Homeಅಂತರಾಷ್ಟ್ರೀಯಹೆಚ್ಚುತ್ತಿರುವ ಅತ್ಯಾಚಾರ: ಪಾಕಿಸ್ತಾನದ ಪಂಜಾಬ್‌ನಲ್ಲಿ ‘ತುರ್ತು ಪರಿಸ್ಥಿತಿ’ ಘೋಷಣೆ

ಹೆಚ್ಚುತ್ತಿರುವ ಅತ್ಯಾಚಾರ: ಪಾಕಿಸ್ತಾನದ ಪಂಜಾಬ್‌ನಲ್ಲಿ ‘ತುರ್ತು ಪರಿಸ್ಥಿತಿ’ ಘೋಷಣೆ

- Advertisement -
- Advertisement -

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ವಿರುದ್ಧ ಲೈಂಗಿಕ ದೌರ್ಜನ್ಯದ ಪ್ರಕರಣಗಳು ತೀವ್ರ ಹೆಚ್ಚಳವಾಗಿರುವುದರಿಂದ ಅಲ್ಲಿ ‘ತುರ್ತು ಪರಿಸ್ಥಿತಿ’ ಘೋಷಿಸಲು ಸರ್ಕಾರ ನಿರ್ಧರಿಸಿದೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಂಜಾಬ್ ಗೃಹ ಸಚಿವ ಅಟ್ಟ ತರಾರ್, ಇಂತಹ ಘಟನೆಗಳು ಹೆಚ್ಚಾಗುತ್ತಿರುವುದು ಸಮಾಜ ಮತ್ತು ಸರ್ಕಾರಿ ಅಧಿಕಾರಿಗಳಿಗೆ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ ಎಂದು ಹೇಳಿದ್ದಾರೆ.

ಪಂಜಾಬ್‌ನಲ್ಲಿ ಪ್ರತಿದಿನ ನಾಲ್ಕೈದು ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿದ್ದು, ಲೈಂಗಿಕ ಕಿರುಕುಳ, ನಿಂದನೆ ಮತ್ತು ಪೀಡನೆ ಪ್ರಕರಣಗಳನ್ನು ಎದುರಿಸಲು ಸರ್ಕಾರ ವಿಶೇಷ ಕ್ರಮಗಳನ್ನು ಪರಿಗಣಿಸುತ್ತಿದೆ ಎಂದು ಅವರು ಹೇಳಿದ್ದಾರೆ ಎಂದು ಜಿಯೋ ನ್ಯೂಸ್‌ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅತ್ಯಾಚಾರ ಪ್ರಕರಣಗಳನ್ನು ಎದುರಿಸಲು, ಆಡಳಿತವು ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ” ಎಂದು ಅವರು ಹೇಳಿದ್ದಾರೆ. ಈ ವಿಚಾರದಲ್ಲಿ ನಾಗರಿಕ ಸಮಾಜ, ಮಹಿಳಾ ಹಕ್ಕುಗಳ ಸಂಘಟನೆಗಳು, ಶಿಕ್ಷಕರು ಮತ್ತು ವಕೀಲರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಸಚಿವರು ಹೇಳಿದ್ದಾರೆ. ಇದಲ್ಲದೆ, ಪೋಷಕರು ತಮ್ಮ ಮಕ್ಕಳಿಗೆ ಸುರಕ್ಷತೆಯ ಮಹತ್ವವನ್ನು ಕಲಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಹೈದ್ರಾಬಾದ್ ಅತ್ಯಾಚಾರ ಪ್ರಕರಣ: ಆರೋಪಿಗಳನ್ನು ವಯಸ್ಕರಂತೆ ಪರಿಗಣಿಸಲು ತೆಲಂಗಾಣ ಪೊಲೀಸರ ಚಿಂತನೆ

ಹಲವಾರು ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ, ಸರ್ಕಾರವು ಅತ್ಯಾಚಾರ ವಿರೋಧಿ ಅಭಿಯಾನವನ್ನು ಪ್ರಾರಂಭಿಸಿದೆ ಮತ್ತು ಶಾಲೆಗಳಲ್ಲಿ ಕಿರುಕುಳದ ಬಗ್ಗೆ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಲಾಗುವುದು ಎಂದು ತರಾರ್ ಹೇಳಿದ್ದಾರೆ.

ಪೋಷಕರು ತಮ್ಮ ಮಕ್ಕಳನ್ನು ಹೇಗೆ ರಕ್ಷಿಸಬೇಕು ಎಂಬುದನ್ನು ಕಲಿಯುವ ಸಮಯ ಇದೀಗ ಬಂದಿದೆ ಎಂದು ಗೃಹ ಸಚಿವರು ಹೇಳಿದ್ದಾರೆ. ಸರ್ಕಾರವು ಡಿಎನ್‌ಎ ಮಾದರಿಗಳ ಸಂಖ್ಯೆಯನ್ನು ತ್ವರಿತ ಆಧಾರದ ಮೇಲೆ ಹೆಚ್ಚಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಪಾಕಿಸ್ತಾನದಾದ್ಯಂತ ಲಿಂಗ ಹಿಂಸೆಯು ತೀವ್ರವಾಗಿ ಹರಡುತ್ತಿದ್ದು, ಅದರ ವಿರುದ್ಧ ಹೋರಾಟವನ್ನೂ ನಡೆಸಲಾಗುತ್ತಿದೆ. ಈ ಸಾಂಕ್ರಾಮಿಕದಿಂದ ದೇಶದಲ್ಲಿ ಹೆಣ್ಣು ಮಕ್ಕಳು ತರಗತಿಳಿಗೆ ಹೋಗುತ್ತಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ರಾಜಸ್ಥಾನ: ಸಚಿವರ ಮಗನ ಮೇಲೆ ಅತ್ಯಾಚಾರ ಆರೋಪ, ಯುವತಿ ಮೇಲೆ ಮಸಿ ದಾಳಿ

ಗ್ಲೋಬಲ್ ಜೆಂಡರ್ ಗ್ಯಾಪ್ ಇಂಡೆಕ್ಸ್ 2021 ರ ಶ್ರೇಯಾಂಕದ ಪ್ರಕಾರ ಪಾಕಿಸ್ತಾನವು 156 ದೇಶಗಳಲ್ಲಿ 153 ನೇ ಸ್ಥಾನದಲ್ಲಿದೆ. ಇದರ ನಂತರದ ಸ್ಥಾನದಲ್ಲಿ ಇರಾಕ್, ಯೆಮೆನ್ ಮತ್ತು ಅಫ್ಘಾನಿಸ್ತಾನವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...