Homeಕರ್ನಾಟಕಮಂಡ್ಯ: ಬರ್ಬರವಾಗಿ ಕೊಲೆಯಾದ ಮಹಿಳೆಯರ ಸುಳಿವು ನೀಡಿದರೆ 1 ಲಕ್ಷ ಬಹುಮಾನ

ಮಂಡ್ಯ: ಬರ್ಬರವಾಗಿ ಕೊಲೆಯಾದ ಮಹಿಳೆಯರ ಸುಳಿವು ನೀಡಿದರೆ 1 ಲಕ್ಷ ಬಹುಮಾನ

- Advertisement -
- Advertisement -

ಈ ತಿಂಗಳ ಆರಂಭದಲ್ಲಿ ಹೊಟ್ಟೆಯಿಂದ ಕೆಳಭಾಗ ಕತ್ತರಿಸಿ, ಬರ್ಬರವಾಗಿ ಕೊಲೆ ಮಾಡಲಾಗಿದ್ದ ಇಬ್ಬರು ಮಹಿಳೆಯರ ಮೃತದೇಹಗಳು ಪತ್ತೆಯಾಗಿ ಮಂಡ್ಯ ಜಿಲ್ಲೆಯಲ್ಲಿ ಆತಂಕ ಉಂಟಾಗಿತ್ತು. 15 ದಿನಗಳಾದರೂ ಪೊಲೀಸರು ಆರೋಪಿಯನ್ನಲ್ಲ, ಕೊಲೆಯಾದ ಮಹಿಳೆಯರು ಯಾರು ಎಂಬುದನ್ನೇ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ.

ಬರ್ಬರವಾಗಿ ಕೊಲೆಯಾದ ಅಪರಿಚಿತ ಮಹಿಳೆಯರ ಗುರುತು, ಸುಳಿವು ನೀಡಿದರೆ 1 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಮಂಡ್ಯ ಜಿಲ್ಲೆ ಪೊಲೀಸ್ ಅಧೀಕ್ಷಕರು ಪ್ರಕಟಣೆ ಹೊರಡಿಸಿದ್ದಾರೆ.

ಜೂನ್ 7 ರಂದು ಪಾಂಡವಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಬೇಬಿ ಗ್ರಾಮದ ಕೆರೆಕೋಡಿ ಕಟ್ಟೆಯ ನಾಲೆಯಲ್ಲಿ ಸುಮಾರು 30 ರಿಮದ 32 ವರ್ಷದ ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಹೊಟ್ಟೆ ಭಾಗದಿಂದ ಕೆಳಗೆ ಕತ್ತರಿಸಿದ ದೇಹದ ಭಾಗವನ್ನು ಚೀಲದಲ್ಲಿ ಕಟ್ಟಿ ನಾಲೆಗೆ ಎಸೆಯಲಾಗಿತ್ತು. ಎಲ್ಲಿಯೋ ಕೊಲೆ ಮಾಡಿ, ಮೃತದೇಹವನ್ನು ನಾಲೆಗೆ ಎಸೆದಿರುವ ಶಂಕೆ ವ್ಯಕ್ತವಾಗಿತ್ತು.

ಇದನ್ನೂ ಓದಿ: ಪಠ್ಯಪುಸ್ತಕ ರಚನೆಯಲ್ಲಿ ಸಮಿತಿ ಸದಸ್ಯರ ಅಭಿಪ್ರಾಯ ತಿರಸ್ಕರಿಸಿ ಏಕಪಕ್ಷೀಯ ಪಠ್ಯ ರಚಿಸಿದ ಚಕ್ರತೀರ್ಥ!

ಅದೇ ದಿನ ಜೂನ್ 7 ರಂದು ಶ್ರೀರಂಗಪಟ್ಟಣ ತಾಲೂಕಿನ ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಅರೆ ಕೆರೆ ಗ್ರಾಮದ ಬಳಿಯ ಚಿಕ್ಕದೇವರಾಜ ನಾಲೆಯಲ್ಲಿ‌ 40 ರಿಂದ 45 ವರ್ಷ ವಯಸ್ಸಿನ ಮಹಿಳೆಯ ಮೃತದೇಹ ತೇಲಿ ಬಂದು ರೈತನ ಜಮೀನಿನಲ್ಲಿ ಸಿಕ್ಕಿತ್ತು.

ಈ ಎರಡು ಅರ್ಧ ಮೃತದೇಹಗಳು ಸಿಕ್ಕು 15 ದಿನಗಳಾದರೂ ಇನ್ನೂ ಪೊಲೀಸರಿಗೆ ಆರೋಪಿಗಳ ಸುಳಿವು ಹೋಗಲಿ ಮೃತ ಮಹಿಳೆಯರು ಯಾರು ಎಂಬುದನ್ನು ಪತ್ತೆ ಮಾಡಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಸುಳಿವು ನೀಡಿದವರಿಗೆ ಬಹುಮಾನ ಘೋಷಣೆ ಮಾಡಲಾಗಿದೆ.

ಮಹಿಳೆಯರ ಗುರುತು, ಹೆಸರು, ವಿಳಾಸ, ಆರೋಪಿಗಳ ಸುಳಿವು ನೀಡಿದವರಿಗೆ 1 ಲಕ್ಷ ಬಹುಮಾನ ನೀಡಿ, ಅವರ ಮಾಹಿತಿಗಳ ಗೌಪ್ಯತೆಯನ್ನು ಕಾಪಾಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮಾಹಿತಿ ನೀಡುವವರು, ಪೊಲೀಸ್ ಕಂಟ್ರೋಲ್ ರೂಂ. 0823 2-224888, 9480804800 ಡಿವೈಎಸ್ಪಿ ಶ್ರೀರಂಗಪಟ್ಟಣ ಉಪವಿಭಾಗ 9480804821, ಪಿ.ಐ ಪಾಂಡವಪುರ ಠಾಣೆ – 9480804858 ಹಾಗೂ ಸಿ.ಪಿ.ಐ ಕೆ. ಆರ್.ಸಾಗರ ವೃತ್ತ 9480804832 ಇಲ್ಲಿಗೆ ಸಂಪರ್ಕಿಸಬಹುದು.


ಇದನ್ನೂ ಓದಿ: ಮಂಡ್ಯದಲ್ಲಿ ಭೀಕರ ಹತ್ಯೆ: ನಾಲೆಯಲ್ಲಿ ತೇಲಿ ಬಂದ ಅರ್ಧ ಕತ್ತರಿಸಿದ ಮಹಿಳೆಯರ ಮೃತದೇಹಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...