Homeರಾಜಕೀಯಮಹಾರಾಷ್ಟ್ರ ಸರ್ಕಾರ ಅತಂತ್ರ: ಇಲ್ಲಿವರೆಗೆ ಏನಾಯಿತು? ಸಂಕ್ಷಿಪ್ತ ವರದಿ ಇಲ್ಲಿದೆ

ಮಹಾರಾಷ್ಟ್ರ ಸರ್ಕಾರ ಅತಂತ್ರ: ಇಲ್ಲಿವರೆಗೆ ಏನಾಯಿತು? ಸಂಕ್ಷಿಪ್ತ ವರದಿ ಇಲ್ಲಿದೆ

- Advertisement -
- Advertisement -

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಬಂಡಾಯ ಸಚಿವ ಏಕನಾಥ್ ಶಿಂಧೆ ಇಬ್ಬರೂ ತೀವ್ರ ಹಗ್ಗ ಜಗ್ಗಾಟದಲ್ಲಿ ತೊಡಗಿರುವುದರಿಂದ ಮಹಾರಾಷ್ಟ್ರ ಸರ್ಕಾರದ ಭವಿಷ್ಯ ಡೋಲಾಯಮಾನವಾಗಿದೆ. ಮಹಾವಿಕಸ್ ಅಘಾಡಿ ಸರ್ಕಾರದ ಮೂರು ಮೈತ್ರಿ ಪಕ್ಷಗಳು ತಮ್ಮ ಬೆಂಬಲಿಗ ಶಾಸಕರನ್ನು ರಕ್ಷಿಸಲು ನಾಯಕರ ನಡುವೆ ನಿರಂತರವಾಗಿ ಸಭೆಗಳನ್ನು ನಡೆಸುತ್ತಿದ್ದಾರೆ.

ಮಹರಾಷ್ಟ್ರದ ರಾಜಕಾರಣದಲ್ಲಿ ಇಲ್ಲಿವರೆಗೆ ಏನಾಯಿತು ಎಂಬುವುದು ಇಲ್ಲಿದೆ:

  • ಮೈತ್ರಿ ಸರ್ಕಾರದ ಸಚಿವ, ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರು ಜೂನ್ 20ರ ಸೋಮವಾರದಂದು ಹಲವಾರು ಶಿವಸೇನೆ ಶಾಸಕರೊಂದಿಗೆ ಗುಜರಾತ್‌ನ ಸೂರತ್‌ನಲ್ಲಿರುವ ರೆಸಾರ್ಟ್‌‌ಗೆ ತೆರಳಿದ್ದರು.
    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
    ₹100 ₹200 ₹500 ₹1000 Others
  • ಶಿವಸೇನೆ ಮುಖ್ಯಸ್ಥ, ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ತಮ್ಮ ಉಳಿದ ಶಾಸಕರನ್ನು ಉಳಿಸಿಕೊಳ್ಳಲು ಮುಂದಾದರೂ, ಈ ಬೆಳವಣಿಗೆ ನಡೆದಿದೆ.
  • ಇದೇ ವೇಳೆ ಪಕ್ಷವು ಏಕನಾಥ್ ಶಿಂಧೆ ಮತ್ತು ಇತರ ಬಂಡಾಯ ಶಾಸಕರೊಂದಿಗೆ ಸಂಪರ್ಕದಲ್ಲಿದೆ, ಅವರು ಪಕ್ಷಕ್ಕೆ ಮರಳುತ್ತಾರೆ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಬುಧವಾರದವರೆಗೆ ಹೇಳುತ್ತಿದ್ದರು.
  • ರಾವತ್‌ ಅವರ ಈ ಹೇಳಿಕೆಯನ್ನು ತಳ್ಳಿಹಾಕಿದ ಶಿಂಧೆ, ಬೆಂಬಲಿತ ಶಾಸಕರನ್ನು ಹೊರತುಪಡಿಸಿ ಬೇರೆ ಯಾರೊಂದಿಗೂ ಸಂಪರ್ಕದಲ್ಲಿಲ್ಲ ಎಂದು ಹೇಳಿದ್ದರು.
  • ಶಿವಸೇನೆಯು ಸೂರತ್ ರೆಸಾರ್ಟ್‌ಗೆ ಮಧ್ಯವರ್ತಿಗಳನ್ನು ಕಳುಹಿಸುತ್ತಿದ್ದಂತೆ, ಎಲ್ಲಾ ಬಂಡಾಯ ಶಾಸಕರನ್ನು ಸೂರತ್‌ನಿಂದ ಮತ್ತೊಂದು ಬಿಜೆಪಿ ಆಡಳಿತದ ರಾಜ್ಯವಾದ ಅಸ್ಸಾಂನ ಗುವಾಹಟಿಯಲ್ಲಿರುವ ಹೋಟೆಲ್‌ಗೆ ಶಿಂಧೆ ಬುಧವಾರ ಸ್ಥಳಾಂತರಿಸಿದರು.

ಇದನ್ನೂ ಓದಿ: ಮಹಾರಾಷ್ಟ್ರ: ಒಂದೇ ಕುಟುಂಬದ 9 ಜನರ ಆತ್ಮಹತ್ಯೆ ಪ್ರಕರಣ- ಸಾವಿಗೆ ಕಾರಣರಾದ 13 ಮಂದಿಯ ಬಂಧನ

  • ಬೆಳಗ್ಗೆ 7 ಗಂಟೆ ಸುಮಾರಿಗೆ ಬಂಡಾಯ ಶಾಸಕರು ಗುವಾಹಟಿಗೆ ಆಗಮಿಸುವ ಮುನ್ನವೇ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ಹೋಟೆಲ್‌ನಲ್ಲಿ ಕಾಣಿಸಿಕೊಂಡಿದ್ದರು.
  • ಶಿವಸೇನೆಯ 55 ಶಾಸಕರ ಪೈಕಿ 42 ಶಾಸಕರ ಬೆಂಬಲ ತಮಗೆ ಇದೆ ಎಂದು ಶಿಂಧೆ ಪ್ರತಿಪಾದಿಸಿದ್ದಾರೆ.
  • ಪಕ್ಷಾಂತರ ವಿರೋಧಿ ಕಾನೂನನ್ನು ತಪ್ಪಿಸಲು ಪಕ್ಷದ ಮೂರನೇ ಎರಡರಷ್ಟು ಶಾಸಕರ ಬೆಂಬಲವನ್ನು ಹೊಂದಿರಬೇಕಾಗುತ್ತದೆ. ಹೀಗಾಗಿ ಅವರಿಗೆ ಕನಿಷ್ಠ 37 ಶಾಸಕರ ಬೆಂಬಲ ಬೇಕಾಗುತ್ತದೆ.
  • ಬುಧವಾರ ಸಂಜೆ ಶಿವಸೇನೆಯ ಇಬ್ಬರು ಸೇರಿದಂತೆ ಮತ್ತೆ ನಾಲ್ವರು ಶಾಸಕರು ಶಿಂಧೆ ಪಾಳಯಕ್ಕೆ ಸೇರಿದ್ದಾರೆ. ಇನ್ನೂ ಮೂವರು ಬಂಡಾಯ ಪಾಳಯ ಸೇರುವ ಸಾಧ್ಯತೆ ಇತ್ತು.
  • ಮಹಾವಿಕಾಸ್ ಅಘಾಡಿ ಸರ್ಕಾರದ ಮೈತ್ರಿ ಪಕ್ಷಗಳಾದ ಕಾಂಗ್ರೆಸ್ ಮತ್ತು ಎನ್‌ಸಿಪಿ ತಾವು ಶಿವಸೇನೆಯೊಂದಿಗೆ ಇದ್ದೇವೆ ಎಂದು ಹೇಳಿದ್ದಾರೆ. ಆದರೆ ಬಂಡಾಯವು ಪಕ್ಷದ ಆಂತರಿಕ ವಿಷಯವಾಗಿದ್ದು, ಅದನ್ನು ಪಕ್ಷವೇ ಪರಿಹರಿಸಬೇಕಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ರಾಜಕೀಯ ಸಂಕಷ್ಟ: ಸರ್ಕಾರದ ಅಳಿವು-ಉಳಿವಿನ ನಂಬರ್ ಗೇಮ್ ಹೀಗಿದೆ

  • ಬಿಜೆಪಿ ತಾನು ಅಧಿಕಾರ ಹಿಡಿಯಲು ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟನ್ನು ರೂಪಿಸಿದೆ ಎಂದು ಕಾಂಗ್ರೆಸ್ ಮತ್ತು ಎನ್‌ಸಿಪಿ ದೂಷಿಸಿವೆ.
  • ಬಿಕ್ಕಟ್ಟಿನ ಮಧ್ಯೆಯೆ, ಶಿವಸೇನೆ ಮಂಗಳವಾರದಂದು ಏಕನಾಥ್ ಶಿಂಧೆ ಅವರನ್ನು ಶಾಸಕಾಂಗ ಪಕ್ಷದ ನಾಯಕನ ಸ್ಥಾನದಿಂದ ವಜಾಗೊಳಿಸಿದೆ.
  • ಆದರೆ ಗುವಾಹಟಿಯಲ್ಲಿರುವ ಬಂಡಾಯ ಶಿವಸೇನಾ ಶಾಸಕರು ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿಗೆ ಪತ್ರ ಬರೆದು, ಏಕನಾಥ್ ಶಿಂಧೆ ಇನ್ನೂ ಕೂಡಾ ಶಾಸಕಾಂಗ ಪಕ್ಷದ ನಾಯಕ ಎಂದು ಪ್ರತಿಪಾದಿಸಿದ್ದಾರೆ.
  • ಉದ್ಧವ್ ಠಾಕ್ರೆ ರಾಜೀನಾಮೆ ನೀಡಲಿದ್ದಾರೆ ಎಂಬ ಊಹಾಪೋಹದ ನಡುವೆಯೆ, “ಬಂಡಾಯ ಶಿವಸೇನೆ ಶಾಸಕರು ಬಯಸಿದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ” ಎಂದು ಉದ್ಧವ್‌‌ ಬುಧವಾರ ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಬಂಡಾಯ ಶಾಸಕರಿಗೆ ಸಂಜೆ 5 ಗಂಟೆವರೆಗೆ ಗಡುವು ನೀಡಿದ ಉದ್ಧವ್ ಸರ್ಕಾರ

  • “ನಾನು ನನ್ನ ರಾಜೀನಾಮೆ ಪತ್ರವನ್ನು ಸಿದ್ಧಪಡಿಸುತ್ತಿದ್ದೇನೆ, ಬಂಡಾಯವೆದ್ದಿರುವವರು ಇಲ್ಲಿಗೆ ಬರಬೇಕು, ಈ ಪತ್ರವನ್ನು ತೆಗೆದುಕೊಂಡು ರಾಜ್ಯಪಾಲರಿಗೆ ಸಲ್ಲಿಸಬೇಕು” ಎಂದು ಉದ್ಧವ್‌ ಠಾಕ್ರೆ ಹೇಳಿದ್ದಾರೆ.
  • ಉದ್ಧವ್‌ ಠಾಕ್ರೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಕೆಲವೇ ಗಂಟೆಗಳ ನಂತರ, ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಿದರು.
  • ಉದ್ಧವ್ ಠಾಕ್ರೆ ಈಗ ಉಪನಗರ ಬಾಂದ್ರಾದಲ್ಲಿರುವ ತಮ್ಮ ಕುಟುಂಬದ ನಿವಾಸ ಮಾತೋಶ್ರೀಗೆ ತೆರಳಿದ್ದಾರೆ.
  • ಗುರುವಾರ ಮುಂಜಾನೆ, ಪಕ್ಷಾಂತರ ವಿರೋಧಿ ಕಾನೂನನ್ನು ತಪ್ಪಿಸಲು ಅಗತ್ಯವಾದ ಶಾಸಕರ ಸಂಖ್ಯೆಯನ್ನು ಏಕನಾಥ್ ಶಿಂಧೆ ಒಟ್ಟುಗೂಡಿಸಿದಂತಿದೆ. ಹೆಚ್ಚಿನ ಶಿವಸೇನೆ ಶಾಸಕರು ಗುವಾಹಟಿಯ ಹೋಟೆಲ್‌ ರಾಡಿಸನ್ ಬ್ಲೂ‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಸಿಎಂ ಗೃಹ ಕಚೇರಿ ಬಿಟ್ಟು ಸ್ವಂತ ಮನೆಗೆ ತೆರಳಿದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

ಸರ್ಕಾರ ಉಳಿಸಲು ಬೇಕಾದ ಶಾಸಕರ ಸಂಖ್ಯೆ

ಮಹಾರಾಷ್ಟ್ರ ವಿಧಾನಸಭೆಯ ಒಟ್ಟು ಬಲವು 287. ಹೀಗಾಗಿ ಸದನದಲ್ಲಿ ವಿಶ್ವಾಸ ಮತದ ಸಂದರ್ಭದಲ್ಲಿ ಅಗತ್ಯವಿರುವ ಬಹುಮತವು 144 ಆಗಿದೆ. ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ನ ಆಡಳಿತ ಒಕ್ಕೂಟವು ಪ್ರಸ್ತುತ 169 ಸ್ಥಾನಗಳನ್ನು ಹೊಂದಿದೆ.

ಒಂದು ವೇಳೆ ಶಿಂಧೆ ನೇತೃತ್ವದ ಶಾಸಕರು ರಾಜೀನಾಮೆ ನೀಡಿದರೆ, ಮಹಾ ವಿಕಾಸ್ ಅಘಾಡಿ ಸರ್ಕಾರ ಬಹುಮತ ಕಳೆದುಕೊಂಡು, ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರದ ಪತನಕ್ಕೆ ಕಾರಣವಾಗುತ್ತದೆ. ಶಿವಸೇನೆಯು 55 ಶಾಸಕರನ್ನು ಹೊಂದಿದ್ದು, ಪಕ್ಷಾಂತರ ವಿರೋಧಿ ಕಾನೂನನ್ನು ಜಾರಿಗೊಳಿಸಲು ಉದ್ಧವ್ ಠಾಕ್ರೆ ಅವರ ಪರವಾಗಿ ಕನಿಷ್ಠ 37 ಶಾಸಕರು ಇರಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...