Homeಮುಖಪುಟವಿಡಿಯೋ ತಿರುಚಿ ತೇಜೋವಧೆ-ಮನೆ ಮೇಲೆ ದಾಳಿ: ವಿಕ್ರಮ ಟಿವಿ ವಿರುದ್ಧ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯ ದೂರು

ವಿಡಿಯೋ ತಿರುಚಿ ತೇಜೋವಧೆ-ಮನೆ ಮೇಲೆ ದಾಳಿ: ವಿಕ್ರಮ ಟಿವಿ ವಿರುದ್ಧ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯ ದೂರು

- Advertisement -
- Advertisement -

ಕ್ಲಬ್ ಹೌಸ್ ಚರ್ಚೆಯ ತಿರುಚಿದ ವಿಡಿಯೋ ಪ್ರಸಾರ ಮಾಡಿ ನನ್ನ ತೇಜೋವಧೆ ಮಾಡಲಾಗಿದೆ. ನನ್ನ ಮನೆ ಮೇಲೆ ದಾಳಿ ನಡೆಸಲಾಗಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶೈಲಜಾ ಅಮರ್‌ನಾಥ್‌ರವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜೂನ್ 16ರ ಸಂಜೆ ಕ್ಲಬ್‌ಹೌಸ್‌ ಚರ್ಚೆಯಲ್ಲಿ ಶ್ರೀರಾಮ, ಸೀತೆ ಹಾಗೂ ಹನುಮಂತ ದೇವರನ್ನು ಅವಹೇಳನ ಮಾಡಿದ್ದೇನೆ ಎಂದು ನನ್ನ ಧ್ವನಿಯನ್ನು ಬಳಸಿ ವಿಕ್ರಮ ಟಿವಿ ತಿರುಚಿದ ವಿಡಿಯೋ ಪ್ರಕಟಿಸಿದೆ. ಅದನ್ನೆ ಬಿಜೆಪಿ ಪಕ್ಷವು ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿ ತೇಜೋವಧೆ ಮಾಡಿದೆ. ಇದರಿಂದಾಗಿ ದುಷ್ಕರ್ಮಿಗಳು ನನ್ನ ಮನೆ ಮೇಲೆ ದಾಳಿ ಮಾಡಿದ್ದಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೂನ್ 16 ರಂದು ನಾನು ಯಾವುದೇ ಕ್ಲಬ್‌ಹೌಸ್ ಚರ್ಚೆಯಲ್ಲಿ ಭಾಗವಹಿಸಿಲ್ಲ. ಅಂದು ನಾನು ನನ್ನ ಪತಿಯೊಂದಿಗೆ ಬೆಂಗಳೂರಿನಲ್ಲಿದ್ದೆ. ಈ ಕುರಿತು ಯಾವುದೇ ತನಿಖೆಗೆ ಸಿದ್ದವಿದ್ದೇನೆ. ಆದರೆ ಪೊಲೀಸರು ತನಿಖೆ ಮಾಡುತ್ತಿಲ್ಲ ಏಕೆ? ನಾನು ದೇವರ ಭಕ್ತೆಯಾಗಿದ್ದು, ಯಾವುದೇ ಕಾರಣಕ್ಕೂ ದೇವರಿಗೆ ಅವಹೇಳನ ಮಾಡುವ ಹೆಣ್ಣುಮಗಳಲ್ಲ. ಶ್ರೀರಾಮ ಸೀತೆ, ಪುತ್ತೂರು ಮಹಾಲಿಂಗೇಶ್ವರ ದೇವರ ಸಹಿತ ಎಲ್ಲಾ ದೇವರುಗಳನ್ನು ನಂಬುವ ಹಾಗೂ ಹಿಂದೂ ಸಂಪ್ರದಾಯ-ಧಾರ್ಮಿಕ ಆಚರಣೆಗಳನ್ನು ಪಾಲಿಸುವ ಮಹಿಳೆಯಾಗಿದ್ದೇನೆ. ನಾನು ಹಿಂದು ಧರ್ಮೀಯಳು ಹೌದೋ, ಅಲ್ಲವೋ ಅನ್ನುವುದಕ್ಕೆ ಯಾವುದೊ ಯುಟ್ಯೂಬ್ ಚಾನೆಲ್ ಅಥವಾ ಯಾವುದೇ ಸಂಘಟನೆಗಳ ಸರ್ಟಿಫಿಕೇಟ್ ಬೇಕಾಗಿಲ್ಲ ಎಂದು ಅವರು ಕಿಡಿಕಾರಿದ್ದಾರೆ.

ಕ್ಲಬ್ ಹೌಸ್‌ನಲ್ಲಿ ಹಿಂದೆ ನಡೆದ ಚರ್ಚೆಯನ್ನು ತಿರುಚಿ, ವಿಡಿಯೋ ಎಡಿಟ್ ಮಾಡಿ ಪ್ರಸಾರ ಮಾಡಿದ ವಿಕ್ರಮ ಯುಟ್ಯೂಬ್ ಚಾನೆಲ್‌ ಮತ್ತು ನಿರೂಪಕಿಯ ವಿರುದ್ದ ಪೊಲೀಸರಿಗೆ ದೂರು ನೀಡಿದ್ದೇನೆ. ನನ್ನ ಮನೆ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳ ವಿರುದ್ಧ ದೂರು ನೀಡಿದ್ದೇನೆ. ಆದರೆ ಪೊಲೀಸರು ಆರೋಪಿಗಳನ್ನು ಬಂಧಿಸುವ ಬದಲು ಸುಮ್ಮನಿದ್ದಾರೆ. ನನಗೆ 48 ಗಂಟೆಯೊಳಗೆ ನ್ಯಾಯ ಸಿಗದಿದ್ದರೆ ನನ್ನನ್ನು ಬಂಧಿಸಿ ಎಂದು ಪೊಲೀಸ್ ಠಾಣೆ ಎದುರು ಧರಣಿ ಕೂರುತ್ತೇನೆ. ಜಾಮೀನು ಕೂಡ ಪಡೆಯುವುದಿಲ್ಲ. ಇಡೀ ಪ್ರಕರಣದ ಸಮರ್ಪಕ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಹೋರಾಡುತ್ತೇನೆ ಎಂದರು.

ನಾನು ಅಧರ್ಮಿ ಅಲ್ಲವೇ ಅಲ್ಲ. ಅದೇ ರೀತಿ ನಾನು ಹೆಮ್ಮೆಯ ಕಾಂಗ್ರೆಸಿಗಳು ಸಹ ಹೌದು. ಸಮಾಜದಲ್ಲಿ ಸಮಾನತೆಗಾಗಿ ಹೋರಾಡುತ್ತೇನೆ. ಆದರೆ ಬಿಜೆಪಿ ಧರ್ಮದ ಹೆಸರಲ್ಲಿ ಅಧರ್ಮ ಮಾಡುತ್ತಿದೆ. ಬಿಜೆಪಿ ಓಟು ಗಿಟ್ಟಿಸುವ ನಿಟ್ಟಿನಲ್ಲಿ ಹಿಂದೂಪರ ಸಂಘಟನೆಗಳನ್ನು ನನ್ನ ವಿರುದ್ಧ ಎತ್ತಿಕಟ್ಟಿದೆ ಎಂದು ಕಿಡಿಕಾರಿದರು.

ಇನ್ನು ನಾನು ಕ್ಷಮೆಯಾಚಿಸಬೇಕು ಎಂದು ಶಾಸಕರು ಆಗ್ರಹಿಸಿದ್ದಾರೆ. ತಪ್ಪು ಮಾಡಿಲ್ಲದ ನಾನ್ಯಾಕೆ ಕ್ಷಮೆ ಕೇಳಬೇಕು? ತನ್ನ ಪಟಲಾಂ ಬಿಟ್ಟು ಮಹಿಳೆಯ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿ, ನಾನು ನಿಧನ ಹೊಂದಿದ್ದೇನೆ ಎಂದು ಬ್ಯಾನರ್ ಹಾಕಿ ಕ್ಷೇತ್ರದ ವ್ಯಾಪ್ತಿಯ ಮಹಿಳೆಯೊಬ್ಬಳ ತೇಜೋವಧೆ ಮಾಡುತ್ತಿರುವಾಗ ಸೂಕ್ತ ಭದ್ರತೆ ಒದಗಿಸದ ಶಾಸಕರೇ ಕ್ಷಮೆ ಯಾಚಿಸಬೇಕು. ನಾನು ಯಾವುದೇ ದೇವರಿಗೆ ಅವಹೇಳನ ಮಾಡಿಲ್ಲ. ನನಗೆ ದೇವರ ಬೆಂಬಲ ಇದೆ. ಶ್ರೀರಾಮಚಂದ್ರನೇ ನನ್ನನ್ನು ರಕ್ಷಿಸುತ್ತಾನೆ ಎಂದರು.

ಇದನ್ನೂ ಓದಿ: ಬೆಂಗಳೂರು: ವಲಸೆ ಕಾರ್ಮಿಕರ ಮೇಲೆ ಪೊಲೀಸ್ ದೌರ್ಜನ್ಯ; ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹಿಂದೂ ದೇವತೆಗಳಾದ ಶ್ರೀರಾಮ,ಸೀತೆ,ಹನುಮಂತ ಇವರುಗಳ ಬಗ್ಗೆ ಹೀಯಾಳಿಸಿದ ಇಂತ ಬೇವರ್ಸಿ ಹಂದಿಗಳನ್ನು ಸಿಕ್ಕ ಲ್ಲಿ ಗುಂಡುಹಿಟ್ಟು ಕೊಲ್ಲಬೇಕಿದೆ ,ಗುಲಾಮರ ತಳಿಗಳಿಂದ ಮಾತ್ರ ಇಂತ ಹೇಳಿಕೆಗಳು ಬರಲು ಸಾಧ್ಯ

  2. ಶೈಲಜಾ ಅಮರನಾಥ್ ನಿಮ್ಮ ನ್ಯಾಯಯುತ ಹೆಜ್ಜೆಗೆ ನಮ್ಮ ಬೆಂಬಲವಿದೆ , ರಾಮ ಸೀತೆ ಹನುಮಂತಪ್ಪ ರನ್ನು ಯಾರಿಗೂ ಸ್ವಂತಕ್ಕೆ ಬಿಟ್ಟು ಕೊಟ್ಟಿಲ್ಲ ,ಈ ದೇಶದ ಜನರ ನಡೆನುಡಿಗಳಲ್ಲಿ ಬೆರೆತುಹೋಗಿದ್ದಾರೆ .

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...