Homeರಾಷ್ಟ್ರೀಯ‘ಎಷ್ಟು ಮಾಜಿ ಸೈನಿಕರಿಗೆ ಕೆಲಸ ಕೊಟ್ಟಿದ್ದೀರಿ?’: ಅನಂದ್‌ ಮಹೀಂದ್ರಾಗೆ ಮಾಜಿ ಸೈನಿಕರ ಗಂಭೀರ ಪ್ರಶ್ನೆ

‘ಎಷ್ಟು ಮಾಜಿ ಸೈನಿಕರಿಗೆ ಕೆಲಸ ಕೊಟ್ಟಿದ್ದೀರಿ?’: ಅನಂದ್‌ ಮಹೀಂದ್ರಾಗೆ ಮಾಜಿ ಸೈನಿಕರ ಗಂಭೀರ ಪ್ರಶ್ನೆ

- Advertisement -
- Advertisement -

ಒಕ್ಕೂಟ ಸರ್ಕಾರದ ಹೊಸ ವಿವಾದಿತ ಯೋಜನೆ ‘ಅಗ್ನಿಪಥ್‌’ನಿಂದ ಕಡ್ಡಾಯ ನಿವೃತ್ತಿ ಹೊಂದುವ ತರಬೇತಿ ಪಡೆದ ಸಮರ್ಥ ಯುವಕರನ್ನು ನೇಮಿಸುವುದಾಗಿ ಕೈಗಾರಿಕೋದ್ಯಮಿ ಆನಂದ್‌ ಮಹೀಂದ್ರಾ ಅವರು ಹೇಳಿದ್ದಾರೆ. ಮಹೀಂದ್ರಾ ಅವರು ಈ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗಳನ್ನು ಹುಟ್ಟು ಹಾಕಿದ್ದು, ಸೇನೆಯ ಮಾಜಿ ಅಧಿಕಾರಿಗಳು ಸೇರಿದಂತೆ ಹಲವಾರು ಜನರು, ಮಹೀಂದ್ರಾ ಗ್ರೂಪ್‌ ಈ ಹಿಂದೆ ತನ್ನ ಪ್ರಮುಖ ಹುದ್ದೆಗಳಲ್ಲಿ ಮಾಜಿ ಸೈನಿಕರನ್ನು ನೇಮಿಸಿಕೊಂಡಿದೆಯೆ ಎಂದು ಪ್ರಶ್ನಿಸಿದ್ದಾರೆ.

‘ಅಗ್ನಿಪಥ್’ ವಿರುದ್ಧ ದೇಶದಾದ್ಯಂತ ಭಾರಿ ಪ್ರತಿಭಟನೆಗಳು ನಡೆಯುತ್ತಿರುವ ನಡುವೆ, ಈ ಯೋಜನೆಯಡಿಯಲ್ಲಿ ತರಬೇತಿ ಪಡೆದ ಸಮರ್ಥ ಯುವಕರನ್ನು ನೇಮಿಸಿಕೊಳ್ಳುತ್ತೇವೆ ಎಂದು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಸೋಮವಾರ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಗ್ನೀಪಥ್ ವಿಚಾರವಾಗಿ ನಡೆಯುವ ಹಿಂಸಾಚಾರದಿಂದ ದುಃಖಿತನಾಗಿದ್ದೇನೆ. ಕಳೆದ ವರ್ಷ ಈ ಯೋಜನೆಯನ್ನು ಪ್ರಸ್ತಾಪಿಸಿದಾಗ ನಾನು ಹೇಳಿದ್ದೇನೆ, ಈಗ ನಾನು ಪುನಃ ಹೇಳುತ್ತೇನೆ. ಅಗ್ನಿವೀರ್‌ಗಳ ಶಿಸ್ತು ಮತ್ತು ಕೌಶಲ್ಯಗಳ ಲಾಭವು ಅವರನ್ನು ಅತ್ಯುತ್ತಮವಾಗಿ ಉದ್ಯೋಗಿಗಳನ್ನಾಗಿ ಮಾಡುತ್ತದೆ. ಅಂತಹ ತರಬೇತಿ ಪಡೆದ, ಸಮರ್ಥ ಯುವ ಜನರನ್ನು ನೇಮಿಸಿಕೊಳ್ಳುವ ಅವಕಾಶವನ್ನು ಮಹೀಂದ್ರಾ ಗ್ರೂಪ್ ಸ್ವಾಗತಿಸುತ್ತದೆ” ಎಂದು ಮಹೀಂದ್ರಾ ಟ್ವೀಟ್ ಮಾಡಿದ್ದರು.

ಮಹೀಂದ್ರಾ ಅವರ ಘೋಷಣೆಯನ್ನು ಕೆಲವರು ಶ್ಲಾಘಿಸಿದರೆ, ಸೇನೆಯ ಮಾಜಿ ಉನ್ನತ ಅಧಿಕಾರಿಗಳು ಸೇರಿದಂತೆ ಇನ್ನೂ ಕೆಲವರು ಮಹೀಂದ್ರಾ ಗ್ರೂಪ್ ಈ ಹಿಂದೆ ಎಷ್ಟು ಮಾಜಿ ಅಧಿಕಾರಿಗಳನ್ನು ನೇಮಿಸಿಕೊಂಡಿದೆ ಎಂದು ಗಂಭೀರ ಪ್ರಶ್ನೆಯನ್ನು ಕೇಳಿದ್ದಾರೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ‘ಮೋದಿ ಹಿಟ್ಲರ್‌ ಮಾರ್ಗವನ್ನು ಅನುಸರಿಸಿದರೆ ಹಿಟ್ಲರ್‌ನಂತೆ ಸಾಯುತ್ತಾರೆ’- ಕಾಂಗ್ರೆಸ್ ನಾಯಕ

“ಈ ಹೊಸ ಯೋಜನೆಗಾಗಿ ಏಕೆ ಕಾಯಬೇಕು? ಇಲ್ಲಿಯವರೆಗೆ ಸಾವಿರಾರು ಹೆಚ್ಚು ನುರಿತ ಮತ್ತು ಶಿಸ್ತಿನ ಮಾಜಿ ಸೈನಿಕರು (ಜವಾನರು ಮತ್ತು ಅಧಿಕಾರಿಗಳು) ಪ್ರತಿ ವರ್ಷ ನಿವೃತ್ತಿ ಹೊಂದುತ್ತಿದ್ದು, 2 ನೇ ವೃತ್ತಿಜೀವನವನ್ನು ನಡೆಸಲು ತೀವ್ರವಾಗಿ ಬಯಸುತ್ತಿದ್ದಾರೆ. ಅವರನ್ನು ಮಹೇಂದ್ರ ಗ್ರೂಪ್ ತಲುಪಿದೆಯೆ. ನಿಮ್ಮ ಗ್ರೂಪ್‌ನಿಂದ ಅಂಕಿ ಅಂಶಗಳನ್ನು ಪಡೆಯುವುದು ಒಳ್ಳೆಯದು” ಎಂದು ಭಾರತೀಯ ನೌಕಾಪಡೆಯ ಮಾಜಿ ಮುಖ್ಯಸ್ಥ ಮತ್ತು ಚೀಫ್ಸ್ ಆಫ್ ಸ್ಟಾಫ್ ಕಮಿಟಿಯ ಮಾಜಿ ಅಧ್ಯಕ್ಷರಾಗಿರುವ ಅರುಣ್ ಪ್ರಕಾಶ್ ಪ್ರಶ್ನಿಸಿದ್ದಾರೆ.

“ಆನಂದ್ ಮಹೀಂದ್ರಾ ಸರ್, ಮಾಜಿ ನೌಕಾಪಡೆಯ ಮುಖ್ಯಸ್ಥರು ಕೋರಿರುವಂತೆ, ನಮಗೆ ಕೆಲವು ಅಂಕಿಅಂಶಗಳನ್ನು ನೀಡಬಹುದೇ? ಅಂತಹ ಭರವಸೆಗಳನ್ನು ಕೇಳಿ ನಾನು ನಲವತ್ತು ವರ್ಷಗಳ ಸೇವೆಯ ನಂತರ ನಿವೃತ್ತಿ ಹೊಂದಿದ್ದೇನೆ” ಎಂದು ಭಾರತೀಯ ವಾಯುಪಡೆಯ ಮಾಜಿ ಏರ್ ವೈಸ್ ಮಾರ್ಷಲ್ ಮನಮೋಹನ್ ಬಹದ್ದೂರ್ ಬರೆದಿದ್ದಾರೆ.

ಇದನ್ನೂ ಓದಿ: ಅಗ್ನಿಪಥ್‌‌: ಬೆಳಗಾವಿಯಲ್ಲಿ ಆಂದೋಲನ ತಡೆಯಲು ಬಿಗಿ ಭದ್ರತೆ; ವಿದ್ಯಾರ್ಥಿ ನಾಯಕರು ವಶಕ್ಕೆ

ಆನಂದ್ ಮಹೀಂದ್ರ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಾಮಾಜಿಕ ಕಾರ್ಯಕರ್ತ, ಟಿಎಂಸಿ ನಾಯಕ ಸಾಕೇತ್ ಗೋಖಲೆ, “ಆನಂದ ಮಹೀಂದ್ರ ಅವರಿಗೆ ಎರಡು ಪ್ರಮುಖ ಪ್ರಶ್ನೆಗಳು. ಒಂದನೇಯದಾಗಿ, ಮಹೀಂದ್ರಾ ಗ್ರೂಪ್ ಪ್ರಸ್ತುತ ಎಷ್ಟು ಮಾಜಿ ಸೈನಿಕರನ್ನು ನೇಮಿಸಿಕೊಂಡಿದೆ? ನಿಮ್ಮ ಒಟ್ಟು ಉದ್ಯೋಗಿಗಳಲ್ಲಿ ಎಷ್ಟು ಶೇಖಡ ಜನರು ಮಾಜಿ ಸೈನಿಕರಾಗಿದ್ದಾರೆ? ಎರಡನೆಯದಾಗಿ, ನಿಮ್ಮ ಹೇಳಿಕೆಯ ಹಿನ್ನಲೆಯಲ್ಲಿ ಹೇಳುವುದಾದರೆ, ಮಹೀಂದ್ರಾ ಗ್ರೂಪ್ ಸ್ಟೆಪ್‌ ಅಗ್ನಿವೀರರಿಗೆ ಶೇಖಡವಾರು ಉದ್ಯೋಗಗಳನ್ನು ಕಾಯ್ದಿರಿಸುತ್ತದೆಯೇ?” ಎಂದು ಪ್ರಶ್ನಿಸಿದ್ದಾರೆ.

ಆನಂದ್ ಮಹೀಂದ್ರ ಅವರ ಟ್ವೀಟ್‌ ಅನ್ನು ಉಲ್ಲೇಖಿಸಿ RPG ಗ್ರೂಪ್ ಅಧ್ಯಕ್ಷ ಹರ್ಷ್ ಗೋಯೆಂಕಾ ಅವರು ಕೂಡಾ ಅಗ್ನಿವೀರರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದಾರೆ. “ಆರ್‌ಪಿಜಿ ಗ್ರೂಪ್‌ ಕೂಡ ಅಗ್ನಿವೀರ್‌ಗಳನ್ನು ಬಳಸಿಕೊಳ್ಳುವ ಅವಕಾಶವನ್ನು ಸ್ವಾಗತಿಸುತ್ತದೆ. ಈ ಪ್ರತಿಜ್ಞೆಯನ್ನು ತೆಗೆದುಕೊಳ್ಳಲು ಮತ್ತು ನಮ್ಮ ಯುವಕರಿಗೆ ಭವಿಷ್ಯದ ಭರವಸೆ ನೀಡಲು ಇತರ ಕಾರ್ಪೊರೇಟ್‌ಗಳು ಸಹ ನಮ್ಮೊಂದಿಗೆ ಸೇರಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

17.5 ರಿಂದ 21 ವಯಸ್ಸಿನೊಳಗಿನ ಸೇನಾ ಉದ್ಯೋಗಾಕಾಂಕ್ಷಿಗಳನ್ನು ನಾಲ್ಕು ವರ್ಷಗಳವರೆಗೆ ನೇಮಕ ಮಾಡಿಕೊಳ್ಳುವ ‘ಅಗ್ನಿಪಥ್’ ಯೋಜನೆಯನ್ನು ಒಕ್ಕೂಟ ಸರ್ಕಾರವು ಘೋಷಿಸಿದ ನಂತರ ದೇಶದಾದ್ಯಂತ ಭಾರಿ ಪ್ರತಿಭಟನೆಗಳು ಭುಗಿಲೆದ್ದಿವೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ನಿರ್ಧಾರ ಕೈಗೊಳ್ಳುವ ಮೊದಲು ನಮ್ಮ ಮಾತನ್ನೂ ಕೇಳಿ- ಸುಪ್ರೀಂಗೆ ಕೇಂದ್ರದ ಮನವಿ

ಈ ಯೋಜನೆಯ ಅನ್ವಯ, ನಾಲ್ಕು ವರ್ಷಗಳು ಪೂರ್ಣಗೊಂಡ ನಂತರ, ಅಗ್ನಿಪಥ್‌‌ಗೆ ಹೊಸದಾಗಿ ನೇಮಕಗೊಂಡವರಲ್ಲಿ 75% ದಷ್ಟು ಜನರು 12 ಲಕ್ಷ ರೂ. ನೊಂದಿಗೆ ಅವರ ಕಡ್ಡಾಯ ನಿವೃತ್ತಿ ಪಡೆಯಬೇಕಾಗುತ್ತದೆ. ಆದರೆ ಅವರು ಯಾವುದೇ ಪಿಂಚಣಿಗೆ ಅರ್ಹರಾಗಿರುವುದಿಲ್ಲ. ಉಳಿದ 25% ಜನರು ಸಶಸ್ತ್ರ ಪಡೆಗಳಲ್ಲಿ 15 ವರ್ಷಗಳ ಅಧಿಕಾರಾವಧಿಯನ್ನು ಪೂರೈಸಬಹುದಾಗಿದೆ.

ಯೋಜನೆಯ ವಿರುದ್ಧ ಭಾರೀ ಪ್ರತಿಭಟನೆಗಳು ನಡೆದಿದ್ದರೂ, ಮೋದಿ ನೇತೃತ್ವದ ಸರ್ಕಾರವು ಅದನ್ನು ಹಿಂತೆಗೆದುಕೊಳ್ಳಲು ಸ್ಪಷ್ಟವಾಗಿ ನಿರಾಕರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...