Homeಮುಖಪುಟಮಹಾರಾಷ್ಟ್ರ ರಾಜಕೀಯ ಸಂಕಷ್ಟ: ಸರ್ಕಾರದ ಅಳಿವು-ಉಳಿವಿನ ನಂಬರ್ ಗೇಮ್ ಹೀಗಿದೆ

ಮಹಾರಾಷ್ಟ್ರ ರಾಜಕೀಯ ಸಂಕಷ್ಟ: ಸರ್ಕಾರದ ಅಳಿವು-ಉಳಿವಿನ ನಂಬರ್ ಗೇಮ್ ಹೀಗಿದೆ

- Advertisement -
- Advertisement -

ಮಹಾರಾಷ್ಟ್ರ ಶಿವಸೇನೆಯ ಮುಖಂಡ ಏಕನಾಥ್ ಶಿಂಧೆ ನೇತೃತ್ವದಲ್ಲಿ 40 ಶಿವಸೇನಾ ಪಕ್ಷದ ಶಾಸಕರು ಬಂಡಾಯವೆದ್ದು ಗೌಹಾತಿ ತಲುಪಿರುವುದರಿಂದ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ ಸಂಕಷ್ಟಕ್ಕೆ ಸಿಲುಕಿದೆ. ಏಕನಾಥ್ ಶಿಂಧೆ ತನಗೆ 6 ಪಕ್ಷೇತರ ಶಾಸಕರ ಬೆಂಬಲ ಸಹ ಇದೆಯೆಂದು ಹೇಳಿಕೊಂಡಿದ್ದಾರೆ. ಇಂದು ಸಂಜೆ 5 ಗಂಟೆಗೆ ಎಲ್ಲಾ ಶಿವಸೇನೆ ಶಾಸಕರು ಸಭೆಗೆ ಹಾಜರಾಗಬೇಕೆಂದು, ತಪ್ಪಿದ್ದಲ್ಲಿ ತಮ್ಮ ಸದಸ್ಯ ಸ್ಥಾನ ರದ್ದುಗೊಳಿಸುವುದಾಗಿ ಉದ್ಧವ್ ಠಾಕ್ರೆ ಸಂದೇಶ ರವಾನಿಸಿದ್ದಾರೆ. ಆದರೆ ಅದನ್ನು ಏಕನಾಥ್ ಶಿಂಧೆ ಮಾನ್ಯತೆಯಿಲ್ಲದ ಹೇಳಿಕೆ ಎಂದು ಕರೆದಿದ್ದಾರೆ.

ಈ ಎಲ್ಲದರ ನಡುವೆ ಸರ್ಕಾರ ಉಳಿಯಬೇಕಾದರೆ ಅಥವಾ ಬೀಳಿಸಬೇಕಾದರೆ ಬೇಕಾಗುವ ಶಾಸಕರ ಸಂಖ್ಯೆಗಳೆಷ್ಟು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ.

ಮಹಾರಾಷ್ಟ್ರ ವಿಧಾನಸಭೆಯು 288 ಸದಸ್ಯರನ್ನು ಹೊಂದಿದೆ. ಒಬ್ಬ ಸದಸ್ಯ ಸಾವನಪ್ಪಿದ್ದು, ಇಬ್ಬರು ಜೈಲಿನಲ್ಲಿದ್ದಾರೆ. ಹಾಗಾಗಿ ಸದಸ್ಯಬಲ 285ಕ್ಕೆ ಕುಸಿದಿದೆ. ಅಲ್ಲಿಗೆ ಯಾವುದೇ ಸರ್ಕಾರಕ್ಕೆ ಬಹುಮತ ತೋರಿಸಲು 143 ಸದಸ್ಯರ ಬೆಂಬಲ ಬೇಕಿದೆ.

ಸದ್ಯಕ್ಕೆ ಮಹಾವಿಕಾಸ್ ಅಘಾಡಿ (ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್) ಸರ್ಕಾರದ ಬಳಿ 152 ಶಾಸಕರಿದ್ದಾರೆ. 55 ಶಿವಸೇನೆ, 51 ಎನ್‌ಸಿಪಿ ಮತ್ತು 44 ಕಾಂಗ್ರೆಸ್ ಸದಸ್ಯರಿದ್ದು ಉಳಿದವರು ಪಕ್ಷೇತರರಾಗಿದ್ದಾರೆ.

55 ಶಿವಸೇನೆ ಶಾಸಕರಲ್ಲಿ 40 ಜನ ಏಕನಾಥ್ ಶಿಂಧೆ ನೇತೃತ್ವದಲ್ಲಿ ಬಂಡಾಯವೆದ್ದ ಕಾರಣ ಶಿವಸೇನೆಯ ಬಲ ಕೇವಲ 15ಕ್ಕೆ ಕುಸಿದಿದೆ. ಹಾಗಾಗಿ ಸರ್ಕಾರದ ಬಲ 102ಕ್ಕೆ ಕುಸಿಯುತ್ತದೆ. ಏಕನಾಥ್ ಶಿಂಧೆಯ ಗುಂಪು ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಮೂರನೇ ಎರಡರಷ್ಟು ಸದಸ್ಯರನ್ನು (37) ಹೊಂದಿರಬೇಕು.

ಏಕನಾಥ್ ಶಿಂಧೆ ತಮ್ಮೊಡನೆ 37ಕ್ಕಿಂತ ಹೆಚ್ಚು ಶಿವಸೇನೆ ಶಾಸಕರನ್ನು ಹೊಂದಿದ್ದಲ್ಲಿ ಅವರು ತಮ್ಮದೇ ಪ್ರತ್ಯೇಕ ಪಕ್ಷವನ್ನು ಘೋಷಿಸಿಕೊಳ್ಳಬಹುದು. ಅಲ್ಲದೆ ಅವರು ಶಿವಸೇನೆಯ ಅಧಿಕೃತ ಚಿಹ್ನೆ ಪಡೆಯಲು ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಬಹುದು. ಈ ಹಿಂದೆ ಈ ರೀತಿಯ ಪ್ರಕರಣಗಳು ಎದುರಾದಾಗ ಬಹುಮತ ಹೊಂದಿದವರಿಗೆ ಪಕ್ಷದ ಚಿಹ್ನೆ ನೀಡಿದ ಉದಾಹರಣೆಗಳಿವೆ.

ಒಂದು ವೇಳೆ ಏಕನಾಥ್ ಶಿಂಧೆ ಜೊತೆಗಿರುವ ಶಿವಸೇನೆಯ 40 ಶಾಸಕರು ಬಿಜೆಪಿ ಸೇರುವುದಕ್ಕಾಗಿ ರಾಜೀನಾಮೆ ನೀಡಿದ್ದಲ್ಲಿ ಬಹುಮತಕ್ಕೆ 123 ಸ್ಥಾನಗಳು ಅಗತ್ಯ ಬೀಳುತ್ತವೆ. ಮಹಾವಿಕಾಸ್ ಅಘಾಡಿ ಸರ್ಕಾರದ ಬಳಿ 102 ಸದಸ್ಯರಿದ್ದರೆ ಬಿಜೆಪಿ ಬಳಿ 106 ಸದಸ್ಯರಿರುತ್ತಾರೆ. ಆದರೆ ಹೆಚ್ಚಿನ ಪಕ್ಷೇತರರು ಬಿಜೆಪಿ ಬೆಂಬಲಿಸುವ ಸಾಧ್ಯತೆಯಿದೆ.

ಏಕನಾಥ್ ಶಿಂಧೆ ಜೊತೆಗೆ ಹೋಗಿದ್ದ ಒಬ್ಬ ಶಿವಸೇನೆಯ ಶಾಸಕ ವಾಪಸ್ ಬಂದಿದ್ದು, ತನ್ನನ್ನು ಅಪಹರಿಸಿದ್ದರು ಎಂದು ದೂರಿದ್ದಾರೆ. ಇದೇ ರೀತಿ ಕನಿಷ್ಟ ಅರ್ಧದಷ್ಟು ಜನರನ್ನು ಶಿವಸೇನೆ ವಾಪಸ್ ಕರೆಸಿಕೊಂಡಲ್ಲಿ ಸರ್ಕಾರ ಉಳಿಯುತ್ತದೆ. ಇಲ್ಲದಿದ್ದಲ್ಲಿ ಅಸ್ಥಿರತೆ ಉಂಟಾಗಿ ಸರ್ಕಾರ ಬಿದ್ದುಹೋಗಲಿದೆ. ಬಿಜೆಪಿ ಬಹುಮತ ತೋರಿಸಿ ಅಧಿಕಾರಕ್ಕೆ ಬರಬಹುದು ಅಥವಾ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಬಹುದಾಗಿದೆ.

ಇದನ್ನೂ ಓದಿ; ಮಹಾರಾಷ್ಟ್ರ: ಬಂಡಾಯ ಶಾಸಕರಿಗೆ ಸಂಜೆ 5 ಗಂಟೆವರೆಗೆ ಗಡುವು ನೀಡಿದ ಉದ್ಧವ್ ಸರ್ಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...