Homeಕರ್ನಾಟಕಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

ಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

- Advertisement -
- Advertisement -

ಪಠ್ಯಪುಸ್ತಕ ಪರಿಶೀಲನೆ ಹಾಗೂ ಪರಿಷ್ಕರಣೆ ವೇಳೆ ರೋಹಿತ್‌ ಚಕ್ರತೀರ್ಥ ಅವರು ಸಮಿತಿ ಸದಸ್ಯರ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ಪಠ್ಯಗಳನ್ನು ರೂಪಿಸಿದ್ದಾರೆಂಬ ಸಂಗತಿ ಹೊರಬಿದ್ದಿದೆ.

ರೋಹಿತ್‌ ಚಕ್ರತೀರ್ಥರ ಸಮಿತಿಯಲ್ಲಿನ ಸದಸ್ಯರನ್ನು ಸಂಪರ್ಕಿಸಿ ಈ ಕುರಿತು ಸ್ಪಷ್ಟನೆ ಪಡೆಯಲು ‘ನಾನುಗೌರಿ.ಕಾಂ’ ಪ್ರಯತ್ನಿಸುತ್ತಿದ್ದು, ಕೆಲವು ಸದಸ್ಯರು ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಪ್ರತಿಕ್ರಿಯೆ ನೀಡಿದವರು ಗೊಂದಲಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರು ವಿವಿಎಸ್ ಶಾಲೆ ನಿವೃತ್ತ ಮುಖ್ಯೋಪಾಧ್ಯಾಯರಾದ ಡಾ.ಎನ್‌.ಸತ್ಯಪ್ರಕಾಶ್‌ ಸಮಿತಿ ಸದಸ್ಯರಾಗಿದ್ದರು. ಈಗ ಉಂಟಾಗಿರುವ ವಿವಾದದ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, “ನಾನು ಸಮಾಜ ವಿಜ್ಞಾನ ಪಠ್ಯಪುಸ್ತಕ ರಚನೆಯಲ್ಲಿದ್ದೆ. ಈಗ ಆಗಿರುವ ತಪ್ಪುಗಳು ಕನ್ನಡ ಪಠ್ಯಪುಸ್ತಕದಲ್ಲಿವೆ” ಎಂದರು.

“ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕ ರಚನೆ ಮಾಡಿದ್ದೇನೆ” ಎಂದು ಅವರು ಹೇಳಿದರು.

ಮುಂದುವರಿದು, “ಕನ್ನಡ ಪಠ್ಯಪುಸ್ತಕ ರಚನೆಗೆ ಒಂದು ಸಮಿತಿ, ಸಮಾಜ ವಿಜ್ಞಾನ ಪಠ್ಯ ರಚನೆಗೆ ಒಂದು ಸಮಿತಿ ಮಾಡಿದ್ದರು. ಒಂದೊಂದು ಸಮಿತಿಯಲ್ಲೂ ಹತ್ತರಿಂದ ಹದಿನೈದು ಜನ ಇದ್ದರು. ಕನ್ನಡ ಪಠ್ಯಪುಸ್ತಕ ಸಮಿತಿಯಲ್ಲಿದ್ದವರು ಎಲ್ಲೆಲ್ಲಿ ಭೇಟಿ ಮಾಡಿದ್ದಾರೆ ಎಂಬುದು ಗೊತ್ತಿಲ್ಲ” ಎಂದರು.

ಇದನ್ನೂ ಓದಿರಿ: ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

“ನಾವು ನೀಡಿದ ವರದಿ ಆಧಾರದಲ್ಲಿ ಪಠ್ಯಪುಸ್ತಕ ರಚಿಸಲಾಗಿದೆ. ಕನ್ನಡ ಪಠ್ಯಪುಸ್ತಕ ಸಮಿತಿ ಸದಸ್ಯರು ನೀಡಿದ ಸಲಹೆಗಳನ್ನೇ ಜಾರಿ ಮಾಡಿದ್ದಾರೆ. ಅಧ್ಯಕ್ಷರು ವೈಯಕ್ತಿಕವಾಗಿ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಎಲ್ಲರೂ ಸಹಿ ಮಾಡಿರುತ್ತೇವೆ. ಎರಡು ಮೂರು ತಪ್ಪುಗಳಾಗಿವೆಯಷ್ಟೇ. ಇದನ್ನೇ ದೊಡ್ಡದ್ದಾಗಿ ಬಿಂಬಿಸುತ್ತಿದ್ದಾರೆ” ಎಂದರು.

ಸತ್ಯಪ್ರಕಾಶ್ ಅವರ ಹೇಳಿಕೆಗಳು ಗೊಂದಲಕಾರಿಯಾಗಿದ್ದವು.

ನಾನುಗೌರಿ: ‘ಸಮಾಜ ವಿಜ್ಞಾನ’ ಪಠ್ಯಪುಸ್ತಕದಲ್ಲಿ ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌’ ಎಂಬ ಸಾಲನ್ನು ಕಿತ್ತು ಹಾಕಿದ್ದೀರಲ್ಲ?

ಎನ್.ಸತ್ಯಪ್ರಕಾಶ್‌: ಇಲ್ಲ. ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಈ ತಪ್ಪಾಗಿಲ್ಲ. ಅದು ಕನ್ನಡ ಪಠ್ಯಪುಸ್ತಕದಲ್ಲಿ ಆಗಿರುವ ತಪ್ಪಷ್ಟೇ.

ನಾನುಗೌರಿ: 9ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಈ ತಪ್ಪಾಗಿದೆ. ಈ ಕುರಿತು ನಾವೇ ವರದಿ ಮಾಡಿದ್ದೇವೆ.

ಸತ್ಯಪ್ರಕಾಶ್‌: ಓಹ್, ಒಂಬತ್ತನೇ ತರಗತಿಯದ್ದಾ?

ನಾನುಗೌರಿ: ಇಷ್ಟೇ ಅಲ್ಲ. ಸಾಕಷ್ಟು ಬದಲಾವಣೆಗಳನ್ನು ಮಾಡಿದ್ದೀರಿ.

ಸತ್ಯಪ್ರಕಾಶ್: ಸಾಕಷ್ಟು ಎಂಬ ಪದ ಉಪಯೋಗಿಸಬೇಡಿ. ಯಾವುದೆಂದು ಹೇಳಿ.

ನಾನುಗೌರಿ: ‘ಸಿಂಧೂ ಬಯಲಿನ ನಾಗರಿಕತೆ’ ಎಂಬುದನ್ನು ‘ಸಿಂಧೂ ಸರಸ್ವತಿ ನಾಗರಿಕತೆ’ ಎಂದು ಮಾಡಿದ್ದೀರಿ. ನಾವು ಇಲ್ಲಿಯವರೆಗೂ ಇದನ್ನು ಓದಿಯೇ ಇರಲಿಲ್ಲ.

ಸತ್ಯಪ್ರಕಾಶ್‌: ಹಾಗೇನಿಲ್ಲ, ಹೀಗೆ ಬದಲಾವಣೆ ಆಗಬಾರದೆಂದೇನೂ ಇಲ್ಲ. ‘ಸಿಂಧೂ ಸರಸ್ವತಿ ನಾಗರಿಕತೆ’ ಎಂದರೆ- ಭಾರತೀಯ ಇತಿಹಾಸ, ದ್ರಾವಿಡ ಸಂಸ್ಕೃತಿ ಎಲ್ಲವೂ ಆಗುತ್ತದೆ. ಇಂಗ್ಲಿಷ್‌ನವರು ಬರೆದದ್ದು ಇಟ್ಟುಕೊಳ್ಳಬೇಕಾ?

ನಾನುಗೌರಿ: ಇಷ್ಟೇ ಅಲ್ಲ. ಸಮಾಜ ವಿಜ್ಞಾನ ಪಠ್ಯದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಲಾಗಿದೆ. ಕನಕದಾಸ, ಪುರಂದರದಾಸ, ನಾರಾಯಣಗುರು- ಈ ಎಲ್ಲ ಮಹನೀಯರ ಪಠ್ಯಗಳನ್ನು ಕೈಬಿಡಲಾಗಿದೆ. ಇದಕ್ಕೆ ಕಾರಣವೇನು?

ಸತ್ಯಪ್ರಕಾಶ್‌: ಯಾವಾಗಲಾದರೂ ಬನ್ನಿ ಮಾತನಾಡೋಣ.

ನಾನುಗೌರಿ: ಪ್ರತಿಭಟನೆಗಳು ನಡೆದಿವೆ. ಪಠ್ಯಪುಸ್ತಕಗಳ ಅಧ್ವಾನಗಳ ಕುರಿತು ಚರ್ಚೆಯಾಗುತ್ತಿದೆ. ನಿಮ್ಮನ್ನು ಪ್ರಶ್ನಿಸಿದಾಗಲೆಲ್ಲ ಹೀಗೆಯೇ ಉತ್ತರಿಸುತ್ತೀರಿ. ಜನರಿಗೆ ಸ್ಪಷ್ಟನೆ ಸಿಗುವುದು ಯಾವಾಗ?

ಇದನ್ನೂ ಓದಿರಿ: ಪಠ್ಯಪುಸ್ತಕ ರಚನೆಯಲ್ಲಿ ಸಮಿತಿ ಸದಸ್ಯರ ಅಭಿಪ್ರಾಯ ತಿರಸ್ಕರಿಸಿ ಏಕಪಕ್ಷೀಯ ಪಠ್ಯ ರಚಿಸಿದ ಚಕ್ರತೀರ್ಥ!

ಸತ್ಯಪ್ರಕಾಶ್‌: ಸಮಿತಿ ಅಧ್ಯಕ್ಷರಿದ್ದಾರೆ. ವಿವಾದದ ಕುರಿತು ಪ್ರತಿಕ್ರಿಯೆ ನೀಡಲು ಎಲ್ಲರಿಗೂ ಅನುಮತಿ ನೀಡಿಲ್ಲ.

ನಾನುಗೌರಿ: ಪ್ರೊ.ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಸಮಿತಿಯಲ್ಲಿದ್ದವರೆಲ್ಲರೂ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಚಕ್ರತೀರ್ಥ ನೇತೃತ್ವದ ಸಮಿತಿಯವರ್‍ಯಾಕೆ ಮಾತನಾಡುತ್ತಿಲ್ಲವಲ್ಲ?

ಸತ್ಯಪ್ರಕಾಶ್‌: ಬರಗೂರರ ನೇತೃತ್ವದಲ್ಲಿ ಪಠ್ಯ ಪರಿಷ್ಕರಣೆಯಾದಾಗಲೂ ವಿವಾದವಾಗಿತ್ತು. ಹೊರಗೆ ಬರಲಿಲ್ಲವಷ್ಟೇ. ಈಗ ಎಲ್ಲರೂ ಮಾತನಾಡುತ್ತಿದ್ದಾರೆ. ನಾವು ಎಲ್ಲ ವರದಿಯನ್ನು ಸರ್ಕಾರಕ್ಕೆ ಕೊಟ್ಟಿದ್ದೇವೆ.

ಸತ್ಯಪ್ರಕಾಶ್ ಅವರು ತಮ್ಮ ಪ್ರತಿಕ್ರಿಯೆಯನ್ನು ಮೊಟುಕುಗೊಳಿಸಿದರು.

ಪಠ್ಯಪುಸ್ತಕ ಪರಿಶೀಲನಾ ಸಮಿತಿಯಲ್ಲಿದ್ದ ಮಿಥಿಕ್ ಸೊಸೈಟಿಯ ಸಂಶೋಧಕ ವಿಠಲ್ ಪೋತೇದಾರ್‌‌ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದರು.

ನಾನುಗೌರಿ: ನಿಮ್ಮ ಅಭಿಪ್ರಾಯಕ್ಕೆ ವಿರುದ್ಧವಾಗಿ ಪಠ್ಯ ರಚನೆಯಾಗಿದೆಯೇ?

ವಿಠಲ್: ಅದಕ್ಕೂ ನಮಗೂ ಸಂಬಂಧವಿಲ್ಲ. ಸಮಿತಿ ವಿಸರ್ಜನೆಯಾಗಿದೆ.

ನಾನುಗೌರಿ: ನಿಮ್ಮ ಸಮಿತಿಯಲ್ಲಿ ಈ ರೀತಿಯ ಗೊಂದಲ ಉಂಟಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ಕೇಳುತ್ತಿದ್ದೇವೆ.

ವಿಠಲ್‌: ನಾನು ಆ ಸಮಿತಿಯಲ್ಲಿ ಇರಲಿಲ್ಲ. ಅದಕ್ಕೂ ನನಗೂ ಸಂಬಂಧವಿಲ್ಲ.

ನಾನುಗೌರಿ: ಸಮಿತಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಲ್ಲ?

ವಿಠಲ್‌: ಈಗ ಬಂದಿರುವ ಇದರೊಳಗೆ… ಸಮಿತಿ… (ಮಾತು ಅಸ್ಪಷ್ಟವಾಗಿತ್ತು)

ನಾನುಗೌರಿ: ನೀವು ಪಠ್ಯಪುಸ್ತಕ ಸಮಿತಿಯಲ್ಲೇ ಇರಲಿಲ್ಲವೇ?

ವಿಠಲ್: ನಾವು ವರದಿ ಕೊಟ್ಟಾಯಿತು. ವಿಸರ್ಜನೆಯೂ ಆಯಿತು.

ನಾನುಗೌರಿ: ನಿಜ. ಆದರೆ ನಿಮ್ಮ ಪಠ್ಯಪುಸ್ತಕ ವಿವಾದ ಇನ್ನೂ ಜೀವಂತವಾಗಿದೆ. ಅದೇ ಪಠ್ಯವನ್ನು ಮಕ್ಕಳಿಗೆ ಬೋಧಿಸಲು ಹೊರಟಿದ್ದಾರೆ.

ವಿಠಲ್: ನಾವು ವೃತ್ತಿಪರರು. ಪಠ್ಯ ಪುಸ್ತಕ ರಚನೆ ಮಾಡಿ ಸರ್ಕಾರಕ್ಕೆ ಕೊಟ್ಟಿರುತ್ತೇವಷ್ಟೇ.

ನಾನುಗೌರಿ: ಈಗ ಬಂದಿರುವ ಪ್ರಶ್ನೆ ಇಷ್ಟೇ. ಕೆಲವು ಪಠ್ಯಗಳನ್ನು ಮುಂದುವರಿಸಬಹುದು ಎಂದು ಸದಸ್ಯರು ಹೇಳಿದ್ದರು. ಆದರೆ ಅದನ್ನು ಸಮಿತಿಯ ಅಧ್ಯಕ್ಷರು ಕಡೆಗಣಿಸಿದ್ದಾರೆಂದು ತಿಳಿದುಬಂದಿದೆ.

ವಿಠಲ್: ನಾವು ಏನು ಹೇಳಲು ಬರುವುದಿಲ್ಲ. ಇದು ಸರ್ಕಾರ ಮತ್ತು ಸಚಿವರು ತೆಗೆದುಕೊಳ್ಳುವ ನಿರ್ಧಾರವಷ್ಟೇ. ವರದಿ ಕೊಟ್ಟಿದ್ದೀವಿ. ಅದನ್ನು ಸ್ವೀಕರಿಸುವುದು ಅಥವಾ ಬಿಡುವುದು ಸರ್ಕಾರಕ್ಕೆ ಬಿಟ್ಟಿದ್ದು.

ನಾನುಗೌರಿ: ಸರ್ಕಾರಕ್ಕೆ ಸಲ್ಲಿಸಿದ ವರದಿಯ ಕುರಿತು ಹೇಳುತ್ತಿಲ್ಲ. ನೀವು ಸಮಿತಿಯ ಅಧ್ಯಕ್ಷರಿಗೆ ನೀಡಿದ ಅಭಿಪ್ರಾಯಗಳನ್ನು ಅಧ್ಯಕ್ಷರು ಕಡೆಗಣಿಸಿದ್ದಾರೆಂದು ವರದಿಯಾಗಿದೆ. ಈ  ಕುರಿತು ಕೇಳುತ್ತಿದ್ದೇವೆ.

ಇದನ್ನೂ ಓದಿರಿ: ಸಂವಿಧಾನ ಒಬ್ಬರೇ ಬರೆದಿದ್ದು ಎಂದು ಹೇಗೆ ಹೇಳುತ್ತೀರಿ?: ಪಠ್ಯದಿಂದ ‘ಸಂವಿಧಾನ ಶಿಲ್ಪಿ’ ಪದ ಕೈಬಿಟ್ಟಿದ್ದಕ್ಕೆ ಪಠ್ಯ ಪರಿಶೀಲನೆ ಸಮಿತಿ ಸದಸ್ಯನ ಸಮರ್ಥನೆ

ವಿಠಲ್‌: ನಾವು ಕೊಟ್ಟಿದ್ದಲ್ಲ. ಬೇರೆ ಸಮಿತಿ ಕೊಟ್ಟಿರುವ ವರದಿ ಅದು.

ನಾನುಗೌರಿ: ಎಷ್ಟು ಸಮಿತಿ ಮಾಡಿದ್ದಿರಿ?

ವಿಠಲ್‌: ಅದನ್ನು ನಮಗೆ ಗೊತ್ತಿಲ್ಲ. ಕರ್ನಾಟಕ ಪಠ್ಯಪುಸ್ತಕ ಸಂಘದ (ಕೆಟಿಬಿಎಸ್) ಅಧಿಕಾರಿಗಳನ್ನು ಕೇಳಿದರೆ ಮಾಹಿತಿ ಸಿಗುತ್ತದೆ.

(ಕೆಟಿಬಿಎಸ್‌ ನಿರ್ದೇಶಕರ ಅಭಿಪ್ರಾಯಕ್ಕೆ ಸಂಪರ್ಕಿಸಲಾಗಿದೆ. ಪ್ರತಿಕ್ರಿಯೆ ಸಿಕ್ಕಲ್ಲಿ ಅಪ್‌ಡೇಟ್ ಮಾಡಲಾಗುವುದು)

ಪ್ರತಿಕ್ರಿಯೆ ನೀಡಲು ನಿರಾಕರಣೆ

ಸಮಿತಿಯ ಮತ್ತೊಬ್ಬ ಸದಸ್ಯರಾದ ಚಾಮರಾಜನಗರದ ಬಿಳಿಗಿರಿರಂಗನ ಬೆಟ್ಟ ವಿವೇಕಾನಂದ ಗಿರಿಜನ ಪ್ರೌಢಶಾಲೆಯ ಬಿ.ಜಿ.ವಾಸುಕಿ ಅವರನ್ನು ಸಂಪರ್ಕಿಸಿದಾಗ, “ಈಗ ಸಮಿತಿ ವಿಸರ್ಜನೆಯಾಗಿದೆ. ನಾವು ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ಹೇಳಿದರು.‘

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...