Homeರಾಜಕೀಯಮಹಾರಾಷ್ಟ್ರ ಸರ್ಕಾರ ಅತಂತ್ರ: ಇಲ್ಲಿವರೆಗೆ ಏನಾಯಿತು? ಸಂಕ್ಷಿಪ್ತ ವರದಿ ಇಲ್ಲಿದೆ

ಮಹಾರಾಷ್ಟ್ರ ಸರ್ಕಾರ ಅತಂತ್ರ: ಇಲ್ಲಿವರೆಗೆ ಏನಾಯಿತು? ಸಂಕ್ಷಿಪ್ತ ವರದಿ ಇಲ್ಲಿದೆ

- Advertisement -
- Advertisement -

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಬಂಡಾಯ ಸಚಿವ ಏಕನಾಥ್ ಶಿಂಧೆ ಇಬ್ಬರೂ ತೀವ್ರ ಹಗ್ಗ ಜಗ್ಗಾಟದಲ್ಲಿ ತೊಡಗಿರುವುದರಿಂದ ಮಹಾರಾಷ್ಟ್ರ ಸರ್ಕಾರದ ಭವಿಷ್ಯ ಡೋಲಾಯಮಾನವಾಗಿದೆ. ಮಹಾವಿಕಸ್ ಅಘಾಡಿ ಸರ್ಕಾರದ ಮೂರು ಮೈತ್ರಿ ಪಕ್ಷಗಳು ತಮ್ಮ ಬೆಂಬಲಿಗ ಶಾಸಕರನ್ನು ರಕ್ಷಿಸಲು ನಾಯಕರ ನಡುವೆ ನಿರಂತರವಾಗಿ ಸಭೆಗಳನ್ನು ನಡೆಸುತ್ತಿದ್ದಾರೆ.

ಮಹರಾಷ್ಟ್ರದ ರಾಜಕಾರಣದಲ್ಲಿ ಇಲ್ಲಿವರೆಗೆ ಏನಾಯಿತು ಎಂಬುವುದು ಇಲ್ಲಿದೆ:

  • ಮೈತ್ರಿ ಸರ್ಕಾರದ ಸಚಿವ, ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರು ಜೂನ್ 20ರ ಸೋಮವಾರದಂದು ಹಲವಾರು ಶಿವಸೇನೆ ಶಾಸಕರೊಂದಿಗೆ ಗುಜರಾತ್‌ನ ಸೂರತ್‌ನಲ್ಲಿರುವ ರೆಸಾರ್ಟ್‌‌ಗೆ ತೆರಳಿದ್ದರು.
    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
    ₹100 ₹200 ₹500 ₹1000 Others
  • ಶಿವಸೇನೆ ಮುಖ್ಯಸ್ಥ, ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ತಮ್ಮ ಉಳಿದ ಶಾಸಕರನ್ನು ಉಳಿಸಿಕೊಳ್ಳಲು ಮುಂದಾದರೂ, ಈ ಬೆಳವಣಿಗೆ ನಡೆದಿದೆ.
  • ಇದೇ ವೇಳೆ ಪಕ್ಷವು ಏಕನಾಥ್ ಶಿಂಧೆ ಮತ್ತು ಇತರ ಬಂಡಾಯ ಶಾಸಕರೊಂದಿಗೆ ಸಂಪರ್ಕದಲ್ಲಿದೆ, ಅವರು ಪಕ್ಷಕ್ಕೆ ಮರಳುತ್ತಾರೆ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಬುಧವಾರದವರೆಗೆ ಹೇಳುತ್ತಿದ್ದರು.
  • ರಾವತ್‌ ಅವರ ಈ ಹೇಳಿಕೆಯನ್ನು ತಳ್ಳಿಹಾಕಿದ ಶಿಂಧೆ, ಬೆಂಬಲಿತ ಶಾಸಕರನ್ನು ಹೊರತುಪಡಿಸಿ ಬೇರೆ ಯಾರೊಂದಿಗೂ ಸಂಪರ್ಕದಲ್ಲಿಲ್ಲ ಎಂದು ಹೇಳಿದ್ದರು.
  • ಶಿವಸೇನೆಯು ಸೂರತ್ ರೆಸಾರ್ಟ್‌ಗೆ ಮಧ್ಯವರ್ತಿಗಳನ್ನು ಕಳುಹಿಸುತ್ತಿದ್ದಂತೆ, ಎಲ್ಲಾ ಬಂಡಾಯ ಶಾಸಕರನ್ನು ಸೂರತ್‌ನಿಂದ ಮತ್ತೊಂದು ಬಿಜೆಪಿ ಆಡಳಿತದ ರಾಜ್ಯವಾದ ಅಸ್ಸಾಂನ ಗುವಾಹಟಿಯಲ್ಲಿರುವ ಹೋಟೆಲ್‌ಗೆ ಶಿಂಧೆ ಬುಧವಾರ ಸ್ಥಳಾಂತರಿಸಿದರು.

ಇದನ್ನೂ ಓದಿ: ಮಹಾರಾಷ್ಟ್ರ: ಒಂದೇ ಕುಟುಂಬದ 9 ಜನರ ಆತ್ಮಹತ್ಯೆ ಪ್ರಕರಣ- ಸಾವಿಗೆ ಕಾರಣರಾದ 13 ಮಂದಿಯ ಬಂಧನ

  • ಬೆಳಗ್ಗೆ 7 ಗಂಟೆ ಸುಮಾರಿಗೆ ಬಂಡಾಯ ಶಾಸಕರು ಗುವಾಹಟಿಗೆ ಆಗಮಿಸುವ ಮುನ್ನವೇ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ಹೋಟೆಲ್‌ನಲ್ಲಿ ಕಾಣಿಸಿಕೊಂಡಿದ್ದರು.
  • ಶಿವಸೇನೆಯ 55 ಶಾಸಕರ ಪೈಕಿ 42 ಶಾಸಕರ ಬೆಂಬಲ ತಮಗೆ ಇದೆ ಎಂದು ಶಿಂಧೆ ಪ್ರತಿಪಾದಿಸಿದ್ದಾರೆ.
  • ಪಕ್ಷಾಂತರ ವಿರೋಧಿ ಕಾನೂನನ್ನು ತಪ್ಪಿಸಲು ಪಕ್ಷದ ಮೂರನೇ ಎರಡರಷ್ಟು ಶಾಸಕರ ಬೆಂಬಲವನ್ನು ಹೊಂದಿರಬೇಕಾಗುತ್ತದೆ. ಹೀಗಾಗಿ ಅವರಿಗೆ ಕನಿಷ್ಠ 37 ಶಾಸಕರ ಬೆಂಬಲ ಬೇಕಾಗುತ್ತದೆ.
  • ಬುಧವಾರ ಸಂಜೆ ಶಿವಸೇನೆಯ ಇಬ್ಬರು ಸೇರಿದಂತೆ ಮತ್ತೆ ನಾಲ್ವರು ಶಾಸಕರು ಶಿಂಧೆ ಪಾಳಯಕ್ಕೆ ಸೇರಿದ್ದಾರೆ. ಇನ್ನೂ ಮೂವರು ಬಂಡಾಯ ಪಾಳಯ ಸೇರುವ ಸಾಧ್ಯತೆ ಇತ್ತು.
  • ಮಹಾವಿಕಾಸ್ ಅಘಾಡಿ ಸರ್ಕಾರದ ಮೈತ್ರಿ ಪಕ್ಷಗಳಾದ ಕಾಂಗ್ರೆಸ್ ಮತ್ತು ಎನ್‌ಸಿಪಿ ತಾವು ಶಿವಸೇನೆಯೊಂದಿಗೆ ಇದ್ದೇವೆ ಎಂದು ಹೇಳಿದ್ದಾರೆ. ಆದರೆ ಬಂಡಾಯವು ಪಕ್ಷದ ಆಂತರಿಕ ವಿಷಯವಾಗಿದ್ದು, ಅದನ್ನು ಪಕ್ಷವೇ ಪರಿಹರಿಸಬೇಕಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ರಾಜಕೀಯ ಸಂಕಷ್ಟ: ಸರ್ಕಾರದ ಅಳಿವು-ಉಳಿವಿನ ನಂಬರ್ ಗೇಮ್ ಹೀಗಿದೆ

  • ಬಿಜೆಪಿ ತಾನು ಅಧಿಕಾರ ಹಿಡಿಯಲು ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟನ್ನು ರೂಪಿಸಿದೆ ಎಂದು ಕಾಂಗ್ರೆಸ್ ಮತ್ತು ಎನ್‌ಸಿಪಿ ದೂಷಿಸಿವೆ.
  • ಬಿಕ್ಕಟ್ಟಿನ ಮಧ್ಯೆಯೆ, ಶಿವಸೇನೆ ಮಂಗಳವಾರದಂದು ಏಕನಾಥ್ ಶಿಂಧೆ ಅವರನ್ನು ಶಾಸಕಾಂಗ ಪಕ್ಷದ ನಾಯಕನ ಸ್ಥಾನದಿಂದ ವಜಾಗೊಳಿಸಿದೆ.
  • ಆದರೆ ಗುವಾಹಟಿಯಲ್ಲಿರುವ ಬಂಡಾಯ ಶಿವಸೇನಾ ಶಾಸಕರು ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿಗೆ ಪತ್ರ ಬರೆದು, ಏಕನಾಥ್ ಶಿಂಧೆ ಇನ್ನೂ ಕೂಡಾ ಶಾಸಕಾಂಗ ಪಕ್ಷದ ನಾಯಕ ಎಂದು ಪ್ರತಿಪಾದಿಸಿದ್ದಾರೆ.
  • ಉದ್ಧವ್ ಠಾಕ್ರೆ ರಾಜೀನಾಮೆ ನೀಡಲಿದ್ದಾರೆ ಎಂಬ ಊಹಾಪೋಹದ ನಡುವೆಯೆ, “ಬಂಡಾಯ ಶಿವಸೇನೆ ಶಾಸಕರು ಬಯಸಿದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ” ಎಂದು ಉದ್ಧವ್‌‌ ಬುಧವಾರ ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಬಂಡಾಯ ಶಾಸಕರಿಗೆ ಸಂಜೆ 5 ಗಂಟೆವರೆಗೆ ಗಡುವು ನೀಡಿದ ಉದ್ಧವ್ ಸರ್ಕಾರ

  • “ನಾನು ನನ್ನ ರಾಜೀನಾಮೆ ಪತ್ರವನ್ನು ಸಿದ್ಧಪಡಿಸುತ್ತಿದ್ದೇನೆ, ಬಂಡಾಯವೆದ್ದಿರುವವರು ಇಲ್ಲಿಗೆ ಬರಬೇಕು, ಈ ಪತ್ರವನ್ನು ತೆಗೆದುಕೊಂಡು ರಾಜ್ಯಪಾಲರಿಗೆ ಸಲ್ಲಿಸಬೇಕು” ಎಂದು ಉದ್ಧವ್‌ ಠಾಕ್ರೆ ಹೇಳಿದ್ದಾರೆ.
  • ಉದ್ಧವ್‌ ಠಾಕ್ರೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಕೆಲವೇ ಗಂಟೆಗಳ ನಂತರ, ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಿದರು.
  • ಉದ್ಧವ್ ಠಾಕ್ರೆ ಈಗ ಉಪನಗರ ಬಾಂದ್ರಾದಲ್ಲಿರುವ ತಮ್ಮ ಕುಟುಂಬದ ನಿವಾಸ ಮಾತೋಶ್ರೀಗೆ ತೆರಳಿದ್ದಾರೆ.
  • ಗುರುವಾರ ಮುಂಜಾನೆ, ಪಕ್ಷಾಂತರ ವಿರೋಧಿ ಕಾನೂನನ್ನು ತಪ್ಪಿಸಲು ಅಗತ್ಯವಾದ ಶಾಸಕರ ಸಂಖ್ಯೆಯನ್ನು ಏಕನಾಥ್ ಶಿಂಧೆ ಒಟ್ಟುಗೂಡಿಸಿದಂತಿದೆ. ಹೆಚ್ಚಿನ ಶಿವಸೇನೆ ಶಾಸಕರು ಗುವಾಹಟಿಯ ಹೋಟೆಲ್‌ ರಾಡಿಸನ್ ಬ್ಲೂ‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಸಿಎಂ ಗೃಹ ಕಚೇರಿ ಬಿಟ್ಟು ಸ್ವಂತ ಮನೆಗೆ ತೆರಳಿದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

ಸರ್ಕಾರ ಉಳಿಸಲು ಬೇಕಾದ ಶಾಸಕರ ಸಂಖ್ಯೆ

ಮಹಾರಾಷ್ಟ್ರ ವಿಧಾನಸಭೆಯ ಒಟ್ಟು ಬಲವು 287. ಹೀಗಾಗಿ ಸದನದಲ್ಲಿ ವಿಶ್ವಾಸ ಮತದ ಸಂದರ್ಭದಲ್ಲಿ ಅಗತ್ಯವಿರುವ ಬಹುಮತವು 144 ಆಗಿದೆ. ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ನ ಆಡಳಿತ ಒಕ್ಕೂಟವು ಪ್ರಸ್ತುತ 169 ಸ್ಥಾನಗಳನ್ನು ಹೊಂದಿದೆ.

ಒಂದು ವೇಳೆ ಶಿಂಧೆ ನೇತೃತ್ವದ ಶಾಸಕರು ರಾಜೀನಾಮೆ ನೀಡಿದರೆ, ಮಹಾ ವಿಕಾಸ್ ಅಘಾಡಿ ಸರ್ಕಾರ ಬಹುಮತ ಕಳೆದುಕೊಂಡು, ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರದ ಪತನಕ್ಕೆ ಕಾರಣವಾಗುತ್ತದೆ. ಶಿವಸೇನೆಯು 55 ಶಾಸಕರನ್ನು ಹೊಂದಿದ್ದು, ಪಕ್ಷಾಂತರ ವಿರೋಧಿ ಕಾನೂನನ್ನು ಜಾರಿಗೊಳಿಸಲು ಉದ್ಧವ್ ಠಾಕ್ರೆ ಅವರ ಪರವಾಗಿ ಕನಿಷ್ಠ 37 ಶಾಸಕರು ಇರಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...