Homeಮುಖಪುಟಮಹಾರಾಷ್ಟ್ರ: ಆಪರೇಷನ್ ಕಮಲದ ಶಂಕೆ- ಉದ್ಧವ್ ಠಾಕ್ರೆ ಸರ್ಕಾರದ ಸಚಿವ, 13 ಶಾಸಕರು ಗುಜರಾತ್‌ಗೆ

ಮಹಾರಾಷ್ಟ್ರ: ಆಪರೇಷನ್ ಕಮಲದ ಶಂಕೆ- ಉದ್ಧವ್ ಠಾಕ್ರೆ ಸರ್ಕಾರದ ಸಚಿವ, 13 ಶಾಸಕರು ಗುಜರಾತ್‌ಗೆ

ಸಚಿವ ಏಕನಾಥ್‌ ಶಿಂಧೆ ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನ ಹೊಂದಿದ್ದಾರೆ ಎಂದು ವರದಿಯಾಗಿದೆ.

- Advertisement -
- Advertisement -

ಮಹಾರಾಷ್ಟ್ರದ ಎಂಎಲ್‌ಸಿ ಚುನಾವಣೆಯಲ್ಲಿ ಅಡ್ಡ ಮತದಾನ ನಡೆದಿರುವ ಶಂಕೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಂಗಳವಾರ ಎಲ್ಲಾ ಶಿವಸೇನೆ ಶಾಸಕರ ತುರ್ತು ಸಭೆಯನ್ನು ಕರೆದಿದ್ದಾರೆ. ಇದರ ಬೆನ್ನಲ್ಲೇ ಮಹಾ ವಿಕಾಸ್ ಅಘಾಡಿ ಸರ್ಕಾರದ ಸಚಿವ ಏಕನಾಥ್ ಶಿಂಧೆ, 13 ಇತರ ಪಕ್ಷದ ಶಾಸಕರೊಂದಿಗೆ ಗುಜರಾತ್‌ಗೆ ಪ್ರಯಾಣಿಸಿದ್ದಾರೆ.

ಸಚಿವ ಮತ್ತು ಶಿವಸೇನೆಯ ಉನ್ನತ ನಾಯಕ ಏಕನಾಥ್ ಶಿಂಧೆ, 13 ಶಾಸಕರೊಂದಿಗೆ ಬಿಜೆಪಿ ಆಡಳಿತವಿರುವ ಗುಜರಾತ್‌ನ ಸೂರತ್‌ನಲ್ಲಿರುವ ಹೋಟೆಲ್‌ಗೆ ತೆರಳಿದ್ದಾರೆ ಎಂದು ವರದಿಯಾಗಿದೆ. ಇದು ಮಹಾರಾಷ್ಟ್ರದ ಸರ್ಕಾರದಲ್ಲಿ ಅಪರೇಷನ್ ಕಮಲದ ಎಚ್ಚರಿಕೆಯನ್ನು ನೀಡಿದೆ.

ಉದ್ಧವ್ ಠಾಕ್ರೆ ಕರೆದಿರುವ ತುರ್ತು ಸಭೆಗೆ ಎಲ್ಲಾ ಶಾಸಕರು ಸಭೆಯಲ್ಲಿ ಹಾಜರಿರಲು ಕಟ್ಟುನಿಟ್ಟಾಗಿ ಆದೇಶಿಸಲಾಗಿದೆ. ಆದರೆ, ಗುಜರಾತ್‌ನ ಹೋಟೆಲ್‌ನಲ್ಲಿರುವ ಬಾಳ್ ಠಾಕ್ರೆ ನಿಷ್ಠಾವಂತ ನಾಯಕ ಏಕನಾಥ್ ಶಿಂದೆ ಇಂದು ಸೂರತ್‌ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರ: ಒಂದೇ ಕುಟುಂಬದ ಒಂಬತ್ತು ಮಂದಿಯ ಮೃತದೇಹಗಳು ಪತ್ತೆ, ತನಿಖೆ ಆರಂಭ

ವಿಧಾನ ಪರಿಷತ್ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಆಡಳಿತ ಮೈತ್ರಿಕೂಟ ಮತ್ತು ಬಿಜೆಪಿ ತಲಾ ಐದು ಸ್ಥಾನಗಳನ್ನು ಗೆದ್ದ ಕೆಲವೇ ಗಂಟೆಗಳ ನಂತರದ ಬೆಳವಣಿಗೆಗಳು ಕಂಡುಬಂದಿವೆ. ಪ್ರತಿಪಕ್ಷ ಬಿಜೆಪಿ ಸ್ಪರ್ಧಿಸಿದ್ದ ಎಲ್ಲ ಐದು ಸ್ಥಾನಗಳನ್ನು ಗೆದ್ದಿದೆ. ಆದರೆ, ಆಡಳಿತಾರೂಢ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಚಂದ್ರಕಾಂತ ಹಂದೋರೆ ಸೋತಿದ್ದಾರೆ. ಇದು ಆಪರೇಷನ್ ಕಮಲದ ಸುಳಿವು ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿಯನ್ನು ಗುರಿಯಾಗಿಸಿಕೊಂಡು ಶಿವಸೇನೆ ಸಂಸದ ಸಂಜಯ್ ರಾವತ್, ’ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಮಾಡಿದಂತೆಯೇ, ಉದ್ಧವ್ ಠಾಕ್ರೆ ಸರ್ಕಾರವನ್ನು ಉರುಳಿಸುವ ಸಂಚು ನಡೆಯುತ್ತಿದೆ. ಆದರೆ, ಶಿವಸೇನೆ ನಿಷ್ಠಾವಂತರ ಪಕ್ಷವಾಗಿದೆ, ನಾವು ಹಾಗೆ ಮಾಡಲು ಬಿಡುವುದಿಲ್ಲ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮಂಗಳೂರು: ಕೇಸರಿ-ಹಸಿರು ಚಕ್ರವ್ಯೂಹ ಬೇಧಿಸಿ ಬರುವರೆ ಸೆಕ್ಯುಲರ್ ಖಾದರ್?

ಜೊತೆಗೆ “ಏಕನಾಥ್ ಶಿಂಧೆ ಅವರು ಹೋಟೆಲ್‌ನಲ್ಲಿ ನಮ್ಮೊಂದಿಗೆ ಇದ್ದರು. ಮಹಾ ವಿಕಾಸ್ ಅಘಾಡಿ ಅಭ್ಯರ್ಥಿಯ ಗೆಲುವು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರು. ಈಗ ನಾವು ಅವರೊಂದಿಗೆ ಮಾತನಾಡುವವರೆಗೂ ಏನನ್ನೂ ಹೇಳಲು ಸಾಧ್ಯವಿಲ್ಲ” ಎಂದು ಸಂಜಯ್ ರಾವತ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇತ್ತೀಚೆಗೆ ಸಚಿವ ಏಕನಾಥ್‌ ಶಿಂಧೆ ಅವರು ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನ ಹೊಂದಿದ್ದಾರೆ ಎಂದು ವರದಿಯಾಗಿದೆ. ಥಾಣೆಯ ಪ್ರಮುಖ  ಶಿವಸೇನಾ ನಾಯಕರಾಗಿರುವ ಶಿಂಧೆ ಅವರು ಈ ಪ್ರದೇಶದಲ್ಲಿ ಸಂಘಟನೆಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಪುತ್ರ ಡಾ.ಶ್ರೀಕಾಂತ್ ಶಿಂಧೆ ಶಿವಸೇನೆಯ ಸಂಸದರಾಗಿದ್ದಾರೆ.

ಇತ್ತ, ಮಹಾರಾಷ್ಟ್ರದ ಬಿಜೆಪಿಯ ಪ್ರಮುಖ ನಾಯಕ ದೇವೇಂದ್ರ ಫಡ್ನವೀಸ್ ದೆಹಲಿಗೆ ಆಗಮಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ. ಈ ಎಲ್ಲಾ ಬೆಳವಣಿಗೆಗಳು ಉದ್ಧವ್ ಸರ್ಕಾರಕ್ಕೆ ಅಪರೇಷನ್ ಕಮಲದ ಎಚ್ಚರಿಕೆಯನ್ನು ನೀಡುತ್ತಿದೆ.


ಇದನ್ನೂ ಓದಿ: ಹೋರಾಟಕ್ಕೆ ಪ್ರತೀಕಾರವಾಗಿ ಬುಲ್ಡೋಜರ್; ಬಿಜೆಪಿಯ ಕೀಳು ರಾಜಕೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...