Homeರಾಷ್ಟ್ರೀಯನ್ಯಾಷನಲ್ ಹೆರಾಲ್ಡ್ ಪ್ರಕರಣ: 5ನೇ ದಿನವೂ ರಾಹುಲ್ ಗಾಂಧಿಯ ವಿಚಾರಣೆ ನಡೆಸಲಿರುವ ‘ಇಡಿ’!

ನ್ಯಾಷನಲ್ ಹೆರಾಲ್ಡ್ ಪ್ರಕರಣ: 5ನೇ ದಿನವೂ ರಾಹುಲ್ ಗಾಂಧಿಯ ವಿಚಾರಣೆ ನಡೆಸಲಿರುವ ‘ಇಡಿ’!

- Advertisement -
- Advertisement -

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಸೋಮವಾರದಂದು ಜಾರಿ ನಿರ್ದೇಶನಾಲಯ (ಇಡಿ)ದ ವಿಚಾರಣೆಗೆ ಒಳಗಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮಂಗಳವಾರ(ಇಂದು) ಕೂಡಾ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರದ ವಿಚಾರಣೆಯು ರಾತ್ರಿ 9 ಗಂಟೆಯ ತನಕವೂ ನಡೆದಿತ್ತು ಎಂದು ಅವರು ಹೇಳಿದ್ದಾರೆ. ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ಕಳೆದ ನಾಲ್ಕು ದಿನಗಳಲ್ಲಿ 40 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ.

ರಾಹುಲ್ ಗಾಂಧಿ ಅವರು ಸೋಮವಾರ ವಿಚಾರಣೆ ಪುನರಾರಂಭಗೊಳ್ಳುವ ಮೊದಲು ಆಸ್ಪತ್ರೆಗೆ ದಾಖಲಾಗಿರುವ ತಮ್ಮ ತಾಯಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲು ಅವಕಾಶ ನೀಡಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಮಧ್ಯೆ, ಸೋನಿಯಾ ಗಾಂಧಿ ಅವರು ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದು ಸೋಮವಾರ ಡಿಸ್ಚಾರ್ಜ್ ಆಗಿದ್ದಾರೆ. ಅವರಿಗೂ ಇಡಿ ಸಮನ್ಸ್ ನೀಡಿತ್ತಾದರೂ, ಅನಾರೋಗ್ಯದ ಕಾರಣ ಜೂನ್ 23 ರವರೆಗೆ ಅವರಿಗೆ ಕಾಲಾವಕಾಶ ನೀಡಲಾಗಿದೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ದೇಶದ ಜನರಿಗೆ ಏನು ಬೇಕೆಂದು ಪ್ರಧಾನಿಗೆ ಅರ್ಥವಾಗುತ್ತಿಲ್ಲ – ರಾಹುಲ್ ಗಾಂಧಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಪಾತ್ರದ ಬಗ್ಗೆ ಇಡಿ ತನಿಖೆ ನಡೆಸುತ್ತಿದೆ. ಪ್ರಕರಣವು ಕಾಂಗ್ರೆಸ್ ಮುಖವಾಣಿಯಾದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ನಡೆಸುತ್ತಿದ್ದ AJL (ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್) ಅನ್ನು ಯಂಗ್ ಇಂಡಿಯನ್ಸ್ ಸ್ವಾಧೀನಪಡಿಸಿಕೊಂಡಿರುವನ್ನು ಒಳಗೊಂಡಿದೆ. ಪ್ರಸ್ತುತ ನ್ಯಾಶನಲ್ ಹೆರಾಲ್ಡ್‌‌ ಆನ್‌ಲೈನ್‌ನಲ್ಲಿ ಮಾತ್ರ ಇದೆ.

“ಎಜೆಎಲ್‌ನ 800 ಕೋಟಿ ರೂ. ಆಸ್ತಿಯನ್ನು ಯಂಗ್ ಇಂಡಿಯನ್ ಪಡೆದುಕೊಂಡಿದ್ದು, ಇದನ್ನು ಯಂಗ್‌ ಇಂಡಿಯನ್‌ ಷೇರುದಾರರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ಆಸ್ತಿ ಎಂದು ಪರಿಗಣಿಸಬೇಕು, ಇದಕ್ಕಾಗಿ ಅವರು ತೆರಿಗೆ ಪಾವತಿಸಬೇಕಾಗಿದೆ” ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, ಯಂಗ್ ಇಂಡಿಯನ್ ಒಂದು ಲಾಭರಹಿತ ಸಂಸ್ಥೆಯಾಗಿದ್ದು, ಆದ್ದರಿಂದ ಷೇರುದಾರರು ಅದರ ಆಸ್ತಿಯಿಂದ ಯಾವುದೇ ಹಣವನ್ನು ಗಳಿಸಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದೆ.

ಅದಾಗ್ಯೂ ಯಂಗ್ ಇಂಡಿಯನ್ ಯಾವುದೇ ದತ್ತಿ ಕೆಲಸ ಮಾಡಿಲ್ಲ ಎಂದು ಜಾರಿ ನಿರ್ದೇಶನಾಲಯ ವಾದಿಸಿದ್ದು, ಅದರ ಏಕೈಕ ವಹಿವಾಟು AJL ನ ಸಾಲದ ವರ್ಗಾವಣೆಯಾಗಿತ್ತು ಎಂದು ತಿಳಿಸಿದೆ. ಆದರೆ ಕಾಂಗ್ರೆಸ್‌ ‘ಪತ್ರಿಕೆ’ ಕೂಡಾ ದತ್ತಿ ಕೆಲಸವೇ ಆಗಿದೆ ಎಂದು ತಿರುಗೇಟು ನೀಡಿದೆ. ಆದಾಯ ತೆರಿಗೆ ಇಲಾಖೆ ಆದೇಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ.

ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಾಲ್ಕನೇ ದಿನ ಇಡಿ ವಿಚಾರಣೆಗೆ ಹಾಜರಾದ ರಾಹುಲ್ ಗಾಂಧಿ

ಕಳೆದ ವಾರ, ಕೇಂದ್ರ ದೆಹಲಿಯಲ್ಲಿರುವ ಇಡಿ ಕಚೇರಿಯಲ್ಲಿ ರಾಹುಲ್ ಗಾಂಧಿಯನ್ನು ಪ್ರಶ್ನಿಸುತ್ತಿದ್ದಂತೆ, ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ದೇಶದಾದ್ಯಂತ ಭಾರಿ ಪ್ರತಿಭಟನೆ ನಡೆಸಿದ್ದರು. ಇದು ಆಡಳಿತಾರೂಢ ಬಿಜೆಪಿಯ ‘ಸೇಡಿನ ರಾಜಕೀಯ’ ಎಂದು ಅವರು ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...