Homeಮುಖಪುಟರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಘೋಷಣೆ

ರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಘೋಷಣೆ

- Advertisement -
- Advertisement -

ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ಯಶವಂತ್ ಸಿನ್ಹಾ ಅವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿಯಿಂದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಭ್ಯರ್ಥಿಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

“ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ನಾವು ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ನಿರ್ಧರಿಸಿದ್ದೇವೆ. ಮೋದಿ ಸರ್ಕಾರ ಮತ್ತಷ್ಟು ಹಾನಿ ಮಾಡದಂತೆ ತಡೆಯಲು ನಿರ್ಧರಿಸಿದ್ದೇವೆ. ಇಂದು ನಡೆದ ಸಭೆಯಲ್ಲಿ ನಾವು ಯಶವಂತ್ ಸಿನ್ಹಾ ಅವರನ್ನು ಪ್ರತಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದೇವೆ. ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಯಶವಂತ್ ಸಿನ್ಹಾ ಅವರಿಗೆ ಮತ ನೀಡುವಂತೆ ಮನವಿ ಮಾಡುತ್ತೇವೆ” ಎಂದು ಪ್ರತಿಪಕ್ಷಗಳ ಜಂಟಿ ಹೇಳಿಕೆಯನ್ನು ಓದಿದ ಕಾಂಗ್ರೆಸ್‌ನ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: Explained: ಭಾರತದ ರಾಷ್ಟ್ರಪತಿ ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ?

ಜಂಟಿ ಹೇಳಿಕೆಯಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳಿಗೆ ಯಶವಂತ್‌ ಸಿನ್ಹಾ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದೆ. ಇದರಿಂದಾಗಿ “ಅರ್ಹ ರಾಷ್ಟ್ರಪತಿಯನ್ನು ಅವಿರೋಧವಾಗಿ ಆಯ್ಕೆ ಮಾಡಬಹುದಾಗಿದೆ” ಎಂದು ಹೇಳಲಾಗಿದೆ. ರಾಷ್ಟ್ರಪತಿ ಅಭ್ಯರ್ಥಿ ಸಿನ್ಹಾ ಅವರ ಪ್ರಚಾರಕ್ಕೆ ಸಮಿತಿ ರಚಿಸಲಾಗಿದೆ.

ರಾಷ್ಟ್ರಪತಿ ಚುನಾವಣೆಗೆ ಜೂನ್ 27ರಂದು ಬೆಳಗ್ಗೆ 11.30ಕ್ಕೆ ನಾಮಪತ್ರ ಸಲ್ಲಿಸಲಿದ್ದೇವೆ ಎಂದು ಎನ್‌ಸಿಪಿ ನಾಯಕ ಶರದ್‌ ಪವಾರ್ ತಿಳಿಸಿದ್ದಾರೆ.

ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮನವಿಯನ್ನು ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ ಸೋಮವಾರ ತಿರಸ್ಕರಿಸಿದ್ದರು. ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಮತ್ತು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ಕೂಡಾ ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ತಾವು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ನಿರ್ಧಾರ ಪ್ರಕಟಿಸಿದ್ದರು.

ಗೋಪಾಲಕೃಷ್ಣ ಗಾಂಧಿ ಅವರು ತಮ್ಮ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರ ಸೋಮವಾರ ಯಶವಂತ್ ಸಿನ್ಹಾ ಅವರ ಹೆಸರನ್ನು ವಿರೋಧ ಪಕ್ಷಗಳು ಚರ್ಚಿಸಿದ್ದವು ಎಂದು ವರದಿಗಳು ತಿಳಿಸಿವೆ. ಈ ಬಗ್ಗೆ ಟ್ವೀಟ್‌ನಲ್ಲಿ ಸುಳಿವು ನೀಡಿದ್ದ  ಯಶವಂತ್‌ ಸಿನ್ಹಾ ಅವರು ತಮ್ಮ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.


ಇದನ್ನೂ ಓದಿ: ಮಹಾರಾಷ್ಟ್ರ: ಅಧಿಕಾರಕ್ಕಾಗಿ ನಾನು ಎಂದಿಗೂ ಮೋಸ ಮಾಡುವುದಿಲ್ಲ ಎಂದ ಏಕನಾಥ್‌ ಶಿಂಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...