Homeಕರ್ನಾಟಕಬೆಂಗಳೂರು: ವಲಸೆ ಕಾರ್ಮಿಕರ ಮೇಲೆ ಪೊಲೀಸ್ ದೌರ್ಜನ್ಯ; ದೂರು ದಾಖಲು

ಬೆಂಗಳೂರು: ವಲಸೆ ಕಾರ್ಮಿಕರ ಮೇಲೆ ಪೊಲೀಸ್ ದೌರ್ಜನ್ಯ; ದೂರು ದಾಖಲು

- Advertisement -
- Advertisement -

ಬೆಂಗಳೂರಿನ ಹೆಬ್ಬಗೋಡಿ ಪೊಲೀಸರು ಬೆಂಗಾಲಿ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿ ಅಕ್ರಮವಾಗಿ ಹೊರಹಾಕಲು ಯತ್ನಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಸೋಮವಾರ ದೂರು ದಾಖಲಾಗಿದೆ.

ಬೆಂಗಾಲಿ ಮುಸ್ಲಿಮರು ಶಿಕಾರಿಪಾಳ್ಯದಲ್ಲಿ ನಡೆಸುತ್ತಿದ್ದ ಕಸ ವಿಂಗಡಣೆ ಘಟಕಗಳಿಗೆ ಜೂನ್ 17 ಮತ್ತು 18ರಂದು ಹೆಬ್ಬಗೋಡಿ ಪೊಲೀಸರು ದಾಳಿ ನಡೆಸಿದರು. ಬೆಂಗಳೂರನ್ನು ತೊರೆಯುವಂತೆ ಸೂಚಿಸಿ ಲಾಠಿ ಚಾರ್ಜ್ ಮಾಡಿದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ನಾವಿದ್ದ ಜಾಗದ ಮೇಲೆ ಪೊಲೀಸರು ದಾಳಿ ಮಾಡಿದ ಸಮಯದಲ್ಲಿ ತಮ್ಮ ಆಸ್ತಿಗಳಿಗೆ ಹಾನಿಯಾಗಿದೆ ಎಂದು ಮುರ್ಷಿದಾಬಾದ್‌ನ ಬಂಗಾಳಿ ಮುಸ್ಲಿಮರಾದ ರಬ್ಬಾನಿ ಸರ್ದಾರ್ (52) ಮತ್ತು ಅನೀಸ್ (38) ಅವರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ನಾವು ಭಾರತೀಯರಲ್ಲ ಎಂದು ಸಾಬೀತುಪಡಿಸಲು ಪೊಲೀಸರು ಯತ್ನಿಸಿದ್ದಾರೆ. ಪೊಲೀಸ್ ತಂಡಗಳು ನಮ್ಮ ಆಹಾರ ಸಾಮಗ್ರಿಗಳನ್ನು ನಾಶಪಡಿಸಿದ್ದಾರೆ. ಮಹಿಳೆಯರು ಮತ್ತು ಮಕ್ಕಳಿಗೆ ಬೆದರಿಕೆ ಹಾಕಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಕಾರ್ಮಿಕರಿಗೆ ಕಾನೂನು ನೆರವು ನೀಡಿದ ಸ್ವರಾಜ್ ಇಂಡಿಯಾ ಪಕ್ಷದ ಮುಖಂಡರಾದ ಕಲೀಮುಲ್ಲಾ ಪ್ರತಿಕ್ರಿಯೆ ನೀಡಿದ್ದು, “ಪೊಲೀಸರು ಧರ್ಮದ ಕಾರಣಕ್ಕಾಗಿ ಬಂಗಾಳಿ ಮುಸ್ಲಿಮರನ್ನು ಟಾರ್ಗೆಟ್ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಇದು ದೇಶದ ರಾಜಕೀಯ ಪರಿಸ್ಥಿತಿಯ ಪರಿಣಾಮವಾಗಿದೆ. ಬಂಗಾಳಿ ಮುಸ್ಲಿಮರಾಗಿರುವುದು ಅಪರಾಧವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹೆಬ್ಬಗೋಡಿ ಪೊಲೀಸರು ಹದಿನೈದು ದಿನಗಳಿಗೂ ಹೆಚ್ಚು ಕಾಲ ತಮ್ಮ ವ್ಯಾಪ್ತಿಯಲ್ಲಿರುವ ವಲಸಿಗರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ ಎಂದು ಕಸ ವಿಂಗಡಣಾ ಘಟಕದ ಮಾಲೀಕ ಯಾರ್ ಅಲಿ (46) ದೂರಿದ್ದಾರೆ.

“ನಾನು ನನ್ನ ಎಲ್ಲಾ ಐಡಿಗಳನ್ನು ಹಾಜರುಪಡಿಸಿದರೂ ಅವರು ನನ್ನ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ. ಅಂತಿಮವಾಗಿ ನಾನು ನನ್ನ ಗ್ರಾಮದ ಸ್ಥಳೀಯ ಪೊಲೀಸ್ ಠಾಣೆಯಿಂದ ಪಡೆದ ಪತ್ರವನ್ನು ಸಲ್ಲಿಸಬೇಕಾಯಿತು. ನನಗೆ ನಮ್ಮ ಕ್ಷೇತ್ರದ ಸಂಸದೆ ಪ್ರೊತಿಮಾ ಮೊಂಡಲ್ ಅವರಿಂದಲೂ ಪತ್ರ ಬಂದಿತು. ಆದರೆ ಪೊಲೀಸರು ಇನ್ನೂ ಪ್ರಕರಣವನ್ನು ಮುಂದುವರಿಸುತ್ತಿದ್ದಾರೆ” ಎಂದು ವಿಷಾದಿಸಿದ್ದಾರೆ.

“ನಾವು ಕಸ ಬೇರ್ಪಡಿಸಿ ಹೊಟ್ಟೆಪಾಡು ಮಾಡುತ್ತಿದ್ದೇವೆ. ಆದರೆ ಸರ್ಕಾರ ನಮಗೆ ಬೇರೆ ಕೆಲಸ ಕೊಡುತ್ತದೆಯೇ?” ಎಂದು ಮಹಿಳೆಯೊಬ್ಬರು ಕೇಳಿದ್ದಾರೆ.

“ನಾವು ಕೊಲ್ಕತ್ತದಿಂದ ಬಂದಿದ್ದೇವೆ. ಪೊಲೀಸರು ಲಾಠಿಯೊಂದಿಗೆ ಬಂದು ಗಂಡಸರು, ಹೆಂಗಸರೆನ್ನದೆ ದಾಳಿ ಮಾಡಿದರು. ನೀವ್ಯಾಕೆ ಇಲ್ಲಿದ್ದೀರಿ, ಇಲ್ಲಿಂದ ಹೋಗಿ ಎಂದರು. ನಾವು ಅಡುಗೆ ಮಾಡುತ್ತಿರುವ ಪಾತ್ರೆಗಳನ್ನೂ ಲಾಠಿಯಿಂದ ಉರುಳಿಸಿದರು” ಎಂದು ಮತ್ತೊಬ್ಬ ಮಹಿಳೆ ದೂರಿದ್ದಾರೆ.

ಪೊಲೀಸ್ ಕಾರ್ಯಾಚರಣೆ

ಬೆಂಗಳೂರು ಹೊರವಲಯದಲ್ಲಿರುವ ದಾಖಲೆ ರಹಿತ ನಿವಾಸಿಗಳನ್ನು ಹೊರಗೆ ಕಳುಹಿಸಲು ಪೊಲೀಸರು ಮೇ ತಿಂಗಳಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಪೊಲೀಸ್‌ ವ್ಯಾಪ್ತಿಗೆ ಒಳಪಡುವ ಸರ್ಜಾಪುರ, ಅನುಗೊಂಡನಹಳ್ಳಿ ಮತ್ತು ಹೆಬ್ಬಗೋಡಿ ಪೊಲೀಸ್‌ ವ್ಯಾಪ್ತಿಯಲ್ಲಿನ ಗುಡಿಸಲುಗಳ ಮೇಲೆ ಮೇ ತಿಂಗಳಿನಿಂದಲೂ ಪೊಲೀಸರು ದಾಳಿ ನಡೆಸುತ್ತಿದ್ದಾರೆ.

“ಮೇ 21ರಂದು ಸುಮಾರು ಎರಡು ಡಜನ್ ಪೊಲೀಸರು ಇದ್ದಕ್ಕಿದ್ದಂತೆ ನಮ್ಮ ಶಿಬಿರಕ್ಕೆ ನುಗ್ಗಿ ಲಾಠಿಗಳಿಂದ ದಾಳಿ ಮಾಡಿದರು. ಸಂಜೆ ಸುಮಾರು 4 ಗಂಟೆಯಾಗಿತ್ತು. ತಕ್ಷಣವೇ ಪ್ಯಾಕ್‌ಅಪ್‌ ಮಾಡಬೇಕು ಎಂದು ಸೂಚಿಸಿದರು” ಎಂದು ಬಂಗಾಲಿ ತುಬರ್ ಸೇಖ್ (34) ದೂರಿದ್ದರು.

ಬಂಗಾಳಿ ಮಾತನಾಡುವ ಸಾವಿರಾರು ಮುಸ್ಲಿಮರಲ್ಲಿ ಭೀತಿ ಉಂಟಾಗಿದೆ. ಈ ವಲಸೆ ಕಾರ್ಮಿಕರು ನಗರದ ಕಸವನ್ನು ಸಂಗ್ರಹಿಸುವ ಮತ್ತು ಬೇರ್ಪಡಿಸುವ ಮೂಲಕ ಜೀವನ ನಡೆಸುತ್ತಿದ್ದಾರೆ. ಬಾಂಗ್ಲಾ ದೇಶದ ಅಕ್ರಮ ವಲಸಿಗರೆಂದು ಆರೋಪಿಸಿ, ಬಂಗಾಲಿ ಮುಸ್ಲಿಮರ ಮೇಲೆ ನಿರಂತರ ದಾಳಿಗಳನ್ನು ಪೊಲೀಸರು ನಡೆಸುತ್ತಿದ್ದಾರೆ ಎಂಬ ಆರೋಪಗಳು ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...