Homeಕರ್ನಾಟಕಚಾಮರಾಜಪೇಟೆ ಈದ್ಗಾ ಮೈದಾನ ಬಿಬಿಎಂಪಿಗೆ ಸೇರಿಲ್ಲ: ಆಯುಕ್ತರ ಸ್ಪಷ್ಟನೆ

ಚಾಮರಾಜಪೇಟೆ ಈದ್ಗಾ ಮೈದಾನ ಬಿಬಿಎಂಪಿಗೆ ಸೇರಿಲ್ಲ: ಆಯುಕ್ತರ ಸ್ಪಷ್ಟನೆ

ಈ ಜಾಗ ತನ್ನದೆಂದು ಪ್ರತಿಕ್ರಿಯೆ ನೀಡಿದ್ದ ವಕ್ಫ್‌ ಮಂಡಳಿ ಸುಪ್ರೀಂಕೋರ್ಟ್ ತೀರ್ಪನ್ನು ಉಲ್ಲೇಖಿಸಿತ್ತು. ಬಿಬಿಎಂಪಿ ತನ್ನ ಪ್ರತಿಪಾದನೆಯಿಂದ ಹಿಂದೆ ಸರಿದು, ವಿವಾದಕ್ಕೆ ತೆರೆ ಎಳೆದಿದೆ.

- Advertisement -
- Advertisement -

ಚಾಮರಾಜಪೇಟೆ ಈದ್ಗಾ ಮೈದಾನವು ಬಿಬಿಎಂಪಿ ಮಾಲೀಕತ್ವದಲ್ಲಿ ಇಲ್ಲ. ಖಾತೆ ಮಾಡಿಸಿಕೊಳ್ಳಲು ವಕ್ಫ್​ ಮಂಡಳಿ ಅರ್ಜಿ ಸಲ್ಲಿಸಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬುಧವಾರ ಹೇಳಿದ್ದಾರೆ.

ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಅವರು, ಯೋಗ ಮತ್ತು ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯಿಸುವ ಅಧಿಕಾರ ನಮಗೆ ಇಲ್ಲ. ಈದ್ಗಾ ಮೈದಾನಕ್ಕೆ ಸಂಬಂಧಿಸಿದಂತೆ ವಕ್ಫ್‌ ಬೋರ್ಡ್ ನಮ್ಮ ಗಮನಕ್ಕೆ ತಂದಿರುವ ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಈದ್ಗಾ ಮೈದಾನ ಬಿಬಿಎಂಪಿ ಮಾಲೀಕತ್ವದಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಗರ ವ್ಯಾಪ್ತಿಯಲ್ಲಿ ಸರ್ವೇ ನಡೆದಾಗ ಈದ್ಗಾ ಮೈದಾನವು ನಮ್ಮದು ಎಂದು ಯಾರೂ ಹೆಸರು ಬರೆಸಲಿಲ್ಲ. ಹೀಗಾಗಿ ಅದು ಬಿಬಿಎಂಪಿ ಹೆಸರಿಗೆ ಬಂದಿದೆ. ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ವಕ್ಫ್​ ಮಂಡಳಿ ಅರ್ಜಿ ಸಲ್ಲಿಸಬಹುದು. ಅವರು ಅರ್ಜಿ ಸಲ್ಲಿಸಿದರೆ ದಾಖಲೆ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಏನಿದು ವಿವಾದ?

ಚಾಮರಾಜಪೇಟೆಯ ಈದ್ಗಾ ಮೈದಾನದ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಕೆಲವು ಹಿಂದುತ್ವ ಸಂಘಟನೆಗಳು ಬಿಬಿಎಂಪಿಯಿಂದ ಸ್ಪಷ್ಟೀಕರಣ ಕೇಳಿದ್ದವು. ವಿಚಾರವಾದಿಗಳ ಹತ್ಯೆಗಳಲ್ಲಿ ಹೆಸರಿಸಲಾಗಿ ಆರೋಪ ಎದುರಿಸುತ್ತಿರುವ ಸನಾತನ ಸಂಸ್ಥೆ ಹಾಗೂ ಹಿಂದೂ ಜನಜಾಗೃತಿ ಸಮಿತಿ ಸಂಘಟನೆಗಳು ವಿವಾದ ಸೃಷ್ಟಿಗೆ ಮುಂದಾಗಿ, “ಈ ಆಟದ ಮೈದಾನ ಬಿಬಿಎಂಪಿಗೆ ಸೇರಿರುವುದರಿಂದ ತಮಗೂ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕು” ಎಂದಿದ್ದವು.

ಇದನ್ನೂ ಓದಿರಿ: ಈದ್ಗಾ ಮೈದಾನ ವಿವಾದ; ಬದಲಾದ ಚಾಮರಾಜಪೇಟೆಯ ಕಥನ ಭಾರತದ್ದೂ ಹೌದು!

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಬಿಬಿಎಂಪಿ, “ಇದು ಬಿಬಿಎಂಪಿ ಆಸ್ತಿಯಾಗಿದ್ದು, ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತರು ಉಸ್ತುವಾರಿ ವಹಿಸಿಕೊಂಡಿದ್ದಾರೆ. ಆಟದ ಮೈದಾನದಲ್ಲಿ ವರ್ಷಕ್ಕೆ ಎರಡು ಬಾರಿ ಮುಸ್ಲಿಮರಿಗೆ ಪ್ರಾರ್ಥನೆ ಸಲ್ಲಿಸಲು ಈ ಸ್ಥಳವನ್ನು ನೀಡಬಹುದು ಎಂದು ನ್ಯಾಯಾಲಯದ ಆದೇಶವಿದೆ” ಎಂದಿತ್ತು.

“ನ್ಯಾಯಾಲಯದ ಆದೇಶದ ಪ್ರಕಾರ ಪಶ್ಚಿಮ ವಲಯ ಜಂಟಿ ಆಯುಕ್ತರ ಅನುಮತಿಯೊಂದಿಗೆ ಮುಸ್ಲಿಮರು ರಂಜಾನ್ ಮತ್ತು ಬಕ್ರೀದ್ ಸಮಯದಲ್ಲಿ ಪ್ರಾರ್ಥನೆಗಾಗಿ ಇಲ್ಲಿ ಸೇರುತ್ತಾರೆ” ಎಂದು ತಿಳಿಸಿತ್ತು.

“ಪ್ರತಿ ವರ್ಷ ರಂಜಾನ್ ಮತ್ತು ಬಕ್ರೀದ್ ಸಮಯದಲ್ಲಿ, ಈ ಸ್ಥಳವು ಧಾರ್ಮಿಕ ಚಟುವಟಿಕೆಯ ಕೇಂದ್ರವಾಗುತ್ತದೆ. ಬಕ್ರೀದ್ ಸಮಯದಲ್ಲಿ ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು ಮತ್ತು ಇತರ ಜಿಲ್ಲೆಗಳ ರೈತರು ಕುರಿ ಮತ್ತು ಮೇಕೆಗಳನ್ನು ಇಲ್ಲಿಗೆ ತಂದು ಮಾರುತ್ತಾರೆ. ಈ ಎರಡು ಸಂದರ್ಭಗಳನ್ನು ಹೊರತುಪಡಿಸಿ, ಇತರ ಚಟುವಟಿಕೆಗಳಿಗೆ ಅವಕಾಶ ನೀಡುವ ಬಗ್ಗೆ ಜಂಟಿ ಆಯುಕ್ತರು ನಿರ್ಧಾರ ತೆಗೆದುಕೊಳ್ಳಬಹುದು” ಎಂದು ಪಾಲಿಕೆ ಹೇಳಿತ್ತು.

“ಈ ಜಾಗವನ್ನು ಬೇರೆ ಯಾವುದೇ ಉದ್ದೇಶಕ್ಕೆ ಬಳಸಲು ಸಿದ್ಧರಿರುವ ಯಾರಾದರೂ ಬಿಬಿಎಂಪಿಗೆ ಪ್ರಸ್ತಾವನೆಯನ್ನು ಕಳುಹಿಸಬಹುದು. ಅರ್ಜಿಯನ್ನು ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ” ಎಂದು ಪಾಲಿಕೆ ತಿಳಿಸಿತ್ತು.

ಈ ಮೂಲಕ ಈ ಜಾಗ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಗೆ ಸೇರಿದ್ದೋ ಅಥವಾ ಬಿಬಿಎಂಪಿಗೆ ಸೇರಿದ್ದೋ ಎಂಬ ಪ್ರಶ್ನೆ ಎದ್ದಿತ್ತು.

“ಚಾಮರಾಜಪೇಟೆ ಈದ್ಗಾ ಮೈದಾನ ತಮ್ಮದೆಂದು ಹೇಳಿಕೆ ನೀಡಿರುವ ಬಿಬಿಎಂಪಿ ತನ್ನ ಹೇಳಿಕೆಯನ್ನು ಹಿಂಪಡೆಯಬೇಕು” ಎಂದು ಕೇಂದ್ರ ಮುಸ್ಲಿಂ ಅಸೋಸಿಯೇಷನ್ (ಸಿಎಂಎ) ಆಗ್ರಹಿಸಿತ್ತು.

ಬಿಬಿಎಂಪಿ ವಿಶೇಷ ಆಯುಕ್ತರಿಗೆ ಪತ್ರ ಬರೆದಿದ್ದ ಸಿಎಂಎ ಪ್ರಧಾನ ಕಾರ್ಯದರ್ಶಿ ಡಾ.ಜಹೀರುದ್ದೀನ್ ಅಹ್ಮದ್, “ಈ ಭೂಮಿ ವಕ್ಫ್‌ಗೆ ಸೇರಿದೆ. ಸರ್ವೋಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠವು ಅಂದಿನ ಬೆಂಗಳೂರು ಸಿಟಿ ಕಾರ್ಪೊರೇಶನ್ ಪ್ರತಿಪಾದನೆಯನ್ನು ವಜಾಗೊಳಿಸಿತ್ತು. ಈ ಕುರಿತು ವಕ್ಫ್ ಗೆಜೆಟ್ ಅಧಿಸೂಚನೆಯನ್ನು ಜೂನ್ 7, 1965ರಂದು ಹೊರಡಿಸಿದೆ” ಎಂದು ತಿಳಿಸಿದ್ದರು.

“ಪಾಲಿಕೆಯು ಈದ್ಗಾ ಮೈದಾನದ ನೈಋತ್ಯ ಮೂಲೆಯಲ್ಲಿ ಅನಧಿಕೃತವಾಗಿ ವಾರ್ಡ್ ಕಚೇರಿಯನ್ನು ನಿರ್ಮಿಸಿತ್ತು. ಆದರೆ 1971ರ ಆಗಸ್ಟ್ 28ರಂದು ಅಂದಿನ ಮೇಯರ್ ಎಂ.ಬಿ.ಲಿಂಗಯ್ಯ ಮತ್ತು ಸಿಎಂಎ ಪ್ರತಿನಿಧಿಗಳ ನಡುವೆ ಸಭೆ ನಡೆಯಿತು. 30 ವರ್ಷಗಳ ಕಾಲ ಜಾಗವನ್ನು ಗುತ್ತಿಗೆ ನೀಡಲು ಒಪ್ಪಿಗೆ ನೀಡಲಾಯಿತು” ಎಂದಿದ್ದರು ಅಹ್ಮದ್.

“1994ರ ಮಾರ್ಚ್ 3ರಂದು ಪಾಲಿಕೆಗೆ ಪತ್ರ ಬರೆದು ವಾರ್ಡ್ ಕಚೇರಿಯನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸಿಲ್ಲ. ಈದ್ಗಾ ಮೈದಾನ ಆಟದ ಮೈದಾನವಾಗಿದ್ದು, ಅದು ತಮಗೆ ಸೇರಿದೆ ಎಂದು ಬಿಬಿಎಂಪಿ ಹೇಳಿರುವುದು ಅಚ್ಚರಿಯ ಸಂಗತಿಯಾಗಿದೆ. ಬಿಬಿಎಂಪಿ ತನ್ನ ಹೇಳಿಕೆಯನ್ನು ವಾಪಸ್ ಪಡೆಯಬೇಕು” ಎಂದು ಅವರು ಆಗ್ರಹಿಸಿದ್ದರು.

’ನ್ಯಾಯಪಥ’ದೊಂದಿಗೆ ಮಾತನಾಡಿದ್ದ ವಕ್ಫ್ ಮಂಡಳಿ ಕಾರ್ಯ ನಿರ್ವಾಹಕ ಅಧಿಕಾರಿ ಪರ್ವೀಜ಼್ ಖಾನ್ ಕೂಡ ಇದೇ ಪ್ರತಿಪಾದನೆಯನ್ನು ಮಾಡಿದ್ದರು. “ಸುಪ್ರೀಂ ಕೋರ್ಟ್ ಆದೇಶದಲ್ಲಿ ಎಲ್ಲವೂ ಸ್ಪಷ್ಟವಾಗಿದೆ. ಅದು ಸಾರ್ವಜನಿಕವಾಗಿಯೂ ಲಭ್ಯವಿದೆ. ಈಗ ಬಿಬಿಎಂಪಿಯವರು ತಮ್ಮದೆಂದು ಯಾಕೆ ಹೇಳುತ್ತಿದ್ದಾರೆಂದು ಗೊತ್ತಿಲ್ಲ. ಎಲ್ಲ ದಾಖಲೆಗಳನ್ನು ಬಿಬಿಎಂಪಿಗೆ ಸಲ್ಲಿಸಿದ್ದೇವೆ. ಕಾನೂನು ಪ್ರಕ್ರಿಯೆ ನಡೆಯಬೇಕು ಎಂದು ಬಿಬಿಎಂಪಿ ತಿಳಿಸಿದೆ” ಎಂದಿದ್ದರು.

ಇದನ್ನೂ ಓದಿ: ಈದ್ಗಾ ಮೈದಾನ ವಿವಾದ; ಬದಲಾದ ಚಾಮರಾಜಪೇಟೆಯ ಕಥನ ಭಾರತದ್ದೂ ಹೌದು!

“ನ್ಯಾಯಾಲಯದ ಆದೇಶವೇ ಅಂತಿಮ. ಹೀಗಾಗಿ ಯಾರು ಏನೇ ಹೇಳಿದರೂ ನಾವು ಅತಿಯಾದ ಪ್ರತಿಕ್ರಿಯೆ ನೀಡಲು ಇಚ್ಛಿಸುವುದಿಲ್ಲ. ಎರಡು ಸರ್ಕಾರಿ ಸಂಸ್ಥೆಗಳ ನಡುವೆ ಈ ಗೊಂದಲ ಏರ್ಪಟ್ಟಿದೆ. ನಾವು ಕಾನೂನಿನ ಚೌಕಟ್ಟಿನಲ್ಲಿ ಸಾಗುತ್ತೇವೆ” ಎಂದು ತಿಳಿಸಿದ್ದರು.

“ಇಷ್ಟು ವರ್ಷ ಕಳೆದರೂ ವಕ್ಫ್ ಮಂಡಳಿ ಈ ಮೈದಾನಕ್ಕೆ ತಂತಿ ಬೇಲಿಯನ್ನು ಹಾಕಿಲ್ಲ. ಎಲ್ಲರೂ ಜೊತೆಯಲ್ಲಿ ಇರಬೇಕೆಂಬುದು ನಮ್ಮ ಆಶಯ. ಇತ್ತೀಚೆಗೆ ಈ ವಿವಾದ ಬಂದಿದೆ. ಹೀಗಾಗಿ ವಿವಾದ ಸೃಷ್ಟಿಸಲು ಯತ್ನಿಸುವವರಿಗೆ ಪ್ರತಿಕ್ರಿಯೆ ನೀಡಲು ನಾವು ಬಯಸುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದರು.

ಬಿಬಿಎಂಪಿ ಪಶ್ಚಿಮ ವಿಭಾಗದ ಆಯುಕ್ತರಾದ ಶ್ರೀನಿವಾಸ್ ’ನ್ಯಾಯಪಥ’ಕ್ಕೆ ಪ್ರತಿಕ್ರಿಯೆ ನೀಡಿ, “ಸುಪ್ರೀಂ ಕೋರ್ಟ್ ಆದೇಶವಿರುವ ದಾಖಲೆಗಳನ್ನು ವಕ್ಫ್ ಬೋರ್ಡ್ ಕಳುಹಿಸಿಕೊಟ್ಟಿದೆ. ಇದು ಬಿಬಿಎಂಪಿಗೆ ಸೇರಿದೆ ಎಂಬ ದಾಖಲೆಗಳೂ ಇವೆ. ಅವುಗಳನ್ನು ಮುಖ್ಯ ಕಚೇರಿಯ ಕಾನೂನು ವಿಭಾಗಕ್ಕೆ ಸಲ್ಲಿಸಿದ್ದೇವೆ. ಈಗ ಇರುವ ಪ್ರಸ್ತುತ ದಾಖಲೆಗಳ ಪ್ರಕಾರ ಈ ಆಟದ ಮೈದಾನ ಬಿಬಿಎಂಪಿಗೆ ಸೇರಿದೆ. ಈ ಸಮಸ್ಯೆ ಇತ್ಯರ್ಥವಾಗಲು ಇನ್ನೂ ಹತ್ತು ದಿನ ಬೇಕಾಗಬಹುದು. ಈ ಸ್ಥಳವು ಯಾರಿಗೆ ಸೇರಿದ್ದೆಂದು ತಿಳಿಯಲು ಹಳೆಯ ದಾಖಲೆಗಳನ್ನು ಕಳುಹಿಸಿಕೊಡುವಂತೆ ಕಂದಾಯ ಇಲಾಖೆಗೂ ಪತ್ರ ಬರೆದಿದ್ದೇವೆ” ಎಂದು ಹೇಳಿದ್ದರು.

ಕೊನೆಗೂ ಬಿಬಿಎಂಪಿ ತನ್ನ ಪ್ರತಿಪಾದನೆಯಿಂದ ಹಿಂದೆ ಸರಿದಿದ್ದು, ವಿವಾದಕ್ಕೆ ತೆರೆ ಎಳೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...