Homeಮುಖಪುಟಮಹಾರಾಷ್ಟ್ರ: ಒಂದೇ ಕುಟುಂಬದ 9 ಜನರ ಆತ್ಮಹತ್ಯೆ ಪ್ರಕರಣ- ಸಾವಿಗೆ ಕಾರಣರಾದ 13 ಮಂದಿಯ ಬಂಧನ

ಮಹಾರಾಷ್ಟ್ರ: ಒಂದೇ ಕುಟುಂಬದ 9 ಜನರ ಆತ್ಮಹತ್ಯೆ ಪ್ರಕರಣ- ಸಾವಿಗೆ ಕಾರಣರಾದ 13 ಮಂದಿಯ ಬಂಧನ

- Advertisement -
- Advertisement -

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಸೋಮವಾರ ಮಧ್ಯಾಹ್ನ ಜಿಲ್ಲೆಯ ಮಹೈಸಾಲ್ ಪಟ್ಟಣದಲ್ಲಿ ಒಂದೇ ಕುಟುಂಬದ ಒಂಬತ್ತು ಸದಸ್ಯರು ಶವವಾಗಿ ಪತ್ತೆಯಾಗಿದ್ದ ಘಟನೆ ಭಾರಿ ಆತಂಕಕ್ಕೆ ಕಾರಣವಾಗಿತ್ತು. ಸಾಲಗಾರರ ಕಿರುಕುಳವೇ ಸಾವಿಗೆ ಕಾರಣ ಎಂದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.

ತನಿಖೆ ನಡೆಸಿದ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಡ್ಡಿದಾರರು ಸೇರಿದಂತೆ 13 ಜನ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಾಲ ಮರುಪಾವತಿಗೆ ಸಂಬಂಧಿಸಿದಂತೆ ಕುಟುಂಬಕ್ಕೆ ಕಿರುಕುಳ ನೀಡಿದ್ದಕ್ಕಾಗಿ ಸೋಮವಾರ ರಾತ್ರಿ 25 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಅದರಲ್ಲಿ ಈವರೆಗೆ 13 ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (ದೌರ್ಜನ್ಯ ತಡೆ) ಕಾಯ್ದೆಯನ್ನು ಸಹ ಪೊಲೀಸರು ಹಾಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ರಾಜಕೀಯ ಸಂಕಷ್ಟ: ಸರ್ಕಾರದ ಅಳಿವು-ಉಳಿವಿನ ನಂಬರ್ ಗೇಮ್ ಹೀಗಿದೆ

ಸ್ಥಳೀಯ ಅಪರಾಧ ವಿಭಾಗದ ಪೊಲೀಸ್ ಇನ್ಸ್‌ಪೆಕ್ಟರ್ ಅಜಯ್ ಸಿಂದ್ಕರ್ ಮಾತನಾಡಿ, “ವಾನ್ಮೋರ್ ಸಹೋದರರು ಮತ್ತು ಕುಟುಂಬದ ಇತರ ಕೆಲವು ಸದಸ್ಯರು ಆರೋಪಿ ಲೇವಾದೇವಿಗಾರರಿಂದ ಬಡ್ಡಿಗೆ ಸಾಲ ಪಡೆದಿದ್ದರು. ಅವರು ನಿಯಮಿತವಾಗಿ ಬಡ್ಡಿಯ ಮೊತ್ತವನ್ನು ಪಾವತಿಸುತ್ತಿದ್ದರೂ, ಲೇವಾದೇವಿಗಾರರು ಮತ್ತು ಇತರ ಆರೋಪಿಗಳು ಪದೇ ಪದೇ ಸಾರ್ವಜನಿಕವಾಗಿ ಅವರಿಗೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಕಿರುಕುಳ ನೀಡುತ್ತಿದ್ದರು. ಕಿರುಕುಳ ಸಹಿಸಲಾಗದೆ ಎಲ್ಲರೂ ಆತ್ಮಹತ್ಯೆಗೆ ಶರಣಾಗಿದ್ದಾರೆ” ಎಂದು ತಿಳಿಸಿದ್ದಾರೆ.

ಸದ್ಯ 13 ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದ 12 ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಲು ಸಾಂಗ್ಲಿ, ಕೊಲ್ಲಾಪುರ, ಸೊಲ್ಲಾಪುರ ಮತ್ತು ಕರ್ನಾಟಕಕ್ಕೆ ತಂಡಗಳನ್ನು ಕಳುಹಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಮಧ್ಯಾಹ್ನ ಇಬ್ಬರು ಸಹೋದರರಾದ ಮಾಣಿಕ್ ವಾನ್ಮೋರ್ (49) ಮತ್ತು ಪೋಪಟ್ ವಾನ್ಮೋರ್ (52), ಅವರ ಪತ್ನಿಯರು, ಮಕ್ಕಳು ಮತ್ತು ತಾಯಿ ಪ್ರತ್ಯೇಕ ಮನೆಗಳಲ್ಲಿ ಶವವಾಗಿ ಪತ್ತೆಯಾಗಿದ್ದರು. ಪೊಲೀಸ್ ಅಧಿಕಾರಿಗಳಿಗೆ ಮನೆಯಲ್ಲಿ ಪತ್ರವೊಂದು ದೊರಕಿ, ಸಾಲದ ಕಾರಣದಿಂದ ಕುಟುಂಬ ಸದಸ್ಯರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬುದು ಬೆಳಕಿಗೆ ಬಂದಿತ್ತು. ಅಣ್ಣ ತಮ್ಮಂದಿರಾದ ಪಶುವೈದ್ಯ ಮಾಣಿಕ್ ಮತ್ತು ಶಿಕ್ಷಕರಾಗಿದ್ದ ಪೋಪಟ್ ಒಂದು ಕಿಲೋಮೀಟರ್ ಅಂತರದಲ್ಲಿ ವಾಸಿಸುತ್ತಿದ್ದರು.

ಮಾಣಿಕ್ ವಾನ್ಮೋರ್ ಅವರ ತಾಯಿ ಅಕ್ಕತೈ (72), ಅವರ ಪತ್ನಿ ರೇಖಾ (45), ಅವರ ಮಕ್ಕಳಾದ ಅನಿತಾ (28) ಮತ್ತು ಆದಿತ್ಯ (15) ಮತ್ತು ಪೋಪಟ್ ಅವರ ಮಗ ಶುಭಂ (28) ಅವರ ಶವಗಳು ಮಾಣಿಕ್‌ ಅವರ ಮನೆಯಲ್ಲಿ ಪತ್ತೆಯಾಗಿದ್ದವು. ಪೋಪಟ್ ವಾನ್ಮೋರ್ ಅವರ ಪತ್ನಿ ಸಂಗೀತಾ (48) ಮತ್ತು ಮಗಳು ಅರ್ಚನಾ (30) ಅವರ ಮೃತದೇಹಗಳು ಪೋಪಟ್ ಅವರ ಮನೆಯಲ್ಲಿ ಪತ್ತೆಯಾಗಿದ್ದವು.


ಇದನ್ನೂ ಓದಿ: ಮಹಾರಾಷ್ಟ್ರ: ಒಂದೇ ಕುಟುಂಬದ ಒಂಬತ್ತು ಮಂದಿಯ ಮೃತದೇಹಗಳು ಪತ್ತೆ, ತನಿಖೆ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...