Homeಮುಖಪುಟವಿಡಿಯೋ ತಿರುಚಿ ತೇಜೋವಧೆ-ಮನೆ ಮೇಲೆ ದಾಳಿ: ವಿಕ್ರಮ ಟಿವಿ ವಿರುದ್ಧ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯ ದೂರು

ವಿಡಿಯೋ ತಿರುಚಿ ತೇಜೋವಧೆ-ಮನೆ ಮೇಲೆ ದಾಳಿ: ವಿಕ್ರಮ ಟಿವಿ ವಿರುದ್ಧ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯ ದೂರು

- Advertisement -
- Advertisement -

ಕ್ಲಬ್ ಹೌಸ್ ಚರ್ಚೆಯ ತಿರುಚಿದ ವಿಡಿಯೋ ಪ್ರಸಾರ ಮಾಡಿ ನನ್ನ ತೇಜೋವಧೆ ಮಾಡಲಾಗಿದೆ. ನನ್ನ ಮನೆ ಮೇಲೆ ದಾಳಿ ನಡೆಸಲಾಗಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶೈಲಜಾ ಅಮರ್‌ನಾಥ್‌ರವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜೂನ್ 16ರ ಸಂಜೆ ಕ್ಲಬ್‌ಹೌಸ್‌ ಚರ್ಚೆಯಲ್ಲಿ ಶ್ರೀರಾಮ, ಸೀತೆ ಹಾಗೂ ಹನುಮಂತ ದೇವರನ್ನು ಅವಹೇಳನ ಮಾಡಿದ್ದೇನೆ ಎಂದು ನನ್ನ ಧ್ವನಿಯನ್ನು ಬಳಸಿ ವಿಕ್ರಮ ಟಿವಿ ತಿರುಚಿದ ವಿಡಿಯೋ ಪ್ರಕಟಿಸಿದೆ. ಅದನ್ನೆ ಬಿಜೆಪಿ ಪಕ್ಷವು ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿ ತೇಜೋವಧೆ ಮಾಡಿದೆ. ಇದರಿಂದಾಗಿ ದುಷ್ಕರ್ಮಿಗಳು ನನ್ನ ಮನೆ ಮೇಲೆ ದಾಳಿ ಮಾಡಿದ್ದಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೂನ್ 16 ರಂದು ನಾನು ಯಾವುದೇ ಕ್ಲಬ್‌ಹೌಸ್ ಚರ್ಚೆಯಲ್ಲಿ ಭಾಗವಹಿಸಿಲ್ಲ. ಅಂದು ನಾನು ನನ್ನ ಪತಿಯೊಂದಿಗೆ ಬೆಂಗಳೂರಿನಲ್ಲಿದ್ದೆ. ಈ ಕುರಿತು ಯಾವುದೇ ತನಿಖೆಗೆ ಸಿದ್ದವಿದ್ದೇನೆ. ಆದರೆ ಪೊಲೀಸರು ತನಿಖೆ ಮಾಡುತ್ತಿಲ್ಲ ಏಕೆ? ನಾನು ದೇವರ ಭಕ್ತೆಯಾಗಿದ್ದು, ಯಾವುದೇ ಕಾರಣಕ್ಕೂ ದೇವರಿಗೆ ಅವಹೇಳನ ಮಾಡುವ ಹೆಣ್ಣುಮಗಳಲ್ಲ. ಶ್ರೀರಾಮ ಸೀತೆ, ಪುತ್ತೂರು ಮಹಾಲಿಂಗೇಶ್ವರ ದೇವರ ಸಹಿತ ಎಲ್ಲಾ ದೇವರುಗಳನ್ನು ನಂಬುವ ಹಾಗೂ ಹಿಂದೂ ಸಂಪ್ರದಾಯ-ಧಾರ್ಮಿಕ ಆಚರಣೆಗಳನ್ನು ಪಾಲಿಸುವ ಮಹಿಳೆಯಾಗಿದ್ದೇನೆ. ನಾನು ಹಿಂದು ಧರ್ಮೀಯಳು ಹೌದೋ, ಅಲ್ಲವೋ ಅನ್ನುವುದಕ್ಕೆ ಯಾವುದೊ ಯುಟ್ಯೂಬ್ ಚಾನೆಲ್ ಅಥವಾ ಯಾವುದೇ ಸಂಘಟನೆಗಳ ಸರ್ಟಿಫಿಕೇಟ್ ಬೇಕಾಗಿಲ್ಲ ಎಂದು ಅವರು ಕಿಡಿಕಾರಿದ್ದಾರೆ.

ಕ್ಲಬ್ ಹೌಸ್‌ನಲ್ಲಿ ಹಿಂದೆ ನಡೆದ ಚರ್ಚೆಯನ್ನು ತಿರುಚಿ, ವಿಡಿಯೋ ಎಡಿಟ್ ಮಾಡಿ ಪ್ರಸಾರ ಮಾಡಿದ ವಿಕ್ರಮ ಯುಟ್ಯೂಬ್ ಚಾನೆಲ್‌ ಮತ್ತು ನಿರೂಪಕಿಯ ವಿರುದ್ದ ಪೊಲೀಸರಿಗೆ ದೂರು ನೀಡಿದ್ದೇನೆ. ನನ್ನ ಮನೆ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳ ವಿರುದ್ಧ ದೂರು ನೀಡಿದ್ದೇನೆ. ಆದರೆ ಪೊಲೀಸರು ಆರೋಪಿಗಳನ್ನು ಬಂಧಿಸುವ ಬದಲು ಸುಮ್ಮನಿದ್ದಾರೆ. ನನಗೆ 48 ಗಂಟೆಯೊಳಗೆ ನ್ಯಾಯ ಸಿಗದಿದ್ದರೆ ನನ್ನನ್ನು ಬಂಧಿಸಿ ಎಂದು ಪೊಲೀಸ್ ಠಾಣೆ ಎದುರು ಧರಣಿ ಕೂರುತ್ತೇನೆ. ಜಾಮೀನು ಕೂಡ ಪಡೆಯುವುದಿಲ್ಲ. ಇಡೀ ಪ್ರಕರಣದ ಸಮರ್ಪಕ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಹೋರಾಡುತ್ತೇನೆ ಎಂದರು.

ನಾನು ಅಧರ್ಮಿ ಅಲ್ಲವೇ ಅಲ್ಲ. ಅದೇ ರೀತಿ ನಾನು ಹೆಮ್ಮೆಯ ಕಾಂಗ್ರೆಸಿಗಳು ಸಹ ಹೌದು. ಸಮಾಜದಲ್ಲಿ ಸಮಾನತೆಗಾಗಿ ಹೋರಾಡುತ್ತೇನೆ. ಆದರೆ ಬಿಜೆಪಿ ಧರ್ಮದ ಹೆಸರಲ್ಲಿ ಅಧರ್ಮ ಮಾಡುತ್ತಿದೆ. ಬಿಜೆಪಿ ಓಟು ಗಿಟ್ಟಿಸುವ ನಿಟ್ಟಿನಲ್ಲಿ ಹಿಂದೂಪರ ಸಂಘಟನೆಗಳನ್ನು ನನ್ನ ವಿರುದ್ಧ ಎತ್ತಿಕಟ್ಟಿದೆ ಎಂದು ಕಿಡಿಕಾರಿದರು.

ಇನ್ನು ನಾನು ಕ್ಷಮೆಯಾಚಿಸಬೇಕು ಎಂದು ಶಾಸಕರು ಆಗ್ರಹಿಸಿದ್ದಾರೆ. ತಪ್ಪು ಮಾಡಿಲ್ಲದ ನಾನ್ಯಾಕೆ ಕ್ಷಮೆ ಕೇಳಬೇಕು? ತನ್ನ ಪಟಲಾಂ ಬಿಟ್ಟು ಮಹಿಳೆಯ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿ, ನಾನು ನಿಧನ ಹೊಂದಿದ್ದೇನೆ ಎಂದು ಬ್ಯಾನರ್ ಹಾಕಿ ಕ್ಷೇತ್ರದ ವ್ಯಾಪ್ತಿಯ ಮಹಿಳೆಯೊಬ್ಬಳ ತೇಜೋವಧೆ ಮಾಡುತ್ತಿರುವಾಗ ಸೂಕ್ತ ಭದ್ರತೆ ಒದಗಿಸದ ಶಾಸಕರೇ ಕ್ಷಮೆ ಯಾಚಿಸಬೇಕು. ನಾನು ಯಾವುದೇ ದೇವರಿಗೆ ಅವಹೇಳನ ಮಾಡಿಲ್ಲ. ನನಗೆ ದೇವರ ಬೆಂಬಲ ಇದೆ. ಶ್ರೀರಾಮಚಂದ್ರನೇ ನನ್ನನ್ನು ರಕ್ಷಿಸುತ್ತಾನೆ ಎಂದರು.

ಇದನ್ನೂ ಓದಿ: ಬೆಂಗಳೂರು: ವಲಸೆ ಕಾರ್ಮಿಕರ ಮೇಲೆ ಪೊಲೀಸ್ ದೌರ್ಜನ್ಯ; ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹಿಂದೂ ದೇವತೆಗಳಾದ ಶ್ರೀರಾಮ,ಸೀತೆ,ಹನುಮಂತ ಇವರುಗಳ ಬಗ್ಗೆ ಹೀಯಾಳಿಸಿದ ಇಂತ ಬೇವರ್ಸಿ ಹಂದಿಗಳನ್ನು ಸಿಕ್ಕ ಲ್ಲಿ ಗುಂಡುಹಿಟ್ಟು ಕೊಲ್ಲಬೇಕಿದೆ ,ಗುಲಾಮರ ತಳಿಗಳಿಂದ ಮಾತ್ರ ಇಂತ ಹೇಳಿಕೆಗಳು ಬರಲು ಸಾಧ್ಯ

  2. ಶೈಲಜಾ ಅಮರನಾಥ್ ನಿಮ್ಮ ನ್ಯಾಯಯುತ ಹೆಜ್ಜೆಗೆ ನಮ್ಮ ಬೆಂಬಲವಿದೆ , ರಾಮ ಸೀತೆ ಹನುಮಂತಪ್ಪ ರನ್ನು ಯಾರಿಗೂ ಸ್ವಂತಕ್ಕೆ ಬಿಟ್ಟು ಕೊಟ್ಟಿಲ್ಲ ,ಈ ದೇಶದ ಜನರ ನಡೆನುಡಿಗಳಲ್ಲಿ ಬೆರೆತುಹೋಗಿದ್ದಾರೆ .

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...