Homeಕರ್ನಾಟಕಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

ಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

- Advertisement -
- Advertisement -

ಪಠ್ಯಪುಸ್ತಕ ಪರಿಶೀಲನೆ ಹಾಗೂ ಪರಿಷ್ಕರಣೆ ವೇಳೆ ರೋಹಿತ್‌ ಚಕ್ರತೀರ್ಥ ಅವರು ಸಮಿತಿ ಸದಸ್ಯರ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ಪಠ್ಯಗಳನ್ನು ರೂಪಿಸಿದ್ದಾರೆಂಬ ಸಂಗತಿ ಹೊರಬಿದ್ದಿದೆ.

ರೋಹಿತ್‌ ಚಕ್ರತೀರ್ಥರ ಸಮಿತಿಯಲ್ಲಿನ ಸದಸ್ಯರನ್ನು ಸಂಪರ್ಕಿಸಿ ಈ ಕುರಿತು ಸ್ಪಷ್ಟನೆ ಪಡೆಯಲು ‘ನಾನುಗೌರಿ.ಕಾಂ’ ಪ್ರಯತ್ನಿಸುತ್ತಿದ್ದು, ಕೆಲವು ಸದಸ್ಯರು ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಪ್ರತಿಕ್ರಿಯೆ ನೀಡಿದವರು ಗೊಂದಲಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರು ವಿವಿಎಸ್ ಶಾಲೆ ನಿವೃತ್ತ ಮುಖ್ಯೋಪಾಧ್ಯಾಯರಾದ ಡಾ.ಎನ್‌.ಸತ್ಯಪ್ರಕಾಶ್‌ ಸಮಿತಿ ಸದಸ್ಯರಾಗಿದ್ದರು. ಈಗ ಉಂಟಾಗಿರುವ ವಿವಾದದ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, “ನಾನು ಸಮಾಜ ವಿಜ್ಞಾನ ಪಠ್ಯಪುಸ್ತಕ ರಚನೆಯಲ್ಲಿದ್ದೆ. ಈಗ ಆಗಿರುವ ತಪ್ಪುಗಳು ಕನ್ನಡ ಪಠ್ಯಪುಸ್ತಕದಲ್ಲಿವೆ” ಎಂದರು.

“ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕ ರಚನೆ ಮಾಡಿದ್ದೇನೆ” ಎಂದು ಅವರು ಹೇಳಿದರು.

ಮುಂದುವರಿದು, “ಕನ್ನಡ ಪಠ್ಯಪುಸ್ತಕ ರಚನೆಗೆ ಒಂದು ಸಮಿತಿ, ಸಮಾಜ ವಿಜ್ಞಾನ ಪಠ್ಯ ರಚನೆಗೆ ಒಂದು ಸಮಿತಿ ಮಾಡಿದ್ದರು. ಒಂದೊಂದು ಸಮಿತಿಯಲ್ಲೂ ಹತ್ತರಿಂದ ಹದಿನೈದು ಜನ ಇದ್ದರು. ಕನ್ನಡ ಪಠ್ಯಪುಸ್ತಕ ಸಮಿತಿಯಲ್ಲಿದ್ದವರು ಎಲ್ಲೆಲ್ಲಿ ಭೇಟಿ ಮಾಡಿದ್ದಾರೆ ಎಂಬುದು ಗೊತ್ತಿಲ್ಲ” ಎಂದರು.

ಇದನ್ನೂ ಓದಿರಿ: ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

“ನಾವು ನೀಡಿದ ವರದಿ ಆಧಾರದಲ್ಲಿ ಪಠ್ಯಪುಸ್ತಕ ರಚಿಸಲಾಗಿದೆ. ಕನ್ನಡ ಪಠ್ಯಪುಸ್ತಕ ಸಮಿತಿ ಸದಸ್ಯರು ನೀಡಿದ ಸಲಹೆಗಳನ್ನೇ ಜಾರಿ ಮಾಡಿದ್ದಾರೆ. ಅಧ್ಯಕ್ಷರು ವೈಯಕ್ತಿಕವಾಗಿ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಎಲ್ಲರೂ ಸಹಿ ಮಾಡಿರುತ್ತೇವೆ. ಎರಡು ಮೂರು ತಪ್ಪುಗಳಾಗಿವೆಯಷ್ಟೇ. ಇದನ್ನೇ ದೊಡ್ಡದ್ದಾಗಿ ಬಿಂಬಿಸುತ್ತಿದ್ದಾರೆ” ಎಂದರು.

ಸತ್ಯಪ್ರಕಾಶ್ ಅವರ ಹೇಳಿಕೆಗಳು ಗೊಂದಲಕಾರಿಯಾಗಿದ್ದವು.

ನಾನುಗೌರಿ: ‘ಸಮಾಜ ವಿಜ್ಞಾನ’ ಪಠ್ಯಪುಸ್ತಕದಲ್ಲಿ ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌’ ಎಂಬ ಸಾಲನ್ನು ಕಿತ್ತು ಹಾಕಿದ್ದೀರಲ್ಲ?

ಎನ್.ಸತ್ಯಪ್ರಕಾಶ್‌: ಇಲ್ಲ. ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಈ ತಪ್ಪಾಗಿಲ್ಲ. ಅದು ಕನ್ನಡ ಪಠ್ಯಪುಸ್ತಕದಲ್ಲಿ ಆಗಿರುವ ತಪ್ಪಷ್ಟೇ.

ನಾನುಗೌರಿ: 9ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಈ ತಪ್ಪಾಗಿದೆ. ಈ ಕುರಿತು ನಾವೇ ವರದಿ ಮಾಡಿದ್ದೇವೆ.

ಸತ್ಯಪ್ರಕಾಶ್‌: ಓಹ್, ಒಂಬತ್ತನೇ ತರಗತಿಯದ್ದಾ?

ನಾನುಗೌರಿ: ಇಷ್ಟೇ ಅಲ್ಲ. ಸಾಕಷ್ಟು ಬದಲಾವಣೆಗಳನ್ನು ಮಾಡಿದ್ದೀರಿ.

ಸತ್ಯಪ್ರಕಾಶ್: ಸಾಕಷ್ಟು ಎಂಬ ಪದ ಉಪಯೋಗಿಸಬೇಡಿ. ಯಾವುದೆಂದು ಹೇಳಿ.

ನಾನುಗೌರಿ: ‘ಸಿಂಧೂ ಬಯಲಿನ ನಾಗರಿಕತೆ’ ಎಂಬುದನ್ನು ‘ಸಿಂಧೂ ಸರಸ್ವತಿ ನಾಗರಿಕತೆ’ ಎಂದು ಮಾಡಿದ್ದೀರಿ. ನಾವು ಇಲ್ಲಿಯವರೆಗೂ ಇದನ್ನು ಓದಿಯೇ ಇರಲಿಲ್ಲ.

ಸತ್ಯಪ್ರಕಾಶ್‌: ಹಾಗೇನಿಲ್ಲ, ಹೀಗೆ ಬದಲಾವಣೆ ಆಗಬಾರದೆಂದೇನೂ ಇಲ್ಲ. ‘ಸಿಂಧೂ ಸರಸ್ವತಿ ನಾಗರಿಕತೆ’ ಎಂದರೆ- ಭಾರತೀಯ ಇತಿಹಾಸ, ದ್ರಾವಿಡ ಸಂಸ್ಕೃತಿ ಎಲ್ಲವೂ ಆಗುತ್ತದೆ. ಇಂಗ್ಲಿಷ್‌ನವರು ಬರೆದದ್ದು ಇಟ್ಟುಕೊಳ್ಳಬೇಕಾ?

ನಾನುಗೌರಿ: ಇಷ್ಟೇ ಅಲ್ಲ. ಸಮಾಜ ವಿಜ್ಞಾನ ಪಠ್ಯದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಲಾಗಿದೆ. ಕನಕದಾಸ, ಪುರಂದರದಾಸ, ನಾರಾಯಣಗುರು- ಈ ಎಲ್ಲ ಮಹನೀಯರ ಪಠ್ಯಗಳನ್ನು ಕೈಬಿಡಲಾಗಿದೆ. ಇದಕ್ಕೆ ಕಾರಣವೇನು?

ಸತ್ಯಪ್ರಕಾಶ್‌: ಯಾವಾಗಲಾದರೂ ಬನ್ನಿ ಮಾತನಾಡೋಣ.

ನಾನುಗೌರಿ: ಪ್ರತಿಭಟನೆಗಳು ನಡೆದಿವೆ. ಪಠ್ಯಪುಸ್ತಕಗಳ ಅಧ್ವಾನಗಳ ಕುರಿತು ಚರ್ಚೆಯಾಗುತ್ತಿದೆ. ನಿಮ್ಮನ್ನು ಪ್ರಶ್ನಿಸಿದಾಗಲೆಲ್ಲ ಹೀಗೆಯೇ ಉತ್ತರಿಸುತ್ತೀರಿ. ಜನರಿಗೆ ಸ್ಪಷ್ಟನೆ ಸಿಗುವುದು ಯಾವಾಗ?

ಇದನ್ನೂ ಓದಿರಿ: ಪಠ್ಯಪುಸ್ತಕ ರಚನೆಯಲ್ಲಿ ಸಮಿತಿ ಸದಸ್ಯರ ಅಭಿಪ್ರಾಯ ತಿರಸ್ಕರಿಸಿ ಏಕಪಕ್ಷೀಯ ಪಠ್ಯ ರಚಿಸಿದ ಚಕ್ರತೀರ್ಥ!

ಸತ್ಯಪ್ರಕಾಶ್‌: ಸಮಿತಿ ಅಧ್ಯಕ್ಷರಿದ್ದಾರೆ. ವಿವಾದದ ಕುರಿತು ಪ್ರತಿಕ್ರಿಯೆ ನೀಡಲು ಎಲ್ಲರಿಗೂ ಅನುಮತಿ ನೀಡಿಲ್ಲ.

ನಾನುಗೌರಿ: ಪ್ರೊ.ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಸಮಿತಿಯಲ್ಲಿದ್ದವರೆಲ್ಲರೂ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಚಕ್ರತೀರ್ಥ ನೇತೃತ್ವದ ಸಮಿತಿಯವರ್‍ಯಾಕೆ ಮಾತನಾಡುತ್ತಿಲ್ಲವಲ್ಲ?

ಸತ್ಯಪ್ರಕಾಶ್‌: ಬರಗೂರರ ನೇತೃತ್ವದಲ್ಲಿ ಪಠ್ಯ ಪರಿಷ್ಕರಣೆಯಾದಾಗಲೂ ವಿವಾದವಾಗಿತ್ತು. ಹೊರಗೆ ಬರಲಿಲ್ಲವಷ್ಟೇ. ಈಗ ಎಲ್ಲರೂ ಮಾತನಾಡುತ್ತಿದ್ದಾರೆ. ನಾವು ಎಲ್ಲ ವರದಿಯನ್ನು ಸರ್ಕಾರಕ್ಕೆ ಕೊಟ್ಟಿದ್ದೇವೆ.

ಸತ್ಯಪ್ರಕಾಶ್ ಅವರು ತಮ್ಮ ಪ್ರತಿಕ್ರಿಯೆಯನ್ನು ಮೊಟುಕುಗೊಳಿಸಿದರು.

ಪಠ್ಯಪುಸ್ತಕ ಪರಿಶೀಲನಾ ಸಮಿತಿಯಲ್ಲಿದ್ದ ಮಿಥಿಕ್ ಸೊಸೈಟಿಯ ಸಂಶೋಧಕ ವಿಠಲ್ ಪೋತೇದಾರ್‌‌ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದರು.

ನಾನುಗೌರಿ: ನಿಮ್ಮ ಅಭಿಪ್ರಾಯಕ್ಕೆ ವಿರುದ್ಧವಾಗಿ ಪಠ್ಯ ರಚನೆಯಾಗಿದೆಯೇ?

ವಿಠಲ್: ಅದಕ್ಕೂ ನಮಗೂ ಸಂಬಂಧವಿಲ್ಲ. ಸಮಿತಿ ವಿಸರ್ಜನೆಯಾಗಿದೆ.

ನಾನುಗೌರಿ: ನಿಮ್ಮ ಸಮಿತಿಯಲ್ಲಿ ಈ ರೀತಿಯ ಗೊಂದಲ ಉಂಟಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ಕೇಳುತ್ತಿದ್ದೇವೆ.

ವಿಠಲ್‌: ನಾನು ಆ ಸಮಿತಿಯಲ್ಲಿ ಇರಲಿಲ್ಲ. ಅದಕ್ಕೂ ನನಗೂ ಸಂಬಂಧವಿಲ್ಲ.

ನಾನುಗೌರಿ: ಸಮಿತಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಲ್ಲ?

ವಿಠಲ್‌: ಈಗ ಬಂದಿರುವ ಇದರೊಳಗೆ… ಸಮಿತಿ… (ಮಾತು ಅಸ್ಪಷ್ಟವಾಗಿತ್ತು)

ನಾನುಗೌರಿ: ನೀವು ಪಠ್ಯಪುಸ್ತಕ ಸಮಿತಿಯಲ್ಲೇ ಇರಲಿಲ್ಲವೇ?

ವಿಠಲ್: ನಾವು ವರದಿ ಕೊಟ್ಟಾಯಿತು. ವಿಸರ್ಜನೆಯೂ ಆಯಿತು.

ನಾನುಗೌರಿ: ನಿಜ. ಆದರೆ ನಿಮ್ಮ ಪಠ್ಯಪುಸ್ತಕ ವಿವಾದ ಇನ್ನೂ ಜೀವಂತವಾಗಿದೆ. ಅದೇ ಪಠ್ಯವನ್ನು ಮಕ್ಕಳಿಗೆ ಬೋಧಿಸಲು ಹೊರಟಿದ್ದಾರೆ.

ವಿಠಲ್: ನಾವು ವೃತ್ತಿಪರರು. ಪಠ್ಯ ಪುಸ್ತಕ ರಚನೆ ಮಾಡಿ ಸರ್ಕಾರಕ್ಕೆ ಕೊಟ್ಟಿರುತ್ತೇವಷ್ಟೇ.

ನಾನುಗೌರಿ: ಈಗ ಬಂದಿರುವ ಪ್ರಶ್ನೆ ಇಷ್ಟೇ. ಕೆಲವು ಪಠ್ಯಗಳನ್ನು ಮುಂದುವರಿಸಬಹುದು ಎಂದು ಸದಸ್ಯರು ಹೇಳಿದ್ದರು. ಆದರೆ ಅದನ್ನು ಸಮಿತಿಯ ಅಧ್ಯಕ್ಷರು ಕಡೆಗಣಿಸಿದ್ದಾರೆಂದು ತಿಳಿದುಬಂದಿದೆ.

ವಿಠಲ್: ನಾವು ಏನು ಹೇಳಲು ಬರುವುದಿಲ್ಲ. ಇದು ಸರ್ಕಾರ ಮತ್ತು ಸಚಿವರು ತೆಗೆದುಕೊಳ್ಳುವ ನಿರ್ಧಾರವಷ್ಟೇ. ವರದಿ ಕೊಟ್ಟಿದ್ದೀವಿ. ಅದನ್ನು ಸ್ವೀಕರಿಸುವುದು ಅಥವಾ ಬಿಡುವುದು ಸರ್ಕಾರಕ್ಕೆ ಬಿಟ್ಟಿದ್ದು.

ನಾನುಗೌರಿ: ಸರ್ಕಾರಕ್ಕೆ ಸಲ್ಲಿಸಿದ ವರದಿಯ ಕುರಿತು ಹೇಳುತ್ತಿಲ್ಲ. ನೀವು ಸಮಿತಿಯ ಅಧ್ಯಕ್ಷರಿಗೆ ನೀಡಿದ ಅಭಿಪ್ರಾಯಗಳನ್ನು ಅಧ್ಯಕ್ಷರು ಕಡೆಗಣಿಸಿದ್ದಾರೆಂದು ವರದಿಯಾಗಿದೆ. ಈ  ಕುರಿತು ಕೇಳುತ್ತಿದ್ದೇವೆ.

ಇದನ್ನೂ ಓದಿರಿ: ಸಂವಿಧಾನ ಒಬ್ಬರೇ ಬರೆದಿದ್ದು ಎಂದು ಹೇಗೆ ಹೇಳುತ್ತೀರಿ?: ಪಠ್ಯದಿಂದ ‘ಸಂವಿಧಾನ ಶಿಲ್ಪಿ’ ಪದ ಕೈಬಿಟ್ಟಿದ್ದಕ್ಕೆ ಪಠ್ಯ ಪರಿಶೀಲನೆ ಸಮಿತಿ ಸದಸ್ಯನ ಸಮರ್ಥನೆ

ವಿಠಲ್‌: ನಾವು ಕೊಟ್ಟಿದ್ದಲ್ಲ. ಬೇರೆ ಸಮಿತಿ ಕೊಟ್ಟಿರುವ ವರದಿ ಅದು.

ನಾನುಗೌರಿ: ಎಷ್ಟು ಸಮಿತಿ ಮಾಡಿದ್ದಿರಿ?

ವಿಠಲ್‌: ಅದನ್ನು ನಮಗೆ ಗೊತ್ತಿಲ್ಲ. ಕರ್ನಾಟಕ ಪಠ್ಯಪುಸ್ತಕ ಸಂಘದ (ಕೆಟಿಬಿಎಸ್) ಅಧಿಕಾರಿಗಳನ್ನು ಕೇಳಿದರೆ ಮಾಹಿತಿ ಸಿಗುತ್ತದೆ.

(ಕೆಟಿಬಿಎಸ್‌ ನಿರ್ದೇಶಕರ ಅಭಿಪ್ರಾಯಕ್ಕೆ ಸಂಪರ್ಕಿಸಲಾಗಿದೆ. ಪ್ರತಿಕ್ರಿಯೆ ಸಿಕ್ಕಲ್ಲಿ ಅಪ್‌ಡೇಟ್ ಮಾಡಲಾಗುವುದು)

ಪ್ರತಿಕ್ರಿಯೆ ನೀಡಲು ನಿರಾಕರಣೆ

ಸಮಿತಿಯ ಮತ್ತೊಬ್ಬ ಸದಸ್ಯರಾದ ಚಾಮರಾಜನಗರದ ಬಿಳಿಗಿರಿರಂಗನ ಬೆಟ್ಟ ವಿವೇಕಾನಂದ ಗಿರಿಜನ ಪ್ರೌಢಶಾಲೆಯ ಬಿ.ಜಿ.ವಾಸುಕಿ ಅವರನ್ನು ಸಂಪರ್ಕಿಸಿದಾಗ, “ಈಗ ಸಮಿತಿ ವಿಸರ್ಜನೆಯಾಗಿದೆ. ನಾವು ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ಹೇಳಿದರು.‘

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...