Homeಕರ್ನಾಟಕನಾರಾಯಣ ಗುರುಗಳ ಪಠ್ಯಕ್ಕೆ ಕತ್ತರಿ: ‘ನನಗೆ ಅದು ನೆನಪಾಗುತ್ತಿಲ್ಲ’ ಎಂದ ಪಠ್ಯ ಪುಸ್ತಕ ಸಮಿತಿ ಸದಸ್ಯ...

ನಾರಾಯಣ ಗುರುಗಳ ಪಠ್ಯಕ್ಕೆ ಕತ್ತರಿ: ‘ನನಗೆ ಅದು ನೆನಪಾಗುತ್ತಿಲ್ಲ’ ಎಂದ ಪಠ್ಯ ಪುಸ್ತಕ ಸಮಿತಿ ಸದಸ್ಯ ಡಾ. ಅನಂತಕೃಷ್ಣ ಭಟ್‌

ನಮ್ಮ ವರದಿ ಸಲ್ಲಿಸಿದ್ದು, ನಾನು ಇದಕ್ಕೆಲ್ಲಾ ಉತ್ತರಿಸಲೇ ಬೇಕು ಎಂಬುವುದು ನಿಮ್ಮ ‘ಉದ್ಧಟತನ’ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಹತ್ತನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ, ನಾರಾಯಣ ಗುರುಗಳು ಮತ್ತು ಪೆರಿಯಾರ್‌ ಪಾಠಗಳನ್ನು ಕತ್ತರಿಸಿದ್ದೀರ ಎಂಬ ಪ್ರಶ್ನೆಗೆ, ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ತಕವನ್ನು ಮರು ಪರಿಷ್ಕರಣೆ ಮಾಡಿರುವ ಸಮಿತಿಯ ಸದಸ್ಯ ಡಾ. ಅನಂತಕೃಷ್ಣ ಭಟ್‌ ಪ್ರತಿಕ್ರಿಯಿಸಿ, “ನನಗೆ ಅದು ನೆನಪಾಗುತ್ತಿಲ್ಲ” ಎಂದು ಹೇಳಿದರು.

ರಾಜ್ಯದ ಪಠ್ಯ ಪುಸ್ತಕ ಹಗರಣದ ಮತ್ತಷ್ಟು ಹುಳುಕುಗಳು ಹೊರಬೀಳುತ್ತಿವೆ. ಮಂಗಳವಾರದಂದು ಸುದ್ದಿ ಪೋರ್ಟಾಲ್‌ ‘ಈದಿನ.ಕಾಂ’ ಹೊರಗೆಡವಿದ ಮಾಹಿತಿಯಂತೆ, ಪರಿಷ್ಕರಣೆಗೆ ಸಮಿತಿ ಸದಸ್ಯರು ನೀಡಿದ್ದ ವರದಿ ಧಿಕ್ಕರಿಸಿ, ಸಮಿತಿ ಅಧ್ಯಕ್ಷರಾದ ರೋಹಿತ್ ಚಕ್ರತೀರ್ಥ ಅವರು ರಹಸ್ಯ ತಿದ್ದುಪಡಿ ಮಾಡಿದ್ದಾರೆ ಎಂದು ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಮಂಗಳೂರಿನ ಕೆನರಾ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಉಪನ್ಯಾಸಕರೂ ಆಗಿರುವ ಡಾ. ಅನಂತಕೃಷ್ಣ ಭಟ್‌ ಅವರು, “ಈ ಬಗ್ಗೆಗಿನ ಸುದ್ದಿಯನ್ನು ನಾನು ಇನ್ನೂ ನೋಡಿಲ್ಲ ಹಾಗೂ ಅದರ ವಾಸ್ತವಿಕತೆಯೂ ನನಗೆ ಗೊತ್ತಿಲ್ಲ. ಅಲ್ಲದೆ ಪರಿಷ್ಕೃತ ಪಾಠ ಪುಸ್ತಕಗಳು ನನ್ನ ಕೈಗೆ ಬಂದಿಲ್ಲ” ಎಂದು ತಿಳಿಸಿದ್ದಾರೆ. ವಾಸ್ತವದಲ್ಲಿ 80% ಪಠ್ಯ ಪುಸ್ತಕಗಳನ್ನು ಶಾಲೆಗಳಲ್ಲಿ ಹಂಚಿಕೆ ಮಾಡಿದ್ದಾಗಿ ರಾಜ್ಯದ ಬಿಜೆಪಿ ಸರ್ಕಾರವು ಹೇಳಿಕೊಂಡಿದೆ.

ಡಾ. ಅನಂತಕೃಷ್ಣ ಭಟ್‌ ಅವರು 2014ರಂದು ರಚಿತವಾಗಿದ್ದ ಹತ್ತನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕ ರಚನಾ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಈ ಪಠ್ಯ ಪುಸ್ತಕವನ್ನು ನಂತರದಲ್ಲಿ ಪ್ರೊಫೆಸರ್‌ ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ಪರಿಷ್ಕರಿಸಲಾಗಿತ್ತು. ಆದರೆ ಇದೀಗ ಅದನ್ನು ಮತ್ತೆ ರೋಹಿತ್ ಚಕ್ರತೀರ್ಥ ಅವರ ಅಧ್ಯಕ್ಷತೆಯಲ್ಲಿ ಮರು ಪರಿಷ್ಕರಣೆ ಮಾಡಿಸಲಾಗಿದೆ. ಈ ಸಮಿತಿಯಲ್ಲಿ ಇರುವ ಸದಸ್ಯರಲ್ಲಿ ಅನಂತಕೃಷ್ಣ ಭಟ್ ಅವರೂ ಒಬ್ಬರು.

ಪಠ್ಯ ಪುಸ್ತಕವನ್ನು ಮರು ಪರಿಷ್ಕರಣೆ ಮಾಡಿರುವ ಸಮಿತಿಯ ಯಾವ ಸದಸ್ಯರು ಕೂಡಾ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತಿಲ್ಲ, ಈ ಬಗ್ಗೆ ನಿಮಗೆ ಯಾರಾದರೂ ಬೆದರಿಕೆ ಹಾಕಿದ್ದಾರೆಯೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘‘ಆ ರೀತಿಯಾಗಿ ಏನೂ ಇಲ್ಲ’’ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

ಜನರಿಗಾಗಿ ಸರ್ಕಾರಿ ಸೇವೆಗಳನ್ನು ಮಾಡಿರುವವರು, ಅವುಗಳ ಬಗ್ಗೆ ಸಾರ್ವಜನಿಕರು ಕೇಳುವ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಬೇಕಲ್ಲವೆ ಎಂಬ ಪ್ರಶ್ನೆಗೆ ಅವರು,“ಉತ್ತರಿಸಲೇ ಬೇಕು ಎಂಬುವುದು ನಿಮ್ಮ ‘ಉದ್ಧಟತನ’. ನಾನು ತುಂಬಾ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ” ಎಂದು ಹೇಳಿದ್ದಾರೆ.

ಯಾವುದೇ ಶೈಕ್ಷಣಿಕ ಅರ್ಹತೆಯನ್ನು ಈ ವರೆಗೆ ಬಹಿರಂಗಪಡಿಸದ ವ್ಯಕ್ತಿಯನ್ನು ಪಠ್ಯ ಪುಸ್ತಕ ಪರಿಷ್ಕರಣೆಯ ಅಧ್ಯಕ್ಷರನ್ನಾಗಿ ಮಾಡಿದ್ದು, ಪಠ್ಯದಲ್ಲಿ ತಪ್ಪುಗಳಾಗಿವೆ ಎಂಬ ಆಕ್ಷೇಪಗಳಿಗೆ ವಿದ್ವಾಂಸರುಗಳಾದ ನೀವು ಯಾರೂ ಮಾತನಾಡುತ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, “ಇದಕ್ಕೆ ನಾನು ಏನು ಕಮೆಂಟ್ ಮಾಡಲಿ ಎಂದು ನೀವೇ ಹೇಳಿ. ನಮ್ಮ ಕೆಲಸಗಳನ್ನು ಮಾಡಿ ಮುಗಿಸಿ ನಾವು ಬಂದಿದ್ದೇವೆ. ಇದರ ನಂತರ ನಮ್ಮ ನಡುವೆ ಸಂವಹನ ನಡೆದಿಲ್ಲ. ಸಂವಹನವೇ ನಡೆಯದಿದ್ದರೆ ನಾವು ಏನು ಕಮೆಂಟ್ ಮಾಡಲಿ?” ಎಂದು ಅವರು ಹೇಳಿದ್ದಾರೆ.

“ನಿಜಾ ಹೇಳಬೇಕೆಂದರೆ, ಈ ವರದಿ ಕೊಟ್ಟು ನಾಲ್ಕು ತಿಂಗಳಾಗಿವೆ. ನಾವು ವರದಿ ಕೊಟ್ಟು ಬಂದೆವು. ಅದರ ನಂತರ ನಮ್ಮ ನಡುವೆ ಸಂವಹನ ನಡೆದಿಲ್ಲ. ನನ್ನ ಕೆಲಸವನ್ನು ನಾನು ಪ್ರಾಮಾಣಿಕವಾಗಿ ಮಾಡಿದ್ದೇವೆ. ಅದೂ ಅಲ್ಲದೆ ನಾನು ಮಾಡಿದ್ದು ಹತ್ತನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕವಾಗಿದೆ.” ಎಂದು ಹೇಳಿದರು.

ಅಲ್ಲದೆ, ಪಠ್ಯಪುಸ್ತಕವನ್ನು ಹೇಗೆ ಪರಿಷ್ಕರಣೆ ಮಾಡಬಹುದು ಎಂಬ ವರದಿಯನ್ನಷ್ಟೆ ಕೊಟ್ಟು ಬಂದಿದ್ದೇನೆ ಎಂಬ ಮಾಹಿತಿಯನ್ನು ಅವರು ನೀಡಿದ್ದಾರೆ. “ನಮ್ಮ ಕೆಲಸ ಇಷ್ಟೆ ಇದ್ದಿದ್ದು. ಉಳಿದಿದ್ದು ಸರ್ಕಾರಕ್ಕೆ ಬಿಟ್ಟಿದ್ದು. ಅದನ್ನು ಅವರು ಅಳವಡಿಸಿಕೊಂಡಿದ್ದಾರೆಯೆ ಎಂಬುವುದು ನನಗೆ ಗೊತ್ತಿಲ್ಲ” ಎಂದು ಅವರು ಹೇಳಿದರು.

ಇದನ್ನೂ ಓದಿ: ಪಠ್ಯಪುಸ್ತಕ ರಚನೆಯಲ್ಲಿ ಸಮಿತಿ ಸದಸ್ಯರ ಅಭಿಪ್ರಾಯ ತಿರಸ್ಕರಿಸಿ ಏಕಪಕ್ಷೀಯ ಪಠ್ಯ ರಚಿಸಿದ ಚಕ್ರತೀರ್ಥ!

ನಿಮ್ಮ ಸಮಿತಿಯಿಂದ ಆಗಿರುವ ತಪ್ಪಿಗೆ ನೀವು ಉತ್ತರ ಹೇಳಬೇಕಲ್ಲವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ತಪ್ಪು ಆಗಿಲ್ಲ. ತಪ್ಪು ಎಂದು ಹೇಳುವವರು ಅವುಗಳನ್ನು ಅಧ್ಯಯನ ನಡೆಸಿ ಹೇಳಬೇಕು. ನನ್ನ ದೃಷ್ಟಿಯಲ್ಲಿ ಏನು ಸರಿ ಇದೆಯೋ ಅದನ್ನು ನಾನು ಮಾಡಿದ್ದೇನೆ”  ಎಂದು ತಿಳಿಸಿದರು.

“ಬರಗೂರು ರಾಮಚಂದ್ರಪ್ಪ ಎಲ್ಲವನ್ನೂ ಸತ್ಯನಾಶ ಮಾಡಿ ಹಾಕಿದ್ದಾರೆ. ಆರ್ಯರ ಪಾಠದಲ್ಲಿ, ‘ಸಂಸ್ಕೃತ ಎಂಬ ಭಾಷೆಯಿತ್ತು. ವೇದಗಳು ಸಂಸ್ಕೃತದಲ್ಲಿ ಇತ್ತು’ ಎಂದು ತಪ್ಪಿ ಕೂಡಾ ಹಾಕಿಲ್ಲ. ‘ಸಂಸ್ಕೃತ’ ಎಂಬ ಶಬ್ಧವನ್ನು ಇಡೀ ಪಾಠದಲ್ಲಿ ಉಪಯೋಗ ಮಾಡಿಲ್ಲ. ಅವರಿಗೆ ಭಾರತೀಯತೆಯ ಬಗ್ಗೆ ಅಷ್ಟೊಂದು ವಿರೋಧವಿದೆ.” ಎಂದು ಹೇಳಿದರು.

“ಏನಾಗಿದೆಯೆಂದರೆ, 1947 ರಿಂದ ಇವತ್ತಿನವರೆಗೆ ‘ಜಾತ್ಯಾತೀತ ಸಿದ್ದಾಂತದ ತುಂಬಿಸಬೇಕು’ ಎಂದು ಹೇಳಿ ತಪ್ಪು ದಾರಿಯಲ್ಲಿ ಹೋಗಿ ಈ ರೀತಿಯಲ್ಲಿ ಆಗಿದೆ. ಇನ್ನೊಂದು ವಿಷಯ ಏನೆಂದರೆ, ಈ ರೀತಿ ‘ತಪ್ಪು-ತಪ್ಪು’ ಎಂದು ತೀರ್ಪು ನೀಡಲು ಅವರು ಯಾರು? ಇದನ್ನು ಸುಪ್ರೀಂಕೋರ್ಟ್‌ನಲ್ಲಿ ತೀರ್ಪು ನೀಡಲಿ” ಎಂದು ತಿಳಿಸಿದರು.

ಬರಗೂರು ರಾಮಚಂದ್ರಪ್ಪ ಸಮಿತಿಯಿಂದ ತಪ್ಪಾಗಿದೆ ಎಂದು ನೀವು ಗುರುತಿಸಿದ ಹಾಗೆಯೆ, ನಿಮ್ಮ ಸಮಿತಿಯಿಂದ ತಪ್ಪಾಗಿದೆ ಎಂಬುವುದನ್ನು, ತಜ್ಞರು ಗುರುತಿಸಬಹುದಲ್ಲವೆ ಎಂಬ ಮಾತಿಗೆ ಪ್ರತಿಕ್ರಿಯಿಸಿದ ಅವರು, “ಪತ್ರಿಕೆಯವರಾಗಲಿ, ಟಿವಿ ಮಾಧ್ಯಮವಾಗಲಿ ಯಾರೂ ಕೂಡಾ ಅಧ್ಯಯನ ನಡೆಸದೆ ತಪ್ಪು-ತಪ್ಪು ಎಂದು ಹೇಳುವುದು ಸರಿಯೇ” ಎಂದು ಹೇಳಿದರು.

ಇದನ್ನೂ ಓದಿ: ಸಂವಿಧಾನ ಒಬ್ಬರೇ ಬರೆದಿದ್ದು ಎಂದು ಹೇಗೆ ಹೇಳುತ್ತೀರಿ?: ಪಠ್ಯದಿಂದ ‘ಸಂವಿಧಾನ ಶಿಲ್ಪಿ’ ಪದ ಕೈಬಿಟ್ಟಿದ್ದಕ್ಕೆ ಪಠ್ಯ ಪರಿಶೀಲನೆ ಸಮಿತಿ ಸದಸ್ಯನ ಸಮರ್ಥನೆ

“ನಿಜ ಇಷ್ಟೆ. ನಾವೆಲ್ಲಾ ಕೆಲಸ ಮುಗಿಸಿ ನಾಲ್ಕು ತಿಂಗಳು ಆ‌ಯ್ತು. ಅದನ್ನು ಕೊಟ್ಟು ಬಂದಿದ್ದೇವೆ. ಈಗ ನಮಗೆ ನಮ್ಮದೆ ಕೆಲಸಗಳು ಇವೆ. ನಾನು ಪರಿಷ್ಕರಣೆ ಮಾಡಿರುವ ಪಠ್ಯ ಪುಸ್ತಕ ಹತ್ತನೆ ತರಗತಿಯ ಸಮಾಜ ವಿಜ್ಞಾನ. ಈ ಪುಸ್ತಕವನ್ನು ನನ್ನ ಅಧ್ಯಕ್ಷತೆಯಲ್ಲಿ 2014ರಲ್ಲಿ ಪರಿಚಯಿಸಲಾಗಿತ್ತು. ಈಗಲೂ ಅದನ್ನೇ ಮುಂದುವರೆಸಲಾಗಿದೆ. ಇದನ್ನು ಆರೇಳು ಭಾಷೆಗಳಿಗೆ ತರ್ಜುಮೆ ಮಾಡಲಾಗಿದೆ. ಈ ನಡುವೆ ಬರಗೂರು ರಾಮಚಂದ್ರಪ್ಪ ಅವರು ಪರಿಷ್ಕರಣೆ ಮಾಡಿದ್ದಾರೆ” ಎಂದು ಅವರು ಹೇಳಿದರು.

“ನನಗೆ ನೆನಪಿರುವಂತೆ, ಹತ್ತನೇ ತರಗತಿ ಸಮಾಜ ವಿಜ್ಞಾನದ 6 ಅಥವಾ 7ನೇ ಅಧ್ಯಾಯವನ್ನು ಪರಿಷ್ಕರಿಸುವಂತೆ ನೀಡಲಾಗಿತ್ತು. ಅದನ್ನು ನಾನು ಅವರಿಗೆ ಸಲ್ಲಿಸಿದ್ದೇನೆ. ಈ ನಡುವೆ ಕೊರೊನಾ ಸಮಯದಲ್ಲಿ ಒಮ್ಮೆ ಕರೆ ಬಂದಿತ್ತು. ಆದರೆ ನಾನು ಮನೆಯಲ್ಲೇ ಕೂತು ಕೆಲಸ ಮಾಡುವುದಾಗಿ ಹೇಳಿದೆ. ಇವಿಷ್ಟು ಸತ್ಯ” ಎಂದು ಹೇಳಿದರು.

ಹತ್ತನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದ ಬಗ್ಗೆ ಅವರು ಕೊಟ್ಟಿರುವ ವರದಿ ಪ್ರಕಾರ ತಿದ್ದುಪಡಿ ಆಗಿದೆಯೆ ಅಥವಾ ಅಧ್ಯಕ್ಷರು ಅದನ್ನು ಬದಲಾಯಿಸಿ ಬೇರೆ ಬರೆದಿದ್ದಾರೆಯೆ ಎಂದು ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಈ ಬಗ್ಗೆ ನನಗೆ ಗೊತ್ತಿಲ್ಲ. ಅವರಿಗೆ ಈಗಾಗಲೇ ಅವುಗಳನ್ನು ಕಳುಹಿಸಿದ್ದೇನೆ. ಇದಕ್ಕಿಂತ ಹೆಚ್ಚು ಏನೂ ಹೇಳಲು ಸಾಧ್ಯವಿಲ್ಲ” ಎಂದು ಹೇಳಿದರು. ಮರು ಪರಿಷ್ಕರಣೆ ಮಾಡಿರುವ ಹೊಸ ಪಠ್ಯ ಪುಸ್ತಕ ನನಗೆ ತಲುಪಿಲ್ಲ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

ಹತ್ತನೇ ತರಗತಿ ಸಮಾಜ ವಿಜ್ಞಾನದಲ್ಲಿ ನಾರಾಯಣ ಗುರುಗಳ ಬಗ್ಗೆ ಮತ್ತು ಪೆರಿಯಾರ್‌ ಪಾಠಗಳನ್ನು ನೀವು ಕತ್ತರಿಸಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಇದು ನನಗೆ ನೆನಪಾಗುತ್ತಿಲ್ಲ. ನಾರಾಯಣ ಗುರುಗಳ ವಿಚಾರಗಳನ್ನು ಅವರು ಹತ್ತನೇ ತರಗತಿಯ ಕನ್ನಡ ಪಠ್ಯ ಪುಸ್ತಕದಲ್ಲಿ ಹಾಕಿದ್ದಾರೆ ಎಂದು ಅವರು ಹೇಳುವುದನ್ನು ನಾನು ಕೇಳಿದ್ದೇನೆ. ಇದರ ಆಚೆಗೆ ಬೇರೆ ಯಾವ ವಿಚಾರವೂ ನನಗೆ ಗೊತ್ತಿಲ್ಲ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...