Homeದಲಿತ್ ಫೈಲ್ಸ್ಹಾವೇರಿ: ಪೊಲೀಸ್ ರೈಡ್‌ ಬಳಿಕ ಪರದಾಡುತ್ತಿದೆ ‘ಸಿಂಧೋಳ ಅಲೆಮಾರಿ ಸಮುದಾಯ’

ಹಾವೇರಿ: ಪೊಲೀಸ್ ರೈಡ್‌ ಬಳಿಕ ಪರದಾಡುತ್ತಿದೆ ‘ಸಿಂಧೋಳ ಅಲೆಮಾರಿ ಸಮುದಾಯ’

ಮೈಗೆ ಚಾಟಿಯೇಟು ಹೊಡೆದುಕೊಳ್ಳುತ್ತಾ, ದೇಹವನ್ನು ಘಾಸಿಗೊಳಿಸಿಕೊಂಡು ಭಿಕ್ಷಾಟನೆ ಮಾಡುವ ಅಲೆಮಾರಿ ಸಮುದಾಯ ‘ಸಿಂಧೋಳ’.

- Advertisement -
- Advertisement -

ಮಾರಿ ದೇವತೆಯನ್ನು ತಲೆಯ ಹೊತ್ತು, ಬೀದಿಬೀದಿಯಲ್ಲಿ ಸಾಗುತ್ತಾ, ಅರೆ ಬಾರಿಸುತ್ತಾ, ಮೈಗೆ ಚಾಟಿಯೇಟು ಹೊಡೆದುಕೊಳ್ಳುತ್ತಾ, ದೇಹವನ್ನು ಘಾಸಿಗೊಳಿಸಿಕೊಂಡು ಭಿಕ್ಷಾಟನೆ ಮಾಡುವ ಅಲೆಮಾರಿ ಸಮುದಾಯ ‘ಸಿಂಧೋಳ’.

ರಾಜ್ಯದಲ್ಲಿ ಈ ಜನಾಂಗದವರು ಹೆಚ್ಚು ಸಂಖ್ಯೆಯಲ್ಲೇನೂ ಇಲ್ಲ. ಅಲ್ಲಲ್ಲಿ ಬಿಡಾರಗಳನ್ನು ಹಾಕಿಕೊಂಡು ಹೊಟ್ಟೆಪಾಡು ಮಾಡುತ್ತಾರೆ. ಇತ್ತೀಚಿನ ವರ್ಷಗಳಲ್ಲಿ ಕೃಷಿ ಕೂಲಿಕಾರರಾಗಿಯೂ ದುಡಿಯುತ್ತಿದ್ದಾರೆ. ಬೇಟೆಯಾಡಿ ಬದುಕುವುದಕ್ಕೆ ಅರಣ್ಯ ಇಲಾಖೆಯವರು ಬಿಡದೇ ಇರುವುದರಿಂದ ಆಹಾರ ಅಭ್ರತೆಯನ್ನೂ ಎದರಿಸುತ್ತಿದ್ದಾರೆ. ಸ್ವಂತ ಮನೆಗಳಿಲ್ಲ, ಜಮೀನಿಲ್ಲ, ಸರ್ಕಾರ ಉದ್ಯೋಗ ಪಡೆದವರ ದಾಖಲೆಯೂ ಇಲ್ಲ. ಇಂತಹ ಸಮುದಾಯಗಳನ್ನು ಅಧಿಕಾರ ವರ್ಗ ಅಷ್ಟಾಗಿ ಗಮನಿಸುವುದೂ ಇಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ಸಿಂಧೋಳ ಜನಾಂಗದ ಸುಮಾರು 40 ಕುಟುಂಬಗಳು ಹಲವು ವರ್ಷಗಳಿಂದ ಕೃಷಿ ಇಲಾಖೆಯ ಜಮೀನಿನಲ್ಲಿ ಟೆಂಟ್ ಹಾಕಿಕೊಂಡು ವಾಸವಿದ್ದವು. ಈ ಜಾಗದಲ್ಲಿ ಕೋಲ್ಡ್‌ ಸ್ಟೋರೇಜ್‌ ನಿರ್ಮಿಸಲು ಇಲಾಖೆ ಮುಂದಾಯಿತು. ಜಾಗ ಖಾಲಿ ಮಾಡುವಂತೆ ಸಿಂಧೋಳರಿಗೆ ಮೂರ್ನಾಲ್ಕು ಭಾರಿ ಸೂಚನೆಯನ್ನೂ ನೀಡಿತು. ಆದರೆ ಹೋಗುವುದೆಲ್ಲಿಗೆ?

ಇದನ್ನೂ ಓದಿರಿ: ರಾಜಸ್ಥಾನ: ಮದ್ಯಪಾನ ಮಾಡಲು ನಿರಾಕರಿಸಿದ ಬುಡಕಟ್ಟು ಯುವಕನ ಮೇಲೆ ಅಮಾನುಷ ಹಲ್ಲೆ

ಜಾಗ ಖಾಲಿ ಮಾಡಿಸಲು ಹೀಗೆ ಸೂಚನೆ ನೀಡುತ್ತಿದ್ದಾರೆಂದು ಭಾವಿಸಿದ ಸಿಂಧೋಳರು ಅಲ್ಲಿಯೇ ಉಳಿದರು. ಆದರೆ ಕಳೆದ ಜೂನ್‌ 18ರಂದು ಪೊಲೀಸರೊಂದಿಗೆ ಬಂದ ಕೃಷಿ ಅಧಿಕಾರಿಗಳು ಅಲೆಮಾರಿಗಳ ಗುಡಿಸಲುಗಳನ್ನು ಕಿತ್ತೊಗೆದರು. ಕನಿಷ್ಠ ಮಾನವೀಯತೆಯನ್ನೂ ತೋರದೆ ಗುಡಿಸಲುಗಳನ್ನು ಕೆಡವಿದರು. ಇದರ ಜೊತೆಗೆ ಮಳೆಯೂ ಸುರಿಯುತ್ತಿತ್ತು. “ಒಂದೆರಡು ದಿನ ಸಮಯ ಕೊಡಿ. ಬೇರೆಡೆ ತೆರಳುತ್ತೇವೆ” ಎಂದು ಅಲೆಮಾರಿಗಳು ಅಂಗಲಾಚಿದರು. ಆದರೆ ಅದಕ್ಕೆ ಪೊಲೀಸರು ಆಸ್ಪದ ನೀಡಲಿಲ್ಲ.

ಘಟನೆಯ ಕುರಿತು ‘ನಾನುಗೌರಿ.ಕಾಂ’ಗೆ ಮಾಹಿತಿ ನೀಡಿದ ಅಲೆಮಾರಿ ಬುಡಕಟ್ಟು ಮಹಾಸಭಾದ ವೀರೇಶ್, “ಇಲ್ಲಿನ ಸಿಂಧೋಳರಲ್ಲಿ ನಾಲ್ಕೈದು ಗರ್ಭಿಣಿಯರಿದ್ದು, ಹೆರಿಗೆಯ ದಿನಗಳನ್ನು ಎಣಿಸುತ್ತಿದ್ದಾರೆ. ವಯಸ್ಸಾದವರು, ಅಂಗವಿಕಲ ಮಕ್ಕಳೂ ಇದ್ದಾರೆ. ಪೊಲೀಸರು ರೈಡ್ ಮಾಡಿದಾಗ ಬಿಡಾರದ ವಸ್ತುಗಳು ಹಾನಿಗೊಳಗಾದ ಕಾರಣ ಮತ್ತೆ ಗುಡಿಸಲುಗಳನ್ನು ಕಟ್ಟಿಕೊಳ್ಳಲೂ ಆಗುತ್ತಿಲ್ಲ. ಜೇಬಿನಲ್ಲಿ ಹಣವೂ ಇಲ್ಲ. ಆಹಾರ ಧಾನ್ಯಗಳನ್ನು ಪೊಲೀಸರು ಮಳೆಗೆ ಬೀಸಾಡಿದ್ದರಿಂದ ಆಹಾರದ ಅಭಾವವೂ ಉಂಟಾಗಿದೆ. ಹಳ್ಳಿಗಳಿಗೆ ಹೋಗಿ ಭಿಕ್ಷಾಟನೆ ಮಾಡಲೂ ಸಾಧ್ಯವಾಗುತ್ತಿಲ್ಲ. ಅನೇಕರು ಉಪವಾಸವಿರುವುದಾಗಿ ಹೇಳಿದ್ದಾರೆ” ಎಂದು ಮಾಹಿತಿ ನೀಡಿದರು.

ಇಷ್ಟೆಲ್ಲ ಆದ ಮೇಲೆ ರಟ್ಟಿಹಳ್ಳಿ ತಾಲ್ಲೂಕು ಆಡಳಿತ ಕ್ರಮ ವಹಿಸಲು ಮುಂದಾಯಿತು. ಮೂರು ಕಿಮೀ ದೂರದಲ್ಲಿನ ಖಾಲಿ ಜಾಗದಲ್ಲಿ ತಂಗಲು ಸೂಚಿಸಿತು. ಆ ಜಾಗವಾದರೂ ತಗ್ಗು ಹಾಗೂ ಕಸದಿಂದ ಕೂಡಿದೆ. ಮಳೆ ಬಂದರೆ ಈ ಪ್ರದೇಶಕ್ಕೆ ನೀರು ನುಗ್ಗುತ್ತದೆ. ತಾತ್ಕಾಲಿಕವಾಗಿ ಪಕ್ಕದ ಬೋರ್‌ವೆಲ್‌ನಿಂದ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ವಿದ್ಯುತ್‌ ಸಂಪರ್ಕವನ್ನೇನೋ ಕಲ್ಪಿಸಿದ್ದಾರೆ.

“ಬೇರೆ ಕಡೆ ಜಾಗ ಮಾಡಿಕೊಡುತ್ತೇವೆ. ಪಟ್ಟಣ ಪಂಚಾಯಿತಿಯಲ್ಲಿ ಚುನಾಯಿತ ಸದಸ್ಯರಿಲ್ಲ. ಚುನಾಯಿತ ಸದಸ್ಯರು ಬಂದ ತಕ್ಷಣವೇ ಮೊದಲ ಅಜೆಂಡಾದಲ್ಲೇ ಸಿಂಧೋಳರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ ಇದೆಲ್ಲ ಸಾಧ್ಯವಾಗುವುದು ಯಾವಾಗ ಎಂಬ ಸ್ಪಷ್ಟತೆ ಇಲ್ಲ. ಸದ್ಯಕ್ಕೆ ಸಮುದಾಯ ಅತಂತ್ರವಾಗಿದೆ” ಎನ್ನುತ್ತಾರೆ ವೀರೇಶ್.

ಶಾಶ್ವತ ಪರಿಹಾರಕ್ಕೆ ಸಿಂಧೋಳರ ಮನವಿ

“ತಾತ್ಕಾಲಿಕ ನೀರಿನ ವ್ಯವಸ್ಥೆ ಹಾಗೂ ವಿದ್ಯುತ್ ವ್ಯವಸ್ಥೆ ಕಲ್ಪಿಸಿದ್ದಾರೆ. ಸದರಿ ಜಾಗದಲ್ಲಿ ಗುಡಿಸಲು ನಿರ್ಮಿಸುತ್ತಿದ್ದೇವೆ. ನಮಗೆ ಸ್ವಂತ ನಿವೇಶನಗಳಿಲ್ಲ, ಮನೆಗಳಿಲ್ಲ. ಜೀವನ ನಡೆಸುವುದು ಕಷ್ಟವಾಗಿದೆ. ಈಗ ನೀಡಿರುವ ಜಾಗವು ತಗ್ಗುಪ್ರದೇಶದಿಂದ ಕೂಡಿದೆ. ಮಳೆ ಬಂದರೆ ನೀರು ನುಗ್ಗುತ್ತದೆ. ಕಸದ ರಾಶಿ ಈ ಜಾಗದಲ್ಲಿದೆ. ಹೀಗಾಗಿ ಕಸವನ್ನು ತೆರವುಗೊಳಿಸಿ ತಗ್ಗು ಪ್ರದೇಶವನ್ನು ಸಮತಟ್ಟು ಮಾಡಬೇಕು. ಎಲ್ಲ ಕುಟುಂಬಗಳಿಗೆ ತಾತ್ಕಾಲಿಕ ಹಕ್ಕು ಪತ್ರ ನೀಡಬೇಕು. ವಸತಿ ಸೌಲಭ್ಯ ಕಲ್ಪಿಸಬೇಕು. ಶಾಶ್ವತ ವಿದ್ಯುತ್‌, ಕುಡಿಯುವ ನೀರು, ಗಟಾರ ಹಾಗೂ ಅಂಗನವಾಡಿ ವ್ಯವಸ್ಥೆ ಕಲ್ಪಿಸಬೇಕು”- ಇತ್ಯಾದಿ ಬೇಡಿಕೆಗಳನ್ನು ಸಿಂಧೋಳರು ಅಧಿಕಾರಿಗಳಿಗೆ ಸಲ್ಲಿಸಿದ್ದಾರೆ.

ಇದನ್ನೂ ಓದಿರಿ: ವಿಚಾರಣೆಯಿಲ್ಲದೆ 2 ವರ್ಷ ಜೈಲಿನಲ್ಲೇ ಕಳೆದ ಬುಡಕಟ್ಟು ಯುವತಿ!

ಸಮುದಾಯದ ಬೇಡಿಕೆಯನ್ನು ಉಲ್ಲೇಖಿಸಿ ಹಿರೇಕೆರೂರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಮಹಬೂಬಸಾಬ್‌ ಪ. ನದಾಫ್‌ ಅವರು, ಇಲಾಖೆಯ ಉಪ ನಿರ್ದೇಶರಿಗೆ, ರಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಪತ್ರ ಬರೆದಿದ್ದಾರೆ. ಮೇಲಧಿಕಾರಿಗಳು ಹೆಚ್ಚಿನ ಕ್ರಮ ವಹಿಸುವ ತುರ್ತು ಎದುರಾಗಿದೆ.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕನಾಥ್ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಸಿಂಧೋಳ ಜನರು ಅಸ್ಪೃಶ್ಯರಲ್ಲೇ ಅಸ್ಪೃಶ್ಯರು. ಕಟ್ಟಕಡೆಯ ಸಮುದಾಯ ಎಂದರೂ ತಪ್ಪಾಗದು. ಇಡೀ ಕರ್ನಾಟಕದಲ್ಲಿ ಸುಮಾರು 10ರಿಂದ 15 ಸಾವಿರ ಜನರು ಈ ಸಮುದಾಯದಲ್ಲಿರಬಹುದು. ಆದರೆ ಯಾವುದೇ ಸರ್ಕಾರವಿದ್ದಾಗಲೂ ಸಿಂಧೋಳರ ಅಭಿವೃದ್ಧಿಗೆ ಕ್ರಮ ವಹಿಸಲಿಲ್ಲ. ಈ ಜನರು ಹಸಿವಿನಿಂದ ನರಳುವಾಗ ಅಧಿಕಾರಸ್ಥರು ಯೋಗದ ವಿಜೃಂಭಣೆಯಲ್ಲಿ ಮುಳುಗಿದ್ದಾರೆ. ಹಸಿದ ಜನರ ಮುಂದೆ ಮಾನವೀಯತೆಗಾಗಿ ಯೋಗ ಮಾಡುತ್ತಾರಂತೆ” ಎಂದು ವಿಷಾದಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...