Homeಅಂತರಾಷ್ಟ್ರೀಯಅಫ್ಘಾನಿಸ್ಥಾನದಲ್ಲಿ ಪ್ರಭಲ ಭೂಕಂಪನಕ್ಕೆ 950ಕ್ಕೂ ಹೆಚ್ಚು ಜನರು ಬಲಿ

ಅಫ್ಘಾನಿಸ್ಥಾನದಲ್ಲಿ ಪ್ರಭಲ ಭೂಕಂಪನಕ್ಕೆ 950ಕ್ಕೂ ಹೆಚ್ಚು ಜನರು ಬಲಿ

- Advertisement -
- Advertisement -

ಬುಧವಾರ ಅಫ್ಘಾನಿಸ್ಥಾನದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದ್ದು, 950ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ 600 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ದೂರದ ಪರ್ವತ ಪ್ರದೇಶದ ಹಳ್ಳಿಗಳಿಂದ ಮಾಹಿತಿ ಇನ್ನೂ ಬರಬೇಕಿರುವುದರಿಂದ ಸಾವು ನೋವುಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೂಕಂಪದಲ್ಲಿನ ಗಾಯಾಳುಗಳನ್ನು ಆಸ್ಪತ್ರೆಗೆ ತಲುಪಿಸಲು ಸೂಕ್ತ ವೈದ್ಯಕೀಯ ಸರಬರಾಜಿಗಾಗಿ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಾಗಿದೆ ಎಂದು ಆಂತರಿಕ ಸಚಿವಾಲಯದ ಅಧಿಕಾರಿ ಸಲಾವುದ್ದೀನ್ ಅಯೂಬಿ ತಿಳಿಸಿದ್ದಾರೆ.

ಮೃತರಲ್ಲಿ ಹೆಚ್ಚಿನವು ಪೂರ್ವ ಪ್ರಾಂತ್ಯದ ಪಕ್ತಿಕಾದಲ್ಲಿವೆ. ಅಲ್ಲಿ 255 ಜನರು ಸಾವನ್ನಪ್ಪಿದ್ದು, 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸಲಾವುದ್ದೀನ್ ಅಯೂಬಿ ತಿಳಿಸಿದ್ದಾರೆ. ಖೋಸ್ಟ್ ಪ್ರಾಂತ್ಯದಲ್ಲಿ 25 ಮಂದಿ ಸಾವನ್ನಪ್ಪಿದ್ದು, 90 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಹೆಚ್ಚುತ್ತಿರುವ ಅತ್ಯಾಚಾರ: ಪಾಕಿಸ್ತಾನದ ಪಂಜಾಬ್‌ನಲ್ಲಿ ‘ತುರ್ತು ಪರಿಸ್ಥಿತಿ’ ಘೋಷಣೆ

ಪಾಕಿಸ್ತಾನ, ಅಫ್ಘಾನಿಸ್ಥಾನ ಮತ್ತು ಭಾರತ ಸೇರಿದಂತೆ ಸುಮಾರು 119 ಮಿಲಿಯನ್ ಜನರು ಭೂಕಂಪನಕ್ಕೆ ಸಿಲುಕಿದ್ದಾರೆ ಎಂದು EMSC ಟ್ವಿಟರ್‌ನಲ್ಲಿ ತಿಳಿಸಿದೆ, ಆದರೆ ಪಾಕಿಸ್ತಾನದಲ್ಲಿ ಯಾವುದೇ ಹಾನಿ ಅಥವಾ ಸಾವುನೋವುಗಳ ವರದಿ ಸಿಕ್ಕಿಲ್ಲ. EMSC ಭೂಕಂಪದ ತೀವ್ರತೆಯನ್ನು 6.1 ಎಂದಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಭೂಕಂಪದ ಫೋಟೋ, ವಿಡಿಯೋಗಳು ಹರಿದಾಡತ್ತಿವೆ.

ಎರಡು ದಶಕಗಳ ಯುದ್ಧದ ನಂತರ ಅಮೆರಿಕಾ ನೇತೃತ್ವದ ಅಂತರಾಷ್ಟ್ರೀಯ ಪಡೆಗಳು ಹಿಂತೆಗೆದುಕೊಂಡ ಕಾರಣ, ತಾಲಿಬಾನ್ ಅಧಿಕಾರ ವಹಿಸಿಕೊಂಡ ನಂತರ ಅಫ್ಘಾನಿಸ್ಥಾನವು ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಇದರ ನಡುವೆಯೇ ಈ ವಿಪತ್ತು ಸಂಭವಿಸಿದೆ.

ತಾಲಿಬಾನ್ ಆಕ್ರಮಿಸಿಕೊಂಡ ಬಳಿಕ, ಅನೇಕ ರಾಷ್ಟ್ರಗಳು ಅಫ್ಘಾನಿಸ್ಥಾನದ ಬ್ಯಾಂಕಿಂಗ್ ಕ್ಷೇತ್ರದ ಮೇಲೆ ನಿರ್ಬಂಧಗಳನ್ನು ವಿಧಿಸಿದವು. ಜೊತೆಗೆ ಶತಕೋಟಿ ಡಾಲರ್ ಮೌಲ್ಯದ ಅಭಿವೃದ್ಧಿ ಸಹಾಯವನ್ನು ಕಡಿತಗೊಳಿಸಿದವು. ಆದರೂ, ವಿಶ್ವಸಂಸ್ಥೆಯಂತಹ ಅಂತರಾಷ್ಟ್ರೀಯ ಏಜೆನ್ಸಿಗಳು ಅಫ್ಘಾನಿಸ್ಥಾನದಲ್ಲಿ ಮಾನವೀಯ ನೆರವು ಮುಂದುವರೆಸಿವೆ. ಮಾನವೀಯ ನೆರವಿಗಾಗಿ ಭೂಕಂಪ ಪೀಡಿತ ಪ್ರದೇಶಕ್ಕೆ ತಂಡಗಳನ್ನು ಕಳುಹಿಸಲಾಗುತ್ತಿದೆ.


ಇದನ್ನೂ ಓದಿ: ಉದ್ಧವ್ ಸರ್ಕಾರಕ್ಕೆ ಸಂಕಷ್ಟ: ವಿಧಾನಸಭೆ ವಿಸರ್ಜನೆಯತ್ತ ರಾಜಕೀಯ ಬೆಳವಣಿಗೆ-ಸಂಜಯ್ ರಾವತ್ ಟ್ವೀಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...