Homeದಲಿತ್ ಫೈಲ್ಸ್ಹಾವೇರಿ: ಪೊಲೀಸ್ ರೈಡ್‌ ಬಳಿಕ ಪರದಾಡುತ್ತಿದೆ ‘ಸಿಂಧೋಳ ಅಲೆಮಾರಿ ಸಮುದಾಯ’

ಹಾವೇರಿ: ಪೊಲೀಸ್ ರೈಡ್‌ ಬಳಿಕ ಪರದಾಡುತ್ತಿದೆ ‘ಸಿಂಧೋಳ ಅಲೆಮಾರಿ ಸಮುದಾಯ’

ಮೈಗೆ ಚಾಟಿಯೇಟು ಹೊಡೆದುಕೊಳ್ಳುತ್ತಾ, ದೇಹವನ್ನು ಘಾಸಿಗೊಳಿಸಿಕೊಂಡು ಭಿಕ್ಷಾಟನೆ ಮಾಡುವ ಅಲೆಮಾರಿ ಸಮುದಾಯ ‘ಸಿಂಧೋಳ’.

- Advertisement -
- Advertisement -

ಮಾರಿ ದೇವತೆಯನ್ನು ತಲೆಯ ಹೊತ್ತು, ಬೀದಿಬೀದಿಯಲ್ಲಿ ಸಾಗುತ್ತಾ, ಅರೆ ಬಾರಿಸುತ್ತಾ, ಮೈಗೆ ಚಾಟಿಯೇಟು ಹೊಡೆದುಕೊಳ್ಳುತ್ತಾ, ದೇಹವನ್ನು ಘಾಸಿಗೊಳಿಸಿಕೊಂಡು ಭಿಕ್ಷಾಟನೆ ಮಾಡುವ ಅಲೆಮಾರಿ ಸಮುದಾಯ ‘ಸಿಂಧೋಳ’.

ರಾಜ್ಯದಲ್ಲಿ ಈ ಜನಾಂಗದವರು ಹೆಚ್ಚು ಸಂಖ್ಯೆಯಲ್ಲೇನೂ ಇಲ್ಲ. ಅಲ್ಲಲ್ಲಿ ಬಿಡಾರಗಳನ್ನು ಹಾಕಿಕೊಂಡು ಹೊಟ್ಟೆಪಾಡು ಮಾಡುತ್ತಾರೆ. ಇತ್ತೀಚಿನ ವರ್ಷಗಳಲ್ಲಿ ಕೃಷಿ ಕೂಲಿಕಾರರಾಗಿಯೂ ದುಡಿಯುತ್ತಿದ್ದಾರೆ. ಬೇಟೆಯಾಡಿ ಬದುಕುವುದಕ್ಕೆ ಅರಣ್ಯ ಇಲಾಖೆಯವರು ಬಿಡದೇ ಇರುವುದರಿಂದ ಆಹಾರ ಅಭ್ರತೆಯನ್ನೂ ಎದರಿಸುತ್ತಿದ್ದಾರೆ. ಸ್ವಂತ ಮನೆಗಳಿಲ್ಲ, ಜಮೀನಿಲ್ಲ, ಸರ್ಕಾರ ಉದ್ಯೋಗ ಪಡೆದವರ ದಾಖಲೆಯೂ ಇಲ್ಲ. ಇಂತಹ ಸಮುದಾಯಗಳನ್ನು ಅಧಿಕಾರ ವರ್ಗ ಅಷ್ಟಾಗಿ ಗಮನಿಸುವುದೂ ಇಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ಸಿಂಧೋಳ ಜನಾಂಗದ ಸುಮಾರು 40 ಕುಟುಂಬಗಳು ಹಲವು ವರ್ಷಗಳಿಂದ ಕೃಷಿ ಇಲಾಖೆಯ ಜಮೀನಿನಲ್ಲಿ ಟೆಂಟ್ ಹಾಕಿಕೊಂಡು ವಾಸವಿದ್ದವು. ಈ ಜಾಗದಲ್ಲಿ ಕೋಲ್ಡ್‌ ಸ್ಟೋರೇಜ್‌ ನಿರ್ಮಿಸಲು ಇಲಾಖೆ ಮುಂದಾಯಿತು. ಜಾಗ ಖಾಲಿ ಮಾಡುವಂತೆ ಸಿಂಧೋಳರಿಗೆ ಮೂರ್ನಾಲ್ಕು ಭಾರಿ ಸೂಚನೆಯನ್ನೂ ನೀಡಿತು. ಆದರೆ ಹೋಗುವುದೆಲ್ಲಿಗೆ?

ಇದನ್ನೂ ಓದಿರಿ: ರಾಜಸ್ಥಾನ: ಮದ್ಯಪಾನ ಮಾಡಲು ನಿರಾಕರಿಸಿದ ಬುಡಕಟ್ಟು ಯುವಕನ ಮೇಲೆ ಅಮಾನುಷ ಹಲ್ಲೆ

ಜಾಗ ಖಾಲಿ ಮಾಡಿಸಲು ಹೀಗೆ ಸೂಚನೆ ನೀಡುತ್ತಿದ್ದಾರೆಂದು ಭಾವಿಸಿದ ಸಿಂಧೋಳರು ಅಲ್ಲಿಯೇ ಉಳಿದರು. ಆದರೆ ಕಳೆದ ಜೂನ್‌ 18ರಂದು ಪೊಲೀಸರೊಂದಿಗೆ ಬಂದ ಕೃಷಿ ಅಧಿಕಾರಿಗಳು ಅಲೆಮಾರಿಗಳ ಗುಡಿಸಲುಗಳನ್ನು ಕಿತ್ತೊಗೆದರು. ಕನಿಷ್ಠ ಮಾನವೀಯತೆಯನ್ನೂ ತೋರದೆ ಗುಡಿಸಲುಗಳನ್ನು ಕೆಡವಿದರು. ಇದರ ಜೊತೆಗೆ ಮಳೆಯೂ ಸುರಿಯುತ್ತಿತ್ತು. “ಒಂದೆರಡು ದಿನ ಸಮಯ ಕೊಡಿ. ಬೇರೆಡೆ ತೆರಳುತ್ತೇವೆ” ಎಂದು ಅಲೆಮಾರಿಗಳು ಅಂಗಲಾಚಿದರು. ಆದರೆ ಅದಕ್ಕೆ ಪೊಲೀಸರು ಆಸ್ಪದ ನೀಡಲಿಲ್ಲ.

ಘಟನೆಯ ಕುರಿತು ‘ನಾನುಗೌರಿ.ಕಾಂ’ಗೆ ಮಾಹಿತಿ ನೀಡಿದ ಅಲೆಮಾರಿ ಬುಡಕಟ್ಟು ಮಹಾಸಭಾದ ವೀರೇಶ್, “ಇಲ್ಲಿನ ಸಿಂಧೋಳರಲ್ಲಿ ನಾಲ್ಕೈದು ಗರ್ಭಿಣಿಯರಿದ್ದು, ಹೆರಿಗೆಯ ದಿನಗಳನ್ನು ಎಣಿಸುತ್ತಿದ್ದಾರೆ. ವಯಸ್ಸಾದವರು, ಅಂಗವಿಕಲ ಮಕ್ಕಳೂ ಇದ್ದಾರೆ. ಪೊಲೀಸರು ರೈಡ್ ಮಾಡಿದಾಗ ಬಿಡಾರದ ವಸ್ತುಗಳು ಹಾನಿಗೊಳಗಾದ ಕಾರಣ ಮತ್ತೆ ಗುಡಿಸಲುಗಳನ್ನು ಕಟ್ಟಿಕೊಳ್ಳಲೂ ಆಗುತ್ತಿಲ್ಲ. ಜೇಬಿನಲ್ಲಿ ಹಣವೂ ಇಲ್ಲ. ಆಹಾರ ಧಾನ್ಯಗಳನ್ನು ಪೊಲೀಸರು ಮಳೆಗೆ ಬೀಸಾಡಿದ್ದರಿಂದ ಆಹಾರದ ಅಭಾವವೂ ಉಂಟಾಗಿದೆ. ಹಳ್ಳಿಗಳಿಗೆ ಹೋಗಿ ಭಿಕ್ಷಾಟನೆ ಮಾಡಲೂ ಸಾಧ್ಯವಾಗುತ್ತಿಲ್ಲ. ಅನೇಕರು ಉಪವಾಸವಿರುವುದಾಗಿ ಹೇಳಿದ್ದಾರೆ” ಎಂದು ಮಾಹಿತಿ ನೀಡಿದರು.

ಇಷ್ಟೆಲ್ಲ ಆದ ಮೇಲೆ ರಟ್ಟಿಹಳ್ಳಿ ತಾಲ್ಲೂಕು ಆಡಳಿತ ಕ್ರಮ ವಹಿಸಲು ಮುಂದಾಯಿತು. ಮೂರು ಕಿಮೀ ದೂರದಲ್ಲಿನ ಖಾಲಿ ಜಾಗದಲ್ಲಿ ತಂಗಲು ಸೂಚಿಸಿತು. ಆ ಜಾಗವಾದರೂ ತಗ್ಗು ಹಾಗೂ ಕಸದಿಂದ ಕೂಡಿದೆ. ಮಳೆ ಬಂದರೆ ಈ ಪ್ರದೇಶಕ್ಕೆ ನೀರು ನುಗ್ಗುತ್ತದೆ. ತಾತ್ಕಾಲಿಕವಾಗಿ ಪಕ್ಕದ ಬೋರ್‌ವೆಲ್‌ನಿಂದ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ವಿದ್ಯುತ್‌ ಸಂಪರ್ಕವನ್ನೇನೋ ಕಲ್ಪಿಸಿದ್ದಾರೆ.

“ಬೇರೆ ಕಡೆ ಜಾಗ ಮಾಡಿಕೊಡುತ್ತೇವೆ. ಪಟ್ಟಣ ಪಂಚಾಯಿತಿಯಲ್ಲಿ ಚುನಾಯಿತ ಸದಸ್ಯರಿಲ್ಲ. ಚುನಾಯಿತ ಸದಸ್ಯರು ಬಂದ ತಕ್ಷಣವೇ ಮೊದಲ ಅಜೆಂಡಾದಲ್ಲೇ ಸಿಂಧೋಳರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ ಇದೆಲ್ಲ ಸಾಧ್ಯವಾಗುವುದು ಯಾವಾಗ ಎಂಬ ಸ್ಪಷ್ಟತೆ ಇಲ್ಲ. ಸದ್ಯಕ್ಕೆ ಸಮುದಾಯ ಅತಂತ್ರವಾಗಿದೆ” ಎನ್ನುತ್ತಾರೆ ವೀರೇಶ್.

ಶಾಶ್ವತ ಪರಿಹಾರಕ್ಕೆ ಸಿಂಧೋಳರ ಮನವಿ

“ತಾತ್ಕಾಲಿಕ ನೀರಿನ ವ್ಯವಸ್ಥೆ ಹಾಗೂ ವಿದ್ಯುತ್ ವ್ಯವಸ್ಥೆ ಕಲ್ಪಿಸಿದ್ದಾರೆ. ಸದರಿ ಜಾಗದಲ್ಲಿ ಗುಡಿಸಲು ನಿರ್ಮಿಸುತ್ತಿದ್ದೇವೆ. ನಮಗೆ ಸ್ವಂತ ನಿವೇಶನಗಳಿಲ್ಲ, ಮನೆಗಳಿಲ್ಲ. ಜೀವನ ನಡೆಸುವುದು ಕಷ್ಟವಾಗಿದೆ. ಈಗ ನೀಡಿರುವ ಜಾಗವು ತಗ್ಗುಪ್ರದೇಶದಿಂದ ಕೂಡಿದೆ. ಮಳೆ ಬಂದರೆ ನೀರು ನುಗ್ಗುತ್ತದೆ. ಕಸದ ರಾಶಿ ಈ ಜಾಗದಲ್ಲಿದೆ. ಹೀಗಾಗಿ ಕಸವನ್ನು ತೆರವುಗೊಳಿಸಿ ತಗ್ಗು ಪ್ರದೇಶವನ್ನು ಸಮತಟ್ಟು ಮಾಡಬೇಕು. ಎಲ್ಲ ಕುಟುಂಬಗಳಿಗೆ ತಾತ್ಕಾಲಿಕ ಹಕ್ಕು ಪತ್ರ ನೀಡಬೇಕು. ವಸತಿ ಸೌಲಭ್ಯ ಕಲ್ಪಿಸಬೇಕು. ಶಾಶ್ವತ ವಿದ್ಯುತ್‌, ಕುಡಿಯುವ ನೀರು, ಗಟಾರ ಹಾಗೂ ಅಂಗನವಾಡಿ ವ್ಯವಸ್ಥೆ ಕಲ್ಪಿಸಬೇಕು”- ಇತ್ಯಾದಿ ಬೇಡಿಕೆಗಳನ್ನು ಸಿಂಧೋಳರು ಅಧಿಕಾರಿಗಳಿಗೆ ಸಲ್ಲಿಸಿದ್ದಾರೆ.

ಇದನ್ನೂ ಓದಿರಿ: ವಿಚಾರಣೆಯಿಲ್ಲದೆ 2 ವರ್ಷ ಜೈಲಿನಲ್ಲೇ ಕಳೆದ ಬುಡಕಟ್ಟು ಯುವತಿ!

ಸಮುದಾಯದ ಬೇಡಿಕೆಯನ್ನು ಉಲ್ಲೇಖಿಸಿ ಹಿರೇಕೆರೂರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಮಹಬೂಬಸಾಬ್‌ ಪ. ನದಾಫ್‌ ಅವರು, ಇಲಾಖೆಯ ಉಪ ನಿರ್ದೇಶರಿಗೆ, ರಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಪತ್ರ ಬರೆದಿದ್ದಾರೆ. ಮೇಲಧಿಕಾರಿಗಳು ಹೆಚ್ಚಿನ ಕ್ರಮ ವಹಿಸುವ ತುರ್ತು ಎದುರಾಗಿದೆ.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕನಾಥ್ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಸಿಂಧೋಳ ಜನರು ಅಸ್ಪೃಶ್ಯರಲ್ಲೇ ಅಸ್ಪೃಶ್ಯರು. ಕಟ್ಟಕಡೆಯ ಸಮುದಾಯ ಎಂದರೂ ತಪ್ಪಾಗದು. ಇಡೀ ಕರ್ನಾಟಕದಲ್ಲಿ ಸುಮಾರು 10ರಿಂದ 15 ಸಾವಿರ ಜನರು ಈ ಸಮುದಾಯದಲ್ಲಿರಬಹುದು. ಆದರೆ ಯಾವುದೇ ಸರ್ಕಾರವಿದ್ದಾಗಲೂ ಸಿಂಧೋಳರ ಅಭಿವೃದ್ಧಿಗೆ ಕ್ರಮ ವಹಿಸಲಿಲ್ಲ. ಈ ಜನರು ಹಸಿವಿನಿಂದ ನರಳುವಾಗ ಅಧಿಕಾರಸ್ಥರು ಯೋಗದ ವಿಜೃಂಭಣೆಯಲ್ಲಿ ಮುಳುಗಿದ್ದಾರೆ. ಹಸಿದ ಜನರ ಮುಂದೆ ಮಾನವೀಯತೆಗಾಗಿ ಯೋಗ ಮಾಡುತ್ತಾರಂತೆ” ಎಂದು ವಿಷಾದಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...