Homeಅಂಕಣಗಳುಆಪರೇಷನ್ ಕಮಲಕ್ಕೆ ಬಲಿಯಾಗಲಿದೆಯೇ ಮಹಾ ವಿಕಾಸ್ ಅಘಾಡಿ ಸರ್ಕಾರ?

ಆಪರೇಷನ್ ಕಮಲಕ್ಕೆ ಬಲಿಯಾಗಲಿದೆಯೇ ಮಹಾ ವಿಕಾಸ್ ಅಘಾಡಿ ಸರ್ಕಾರ?

- Advertisement -
- Advertisement -

ದೇಶದಾದ್ಯಂತ ವಿರೋಧ ಪಕ್ಷಗಳನ್ನು ಕಳ್ಳ ದಾರಿಯ ಮೂಲಕ ನಿರ್ನಾಮ ಮಾಡುವ ತನ್ನ ಕೆಲಸದಿಂದ ಎಂತಹ ಗಂಭೀರ ಪರಿಣಾಮಗಳು ಉಂಟಾದರೂ ಬಿಜೆಪಿ ಪಕ್ಷ ಅದರಿಂದ ಸಣ್ಣ ಪಾಠವನ್ನೂ ಕಲಿತಂತಿಲ್ಲ. ಕೆಲವು ದಿನಗಳ ಹಿಂದೆ ತನ್ನ ವಕ್ತಾರೆ ಟಿವಿ ಶೋವೊಂದರಲ್ಲಿ ಮಾಡಿದ ಒಂದು ದ್ವೇಷಪೂರಿತ ಕಾಮೆಂಟ್‌ಗೆ ಹಲವು ರಾಷ್ಟ್ರಗಳು ಭಾರತಕ್ಕೆ ’ವಾರ್ನಿಂಗ್’ ಕೊಡುವ ರೀತಿಯಲ್ಲಿ ಮಾತನಾಡಿದಾಗ, ’ಇದು ದೇಶದ ಆಂತರಿಕ ವಿಚಾರ, ಸಾರ್ವಭೌಮ ರಾಷ್ಟ್ರವೊಂದರ ಸಮಸ್ಯೆಗಳಲ್ಲಿ ಮೂಗು ತೂರಿಸುವ ಅವಶ್ಯಕತೆ ಇಲ್ಲ’ ಎಂದು ಕೇಂದ್ರ ಬಿಜೆಪಿ ಸರ್ಕಾರದ ಜೊತೆಗೆ ನಿಲ್ಲಲು ಯಾವುದೇ ಅನ್ಯ ಪಕ್ಷ ಮುಂದೆ ಬರಲಿಲ್ಲ. ಅದರ ಮಿತ್ರ ಪಕ್ಷಗಳೂ ಕೂಡ ಉಸಿರೆತ್ತಲಿಲ್ಲ. ಸದಾ ದ್ವೇಷದ, ಪ್ರತೀಕಾರದ ಭಾಷೆಯನ್ನಾಡುತ್ತಾ ತನ್ನ ವಿರೋಧಿ ಪಕ್ಷಗಳೇಕೆ ತನ್ನ ಮಿತ್ರ ಪಕ್ಷಗಳನ್ನೂ ಜೊತೆಗೆ ಕೊಂಡೊಯ್ಯುವ ಪ್ರಾಮಾಣಿಕತೆಯನ್ನು ತೋರದ ಪಕ್ಷ ಬಿಜೆಪಿ. ಇದೇ ಕಾರಣಕ್ಕೆ ದೀರ್ಘ ಕಾಲದ ಸಂಗಾತಿಯಾಗಿದ್ದ ಶಿವಸೇನೆ 2019ರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವಾಗಿ ಬಿಜೆಪಿ ಜೊತೆಗೆ ಸೆಣೆಸಿದ್ದರೂ, ಚುನಾವಣೆಯ ನಂತರ ಎನ್‌ಡಿಎಯಿಂದ ದೂರವಾಗಿ ಕಾಂಗ್ರೆಸ್ ಹಾಗೂ ಶರದ್ ಪವಾರ್ ಅವರ ಎನ್‌ಸಿಪಿಯೊಂದಿಗೆ ಎಂವಿಎ (ಮಹಾ ವಿಕಾಸ್ ಅಘಾಡಿ) ಮೈತ್ರಿಕೂಟ ರಚಿಸಿಕೊಂಡು, ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಯಾಗಿದ್ದರು.

ಅಂದಿನಿಂದಲೂ ಎಂವಿಎ ಸರ್ಕಾರವನ್ನು ಒಂದಲ್ಲ ಒಂದು ರೀತಿಯಲ್ಲಿ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದರೂ ಸಫಲವಾಗಿರಲಿಲ್ಲ. ಸೈದ್ಧಾಂತಿಕವಾಗಿ ಒಂದೇ ಗರಡಿಯಲ್ಲಿ ಬಿಜೆಪಿ ಮತ್ತು ಶಿವಸೇನೆ ಎರಡೂ ಪಕ್ಷಗಳು ಪಳಗಿದ್ದರೂ, ಪ್ರಾದೇಶಿಕ ಅಸ್ಮಿತೆ ಮತ್ತು ಮರಾಠಿ ಗರ್ವ ಶಿವಸೇನೆಗೆ ವಿಶಿಷ್ಟವಾದದ್ದು. ಆ ನಿಟ್ಟಿನಲ್ಲಿ ತೀವ್ರ ಕೇಂದ್ರೀಕರಣದ ಮತ್ತು ರಾಜ್ಯಗಳ ಅಧಿಕಾರವನ್ನು ಕಸಿಯುವ ಬಿಜೆಪಿ ಸಿದ್ಧಾಂತದ ಜೊತೆಗೆ ಸಣ್ಣ ಮಟ್ಟದ ಭಿನ್ನಮತವನ್ನು ಉಳಿಸಿಕೊಂಡ ಪಕ್ಷ ಅದು. ಆದರೆ ಎರಡೂ ಪಕ್ಷಗಳು ಸಾಮಾನ್ಯ ತಳಹದಿಯಲ್ಲಿ ಹಂಚಿಕೊಂಡಿದ್ದ ಹಿಂದುತ್ವ ಸಿದ್ಧಾಂತದ ಕಾರಣಕ್ಕೆ, ಶಿವಸೇನೆಯ ಹಲವು ಶಾಸಕರಿಗೆ ’ಅಕ್ಕಿ ಮೇಲೆ ಆಸೆ, ನಂಟನ ಮೇಲೆ ಪ್ರೀತಿ’ ಎಂಬಂತಾಗಿತ್ತು. ಈ ಸಂಗತಿಯನ್ನು ಬಳಸಿಕೊಂಡು ಯಾವ ದಾರಿ ಹಿಡಿದರೂ ಸರಿ ಅಧಿಕಾರ ಹಿಡಿಯದೆ ಬಿಡುವುದಿಲ್ಲ ಎಂದು ಕಾದಿದ್ದ ಬಿಜೆಪಿಗೆ, ಜೂನ್ ನಾಲ್ಕನೇ ವಾರದ ಮಂಗಳವಾರ ಕಾಲ ಕೂಡಿಬಂದಿದೆ ಎಂಬಂತಾಗಿದೆ. ಸಂಘ ಪರಿವಾರದ ಜೊತೆಗೆ ನಂಟು ಬೆಳೆಸಿಕೊಂಡಿರುವ ಮಾರಿಕೊಂಡ ಮಾಧ್ಯಮಗಳು ತಾವೇ ಜಗತ್ತು ಗೆದ್ದವರಂತೆ ಆಗಲೇ ಸಂಭ್ರಮಿಸಲು ಆರಂಭಿಸಿವೆ.

ಸೋಮವಾರ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಐದು ಸ್ಥಾನಗಳನ್ನು ಗೆದ್ದಿತ್ತು. ವಿಧಾನಸಭೆಯಲ್ಲಿ ಬಿಜೆಪಿಯ ಸಂಖ್ಯಾಬಲ 106 ಇದ್ದು ಲೆಕ್ಕಾಚಾರದ ಪ್ರಕಾರ ನಾಲ್ಕು ಸ್ಥಾನಗಳನ್ನಷ್ಟೇ ಗೆಲ್ಲಬಹುದಿತ್ತು. ಕೆಲವು ಸ್ವತಂತ್ರ ಶಾಸಕರಲ್ಲದೆ, ಶಿವಸೇನೆಯ ಕೆಲವು ಶಾಸಕರೂ ಅಡ್ಡ ಮತದಾನ ಮಾಡಿರುವ ಶಂಕೆ ಇದರಿಂದ ವ್ಯಕ್ತವಾಗಿತ್ತು. ಎಂವಿಎ ತಾನು ನಿಲ್ಲಿಸಿದ್ದ ಆರು ಅಭ್ಯರ್ಥಿಗಳಲ್ಲಿ ಒಬ್ಬರು ಸೋತಿದ್ದರು. ಸಣ್ಣ ಪುಟ್ಟ ಪಕ್ಷಗಳು ಮತ್ತು ಸ್ವತಂತ್ರ ಶಾಸಕನ್ನೂ ಸೇರಿಸಿ 169 ಶಾಸಕರ ಬೆಂಬಲವನ್ನು ಪ್ರತಿಪಾದಿಸುವ ಎಂವಿಎಗೆ ಈ ಆಘಾತದ ಜೊತೆಗೆ ಮುಂದಿನ ದಿನ ಸೂರತ್‌ನ ಐಶಾರಾಮಿ ಹೋಟೆಲ್‌ನಲ್ಲಿ ಶಿವಸೇನೆಯ ಸುಮಾರು 30 ಶಾಸಕರು, ಆ ಪಕ್ಷದ ಮುಖಂಡ ಏಕನಾಥ ಶಿಂಧೆ ಜೊತೆಗೆ ಬಿಡಾರ ಹೂಡಿ, ಬಿಜೆಪಿ ಬೆಂಬಲಕ್ಕೆ ನಿಂತಿರುವ ಸುದ್ದಿ ಬರಸಿಡಿಲಿನಿಂತೆ ಬಂದಪ್ಪಳಿಸಿತು. ಅಲ್ಲಿಂದ ರಾತ್ರೋರಾತ್ರಿ ಬಿಜೆಪಿ ಆಡಳಿತದ ಅಸ್ಸಾಂನ ಗೌಹಾತಿಗೆ ಹಾರಿರುವ ಬಂಡಾಯ ಶಾಸಕರು ತಮ್ಮ ಸಂಖ್ಯಾಬಲವನ್ನು 46 ಎಂದು ಹೇಳಿಕೊಂಡಿದ್ದಾರೆ. 287 ಬಲಾಬಲದ ವಿಧಾನಸಭೆಯಲ್ಲಿ 144 ಮ್ಯಾಜಿಕ್ ಸಂಖ್ಯೆ (ಒಬ್ಬ ಶಿವಸೇನೆಯ ಶಾಸಕರು ತೀರಿಕೊಂಡಿದ್ದಾರೆ) ಆಗಿದ್ದರೂ ವಿಶ್ವಾಸಮತ ನಿರ್ಣಯಕ್ಕೆ ರಾಜ್ಯಪಾಲರು ನಿರ್ದೇಶಿಸಿದರೆ ಸರ್ಕಾರದ ಗತಿ ಏನಾಗುತ್ತದೆಂದು ಎಲ್ಲರಿಗೂ ತಿಳಿದಿದ್ದೆ.

ಬಿಜೆಪಿ ತನ್ನ ಎಂದಿನ ಚಾಳಿಯಂತೆ ಪ್ರತಿ ಪಕ್ಷಗಳ ಶಾಸಕರನ್ನು ಸೆಳೆಯುವ ಆಪರೇಷನ್ ಕಮಲಕ್ಕೆ ಮುನ್ನುಗ್ಗಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. 2015ರಲ್ಲಿ ಆರ್‌ಜೆಡಿ ಜೊತೆಗೂಡಿ ಸರ್ಕಾರ ರಚಿಸಿದ್ದ ಜೆಡಿಯುವಿನ ನಿತೀಶ್ ಕುಮಾರ್ ಅವರನ್ನು 2017ರಲ್ಲಿ ಅಕ್ರಮವಾಗಿ ಸೆಳೆದು ಅವರ ಜತೆಗೆ ಬಿಜೆಪಿ ಸರ್ಕಾರ ರಚಿಸಿತ್ತು. ಜಯಲಲಿತಾ ಅವರ ನಿಧನದ ನಂತರ ತಮಿಳುನಾಡಿನ ಎಐಎಡಿಎಂಕೆ ಸರ್ಕಾರವನ್ನು ಆ ರಾಜ್ಯದಲ್ಲಿ ನೆಲೆಯೇ ಇಲ್ಲದ ಬಿಜೆಪಿ ತನ್ನ ತೆಕ್ಕೆಯಲ್ಲಿಟ್ಟುಕೊಂಡು ಆಡಳಿತ ನಡೆಸಿತ್ತು. ಕರ್ನಾಟಕದಲ್ಲಿ ಆಪರೇಶನ್ ಕಮಲದಿಂದ ಜೆಡಿಎಸ್-ಕಾಂಗ್ರೆಸ್ ಸರ್ಕಾರವನ್ನು ಬೀಳಿಸಿತು. (ಈ ಹಿಂದಿನ ಅವಧಿಯಲ್ಲಿ ಆದ ಆಪರೇಷನ್ ಕಮಲ ಬೇರೆಯದ್ದು!) ಮಧ್ಯಪ್ರದೇಶದಲ್ಲಿ ಆಮಿಷಗಳನ್ನು ಒಡ್ಡಿ ಕಾಂಗ್ರೆಸ್ ಶಾಸಕರನ್ನು ಸೆಳೆದು ಕಮಲನಾಥ್ ಸರ್ಕಾರವನ್ನು ಮುಳುಗಿಸಿತ್ತು. ಗೋವಾ, ಮೇಘಾಲಯ, ಮಣಿಪುರ, ಅರುಣಾಚಲ ಪ್ರದೇಶ ಹೀಗೆ ದೇಶದ ಉದ್ದಗಲಕ್ಕೆ ಒಂದಲ್ಲ ಒಂದು ಕುತಂತ್ರ ಬಳಸಿ ಅಧಿಕಾರ ಹಿಡಿಯುವುದನ್ನು ಕರಗತ ಮಾಡಿಕೊಂಡಿರುವ ಬಿಜೆಪಿ ಮಹಾರಾಷ್ಟ್ರದಲ್ಲಿಯೂ ತನ್ನ ದಾಳವನ್ನು ಈಗ ಪರಿಣಾಮಕಾರಿಯಾಗಿ ಬೀಸಿದೆ. ಅಲ್ಲದೆ ತನ್ನ ಶಾಸಕರನ್ನು ಶಿವಸೇನೆ ಸೆಳೆಯದಂತೆ ನೋಡಿಕೊಳ್ಳಲು ಅವರನ್ನೆಲ್ಲಾ ಒಟ್ಟಿಗೆ ಕೂಡಿಹಾಕಿಕೊಂಡು ರೆಸಾರ್ಟ್ ಯಾತ್ರೆ ಬೆಳೆಸಿದೆ. ಕಾಂಗ್ರೆಸ್ ಸೇರಿದಂತೆ ಬೇರೆ ಪಕ್ಷಗಳೂ ತಮ್ಮ ಶಾಸಕರನ್ನು ಜೋಪಾನ ಮಾಡಿಕೊಳ್ಳಲು ದಾರಿ ಬೆಳೆಸಿವೆ.

ಒಂದು ಪಕ್ಷ, ಪಕ್ಷಾಂತರ ಕಾಯ್ದೆ ಅನ್ವಯವಾಗದೆ ಶಾಸಕರನ್ನು ಅಸಿಂಧುಗೊಳಿಸದಂತೆ ಆಟ ಆಡಬೇಕಾದರೆ ಶಿವಸೇನೆಯ ಮೂರರ ಎರಡನೇ ಭಾಗದಷ್ಟು ಶಾಸಕರು ಏಕನಾಥ ಶಿಂಧೆ ಜೊತೆಗೆ ಹೋಗಬೇಕಾಗುತ್ತದೆ.
ಅಂದರೆ ಶಿವಸೇನೆಯ 55 ಶಾಸಕರಲ್ಲಿ 37 ಜನ ಪಕ್ಷದಿಂದ ಹೊರಹೋಗಬೇಕಾಗುತ್ತದೆ. ಈಗಾಗಲೇ 40 ಶಿವಸೇನೆ ಶಾಸಕರು ಅವರ ಜೊತೆ ಇದ್ದಾರೆ ಎನ್ನಲಾಗುತ್ತಿದೆ. ಈಗ ಅವರು ಪಕ್ಷಾಂತರ ನಿಷೇಧ ಕಾಯ್ದೆಯಿಂದ ಬಚಾವ್ ಆಗಿ ಸ್ವತಂತ್ರ ಪಕ್ಷ ಘೋಷಿಸಬಹುದು. ಹಣ, ಇಡಿ-ಸಿಬಿಐ ಮುಂತಾದ ಏಜೆನ್ಸಿಗಳ ಅಧಿಕಾರವನ್ನು ಮನಸೋಇಚ್ಛೆ ಬಳಸಿದ್ದರಿಂದ ಇದು ಸಾಧ್ಯಾವಾಯಿತೆ? ಈಗಿನ ಸದ್ಯದ ಸುದ್ದಿಗಳಂತೆ ಹಲವು ಶಿವಸೇನೆ ಶಾಸಕರು ವಿಶ್ವಾಸಮತ ಸಂದರ್ಭದಲ್ಲಿ ವಿಪ್ ಉಲ್ಲಂಘಿಸಿ ಬಿಜೆಪಿ ಬೆಂಬಲಿಸಿದರೆ ಮತ್ತು ಅವರ ಶಾಸಕ ಸ್ಥಾನ ಅಸಿಂಧುವಾದರೆ ಕುಸಿಯುವ ವಿಧಾನಸಭಾ ಬಲಾಬಲದಲ್ಲಿ ಬಿಜೆಪಿಗೂ ಸರ್ಕಾರ ರಚಿಸುವುದು ಸುಲಭವೇನಲ್ಲ. ಸ್ವತಂತ್ರ ಶಾಸಕರ ಬೆಂಬಲ ತಪ್ಪಿ ಮತ್ತು ಕಾಂಗ್ರೆಸ್ ಹಾಗೂ ಎನ್‌ಸಿಪಿಯ ಒಂದಷ್ಟು ಶಾಸಕರು ಪಕ್ಷಾಂತರ ಮಾಡಿ ಶಿವಸೇನೆ-ಎಂವಿಎ ಅಧಿಕಾರ ಕಳೆದುಕೊಂಡರೆ ರಾಷ್ಟ್ರಪತಿ ಆಳ್ವಿಕೆ ಮಹಾರಾಷ್ಟ್ರಕ್ಕೆ ಅನಿವಾರ್ಯವಾಗಬಹುದು. ಒಟ್ಟಿನಲ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡು, ಜನರು ಕೊಟ್ಟ ಮ್ಯಾಂಡೇಟ್‌ಗೆ ಕಿಂಚಿತ್ತೂ ಗೌರವ ನೀಡದೆ ಹಿಂಬಾಗಿಲಿನಿಂದಾದರೂ ಅಧಿಕಾರ ಹಿಡಿಯಲು ಹವಣಿಸುತ್ತಿರುವ ಬಿಜೆಪಿಗೆ ಈ ಬಾರಿ ’ಗೆಲುವು’ ಒಲಿಯುವುದೇ? ಇದು ಶಿವಸೇನೆಯನ್ನು ಎಲ್ಲಿಗೆ ತಳ್ಳಬಹುದು?
ಒಂದು ಕಡೆ ಅಶಾಂತಿಗೆ ಮತ್ತೊಂದು ಕಡೆ ರಾಜಕೀಯ ಅಸ್ಥಿರತೆಯ ಕಡೆಗೆ ರಾಜ್ಯಗಳನ್ನು ನೂಕಲು ಸದಾ ಸನ್ನದ್ಧವಾಗಿರುವ ಬಿಜೆಪಿಯ ನಿಜ ಬಣ್ಣವನ್ನು ಜನರು ಅರಿತು ಪ್ರಜಾತಾಂತ್ರಿಕವಾಗಿ ಅದಕ್ಕೆ ಪಾಠ ಕಲಿಸಬೇಕಿದೆ.


ಇದನ್ನೂ ಓದಿ: ಮಹಾರಾಷ್ಟ್ರ: ಅಧಿಕಾರಕ್ಕಾಗಿ ನಾನು ಎಂದಿಗೂ ಮೋಸ ಮಾಡುವುದಿಲ್ಲ ಎಂದ ಏಕನಾಥ್‌ ಶಿಂಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೇ.56 ರ ಮೀಸಲಾತಿ ಅನುಸಾರ ನೇಮಕಾತಿ ಅಧಿಸೂಚನೆ ಹೊರಡಿಸಬಾರದು..’; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

"ಚಾಲ್ತಿಯಲ್ಲಿರುವ ಶೇ.50ರ ಮೀಸಲಾತಿಯ ಅನ್ವಯ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ನಡೆಸುವ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ. ಆದರೆ, ಶೇ.56 ಕ್ಕೆ ಮೀಸಲಾತಿ ಹೆಚ್ಚಿಸಿರುವುದರ ಅನುಸಾರ ಹೊಸದಾಗಿ ಅಧಿಸೂಚನೆ ಹೊರಡಿಸಬಾರದು" ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌...

ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾದ ಸರ್ಕಾರ : ವಿದ್ಯಾರ್ಥಿ ಸಂಘಟನೆಗಳಿಂದ ಆಕ್ರೋಶ

ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಎಡ ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿವೆ. ಬುಧವಾರ (ಜ.21) ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಎಐಎಸ್ಎಫ್,...

ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ನಿರಾಕರಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಜನವರಿ 22 ರಿಂದ ನಡೆಯಲಿರುವ ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಲು ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಬುಧವಾರ ನಿರಾಕರಿಸಿದ್ದಾರೆ. ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ನೇತೃತ್ವದ ಉನ್ನತ ಮಟ್ಟದ ನಿಯೋಗವು ಗೆಹ್ಲೋಟ್ ಅವರೊಂದಿಗೆ...

ಒಡಿಶಾ| ಪಾದ್ರಿ ಮೇಲೆ ಗುಂಪು ಹಲ್ಲೆ ನಡೆಸಿ ಅವಮಾನ; ಎರಡು ವಾರವಾದರೂ ಆರೋಪಿಗಳನ್ನು ಬಂಧಿಸದ ಪೊಲೀಸರು

ಒಡಿಶಾದ ಧೆಂಕನಲ್ ಜಿಲ್ಲೆಯಲ್ಲಿ ಬಜರಂಗದಳ ಸದಸ್ಯರಿಂದ ಕ್ರೂರವಾಗಿ ಹಲ್ಲೆಗೊಳಗಾಗಿ ಸಾರ್ವಜನಿಕವಾಗಿ ಅವಮಾನಕ್ಕೆ ಒಳಗಾದ ಕ್ರಿಶ್ಚಿಯನ್ ಪಾದ್ರಿಯೊಬ್ಬರು, ತನ್ನ ಮೇಲೆ ದಾಳಿ ಮಾಡಿದವರನ್ನು ಕ್ಷಮಿಸಲು ನಿರ್ಧರಿಸಿದ್ದಾರೆ. ಘಟನೆ ನಡೆದು ಎರಡು ವಾರಗಳಿಗಿಂತ ಹೆಚ್ಚು ಕಾಲ...

ಕೆನಡಾ: ಸುಲಿಗೆ ಪ್ರಕರಣಗಳಲ್ಲಿ 111 ವಿದೇಶಿ ಪ್ರಜೆಗಳ ಪಾತ್ರದ ಬಗ್ಗೆ ತನಿಖೆ: ಹೆಚ್ಚಿನವರು ಪಂಜಾಬ್ ನಿಂದ ಬಂದ ಭಾರತೀಯರೆಂದು ವರದಿ  

ಚಂಡಿಗ್ರಾ: ಬ್ರಿಟಿಷ್ ಕೊಲಂಬಿಯಾ ಸುಲಿಗೆ ಕಾರ್ಯಪಡೆಯು ಕೆಳ ಮೇನ್‌ಲ್ಯಾಂಡ್‌ನಲ್ಲಿನ ಸಮುದಾಯಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಂಕಿಸಲಾಗಿರುವ 111 ವಿದೇಶಿ ಪ್ರಜೆಗಳ ತನಿಖೆ ನಡೆಸುತ್ತಿದೆ. ಇದರಲ್ಲಿ ಹೆಚ್ಚಿನವರು ಪಂಜಾಬ್‌ನಿಂದ ಬಂದಿರುವ ಭಾರತೀಯ...

ವಿಡಿಯೋ ವೈರಲ್ ಬಳಿಕ ವ್ಯಕ್ತಿ ಆತ್ಮಹತ್ಯೆ ಪ್ರಕರಣ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

ಬಸ್‌ ಪ್ರಯಾಣದ ವೇಳೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆದ ಬಳಿಕ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹಿಳೆಯನ್ನು ಕೇರಳದ ಕೋಝಿಕ್ಕೋಡ್ ಪೊಲೀಸರು ಬಂಧಿಸಿದ್ದಾರೆ. 42 ವರ್ಷದ ಸೇಲ್ಸ್...

ಪ್ರಿಯಕರನೊಂದಿಗೆ ವಾಸಿಸಲು ‘ಸುಳ್ಳು ಗೋಹತ್ಯೆ ಪ್ರಕರಣ’ದಲ್ಲಿ ಗಂಡನನ್ನು ಸಿಲುಕಿಸಿದ ಪತ್ನಿ

ತನ್ನ ಪ್ರಿಯಕರನೊಂದಿಗೆ ವಾಸಿಸಲು ವಿವಾಹಿತ ಮಹಿಳೆಯೊಬ್ಬಳು ಮಾಡಿದ ದುಷ್ಕೃತ್ಯವೊಂದರಲ್ಲಿ ಆಕೆಯ ಪತಿ ಸುಳ್ಳು ಗೋಹತ್ಯೆ ಪ್ರಕರಣಗಳಲ್ಲಿ ಎರಡು ಬಾರಿ ಪೊಲೀಸರಿಂದ ಬಂಧನಕ್ಕೆ ಒಳಗಾಗಬೇಕಾದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಇದೇ ಪ್ರಕರಣದ...

ಎಲ್‌ಐಸಿ ಕಚೇರಿ ಬೆಂಕಿ ಪ್ರಕರಣಕ್ಕೆ ತಿರುವು : ಅಕ್ರಮ ಮುಚ್ಚಿ ಹಾಕಲು ಸಹೋದ್ಯೋಗಿಯಿಂದ ವ್ಯವಸ್ಥಾಪಕಿಯ ಕೊಲೆ ಎಂದ ತನಿಖೆ

ಡಿಸೆಂಬರ್‌ನಲ್ಲಿ ಮಧುರೈನ ಜೀವ ವಿಮಾ ನಿಗಮ (ಎಲ್‌ಐಸಿ) ಕಚೇರಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಹಿರಿಯ ಮಹಿಳಾ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದು, ಆರಂಭದಲ್ಲಿ ನಂಬಿದಂತೆ ಅದು ಆಕಸ್ಮಿಕ ಸಾವಲ್ಲ, ಕೊಲೆ ಎಂದು ತಮಿಳುನಾಡು ಪೊಲೀಸರು ತೀರ್ಮಾನಿಸಿದ್ದಾರೆ....

‘ಅಕ್ರಮ ಗಣಿಗಾರಿಕೆ ಸರಿಪಡಿಸಲಾಗದ ಹಾನಿಗೆ ಕಾರಣವಾಗಬಹುದು’: ಅರಾವಳಿ ಸಮಗ್ರ ಪರೀಕ್ಷೆಗೆ ತಜ್ಞರ ಸಮಿತಿ ರಚಿಸಲು ಸುಪ್ರೀಂ ಸೂಚನೆ

ನವದೆಹಲಿ: ಅಕ್ರಮ ಗಣಿಗಾರಿಕೆಯಿಂದ ಸರಿಪಡಿಸಲಾಗದ ಹಾನಿ ಉಂಟಾಗಬಹುದು ಎಂದು ಗಮನಿಸಿದ ಸುಪ್ರೀಂ ಕೋರ್ಟ್, ಅರಾವಳಿಯಲ್ಲಿ ಗಣಿಗಾರಿಕೆ ಮತ್ತು ಸಂಬಂಧಿತ ಸಮಸ್ಯೆಗಳ ಸಮಗ್ರ ಪರೀಕ್ಷೆಯನ್ನು ಕೈಗೊಳ್ಳಲು ಡೊಮೇನ್ ತಜ್ಞರನ್ನು ಒಳಗೊಂಡ ತಜ್ಞರ ಸಮಿತಿಯನ್ನು ರಚಿಸುವುದಾಗಿ...

ಮೋದಿ ಕಾರ್ಯಕ್ರಮದಲ್ಲಿ ಸಮೋಸ ವಿತರಣೆಗೆ 2 ಕೋಟಿ ರೂ. ಖರ್ಚು : ಬಿಜೆಪಿ ವಿರುದ್ಧ ಕೇಜ್ರಿವಾಲ್ ಆರೋಪ

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ಗುಜರಾತ್‌ನ ಬುಡಕಟ್ಟು ಪ್ರದೇಶಕ್ಕೆ ಭೇಟಿ ನೀಡಿದ ಕಾರ್ಯಕ್ರಮಕ್ಕೆ 50 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್...