Homeರಾಷ್ಟ್ರೀಯ‘ಎಷ್ಟು ಮಾಜಿ ಸೈನಿಕರಿಗೆ ಕೆಲಸ ಕೊಟ್ಟಿದ್ದೀರಿ?’: ಅನಂದ್‌ ಮಹೀಂದ್ರಾಗೆ ಮಾಜಿ ಸೈನಿಕರ ಗಂಭೀರ ಪ್ರಶ್ನೆ

‘ಎಷ್ಟು ಮಾಜಿ ಸೈನಿಕರಿಗೆ ಕೆಲಸ ಕೊಟ್ಟಿದ್ದೀರಿ?’: ಅನಂದ್‌ ಮಹೀಂದ್ರಾಗೆ ಮಾಜಿ ಸೈನಿಕರ ಗಂಭೀರ ಪ್ರಶ್ನೆ

- Advertisement -
- Advertisement -

ಒಕ್ಕೂಟ ಸರ್ಕಾರದ ಹೊಸ ವಿವಾದಿತ ಯೋಜನೆ ‘ಅಗ್ನಿಪಥ್‌’ನಿಂದ ಕಡ್ಡಾಯ ನಿವೃತ್ತಿ ಹೊಂದುವ ತರಬೇತಿ ಪಡೆದ ಸಮರ್ಥ ಯುವಕರನ್ನು ನೇಮಿಸುವುದಾಗಿ ಕೈಗಾರಿಕೋದ್ಯಮಿ ಆನಂದ್‌ ಮಹೀಂದ್ರಾ ಅವರು ಹೇಳಿದ್ದಾರೆ. ಮಹೀಂದ್ರಾ ಅವರು ಈ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗಳನ್ನು ಹುಟ್ಟು ಹಾಕಿದ್ದು, ಸೇನೆಯ ಮಾಜಿ ಅಧಿಕಾರಿಗಳು ಸೇರಿದಂತೆ ಹಲವಾರು ಜನರು, ಮಹೀಂದ್ರಾ ಗ್ರೂಪ್‌ ಈ ಹಿಂದೆ ತನ್ನ ಪ್ರಮುಖ ಹುದ್ದೆಗಳಲ್ಲಿ ಮಾಜಿ ಸೈನಿಕರನ್ನು ನೇಮಿಸಿಕೊಂಡಿದೆಯೆ ಎಂದು ಪ್ರಶ್ನಿಸಿದ್ದಾರೆ.

‘ಅಗ್ನಿಪಥ್’ ವಿರುದ್ಧ ದೇಶದಾದ್ಯಂತ ಭಾರಿ ಪ್ರತಿಭಟನೆಗಳು ನಡೆಯುತ್ತಿರುವ ನಡುವೆ, ಈ ಯೋಜನೆಯಡಿಯಲ್ಲಿ ತರಬೇತಿ ಪಡೆದ ಸಮರ್ಥ ಯುವಕರನ್ನು ನೇಮಿಸಿಕೊಳ್ಳುತ್ತೇವೆ ಎಂದು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಸೋಮವಾರ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಗ್ನೀಪಥ್ ವಿಚಾರವಾಗಿ ನಡೆಯುವ ಹಿಂಸಾಚಾರದಿಂದ ದುಃಖಿತನಾಗಿದ್ದೇನೆ. ಕಳೆದ ವರ್ಷ ಈ ಯೋಜನೆಯನ್ನು ಪ್ರಸ್ತಾಪಿಸಿದಾಗ ನಾನು ಹೇಳಿದ್ದೇನೆ, ಈಗ ನಾನು ಪುನಃ ಹೇಳುತ್ತೇನೆ. ಅಗ್ನಿವೀರ್‌ಗಳ ಶಿಸ್ತು ಮತ್ತು ಕೌಶಲ್ಯಗಳ ಲಾಭವು ಅವರನ್ನು ಅತ್ಯುತ್ತಮವಾಗಿ ಉದ್ಯೋಗಿಗಳನ್ನಾಗಿ ಮಾಡುತ್ತದೆ. ಅಂತಹ ತರಬೇತಿ ಪಡೆದ, ಸಮರ್ಥ ಯುವ ಜನರನ್ನು ನೇಮಿಸಿಕೊಳ್ಳುವ ಅವಕಾಶವನ್ನು ಮಹೀಂದ್ರಾ ಗ್ರೂಪ್ ಸ್ವಾಗತಿಸುತ್ತದೆ” ಎಂದು ಮಹೀಂದ್ರಾ ಟ್ವೀಟ್ ಮಾಡಿದ್ದರು.

ಮಹೀಂದ್ರಾ ಅವರ ಘೋಷಣೆಯನ್ನು ಕೆಲವರು ಶ್ಲಾಘಿಸಿದರೆ, ಸೇನೆಯ ಮಾಜಿ ಉನ್ನತ ಅಧಿಕಾರಿಗಳು ಸೇರಿದಂತೆ ಇನ್ನೂ ಕೆಲವರು ಮಹೀಂದ್ರಾ ಗ್ರೂಪ್ ಈ ಹಿಂದೆ ಎಷ್ಟು ಮಾಜಿ ಅಧಿಕಾರಿಗಳನ್ನು ನೇಮಿಸಿಕೊಂಡಿದೆ ಎಂದು ಗಂಭೀರ ಪ್ರಶ್ನೆಯನ್ನು ಕೇಳಿದ್ದಾರೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ‘ಮೋದಿ ಹಿಟ್ಲರ್‌ ಮಾರ್ಗವನ್ನು ಅನುಸರಿಸಿದರೆ ಹಿಟ್ಲರ್‌ನಂತೆ ಸಾಯುತ್ತಾರೆ’- ಕಾಂಗ್ರೆಸ್ ನಾಯಕ

“ಈ ಹೊಸ ಯೋಜನೆಗಾಗಿ ಏಕೆ ಕಾಯಬೇಕು? ಇಲ್ಲಿಯವರೆಗೆ ಸಾವಿರಾರು ಹೆಚ್ಚು ನುರಿತ ಮತ್ತು ಶಿಸ್ತಿನ ಮಾಜಿ ಸೈನಿಕರು (ಜವಾನರು ಮತ್ತು ಅಧಿಕಾರಿಗಳು) ಪ್ರತಿ ವರ್ಷ ನಿವೃತ್ತಿ ಹೊಂದುತ್ತಿದ್ದು, 2 ನೇ ವೃತ್ತಿಜೀವನವನ್ನು ನಡೆಸಲು ತೀವ್ರವಾಗಿ ಬಯಸುತ್ತಿದ್ದಾರೆ. ಅವರನ್ನು ಮಹೇಂದ್ರ ಗ್ರೂಪ್ ತಲುಪಿದೆಯೆ. ನಿಮ್ಮ ಗ್ರೂಪ್‌ನಿಂದ ಅಂಕಿ ಅಂಶಗಳನ್ನು ಪಡೆಯುವುದು ಒಳ್ಳೆಯದು” ಎಂದು ಭಾರತೀಯ ನೌಕಾಪಡೆಯ ಮಾಜಿ ಮುಖ್ಯಸ್ಥ ಮತ್ತು ಚೀಫ್ಸ್ ಆಫ್ ಸ್ಟಾಫ್ ಕಮಿಟಿಯ ಮಾಜಿ ಅಧ್ಯಕ್ಷರಾಗಿರುವ ಅರುಣ್ ಪ್ರಕಾಶ್ ಪ್ರಶ್ನಿಸಿದ್ದಾರೆ.

“ಆನಂದ್ ಮಹೀಂದ್ರಾ ಸರ್, ಮಾಜಿ ನೌಕಾಪಡೆಯ ಮುಖ್ಯಸ್ಥರು ಕೋರಿರುವಂತೆ, ನಮಗೆ ಕೆಲವು ಅಂಕಿಅಂಶಗಳನ್ನು ನೀಡಬಹುದೇ? ಅಂತಹ ಭರವಸೆಗಳನ್ನು ಕೇಳಿ ನಾನು ನಲವತ್ತು ವರ್ಷಗಳ ಸೇವೆಯ ನಂತರ ನಿವೃತ್ತಿ ಹೊಂದಿದ್ದೇನೆ” ಎಂದು ಭಾರತೀಯ ವಾಯುಪಡೆಯ ಮಾಜಿ ಏರ್ ವೈಸ್ ಮಾರ್ಷಲ್ ಮನಮೋಹನ್ ಬಹದ್ದೂರ್ ಬರೆದಿದ್ದಾರೆ.

ಇದನ್ನೂ ಓದಿ: ಅಗ್ನಿಪಥ್‌‌: ಬೆಳಗಾವಿಯಲ್ಲಿ ಆಂದೋಲನ ತಡೆಯಲು ಬಿಗಿ ಭದ್ರತೆ; ವಿದ್ಯಾರ್ಥಿ ನಾಯಕರು ವಶಕ್ಕೆ

ಆನಂದ್ ಮಹೀಂದ್ರ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಾಮಾಜಿಕ ಕಾರ್ಯಕರ್ತ, ಟಿಎಂಸಿ ನಾಯಕ ಸಾಕೇತ್ ಗೋಖಲೆ, “ಆನಂದ ಮಹೀಂದ್ರ ಅವರಿಗೆ ಎರಡು ಪ್ರಮುಖ ಪ್ರಶ್ನೆಗಳು. ಒಂದನೇಯದಾಗಿ, ಮಹೀಂದ್ರಾ ಗ್ರೂಪ್ ಪ್ರಸ್ತುತ ಎಷ್ಟು ಮಾಜಿ ಸೈನಿಕರನ್ನು ನೇಮಿಸಿಕೊಂಡಿದೆ? ನಿಮ್ಮ ಒಟ್ಟು ಉದ್ಯೋಗಿಗಳಲ್ಲಿ ಎಷ್ಟು ಶೇಖಡ ಜನರು ಮಾಜಿ ಸೈನಿಕರಾಗಿದ್ದಾರೆ? ಎರಡನೆಯದಾಗಿ, ನಿಮ್ಮ ಹೇಳಿಕೆಯ ಹಿನ್ನಲೆಯಲ್ಲಿ ಹೇಳುವುದಾದರೆ, ಮಹೀಂದ್ರಾ ಗ್ರೂಪ್ ಸ್ಟೆಪ್‌ ಅಗ್ನಿವೀರರಿಗೆ ಶೇಖಡವಾರು ಉದ್ಯೋಗಗಳನ್ನು ಕಾಯ್ದಿರಿಸುತ್ತದೆಯೇ?” ಎಂದು ಪ್ರಶ್ನಿಸಿದ್ದಾರೆ.

ಆನಂದ್ ಮಹೀಂದ್ರ ಅವರ ಟ್ವೀಟ್‌ ಅನ್ನು ಉಲ್ಲೇಖಿಸಿ RPG ಗ್ರೂಪ್ ಅಧ್ಯಕ್ಷ ಹರ್ಷ್ ಗೋಯೆಂಕಾ ಅವರು ಕೂಡಾ ಅಗ್ನಿವೀರರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದಾರೆ. “ಆರ್‌ಪಿಜಿ ಗ್ರೂಪ್‌ ಕೂಡ ಅಗ್ನಿವೀರ್‌ಗಳನ್ನು ಬಳಸಿಕೊಳ್ಳುವ ಅವಕಾಶವನ್ನು ಸ್ವಾಗತಿಸುತ್ತದೆ. ಈ ಪ್ರತಿಜ್ಞೆಯನ್ನು ತೆಗೆದುಕೊಳ್ಳಲು ಮತ್ತು ನಮ್ಮ ಯುವಕರಿಗೆ ಭವಿಷ್ಯದ ಭರವಸೆ ನೀಡಲು ಇತರ ಕಾರ್ಪೊರೇಟ್‌ಗಳು ಸಹ ನಮ್ಮೊಂದಿಗೆ ಸೇರಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

17.5 ರಿಂದ 21 ವಯಸ್ಸಿನೊಳಗಿನ ಸೇನಾ ಉದ್ಯೋಗಾಕಾಂಕ್ಷಿಗಳನ್ನು ನಾಲ್ಕು ವರ್ಷಗಳವರೆಗೆ ನೇಮಕ ಮಾಡಿಕೊಳ್ಳುವ ‘ಅಗ್ನಿಪಥ್’ ಯೋಜನೆಯನ್ನು ಒಕ್ಕೂಟ ಸರ್ಕಾರವು ಘೋಷಿಸಿದ ನಂತರ ದೇಶದಾದ್ಯಂತ ಭಾರಿ ಪ್ರತಿಭಟನೆಗಳು ಭುಗಿಲೆದ್ದಿವೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ನಿರ್ಧಾರ ಕೈಗೊಳ್ಳುವ ಮೊದಲು ನಮ್ಮ ಮಾತನ್ನೂ ಕೇಳಿ- ಸುಪ್ರೀಂಗೆ ಕೇಂದ್ರದ ಮನವಿ

ಈ ಯೋಜನೆಯ ಅನ್ವಯ, ನಾಲ್ಕು ವರ್ಷಗಳು ಪೂರ್ಣಗೊಂಡ ನಂತರ, ಅಗ್ನಿಪಥ್‌‌ಗೆ ಹೊಸದಾಗಿ ನೇಮಕಗೊಂಡವರಲ್ಲಿ 75% ದಷ್ಟು ಜನರು 12 ಲಕ್ಷ ರೂ. ನೊಂದಿಗೆ ಅವರ ಕಡ್ಡಾಯ ನಿವೃತ್ತಿ ಪಡೆಯಬೇಕಾಗುತ್ತದೆ. ಆದರೆ ಅವರು ಯಾವುದೇ ಪಿಂಚಣಿಗೆ ಅರ್ಹರಾಗಿರುವುದಿಲ್ಲ. ಉಳಿದ 25% ಜನರು ಸಶಸ್ತ್ರ ಪಡೆಗಳಲ್ಲಿ 15 ವರ್ಷಗಳ ಅಧಿಕಾರಾವಧಿಯನ್ನು ಪೂರೈಸಬಹುದಾಗಿದೆ.

ಯೋಜನೆಯ ವಿರುದ್ಧ ಭಾರೀ ಪ್ರತಿಭಟನೆಗಳು ನಡೆದಿದ್ದರೂ, ಮೋದಿ ನೇತೃತ್ವದ ಸರ್ಕಾರವು ಅದನ್ನು ಹಿಂತೆಗೆದುಕೊಳ್ಳಲು ಸ್ಪಷ್ಟವಾಗಿ ನಿರಾಕರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...