Homeರಾಷ್ಟ್ರೀಯಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ಯುವಕರು ಸೈನ್ಯದಿಂದ ನಿವೃತ್ತಿ ಹೊಂದುವಾಗ ದೇಶ 5 ಟ್ರಿಲಿಯನ್ ಡಾಲರ್‌‌ ಆರ್ಥಿಕತೆ ಹೊಂದಿರುತ್ತದೆ, ಈ ವೇಳೆ ನಿರುದ್ಯೋಗದ ಸಮಸ್ಯೆ ಇರುವುದಿಲ್ಲ ಎಂದು ಹೇಳಿದ್ದಾರೆ

- Advertisement -
- Advertisement -

ಯುವಕರು ಪಡೆಗಳಿಂದ ನಿವೃತ್ತರಾಗುವ ಹೊತ್ತಿಗೆ, ಭಾರತವು 5 ಟ್ರಿಲಿಯನ್ ಡಾಲರ್‌‌ ಆರ್ಥಿಕತೆಯನ್ನು ಹೊಂದುತ್ತದೆ. ಯಾವುದೇ ಕಾರಣಕ್ಕೂ ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೆ ಇಲ್ಲ. ಇದು ಸಶಸ್ತ್ರ ಪಡೆಗಳು ಮತ್ತು ಅದರ ಮೂಲಕ ತರಬೇತಿ ಪಡೆಯುವ ಯುವಕರ ಒಳಿತಿಗಾಗಿ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್‌ ದೋವಲ್ ಮಂಗಳವಾರ ಹೇಳಿದ್ದಾರೆ.

ಪಡೆಗಳಿಂದ ನಿವೃತ್ತರಾಗುವ ವೇಳೆ ಶಿಸ್ತುಬದ್ಧ, ತರಬೇತಿ ಪಡೆದ ಯುವಕರನ್ನು ನೇಮಿಸಿಕೊಳ್ಳಲು ಉದ್ಯಮಗಳು ಸ್ಪರ್ಧಿಸುತ್ತವೆ, ಹೀಗಾಗಿ ಅಗ್ನಿವೀರ್‌ಗಳಿಗೆ ಸಾಕಷ್ಟು ಉದ್ಯೋಗಾವಕಾಶಗಳನ್ನು ಹೊಂದಿರುತ್ತಾರೆ ಎಂದು ಅವರು ಪ್ರತಿಪಾದಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಇದು ತಕ್ಷಣಕ್ಕೆ ತೆಗೆದುಕೊಂಡ ಪ್ರತಿಕ್ರಿಯೆಯೂ ಅಲ್ಲ. ಈ ಬಗ್ಗೆ ದಶಕಗಳಿಂದ ಚರ್ಚೆಯಾಗುತ್ತಿದೆ. 1970 ರ ದಶಕದಲ್ಲಿ, ನಾವು ಜನರಲ್ ಕೃಷ್ಣರಾವ್ ಸಮಿತಿ ರಚಿಸಿದ್ದೆವು. ಅದರಲ್ಲಿ ಜನರಲ್ ಚಿಬ್ಬರ್ ಮತ್ತು ಜನರಲ್ ಸುಂದರ್ ಸದಸ್ಯರಾಗಿದ್ದರು. ಮಾನವಶಕ್ತಿ ನೀತಿ ಸೇರಿದಂತೆ ಸೇನೆಯನ್ನು ಸುಧಾರಿಸುವ ಕುರಿತು ಅವರು ಮಾತನಾಡಿದ್ದರು” ಎಂದು ಅಜಿತ್ ದೋವಲ್ ಹೇಳಿದ್ದಾರೆ.

ಇದನ್ನೂ ಓದಿ: ‘ಅಗ್ನಿಪಥ್’ ವಿರೋಧಿಸಿ ಭಾರತ ಬಂದ್‌: ದೇಶಾದ್ಯಂತ 500 ರೈಲುಗಳು ರದ್ದು!

ಅದರ ನಂತರ 1989 ರಲ್ಲಿ ಅರುಣ್ ಸಿಂಗ್ ವರದಿ ಇತ್ತು. ನಂತರ ಒಂದು ಗುಂಪಿನ ಮಂತ್ರಿಗಳ ವರದಿ ಇತ್ತು .. ಸುಬ್ರಮಣ್ಯಂ ಸಮಿತಿಯ ವರದಿ, ಕಾರ್ಗಿಲ್ ಸಮಿತಿಯ ವರದಿ…ಇವೆಲ್ಲವೂ ಇದೇ ರೀತಿಯ ಮಾದರಿಯ ವರದಿಯಾಗಿತ್ತು. ಆದರೆ ಆಗ ಇದ್ದ ಒಂದು ಸಮಸ್ಯೆ ಏನೆಂದರೆ, ಇದು ಅಗತ್ಯ ಎಂದು ಎಲ್ಲರಿಗೂ ತಿಳಿದಿದ್ದರೂ, ಅಪಾಯವನ್ನು ತೆಗೆದುಕೊಳ್ಳುವ ಸಾಮರ್ಥ್ಯ ಮತ್ತು ಇಚ್ಛೆ ಯಾರಿಗೂ ಇರಲಿಲ್ಲ ಎಂದು ದೋವಲ್ ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಬಿಜೆಪಿ ಸರ್ಕಾರ ಜಾರಿ ಮಾಡಿರುವ ಹೊಸ ಯೋಜನೆಯಾದ ಅಗ್ನಿಪಥ್‌ ವಿರೋಧಿಸಿ ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳು ಮುಂದುವರಿದಿರುವ ಮಧ್ಯೆ, ಅಜಿತ್ ದೋವಲ್ ಈ ಹೇಳಿಕೆಯನ್ನು ನೀಡಿದ್ದಾರೆ. ಈ ಯೋಜನೆಯಲ್ಲಿ ಯುವಕರನ್ನು 15 ವರ್ಷಗಳ  ಬದಲಾಗಿ ನಾಲ್ಕು ವರ್ಷಗಳ ಅವಧಿಗೆ ಜವಾನ್ ಮಟ್ಟದಲ್ಲಿ ಮಾತ್ರ ನೇಮಕ ಮಾಡಲಾಗುತ್ತದೆ.

ಸೇನೆಯಲ್ಲಿ ನಾಲ್ಕು ವರ್ಷಗಳು ಸೇವೆ ಮಾಡಿದ ನಂತರ ನಿರುದ್ಯೋಗಿಗಲಾಗುತ್ತಾರೆ ಎಂಬ ವಾದವನ್ನು ಅವರು ನಿರಾಕರಿಸಿದ್ದು, ‘ತಪ್ಪು ತಿಳುವಳಿಕೆಯನ್ನು ಸೃಷ್ಟಿಸಲಾಗಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ’ಮೋದಿ ಹಿಟ್ಲರ್‌ ಮಾರ್ಗವನ್ನು ಅನುಸರಿಸಿದರೆ ಹಿಟ್ಲರ್‌ನಂತೆ ಸಾಯುತ್ತಾರೆ’- ಕಾಂಗ್ರೆಸ್ ನಾಯಕ

“ನಾವು 22 ಅಥವಾ 23 ವರ್ಷ ವಯಸ್ಸಿನ ಯುವಕನ ಬಗ್ಗೆ ಮಾತನಾಡುತ್ತಿದ್ದೇವೆ. ನಾಲ್ಕು ವರ್ಷಗಳ ಸೇವೆ ಮಾಡಿ ಶಿಸ್ತುಬದ್ಧವಾಗಿ, ತಂಡದಲ್ಲಿ ಕೆಲಸ ಮಾಡುವ ಸಾಮರ್ಥ್ಯವನ್ನು ಪಡೆಯುತ್ತಾನೆ. ಕೌಶಲ್ಯಗಳನ್ನು ಕಲಿಯುತ್ತಾನೆ, ಆತ್ಮವಿಶ್ವಾಸವನ್ನು ಬೆಳೆಸಿಕೊಂಳ್ಳುತ್ತಾನೆ, ತರಬೇತಿ ಹೊಂದುತ್ತಾನೆ ಮತ್ತು ಅಖಿಲ ಭಾರತ ದೃಷ್ಟಿಕೋನವನ್ನು ಪಡೆಯುತ್ತಾನೆ. ಸಮಾಜವನ್ನು ಎದುರಿಸಲು ಹೆಚ್ಚು ಸಜ್ಜಾಗುತ್ತಾರೆ. ಇಷ್ಟೇ ಅಲ್ಲದೆ, ಅವರಿಗೆ ಪ್ಲಸ್ ಟುಗೆ ಸಮಾನವಾದ ಅರ್ಹತೆಯನ್ನು ನೀಡಲಾಗುತ್ತದೆ. ಜೊತೆಗೆ ಅವರ ಬಳಿ 11 ಲಕ್ಷ ರೂಪಾಯಿ ಇರುತ್ತದೆ ಅದನ್ನು ಅವರು ಹೆಚ್ಚಿನ ಅಧ್ಯಯನಕ್ಕೆ ಬಳಸಬಹುದು” ಎಂದು ಅಜಿತ್‌ ದೋವಲ್ ಹೇಳಿದ್ದಾರೆ.

“ಅಗ್ನಿವೀರ್ ನಿವೃತ್ತಿಯಾಗುವ ಹೊತ್ತಿಗೆ ಭಾರತವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ. ಖಾಸಗಿ ವಲಯದಲ್ಲಿ ಸಾಕಷ್ಟು ಅವಕಾಶಗಳು ದೊರೆಯಲಿವೆ. ಕೈಗಾರಿಕೆಗಳು ಶಿಸ್ತುಬದ್ಧ ಮತ್ತು ತರಬೇತಿ ಪಡೆಯುವ ಜನರನ್ನು ನೇಮಿಸಿಕೊಳ್ಳಲು ಬಯಸುತ್ತವೆ. ಅವರ ಚಿಕ್ಕ ವಯಸ್ಸು ಅವರ ದೊಡ್ಡ ಆಸ್ತಿ. ಅವರ ಭವಿಷ್ಯವು ಸಂಪೂರ್ಣವಾಗಿ ಸುರಕ್ಷಿತವಾಗಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸಿದ ದೋವಲ್, “ಇದರಲ್ಲಿ ಎರಡು ಗುಂಪಿನ ಜನರ ವಿರೋಧವಿದೆ. ಮೊದಲನೆಯದಾಗಿ ಸೇನಾ ಯೋಧರು ಇದ್ದು, ಅವರು ಸಂಪೂರ್ಣ ಮಾಹಿತಿಯ ಕೊರತೆಯಿಂದ ವಿರೋಧಿಸುತ್ತಿದ್ದಾರೆ. ಎರಡನೆಯದ್ದು ಪಟ್ಟಭದ್ರ ಹಿತಾಸಕ್ತಿ ಹೊಂದಿರುವವರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಗ್ನಿಪಥ್‌‌: ಬೆಳಗಾವಿಯಲ್ಲಿ ಆಂದೋಲನ ತಡೆಯಲು ಬಿಗಿ ಭದ್ರತೆ; ವಿದ್ಯಾರ್ಥಿ ನಾಯಕರು ವಶಕ್ಕೆ

“ಇವರು ರಾಷ್ಟ್ರದ ಭದ್ರತೆಯ ಬಗ್ಗೆ ಯಾವುದೇ ಕಾಳಜಿಯನ್ನು ಹೊಂದಿಲ್ಲ ಅಥವಾ ಅವರು ರಾಷ್ಟ್ರಕ್ಕೆ ಸಮರ್ಪಿತರಾಗಿಲ್ಲ. ಅವರು ಸಂಘರ್ಷದ ಉದ್ಯಮಿಗಳು. ಇವರು ಕಲ್ಲು ತೂರಾಟ, ಪ್ರತಿಭಟನೆಗಳು ಮತ್ತು ರೈಲುಗಳನ್ನು ಸುಡುವ ಜನರು. ಇದರಲ್ಲಿ ಅಗ್ನಿವೀರ್ ಎಂದಿಗೂ ದಾರಿ ತಪ್ಪುವುದಿಲ್ಲ. ಪ್ರತಿಭಟಿಸುವವರಲ್ಲಿ ಯಾರೊಬ್ಬರೂ ಪಡೆಗಳನ್ನು ಸೇರಲು ಆಸಕ್ತಿ ಹೊಂದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...