Homeರಾಷ್ಟ್ರೀಯ‘ಎಷ್ಟು ಮಾಜಿ ಸೈನಿಕರಿಗೆ ಕೆಲಸ ಕೊಟ್ಟಿದ್ದೀರಿ?’: ಅನಂದ್‌ ಮಹೀಂದ್ರಾಗೆ ಮಾಜಿ ಸೈನಿಕರ ಗಂಭೀರ ಪ್ರಶ್ನೆ

‘ಎಷ್ಟು ಮಾಜಿ ಸೈನಿಕರಿಗೆ ಕೆಲಸ ಕೊಟ್ಟಿದ್ದೀರಿ?’: ಅನಂದ್‌ ಮಹೀಂದ್ರಾಗೆ ಮಾಜಿ ಸೈನಿಕರ ಗಂಭೀರ ಪ್ರಶ್ನೆ

- Advertisement -
- Advertisement -

ಒಕ್ಕೂಟ ಸರ್ಕಾರದ ಹೊಸ ವಿವಾದಿತ ಯೋಜನೆ ‘ಅಗ್ನಿಪಥ್‌’ನಿಂದ ಕಡ್ಡಾಯ ನಿವೃತ್ತಿ ಹೊಂದುವ ತರಬೇತಿ ಪಡೆದ ಸಮರ್ಥ ಯುವಕರನ್ನು ನೇಮಿಸುವುದಾಗಿ ಕೈಗಾರಿಕೋದ್ಯಮಿ ಆನಂದ್‌ ಮಹೀಂದ್ರಾ ಅವರು ಹೇಳಿದ್ದಾರೆ. ಮಹೀಂದ್ರಾ ಅವರು ಈ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗಳನ್ನು ಹುಟ್ಟು ಹಾಕಿದ್ದು, ಸೇನೆಯ ಮಾಜಿ ಅಧಿಕಾರಿಗಳು ಸೇರಿದಂತೆ ಹಲವಾರು ಜನರು, ಮಹೀಂದ್ರಾ ಗ್ರೂಪ್‌ ಈ ಹಿಂದೆ ತನ್ನ ಪ್ರಮುಖ ಹುದ್ದೆಗಳಲ್ಲಿ ಮಾಜಿ ಸೈನಿಕರನ್ನು ನೇಮಿಸಿಕೊಂಡಿದೆಯೆ ಎಂದು ಪ್ರಶ್ನಿಸಿದ್ದಾರೆ.

‘ಅಗ್ನಿಪಥ್’ ವಿರುದ್ಧ ದೇಶದಾದ್ಯಂತ ಭಾರಿ ಪ್ರತಿಭಟನೆಗಳು ನಡೆಯುತ್ತಿರುವ ನಡುವೆ, ಈ ಯೋಜನೆಯಡಿಯಲ್ಲಿ ತರಬೇತಿ ಪಡೆದ ಸಮರ್ಥ ಯುವಕರನ್ನು ನೇಮಿಸಿಕೊಳ್ಳುತ್ತೇವೆ ಎಂದು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಸೋಮವಾರ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಗ್ನೀಪಥ್ ವಿಚಾರವಾಗಿ ನಡೆಯುವ ಹಿಂಸಾಚಾರದಿಂದ ದುಃಖಿತನಾಗಿದ್ದೇನೆ. ಕಳೆದ ವರ್ಷ ಈ ಯೋಜನೆಯನ್ನು ಪ್ರಸ್ತಾಪಿಸಿದಾಗ ನಾನು ಹೇಳಿದ್ದೇನೆ, ಈಗ ನಾನು ಪುನಃ ಹೇಳುತ್ತೇನೆ. ಅಗ್ನಿವೀರ್‌ಗಳ ಶಿಸ್ತು ಮತ್ತು ಕೌಶಲ್ಯಗಳ ಲಾಭವು ಅವರನ್ನು ಅತ್ಯುತ್ತಮವಾಗಿ ಉದ್ಯೋಗಿಗಳನ್ನಾಗಿ ಮಾಡುತ್ತದೆ. ಅಂತಹ ತರಬೇತಿ ಪಡೆದ, ಸಮರ್ಥ ಯುವ ಜನರನ್ನು ನೇಮಿಸಿಕೊಳ್ಳುವ ಅವಕಾಶವನ್ನು ಮಹೀಂದ್ರಾ ಗ್ರೂಪ್ ಸ್ವಾಗತಿಸುತ್ತದೆ” ಎಂದು ಮಹೀಂದ್ರಾ ಟ್ವೀಟ್ ಮಾಡಿದ್ದರು.

ಮಹೀಂದ್ರಾ ಅವರ ಘೋಷಣೆಯನ್ನು ಕೆಲವರು ಶ್ಲಾಘಿಸಿದರೆ, ಸೇನೆಯ ಮಾಜಿ ಉನ್ನತ ಅಧಿಕಾರಿಗಳು ಸೇರಿದಂತೆ ಇನ್ನೂ ಕೆಲವರು ಮಹೀಂದ್ರಾ ಗ್ರೂಪ್ ಈ ಹಿಂದೆ ಎಷ್ಟು ಮಾಜಿ ಅಧಿಕಾರಿಗಳನ್ನು ನೇಮಿಸಿಕೊಂಡಿದೆ ಎಂದು ಗಂಭೀರ ಪ್ರಶ್ನೆಯನ್ನು ಕೇಳಿದ್ದಾರೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ‘ಮೋದಿ ಹಿಟ್ಲರ್‌ ಮಾರ್ಗವನ್ನು ಅನುಸರಿಸಿದರೆ ಹಿಟ್ಲರ್‌ನಂತೆ ಸಾಯುತ್ತಾರೆ’- ಕಾಂಗ್ರೆಸ್ ನಾಯಕ

“ಈ ಹೊಸ ಯೋಜನೆಗಾಗಿ ಏಕೆ ಕಾಯಬೇಕು? ಇಲ್ಲಿಯವರೆಗೆ ಸಾವಿರಾರು ಹೆಚ್ಚು ನುರಿತ ಮತ್ತು ಶಿಸ್ತಿನ ಮಾಜಿ ಸೈನಿಕರು (ಜವಾನರು ಮತ್ತು ಅಧಿಕಾರಿಗಳು) ಪ್ರತಿ ವರ್ಷ ನಿವೃತ್ತಿ ಹೊಂದುತ್ತಿದ್ದು, 2 ನೇ ವೃತ್ತಿಜೀವನವನ್ನು ನಡೆಸಲು ತೀವ್ರವಾಗಿ ಬಯಸುತ್ತಿದ್ದಾರೆ. ಅವರನ್ನು ಮಹೇಂದ್ರ ಗ್ರೂಪ್ ತಲುಪಿದೆಯೆ. ನಿಮ್ಮ ಗ್ರೂಪ್‌ನಿಂದ ಅಂಕಿ ಅಂಶಗಳನ್ನು ಪಡೆಯುವುದು ಒಳ್ಳೆಯದು” ಎಂದು ಭಾರತೀಯ ನೌಕಾಪಡೆಯ ಮಾಜಿ ಮುಖ್ಯಸ್ಥ ಮತ್ತು ಚೀಫ್ಸ್ ಆಫ್ ಸ್ಟಾಫ್ ಕಮಿಟಿಯ ಮಾಜಿ ಅಧ್ಯಕ್ಷರಾಗಿರುವ ಅರುಣ್ ಪ್ರಕಾಶ್ ಪ್ರಶ್ನಿಸಿದ್ದಾರೆ.

“ಆನಂದ್ ಮಹೀಂದ್ರಾ ಸರ್, ಮಾಜಿ ನೌಕಾಪಡೆಯ ಮುಖ್ಯಸ್ಥರು ಕೋರಿರುವಂತೆ, ನಮಗೆ ಕೆಲವು ಅಂಕಿಅಂಶಗಳನ್ನು ನೀಡಬಹುದೇ? ಅಂತಹ ಭರವಸೆಗಳನ್ನು ಕೇಳಿ ನಾನು ನಲವತ್ತು ವರ್ಷಗಳ ಸೇವೆಯ ನಂತರ ನಿವೃತ್ತಿ ಹೊಂದಿದ್ದೇನೆ” ಎಂದು ಭಾರತೀಯ ವಾಯುಪಡೆಯ ಮಾಜಿ ಏರ್ ವೈಸ್ ಮಾರ್ಷಲ್ ಮನಮೋಹನ್ ಬಹದ್ದೂರ್ ಬರೆದಿದ್ದಾರೆ.

ಇದನ್ನೂ ಓದಿ: ಅಗ್ನಿಪಥ್‌‌: ಬೆಳಗಾವಿಯಲ್ಲಿ ಆಂದೋಲನ ತಡೆಯಲು ಬಿಗಿ ಭದ್ರತೆ; ವಿದ್ಯಾರ್ಥಿ ನಾಯಕರು ವಶಕ್ಕೆ

ಆನಂದ್ ಮಹೀಂದ್ರ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಾಮಾಜಿಕ ಕಾರ್ಯಕರ್ತ, ಟಿಎಂಸಿ ನಾಯಕ ಸಾಕೇತ್ ಗೋಖಲೆ, “ಆನಂದ ಮಹೀಂದ್ರ ಅವರಿಗೆ ಎರಡು ಪ್ರಮುಖ ಪ್ರಶ್ನೆಗಳು. ಒಂದನೇಯದಾಗಿ, ಮಹೀಂದ್ರಾ ಗ್ರೂಪ್ ಪ್ರಸ್ತುತ ಎಷ್ಟು ಮಾಜಿ ಸೈನಿಕರನ್ನು ನೇಮಿಸಿಕೊಂಡಿದೆ? ನಿಮ್ಮ ಒಟ್ಟು ಉದ್ಯೋಗಿಗಳಲ್ಲಿ ಎಷ್ಟು ಶೇಖಡ ಜನರು ಮಾಜಿ ಸೈನಿಕರಾಗಿದ್ದಾರೆ? ಎರಡನೆಯದಾಗಿ, ನಿಮ್ಮ ಹೇಳಿಕೆಯ ಹಿನ್ನಲೆಯಲ್ಲಿ ಹೇಳುವುದಾದರೆ, ಮಹೀಂದ್ರಾ ಗ್ರೂಪ್ ಸ್ಟೆಪ್‌ ಅಗ್ನಿವೀರರಿಗೆ ಶೇಖಡವಾರು ಉದ್ಯೋಗಗಳನ್ನು ಕಾಯ್ದಿರಿಸುತ್ತದೆಯೇ?” ಎಂದು ಪ್ರಶ್ನಿಸಿದ್ದಾರೆ.

ಆನಂದ್ ಮಹೀಂದ್ರ ಅವರ ಟ್ವೀಟ್‌ ಅನ್ನು ಉಲ್ಲೇಖಿಸಿ RPG ಗ್ರೂಪ್ ಅಧ್ಯಕ್ಷ ಹರ್ಷ್ ಗೋಯೆಂಕಾ ಅವರು ಕೂಡಾ ಅಗ್ನಿವೀರರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದಾರೆ. “ಆರ್‌ಪಿಜಿ ಗ್ರೂಪ್‌ ಕೂಡ ಅಗ್ನಿವೀರ್‌ಗಳನ್ನು ಬಳಸಿಕೊಳ್ಳುವ ಅವಕಾಶವನ್ನು ಸ್ವಾಗತಿಸುತ್ತದೆ. ಈ ಪ್ರತಿಜ್ಞೆಯನ್ನು ತೆಗೆದುಕೊಳ್ಳಲು ಮತ್ತು ನಮ್ಮ ಯುವಕರಿಗೆ ಭವಿಷ್ಯದ ಭರವಸೆ ನೀಡಲು ಇತರ ಕಾರ್ಪೊರೇಟ್‌ಗಳು ಸಹ ನಮ್ಮೊಂದಿಗೆ ಸೇರಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

17.5 ರಿಂದ 21 ವಯಸ್ಸಿನೊಳಗಿನ ಸೇನಾ ಉದ್ಯೋಗಾಕಾಂಕ್ಷಿಗಳನ್ನು ನಾಲ್ಕು ವರ್ಷಗಳವರೆಗೆ ನೇಮಕ ಮಾಡಿಕೊಳ್ಳುವ ‘ಅಗ್ನಿಪಥ್’ ಯೋಜನೆಯನ್ನು ಒಕ್ಕೂಟ ಸರ್ಕಾರವು ಘೋಷಿಸಿದ ನಂತರ ದೇಶದಾದ್ಯಂತ ಭಾರಿ ಪ್ರತಿಭಟನೆಗಳು ಭುಗಿಲೆದ್ದಿವೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ನಿರ್ಧಾರ ಕೈಗೊಳ್ಳುವ ಮೊದಲು ನಮ್ಮ ಮಾತನ್ನೂ ಕೇಳಿ- ಸುಪ್ರೀಂಗೆ ಕೇಂದ್ರದ ಮನವಿ

ಈ ಯೋಜನೆಯ ಅನ್ವಯ, ನಾಲ್ಕು ವರ್ಷಗಳು ಪೂರ್ಣಗೊಂಡ ನಂತರ, ಅಗ್ನಿಪಥ್‌‌ಗೆ ಹೊಸದಾಗಿ ನೇಮಕಗೊಂಡವರಲ್ಲಿ 75% ದಷ್ಟು ಜನರು 12 ಲಕ್ಷ ರೂ. ನೊಂದಿಗೆ ಅವರ ಕಡ್ಡಾಯ ನಿವೃತ್ತಿ ಪಡೆಯಬೇಕಾಗುತ್ತದೆ. ಆದರೆ ಅವರು ಯಾವುದೇ ಪಿಂಚಣಿಗೆ ಅರ್ಹರಾಗಿರುವುದಿಲ್ಲ. ಉಳಿದ 25% ಜನರು ಸಶಸ್ತ್ರ ಪಡೆಗಳಲ್ಲಿ 15 ವರ್ಷಗಳ ಅಧಿಕಾರಾವಧಿಯನ್ನು ಪೂರೈಸಬಹುದಾಗಿದೆ.

ಯೋಜನೆಯ ವಿರುದ್ಧ ಭಾರೀ ಪ್ರತಿಭಟನೆಗಳು ನಡೆದಿದ್ದರೂ, ಮೋದಿ ನೇತೃತ್ವದ ಸರ್ಕಾರವು ಅದನ್ನು ಹಿಂತೆಗೆದುಕೊಳ್ಳಲು ಸ್ಪಷ್ಟವಾಗಿ ನಿರಾಕರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...