Homeಕರ್ನಾಟಕಚಾಮರಾಜಪೇಟೆ ಈದ್ಗಾ ಮೈದಾನ ಬಿಬಿಎಂಪಿಗೆ ಸೇರಿಲ್ಲ: ಆಯುಕ್ತರ ಸ್ಪಷ್ಟನೆ

ಚಾಮರಾಜಪೇಟೆ ಈದ್ಗಾ ಮೈದಾನ ಬಿಬಿಎಂಪಿಗೆ ಸೇರಿಲ್ಲ: ಆಯುಕ್ತರ ಸ್ಪಷ್ಟನೆ

ಈ ಜಾಗ ತನ್ನದೆಂದು ಪ್ರತಿಕ್ರಿಯೆ ನೀಡಿದ್ದ ವಕ್ಫ್‌ ಮಂಡಳಿ ಸುಪ್ರೀಂಕೋರ್ಟ್ ತೀರ್ಪನ್ನು ಉಲ್ಲೇಖಿಸಿತ್ತು. ಬಿಬಿಎಂಪಿ ತನ್ನ ಪ್ರತಿಪಾದನೆಯಿಂದ ಹಿಂದೆ ಸರಿದು, ವಿವಾದಕ್ಕೆ ತೆರೆ ಎಳೆದಿದೆ.

- Advertisement -
- Advertisement -

ಚಾಮರಾಜಪೇಟೆ ಈದ್ಗಾ ಮೈದಾನವು ಬಿಬಿಎಂಪಿ ಮಾಲೀಕತ್ವದಲ್ಲಿ ಇಲ್ಲ. ಖಾತೆ ಮಾಡಿಸಿಕೊಳ್ಳಲು ವಕ್ಫ್​ ಮಂಡಳಿ ಅರ್ಜಿ ಸಲ್ಲಿಸಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬುಧವಾರ ಹೇಳಿದ್ದಾರೆ.

ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಅವರು, ಯೋಗ ಮತ್ತು ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯಿಸುವ ಅಧಿಕಾರ ನಮಗೆ ಇಲ್ಲ. ಈದ್ಗಾ ಮೈದಾನಕ್ಕೆ ಸಂಬಂಧಿಸಿದಂತೆ ವಕ್ಫ್‌ ಬೋರ್ಡ್ ನಮ್ಮ ಗಮನಕ್ಕೆ ತಂದಿರುವ ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಈದ್ಗಾ ಮೈದಾನ ಬಿಬಿಎಂಪಿ ಮಾಲೀಕತ್ವದಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಗರ ವ್ಯಾಪ್ತಿಯಲ್ಲಿ ಸರ್ವೇ ನಡೆದಾಗ ಈದ್ಗಾ ಮೈದಾನವು ನಮ್ಮದು ಎಂದು ಯಾರೂ ಹೆಸರು ಬರೆಸಲಿಲ್ಲ. ಹೀಗಾಗಿ ಅದು ಬಿಬಿಎಂಪಿ ಹೆಸರಿಗೆ ಬಂದಿದೆ. ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ವಕ್ಫ್​ ಮಂಡಳಿ ಅರ್ಜಿ ಸಲ್ಲಿಸಬಹುದು. ಅವರು ಅರ್ಜಿ ಸಲ್ಲಿಸಿದರೆ ದಾಖಲೆ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಏನಿದು ವಿವಾದ?

ಚಾಮರಾಜಪೇಟೆಯ ಈದ್ಗಾ ಮೈದಾನದ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಕೆಲವು ಹಿಂದುತ್ವ ಸಂಘಟನೆಗಳು ಬಿಬಿಎಂಪಿಯಿಂದ ಸ್ಪಷ್ಟೀಕರಣ ಕೇಳಿದ್ದವು. ವಿಚಾರವಾದಿಗಳ ಹತ್ಯೆಗಳಲ್ಲಿ ಹೆಸರಿಸಲಾಗಿ ಆರೋಪ ಎದುರಿಸುತ್ತಿರುವ ಸನಾತನ ಸಂಸ್ಥೆ ಹಾಗೂ ಹಿಂದೂ ಜನಜಾಗೃತಿ ಸಮಿತಿ ಸಂಘಟನೆಗಳು ವಿವಾದ ಸೃಷ್ಟಿಗೆ ಮುಂದಾಗಿ, “ಈ ಆಟದ ಮೈದಾನ ಬಿಬಿಎಂಪಿಗೆ ಸೇರಿರುವುದರಿಂದ ತಮಗೂ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕು” ಎಂದಿದ್ದವು.

ಇದನ್ನೂ ಓದಿರಿ: ಈದ್ಗಾ ಮೈದಾನ ವಿವಾದ; ಬದಲಾದ ಚಾಮರಾಜಪೇಟೆಯ ಕಥನ ಭಾರತದ್ದೂ ಹೌದು!

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಬಿಬಿಎಂಪಿ, “ಇದು ಬಿಬಿಎಂಪಿ ಆಸ್ತಿಯಾಗಿದ್ದು, ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತರು ಉಸ್ತುವಾರಿ ವಹಿಸಿಕೊಂಡಿದ್ದಾರೆ. ಆಟದ ಮೈದಾನದಲ್ಲಿ ವರ್ಷಕ್ಕೆ ಎರಡು ಬಾರಿ ಮುಸ್ಲಿಮರಿಗೆ ಪ್ರಾರ್ಥನೆ ಸಲ್ಲಿಸಲು ಈ ಸ್ಥಳವನ್ನು ನೀಡಬಹುದು ಎಂದು ನ್ಯಾಯಾಲಯದ ಆದೇಶವಿದೆ” ಎಂದಿತ್ತು.

“ನ್ಯಾಯಾಲಯದ ಆದೇಶದ ಪ್ರಕಾರ ಪಶ್ಚಿಮ ವಲಯ ಜಂಟಿ ಆಯುಕ್ತರ ಅನುಮತಿಯೊಂದಿಗೆ ಮುಸ್ಲಿಮರು ರಂಜಾನ್ ಮತ್ತು ಬಕ್ರೀದ್ ಸಮಯದಲ್ಲಿ ಪ್ರಾರ್ಥನೆಗಾಗಿ ಇಲ್ಲಿ ಸೇರುತ್ತಾರೆ” ಎಂದು ತಿಳಿಸಿತ್ತು.

“ಪ್ರತಿ ವರ್ಷ ರಂಜಾನ್ ಮತ್ತು ಬಕ್ರೀದ್ ಸಮಯದಲ್ಲಿ, ಈ ಸ್ಥಳವು ಧಾರ್ಮಿಕ ಚಟುವಟಿಕೆಯ ಕೇಂದ್ರವಾಗುತ್ತದೆ. ಬಕ್ರೀದ್ ಸಮಯದಲ್ಲಿ ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು ಮತ್ತು ಇತರ ಜಿಲ್ಲೆಗಳ ರೈತರು ಕುರಿ ಮತ್ತು ಮೇಕೆಗಳನ್ನು ಇಲ್ಲಿಗೆ ತಂದು ಮಾರುತ್ತಾರೆ. ಈ ಎರಡು ಸಂದರ್ಭಗಳನ್ನು ಹೊರತುಪಡಿಸಿ, ಇತರ ಚಟುವಟಿಕೆಗಳಿಗೆ ಅವಕಾಶ ನೀಡುವ ಬಗ್ಗೆ ಜಂಟಿ ಆಯುಕ್ತರು ನಿರ್ಧಾರ ತೆಗೆದುಕೊಳ್ಳಬಹುದು” ಎಂದು ಪಾಲಿಕೆ ಹೇಳಿತ್ತು.

“ಈ ಜಾಗವನ್ನು ಬೇರೆ ಯಾವುದೇ ಉದ್ದೇಶಕ್ಕೆ ಬಳಸಲು ಸಿದ್ಧರಿರುವ ಯಾರಾದರೂ ಬಿಬಿಎಂಪಿಗೆ ಪ್ರಸ್ತಾವನೆಯನ್ನು ಕಳುಹಿಸಬಹುದು. ಅರ್ಜಿಯನ್ನು ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ” ಎಂದು ಪಾಲಿಕೆ ತಿಳಿಸಿತ್ತು.

ಈ ಮೂಲಕ ಈ ಜಾಗ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಗೆ ಸೇರಿದ್ದೋ ಅಥವಾ ಬಿಬಿಎಂಪಿಗೆ ಸೇರಿದ್ದೋ ಎಂಬ ಪ್ರಶ್ನೆ ಎದ್ದಿತ್ತು.

“ಚಾಮರಾಜಪೇಟೆ ಈದ್ಗಾ ಮೈದಾನ ತಮ್ಮದೆಂದು ಹೇಳಿಕೆ ನೀಡಿರುವ ಬಿಬಿಎಂಪಿ ತನ್ನ ಹೇಳಿಕೆಯನ್ನು ಹಿಂಪಡೆಯಬೇಕು” ಎಂದು ಕೇಂದ್ರ ಮುಸ್ಲಿಂ ಅಸೋಸಿಯೇಷನ್ (ಸಿಎಂಎ) ಆಗ್ರಹಿಸಿತ್ತು.

ಬಿಬಿಎಂಪಿ ವಿಶೇಷ ಆಯುಕ್ತರಿಗೆ ಪತ್ರ ಬರೆದಿದ್ದ ಸಿಎಂಎ ಪ್ರಧಾನ ಕಾರ್ಯದರ್ಶಿ ಡಾ.ಜಹೀರುದ್ದೀನ್ ಅಹ್ಮದ್, “ಈ ಭೂಮಿ ವಕ್ಫ್‌ಗೆ ಸೇರಿದೆ. ಸರ್ವೋಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠವು ಅಂದಿನ ಬೆಂಗಳೂರು ಸಿಟಿ ಕಾರ್ಪೊರೇಶನ್ ಪ್ರತಿಪಾದನೆಯನ್ನು ವಜಾಗೊಳಿಸಿತ್ತು. ಈ ಕುರಿತು ವಕ್ಫ್ ಗೆಜೆಟ್ ಅಧಿಸೂಚನೆಯನ್ನು ಜೂನ್ 7, 1965ರಂದು ಹೊರಡಿಸಿದೆ” ಎಂದು ತಿಳಿಸಿದ್ದರು.

“ಪಾಲಿಕೆಯು ಈದ್ಗಾ ಮೈದಾನದ ನೈಋತ್ಯ ಮೂಲೆಯಲ್ಲಿ ಅನಧಿಕೃತವಾಗಿ ವಾರ್ಡ್ ಕಚೇರಿಯನ್ನು ನಿರ್ಮಿಸಿತ್ತು. ಆದರೆ 1971ರ ಆಗಸ್ಟ್ 28ರಂದು ಅಂದಿನ ಮೇಯರ್ ಎಂ.ಬಿ.ಲಿಂಗಯ್ಯ ಮತ್ತು ಸಿಎಂಎ ಪ್ರತಿನಿಧಿಗಳ ನಡುವೆ ಸಭೆ ನಡೆಯಿತು. 30 ವರ್ಷಗಳ ಕಾಲ ಜಾಗವನ್ನು ಗುತ್ತಿಗೆ ನೀಡಲು ಒಪ್ಪಿಗೆ ನೀಡಲಾಯಿತು” ಎಂದಿದ್ದರು ಅಹ್ಮದ್.

“1994ರ ಮಾರ್ಚ್ 3ರಂದು ಪಾಲಿಕೆಗೆ ಪತ್ರ ಬರೆದು ವಾರ್ಡ್ ಕಚೇರಿಯನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸಿಲ್ಲ. ಈದ್ಗಾ ಮೈದಾನ ಆಟದ ಮೈದಾನವಾಗಿದ್ದು, ಅದು ತಮಗೆ ಸೇರಿದೆ ಎಂದು ಬಿಬಿಎಂಪಿ ಹೇಳಿರುವುದು ಅಚ್ಚರಿಯ ಸಂಗತಿಯಾಗಿದೆ. ಬಿಬಿಎಂಪಿ ತನ್ನ ಹೇಳಿಕೆಯನ್ನು ವಾಪಸ್ ಪಡೆಯಬೇಕು” ಎಂದು ಅವರು ಆಗ್ರಹಿಸಿದ್ದರು.

’ನ್ಯಾಯಪಥ’ದೊಂದಿಗೆ ಮಾತನಾಡಿದ್ದ ವಕ್ಫ್ ಮಂಡಳಿ ಕಾರ್ಯ ನಿರ್ವಾಹಕ ಅಧಿಕಾರಿ ಪರ್ವೀಜ಼್ ಖಾನ್ ಕೂಡ ಇದೇ ಪ್ರತಿಪಾದನೆಯನ್ನು ಮಾಡಿದ್ದರು. “ಸುಪ್ರೀಂ ಕೋರ್ಟ್ ಆದೇಶದಲ್ಲಿ ಎಲ್ಲವೂ ಸ್ಪಷ್ಟವಾಗಿದೆ. ಅದು ಸಾರ್ವಜನಿಕವಾಗಿಯೂ ಲಭ್ಯವಿದೆ. ಈಗ ಬಿಬಿಎಂಪಿಯವರು ತಮ್ಮದೆಂದು ಯಾಕೆ ಹೇಳುತ್ತಿದ್ದಾರೆಂದು ಗೊತ್ತಿಲ್ಲ. ಎಲ್ಲ ದಾಖಲೆಗಳನ್ನು ಬಿಬಿಎಂಪಿಗೆ ಸಲ್ಲಿಸಿದ್ದೇವೆ. ಕಾನೂನು ಪ್ರಕ್ರಿಯೆ ನಡೆಯಬೇಕು ಎಂದು ಬಿಬಿಎಂಪಿ ತಿಳಿಸಿದೆ” ಎಂದಿದ್ದರು.

ಇದನ್ನೂ ಓದಿ: ಈದ್ಗಾ ಮೈದಾನ ವಿವಾದ; ಬದಲಾದ ಚಾಮರಾಜಪೇಟೆಯ ಕಥನ ಭಾರತದ್ದೂ ಹೌದು!

“ನ್ಯಾಯಾಲಯದ ಆದೇಶವೇ ಅಂತಿಮ. ಹೀಗಾಗಿ ಯಾರು ಏನೇ ಹೇಳಿದರೂ ನಾವು ಅತಿಯಾದ ಪ್ರತಿಕ್ರಿಯೆ ನೀಡಲು ಇಚ್ಛಿಸುವುದಿಲ್ಲ. ಎರಡು ಸರ್ಕಾರಿ ಸಂಸ್ಥೆಗಳ ನಡುವೆ ಈ ಗೊಂದಲ ಏರ್ಪಟ್ಟಿದೆ. ನಾವು ಕಾನೂನಿನ ಚೌಕಟ್ಟಿನಲ್ಲಿ ಸಾಗುತ್ತೇವೆ” ಎಂದು ತಿಳಿಸಿದ್ದರು.

“ಇಷ್ಟು ವರ್ಷ ಕಳೆದರೂ ವಕ್ಫ್ ಮಂಡಳಿ ಈ ಮೈದಾನಕ್ಕೆ ತಂತಿ ಬೇಲಿಯನ್ನು ಹಾಕಿಲ್ಲ. ಎಲ್ಲರೂ ಜೊತೆಯಲ್ಲಿ ಇರಬೇಕೆಂಬುದು ನಮ್ಮ ಆಶಯ. ಇತ್ತೀಚೆಗೆ ಈ ವಿವಾದ ಬಂದಿದೆ. ಹೀಗಾಗಿ ವಿವಾದ ಸೃಷ್ಟಿಸಲು ಯತ್ನಿಸುವವರಿಗೆ ಪ್ರತಿಕ್ರಿಯೆ ನೀಡಲು ನಾವು ಬಯಸುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದರು.

ಬಿಬಿಎಂಪಿ ಪಶ್ಚಿಮ ವಿಭಾಗದ ಆಯುಕ್ತರಾದ ಶ್ರೀನಿವಾಸ್ ’ನ್ಯಾಯಪಥ’ಕ್ಕೆ ಪ್ರತಿಕ್ರಿಯೆ ನೀಡಿ, “ಸುಪ್ರೀಂ ಕೋರ್ಟ್ ಆದೇಶವಿರುವ ದಾಖಲೆಗಳನ್ನು ವಕ್ಫ್ ಬೋರ್ಡ್ ಕಳುಹಿಸಿಕೊಟ್ಟಿದೆ. ಇದು ಬಿಬಿಎಂಪಿಗೆ ಸೇರಿದೆ ಎಂಬ ದಾಖಲೆಗಳೂ ಇವೆ. ಅವುಗಳನ್ನು ಮುಖ್ಯ ಕಚೇರಿಯ ಕಾನೂನು ವಿಭಾಗಕ್ಕೆ ಸಲ್ಲಿಸಿದ್ದೇವೆ. ಈಗ ಇರುವ ಪ್ರಸ್ತುತ ದಾಖಲೆಗಳ ಪ್ರಕಾರ ಈ ಆಟದ ಮೈದಾನ ಬಿಬಿಎಂಪಿಗೆ ಸೇರಿದೆ. ಈ ಸಮಸ್ಯೆ ಇತ್ಯರ್ಥವಾಗಲು ಇನ್ನೂ ಹತ್ತು ದಿನ ಬೇಕಾಗಬಹುದು. ಈ ಸ್ಥಳವು ಯಾರಿಗೆ ಸೇರಿದ್ದೆಂದು ತಿಳಿಯಲು ಹಳೆಯ ದಾಖಲೆಗಳನ್ನು ಕಳುಹಿಸಿಕೊಡುವಂತೆ ಕಂದಾಯ ಇಲಾಖೆಗೂ ಪತ್ರ ಬರೆದಿದ್ದೇವೆ” ಎಂದು ಹೇಳಿದ್ದರು.

ಕೊನೆಗೂ ಬಿಬಿಎಂಪಿ ತನ್ನ ಪ್ರತಿಪಾದನೆಯಿಂದ ಹಿಂದೆ ಸರಿದಿದ್ದು, ವಿವಾದಕ್ಕೆ ತೆರೆ ಎಳೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...