಕಾರ ತೆರಿಗೆ ವಿನಾಯಿತಿ ನೀಡಿದರೆ ಬಹಳ ಅನುಕೂಲವಾಗುತ್ತದೆ. ಮೊದಲೆಲ್ಲ ತೆರಿಗೆ ಇರಲಿಲ್ಲ. ಆದರೆ ಈಗ ಪ್ರೇಕ್ಷಕರಿಗೂ ಭಾರವಾಗುತ್ತಿದೆ. ತೆರಿಗೆ ವಿನಾಯಿತಿ ನೀಡಿದರೆ ಪ್ರೇಕ್ಷಕರ ಸಂಖ್ಯೆ ಹೆಚ್ಚಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

ನಿರ್ಮಾಪಕ ಕಿಶೋರ್‌ ಪತ್ತಿಕೊಂಡ

“ಚಿತ್ರಮಂದಿರಗಳಿಂದ ಬರುವ ಆದಾಯ ಹೆಚ್ಚಾದರೆ, ಮೂವತ್ತು ದಿನಕ್ಕೆ ಓಟಿಟಿಗೆ ಹೋಗುವ ಸಿನಿಮಾ ಐವತ್ತು ದಿನಕ್ಕೆ ಹೋಗುತ್ತದೆ. ದುರಾದೃಷ್ಟವಶಾತ್‌ ಬಹಳಷ್ಟು ಚಿತ್ರಮಂದಿರಗಳು ಮುಚ್ಚಿಹೋಗುತ್ತಿವೆ. ಚಿತ್ರಮಂದಿರದಲ್ಲಿ ಸಿನಿಮಾ ನೋಡುವ ಅನುಭವವೇ ಬೇರೆ. ಇಂದು ಚಿತ್ರಮಂದಿರಗಳು ಉಳಿಯಬೇಕಾದರೆ ತೆರಿಗೆ ವಿನಾಯಿತಿ ಅಗತ್ಯವಿದೆ. ಚಾರ್ಲಿಗೆ ಎಸ್‌ಜಿಎಸ್‌ಟಿ ವಿನಾಯಿತಿ ನೀಡಿದ್ದು ಖುಷಿ ತಂದಿದೆ. ಇದೇ ಕ್ರಮವನ್ನು ಎಲ್ಲ ಸಿನಿಮಾಗಳಿಗೆ ಅನ್ವಯಿಸುವ ಅಗತ್ಯವಿದೆ” ಎಂದು ಮನವಿ ಮಾಡಿದರು.

ತೆರಿಗೆ ವಿನಾಯಿತಿ ವಿಸ್ತರಿಸಿ: ಮಂಸೋರೆ

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಮಂಸೋರೆಯವರು, “ತೆರಿಗೆ ವಿನಾಯಿತಿ ನೀಡಿದರೆ ಮಧ್ಯಮ ಹಾಗೂ ಕಡಿಮೆ ಬಜೆಟ್ ಸಿನಿಮಾ ಮೇಕರ್ಸ್‌‌ಗಳಿಗೆ ಬಹಳ ಅನುಕೂಲವಾಗುತ್ತದೆ. ಚಾರ್ಲಿಗೆ ಕೊಟ್ಟಿರುವ ವಿನಾಯಿತಿಯನ್ನು ಎಲ್ಲ ಸಿನಿಮಾಗಳಿಗೆ ವಿಸ್ತರಿಸಬೇಕು” ಎಂದು ಆಗ್ರಹಿಸಿದರು.

“ಜಿಎಸ್‌ಟಿ ಬಂದ ಮೇಲೆ ಕೇಂದ್ರದ ಹಿಡಿತಕ್ಕೆ ಸಿಲುಕಿ ರಾಜ್ಯ ಸರ್ಕಾರಗಳ ಕೈಕಾಲು ಕತ್ತರಿಸಿದಂತಾಗಿದೆ. ಒಟ್ಟಾಗಿ ಕೂತು ಮಾತನಾಡಿ, ವಿನಾಯಿತಿ ನೀಡಬೇಕಾಗಿದೆ. ಒಳ್ಳೆಯ ಸಿನಿಮಾ ಯಾವುದೆಂದು ವಾರ್ತಾ ಇಲಾಖೆ ನಿರ್ಧರಿಸಬೇಕಿದೆ. ಹಳೆಯ ಪದ್ಧತಿಯನ್ನು ಜಾರಿಗೆ ತರಬೇಕಾಗಿದೆ” ಎಂದು ಹೇಳಿದರು.

ನಿರ್ದೇಶಕ ಮಂಸೋರೆ

ಅಭಿಪ್ರಾಯ ನೀಡಲು ನಿರಾಕರಿಸಿದ ರಾಕ್‌ಲೈನ್‌

ಕನ್ನಡ ಚಿತ್ರರಂಗದ ನಟ, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್ ಅವರು ಈ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. “ತೆರಿಗೆ ವಿನಾಯಿತಿ ಬಗ್ಗೆ ಕಮೆಂಟ್‌ ಮಾಡಲು ಹೋಗಲ್ಲ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...