Homeರಾಷ್ಟ್ರೀಯಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ಯುವಕರು ಸೈನ್ಯದಿಂದ ನಿವೃತ್ತಿ ಹೊಂದುವಾಗ ದೇಶ 5 ಟ್ರಿಲಿಯನ್ ಡಾಲರ್‌‌ ಆರ್ಥಿಕತೆ ಹೊಂದಿರುತ್ತದೆ, ಈ ವೇಳೆ ನಿರುದ್ಯೋಗದ ಸಮಸ್ಯೆ ಇರುವುದಿಲ್ಲ ಎಂದು ಹೇಳಿದ್ದಾರೆ

- Advertisement -
- Advertisement -

ಯುವಕರು ಪಡೆಗಳಿಂದ ನಿವೃತ್ತರಾಗುವ ಹೊತ್ತಿಗೆ, ಭಾರತವು 5 ಟ್ರಿಲಿಯನ್ ಡಾಲರ್‌‌ ಆರ್ಥಿಕತೆಯನ್ನು ಹೊಂದುತ್ತದೆ. ಯಾವುದೇ ಕಾರಣಕ್ಕೂ ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೆ ಇಲ್ಲ. ಇದು ಸಶಸ್ತ್ರ ಪಡೆಗಳು ಮತ್ತು ಅದರ ಮೂಲಕ ತರಬೇತಿ ಪಡೆಯುವ ಯುವಕರ ಒಳಿತಿಗಾಗಿ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್‌ ದೋವಲ್ ಮಂಗಳವಾರ ಹೇಳಿದ್ದಾರೆ.

ಪಡೆಗಳಿಂದ ನಿವೃತ್ತರಾಗುವ ವೇಳೆ ಶಿಸ್ತುಬದ್ಧ, ತರಬೇತಿ ಪಡೆದ ಯುವಕರನ್ನು ನೇಮಿಸಿಕೊಳ್ಳಲು ಉದ್ಯಮಗಳು ಸ್ಪರ್ಧಿಸುತ್ತವೆ, ಹೀಗಾಗಿ ಅಗ್ನಿವೀರ್‌ಗಳಿಗೆ ಸಾಕಷ್ಟು ಉದ್ಯೋಗಾವಕಾಶಗಳನ್ನು ಹೊಂದಿರುತ್ತಾರೆ ಎಂದು ಅವರು ಪ್ರತಿಪಾದಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಇದು ತಕ್ಷಣಕ್ಕೆ ತೆಗೆದುಕೊಂಡ ಪ್ರತಿಕ್ರಿಯೆಯೂ ಅಲ್ಲ. ಈ ಬಗ್ಗೆ ದಶಕಗಳಿಂದ ಚರ್ಚೆಯಾಗುತ್ತಿದೆ. 1970 ರ ದಶಕದಲ್ಲಿ, ನಾವು ಜನರಲ್ ಕೃಷ್ಣರಾವ್ ಸಮಿತಿ ರಚಿಸಿದ್ದೆವು. ಅದರಲ್ಲಿ ಜನರಲ್ ಚಿಬ್ಬರ್ ಮತ್ತು ಜನರಲ್ ಸುಂದರ್ ಸದಸ್ಯರಾಗಿದ್ದರು. ಮಾನವಶಕ್ತಿ ನೀತಿ ಸೇರಿದಂತೆ ಸೇನೆಯನ್ನು ಸುಧಾರಿಸುವ ಕುರಿತು ಅವರು ಮಾತನಾಡಿದ್ದರು” ಎಂದು ಅಜಿತ್ ದೋವಲ್ ಹೇಳಿದ್ದಾರೆ.

ಇದನ್ನೂ ಓದಿ: ‘ಅಗ್ನಿಪಥ್’ ವಿರೋಧಿಸಿ ಭಾರತ ಬಂದ್‌: ದೇಶಾದ್ಯಂತ 500 ರೈಲುಗಳು ರದ್ದು!

ಅದರ ನಂತರ 1989 ರಲ್ಲಿ ಅರುಣ್ ಸಿಂಗ್ ವರದಿ ಇತ್ತು. ನಂತರ ಒಂದು ಗುಂಪಿನ ಮಂತ್ರಿಗಳ ವರದಿ ಇತ್ತು .. ಸುಬ್ರಮಣ್ಯಂ ಸಮಿತಿಯ ವರದಿ, ಕಾರ್ಗಿಲ್ ಸಮಿತಿಯ ವರದಿ…ಇವೆಲ್ಲವೂ ಇದೇ ರೀತಿಯ ಮಾದರಿಯ ವರದಿಯಾಗಿತ್ತು. ಆದರೆ ಆಗ ಇದ್ದ ಒಂದು ಸಮಸ್ಯೆ ಏನೆಂದರೆ, ಇದು ಅಗತ್ಯ ಎಂದು ಎಲ್ಲರಿಗೂ ತಿಳಿದಿದ್ದರೂ, ಅಪಾಯವನ್ನು ತೆಗೆದುಕೊಳ್ಳುವ ಸಾಮರ್ಥ್ಯ ಮತ್ತು ಇಚ್ಛೆ ಯಾರಿಗೂ ಇರಲಿಲ್ಲ ಎಂದು ದೋವಲ್ ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಬಿಜೆಪಿ ಸರ್ಕಾರ ಜಾರಿ ಮಾಡಿರುವ ಹೊಸ ಯೋಜನೆಯಾದ ಅಗ್ನಿಪಥ್‌ ವಿರೋಧಿಸಿ ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳು ಮುಂದುವರಿದಿರುವ ಮಧ್ಯೆ, ಅಜಿತ್ ದೋವಲ್ ಈ ಹೇಳಿಕೆಯನ್ನು ನೀಡಿದ್ದಾರೆ. ಈ ಯೋಜನೆಯಲ್ಲಿ ಯುವಕರನ್ನು 15 ವರ್ಷಗಳ  ಬದಲಾಗಿ ನಾಲ್ಕು ವರ್ಷಗಳ ಅವಧಿಗೆ ಜವಾನ್ ಮಟ್ಟದಲ್ಲಿ ಮಾತ್ರ ನೇಮಕ ಮಾಡಲಾಗುತ್ತದೆ.

ಸೇನೆಯಲ್ಲಿ ನಾಲ್ಕು ವರ್ಷಗಳು ಸೇವೆ ಮಾಡಿದ ನಂತರ ನಿರುದ್ಯೋಗಿಗಲಾಗುತ್ತಾರೆ ಎಂಬ ವಾದವನ್ನು ಅವರು ನಿರಾಕರಿಸಿದ್ದು, ‘ತಪ್ಪು ತಿಳುವಳಿಕೆಯನ್ನು ಸೃಷ್ಟಿಸಲಾಗಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ’ಮೋದಿ ಹಿಟ್ಲರ್‌ ಮಾರ್ಗವನ್ನು ಅನುಸರಿಸಿದರೆ ಹಿಟ್ಲರ್‌ನಂತೆ ಸಾಯುತ್ತಾರೆ’- ಕಾಂಗ್ರೆಸ್ ನಾಯಕ

“ನಾವು 22 ಅಥವಾ 23 ವರ್ಷ ವಯಸ್ಸಿನ ಯುವಕನ ಬಗ್ಗೆ ಮಾತನಾಡುತ್ತಿದ್ದೇವೆ. ನಾಲ್ಕು ವರ್ಷಗಳ ಸೇವೆ ಮಾಡಿ ಶಿಸ್ತುಬದ್ಧವಾಗಿ, ತಂಡದಲ್ಲಿ ಕೆಲಸ ಮಾಡುವ ಸಾಮರ್ಥ್ಯವನ್ನು ಪಡೆಯುತ್ತಾನೆ. ಕೌಶಲ್ಯಗಳನ್ನು ಕಲಿಯುತ್ತಾನೆ, ಆತ್ಮವಿಶ್ವಾಸವನ್ನು ಬೆಳೆಸಿಕೊಂಳ್ಳುತ್ತಾನೆ, ತರಬೇತಿ ಹೊಂದುತ್ತಾನೆ ಮತ್ತು ಅಖಿಲ ಭಾರತ ದೃಷ್ಟಿಕೋನವನ್ನು ಪಡೆಯುತ್ತಾನೆ. ಸಮಾಜವನ್ನು ಎದುರಿಸಲು ಹೆಚ್ಚು ಸಜ್ಜಾಗುತ್ತಾರೆ. ಇಷ್ಟೇ ಅಲ್ಲದೆ, ಅವರಿಗೆ ಪ್ಲಸ್ ಟುಗೆ ಸಮಾನವಾದ ಅರ್ಹತೆಯನ್ನು ನೀಡಲಾಗುತ್ತದೆ. ಜೊತೆಗೆ ಅವರ ಬಳಿ 11 ಲಕ್ಷ ರೂಪಾಯಿ ಇರುತ್ತದೆ ಅದನ್ನು ಅವರು ಹೆಚ್ಚಿನ ಅಧ್ಯಯನಕ್ಕೆ ಬಳಸಬಹುದು” ಎಂದು ಅಜಿತ್‌ ದೋವಲ್ ಹೇಳಿದ್ದಾರೆ.

“ಅಗ್ನಿವೀರ್ ನಿವೃತ್ತಿಯಾಗುವ ಹೊತ್ತಿಗೆ ಭಾರತವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ. ಖಾಸಗಿ ವಲಯದಲ್ಲಿ ಸಾಕಷ್ಟು ಅವಕಾಶಗಳು ದೊರೆಯಲಿವೆ. ಕೈಗಾರಿಕೆಗಳು ಶಿಸ್ತುಬದ್ಧ ಮತ್ತು ತರಬೇತಿ ಪಡೆಯುವ ಜನರನ್ನು ನೇಮಿಸಿಕೊಳ್ಳಲು ಬಯಸುತ್ತವೆ. ಅವರ ಚಿಕ್ಕ ವಯಸ್ಸು ಅವರ ದೊಡ್ಡ ಆಸ್ತಿ. ಅವರ ಭವಿಷ್ಯವು ಸಂಪೂರ್ಣವಾಗಿ ಸುರಕ್ಷಿತವಾಗಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸಿದ ದೋವಲ್, “ಇದರಲ್ಲಿ ಎರಡು ಗುಂಪಿನ ಜನರ ವಿರೋಧವಿದೆ. ಮೊದಲನೆಯದಾಗಿ ಸೇನಾ ಯೋಧರು ಇದ್ದು, ಅವರು ಸಂಪೂರ್ಣ ಮಾಹಿತಿಯ ಕೊರತೆಯಿಂದ ವಿರೋಧಿಸುತ್ತಿದ್ದಾರೆ. ಎರಡನೆಯದ್ದು ಪಟ್ಟಭದ್ರ ಹಿತಾಸಕ್ತಿ ಹೊಂದಿರುವವರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಗ್ನಿಪಥ್‌‌: ಬೆಳಗಾವಿಯಲ್ಲಿ ಆಂದೋಲನ ತಡೆಯಲು ಬಿಗಿ ಭದ್ರತೆ; ವಿದ್ಯಾರ್ಥಿ ನಾಯಕರು ವಶಕ್ಕೆ

“ಇವರು ರಾಷ್ಟ್ರದ ಭದ್ರತೆಯ ಬಗ್ಗೆ ಯಾವುದೇ ಕಾಳಜಿಯನ್ನು ಹೊಂದಿಲ್ಲ ಅಥವಾ ಅವರು ರಾಷ್ಟ್ರಕ್ಕೆ ಸಮರ್ಪಿತರಾಗಿಲ್ಲ. ಅವರು ಸಂಘರ್ಷದ ಉದ್ಯಮಿಗಳು. ಇವರು ಕಲ್ಲು ತೂರಾಟ, ಪ್ರತಿಭಟನೆಗಳು ಮತ್ತು ರೈಲುಗಳನ್ನು ಸುಡುವ ಜನರು. ಇದರಲ್ಲಿ ಅಗ್ನಿವೀರ್ ಎಂದಿಗೂ ದಾರಿ ತಪ್ಪುವುದಿಲ್ಲ. ಪ್ರತಿಭಟಿಸುವವರಲ್ಲಿ ಯಾರೊಬ್ಬರೂ ಪಡೆಗಳನ್ನು ಸೇರಲು ಆಸಕ್ತಿ ಹೊಂದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....