Homeಅಂತರಾಷ್ಟ್ರೀಯಅಫ್ಘಾನಿಸ್ಥಾನದಲ್ಲಿ ಪ್ರಭಲ ಭೂಕಂಪನಕ್ಕೆ 950ಕ್ಕೂ ಹೆಚ್ಚು ಜನರು ಬಲಿ

ಅಫ್ಘಾನಿಸ್ಥಾನದಲ್ಲಿ ಪ್ರಭಲ ಭೂಕಂಪನಕ್ಕೆ 950ಕ್ಕೂ ಹೆಚ್ಚು ಜನರು ಬಲಿ

- Advertisement -
- Advertisement -

ಬುಧವಾರ ಅಫ್ಘಾನಿಸ್ಥಾನದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದ್ದು, 950ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ 600 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ದೂರದ ಪರ್ವತ ಪ್ರದೇಶದ ಹಳ್ಳಿಗಳಿಂದ ಮಾಹಿತಿ ಇನ್ನೂ ಬರಬೇಕಿರುವುದರಿಂದ ಸಾವು ನೋವುಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೂಕಂಪದಲ್ಲಿನ ಗಾಯಾಳುಗಳನ್ನು ಆಸ್ಪತ್ರೆಗೆ ತಲುಪಿಸಲು ಸೂಕ್ತ ವೈದ್ಯಕೀಯ ಸರಬರಾಜಿಗಾಗಿ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಾಗಿದೆ ಎಂದು ಆಂತರಿಕ ಸಚಿವಾಲಯದ ಅಧಿಕಾರಿ ಸಲಾವುದ್ದೀನ್ ಅಯೂಬಿ ತಿಳಿಸಿದ್ದಾರೆ.

ಮೃತರಲ್ಲಿ ಹೆಚ್ಚಿನವು ಪೂರ್ವ ಪ್ರಾಂತ್ಯದ ಪಕ್ತಿಕಾದಲ್ಲಿವೆ. ಅಲ್ಲಿ 255 ಜನರು ಸಾವನ್ನಪ್ಪಿದ್ದು, 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸಲಾವುದ್ದೀನ್ ಅಯೂಬಿ ತಿಳಿಸಿದ್ದಾರೆ. ಖೋಸ್ಟ್ ಪ್ರಾಂತ್ಯದಲ್ಲಿ 25 ಮಂದಿ ಸಾವನ್ನಪ್ಪಿದ್ದು, 90 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಹೆಚ್ಚುತ್ತಿರುವ ಅತ್ಯಾಚಾರ: ಪಾಕಿಸ್ತಾನದ ಪಂಜಾಬ್‌ನಲ್ಲಿ ‘ತುರ್ತು ಪರಿಸ್ಥಿತಿ’ ಘೋಷಣೆ

ಪಾಕಿಸ್ತಾನ, ಅಫ್ಘಾನಿಸ್ಥಾನ ಮತ್ತು ಭಾರತ ಸೇರಿದಂತೆ ಸುಮಾರು 119 ಮಿಲಿಯನ್ ಜನರು ಭೂಕಂಪನಕ್ಕೆ ಸಿಲುಕಿದ್ದಾರೆ ಎಂದು EMSC ಟ್ವಿಟರ್‌ನಲ್ಲಿ ತಿಳಿಸಿದೆ, ಆದರೆ ಪಾಕಿಸ್ತಾನದಲ್ಲಿ ಯಾವುದೇ ಹಾನಿ ಅಥವಾ ಸಾವುನೋವುಗಳ ವರದಿ ಸಿಕ್ಕಿಲ್ಲ. EMSC ಭೂಕಂಪದ ತೀವ್ರತೆಯನ್ನು 6.1 ಎಂದಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಭೂಕಂಪದ ಫೋಟೋ, ವಿಡಿಯೋಗಳು ಹರಿದಾಡತ್ತಿವೆ.

ಎರಡು ದಶಕಗಳ ಯುದ್ಧದ ನಂತರ ಅಮೆರಿಕಾ ನೇತೃತ್ವದ ಅಂತರಾಷ್ಟ್ರೀಯ ಪಡೆಗಳು ಹಿಂತೆಗೆದುಕೊಂಡ ಕಾರಣ, ತಾಲಿಬಾನ್ ಅಧಿಕಾರ ವಹಿಸಿಕೊಂಡ ನಂತರ ಅಫ್ಘಾನಿಸ್ಥಾನವು ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಇದರ ನಡುವೆಯೇ ಈ ವಿಪತ್ತು ಸಂಭವಿಸಿದೆ.

ತಾಲಿಬಾನ್ ಆಕ್ರಮಿಸಿಕೊಂಡ ಬಳಿಕ, ಅನೇಕ ರಾಷ್ಟ್ರಗಳು ಅಫ್ಘಾನಿಸ್ಥಾನದ ಬ್ಯಾಂಕಿಂಗ್ ಕ್ಷೇತ್ರದ ಮೇಲೆ ನಿರ್ಬಂಧಗಳನ್ನು ವಿಧಿಸಿದವು. ಜೊತೆಗೆ ಶತಕೋಟಿ ಡಾಲರ್ ಮೌಲ್ಯದ ಅಭಿವೃದ್ಧಿ ಸಹಾಯವನ್ನು ಕಡಿತಗೊಳಿಸಿದವು. ಆದರೂ, ವಿಶ್ವಸಂಸ್ಥೆಯಂತಹ ಅಂತರಾಷ್ಟ್ರೀಯ ಏಜೆನ್ಸಿಗಳು ಅಫ್ಘಾನಿಸ್ಥಾನದಲ್ಲಿ ಮಾನವೀಯ ನೆರವು ಮುಂದುವರೆಸಿವೆ. ಮಾನವೀಯ ನೆರವಿಗಾಗಿ ಭೂಕಂಪ ಪೀಡಿತ ಪ್ರದೇಶಕ್ಕೆ ತಂಡಗಳನ್ನು ಕಳುಹಿಸಲಾಗುತ್ತಿದೆ.


ಇದನ್ನೂ ಓದಿ: ಉದ್ಧವ್ ಸರ್ಕಾರಕ್ಕೆ ಸಂಕಷ್ಟ: ವಿಧಾನಸಭೆ ವಿಸರ್ಜನೆಯತ್ತ ರಾಜಕೀಯ ಬೆಳವಣಿಗೆ-ಸಂಜಯ್ ರಾವತ್ ಟ್ವೀಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...