Homeರಾಷ್ಟ್ರೀಯ‘ಸೇನೆ ಸೇರುವುದು ಉದ್ಯೋಗಕ್ಕಾಗಿ ಅಲ್ಲ’: ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ

‘ಸೇನೆ ಸೇರುವುದು ಉದ್ಯೋಗಕ್ಕಾಗಿ ಅಲ್ಲ’: ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ

ದೇಶದ ಪ್ರಸ್ತುತ ಪರಿಸ್ಥಿತಿಯು ಪ್ರತಿ ಖಾಲಿ ಹುದ್ದೆಗೆ 50-60 ಜನರು ಅರ್ಜಿ ಸಲ್ಲಿಸುತ್ತಾರೆ ಎಂದು ಸೇನಾ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾದ ಅವರು ಹೇಳಿದ್ದಾರೆ

- Advertisement -
- Advertisement -

ಅಗ್ನಿವೀರ್‌ಗಳು ಶೌರ್ಯ ಪ್ರಶಸ್ತಿಗಳಿಗೆ ಅರ್ಹರಾಗಿರುತ್ತಾರೆ ಎಂದು ಸೇನಾ ವ್ಯವಹಾರಗಳ ಇಲಾಖೆ ತಿಳಿಸಿದೆ. ಅಲ್ಪಾವಧಿಯ ಸೇನಾ ನೇಮಕಾತಿ ಯೋಜನೆಯಾದ ಅಗ್ನಿಪಥ್‌‌ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳನ್ನು ಉದ್ದೇಶಿಸಿ ಮಾತನಾಡಿದ ಹೆಚ್ಚುವರಿ ಕಾರ್ಯದರ್ಶಿ ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ, ದೇಶಭಕ್ತಿ ಅಥವಾ ಸೈನ್ಯದಲ್ಲಿ ಕೆಲಸ ಮಾಡುವುದು ಮೋಹಕ್ಕಾಗಿ ಹೊರತು ಉದ್ಯೋಗಕ್ಕಾಗಿ ಅಲ್ಲ ಎಂದು ಅವರು ಹೇಳಿದ್ದಾರೆ.

ಸೇನಾ ವ್ಯವಹಾರಗಳ ಇಲಾಖೆಯು ಹಲವು ದೇಶಗಳೊಂದಿಗೆ 80-100 ದ್ವಿಪಕ್ಷೀಯ ವ್ಯಾಯಾಮಗಳಲ್ಲಿ ತೊಡಗಿದೆ ಎಂದು ಅವರು ಹೇಳಿದ್ದು, ಸೈನಿಕರ ಸರಾಸರಿ ವಯಸ್ಸು 26-27 ಎಂಬ ಕಲ್ಪನೆಯು ಇದರಿಂದ ಬಂದಿದೆ ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿ ಸರ್ಕಾರವು ಅಗ್ನಿಪಥ್ ಯೋಜನೆ ಘೋಷಣೆ ಮಾಡಿದ ನಂತರ ಅದರ ವಿರುದ್ಧ ವ್ಯಾಪಕ ಪ್ರತಿಭಟನೆಗಳು ಮತ್ತು ಹಿಂಸಾತ್ಮಕ ಗಲಭೆಗಳು ದೇಶದಾದ್ಯಂತ ನಡೆಯುತ್ತಿವೆ. ಪ್ರತಿಭಟನೆಗಳಿಂದಾಗಿ ಸರ್ಕಾರವು ವಯೋಮಿತಿಯಲ್ಲಿ ರಿಯಾಯಿತಿಗಳನ್ನು ಘೋಷಿಸಿದೆ. ಆದರೆ ಸೇನಾ ಉದ್ಯೋಗಾಕಾಂಕ್ಷಿಗಳು ಅಲ್ಪಾವಧಿ ನೇಮಕಾತಿಯನ್ನು ಒಪ್ಪಿಕೊಳ್ಳುತ್ತಿಲ್ಲ.

ಇದನ್ನೂ ಓದಿ: ಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ಹೊಸ ಯೋಜನೆಯ ಪ್ರಕಾರ, ವೈದ್ಯಕೀಯ ಶಾಖೆಗಳಲ್ಲಿರುವವರನ್ನು ಹೊರತುಪಡಿಸಿ ಉಳಿದ ಎಲ್ಲಾ ಪಡೆಗಳನ್ನು ಸೇರಲು ಅಗ್ನಿಪಥ್ ಒಂದೇ ದಾರಿಯಾಗಿದೆ.

“ದೇಶದ ಪ್ರಸ್ತುತ ಪರಿಸ್ಥಿತಿಯು ಪ್ರತಿ ಖಾಲಿ ಹುದ್ದೆಗೆ 50-60 ಜನರು ಅರ್ಜಿ ಸಲ್ಲಿಸುತ್ತಾರೆ, ಆದರೆ ಒಬ್ಬರನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ” ಎಂದು ಲೆಫ್ಟಿನೆಂಟ್ ಜನರಲ್ ಪುರಿ ಅವರು ಹೇಳಿದ್ದಾರೆ.

“ನಮಗೆ ದೇಶಕ್ಕೆ ಉತ್ತಮ ಅಭ್ಯರ್ಥಿ ಬೇಕು. ಆಯ್ಕೆ ಪ್ರಕ್ರಿಯೆಯು ಪಾರದರ್ಶಕ, ನ್ಯಾಯೋಚಿತ, ವಸ್ತುನಿಷ್ಠ ಮತ್ತು ಕೇಂದ್ರೀಯವಾಗಿ ನಿರ್ವಹಿಸಲ್ಪಡುತ್ತದೆ. ಸೈನಿಕರು ಭಾರತದ ದೊಡ್ಡ ಆಸ್ತಿಯಾಗಿದ್ದು, ನಾವು ಮಾಡುವ ಯಾವುದೇ ವಿಷಯವು ದೇಶದ ರಕ್ಷಣೆಗಾಗಿ” ಎಂದು ಅವರು ತಿಳಿಸಿದ್ದಾರೆ, ANI ವರದಿ ಮಾಡಿದೆ.

ಲೆಫ್ಟಿನೆಂಟ್‌ ಜನರಲ್ ಬನ್ಸಿ ಪೊನಪ್ಪ ಇದೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಂಪೂರ್ಣ ನೇಮಕಾತಿ ವೇಳಾಪಟ್ಟಿ ಸಿದ್ಧವಾಗಿದೆ. ಅಗ್ನಿಪಥ್ ಯೋಜನೆಗೆ ನೇಮಕಾತಿ ಅಧಿಸೂಚನೆಯನ್ನು ಜಾಯಿನ್ ಇಂಡಿಯನ್ ಆರ್ಮಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಅಗ್ನಿಪಥ ಯೋಜನೆ: ನಿರ್ಧಾರ ಕೈಗೊಳ್ಳುವ ಮೊದಲು ನಮ್ಮ ಮಾತನ್ನೂ ಕೇಳಿ- ಸುಪ್ರೀಂಗೆ ಕೇಂದ್ರದ ಮನವಿ

ಭಾರತೀಯ ರಕ್ಷಣಾ ಸೇವೆಗಳಾದ ಭಾರತೀಯ ಸೇನೆ, ಭಾರತೀಯ ನೌಕಾಪಡೆ ಮತ್ತು ಭಾರತೀಯ ವಾಯುಪಡೆಯ ಮೂವರು ಮುಖ್ಯಸ್ಥರು ಶುಕ್ರವಾರದಂದು ಕೇಂದ್ರ ಸರ್ಕಾರದ ಹೊಸ ಯೋಜನೆಯನ್ನು ಬೆಂಬಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...