Homeಮುಖಪುಟವಾಟ್ಸಾಪ್ ಯೂನಿವರ್ಸಿಟಿಯ ವಿಧೇಯ ವಿದ್ಯಾರ್ಥಿ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಟ್ವೀಟ್‌ಗೆ ವ್ಯಂಗ್ಯ

ವಾಟ್ಸಾಪ್ ಯೂನಿವರ್ಸಿಟಿಯ ವಿಧೇಯ ವಿದ್ಯಾರ್ಥಿ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಟ್ವೀಟ್‌ಗೆ ವ್ಯಂಗ್ಯ

- Advertisement -
- Advertisement -

ಮುಸ್ಲಿಂ ವ್ಯಕ್ತಿಯನ್ನು, ದಲಿತರನ್ನು, ಆದಿವಾಸಿ ಮಹಿಳೆಯನ್ನು ರಾಷ್ಟ್ರಪತಿ ಮಾಡಿದ್ದು ನಾವೇ (ವಾಟ್ಸಾಪ್‌ನಲ್ಲಿ ಬಂದಿದ್ದು) ಎಂಬುದಾಗಿ ಟ್ವೀಟ್ ಮಾಡಿದ್ದ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಇಲಾಖೆಯ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರನ್ನು ಸಾಮಾಜಿಕ ಜಾಲತಾಣಗಳಲ್ಲಿ ವಾಟ್ಸಾಪ್ ಯೂನಿವರ್ಸಿಟಿಯ ವಿಧೇಯ ವಿದ್ಯಾರ್ಥಿ ಎಂದು ಕರೆದು ವ್ಯಂಗ್ಯವಾಡಲಾಗಿದೆ.

ಮುಸ್ಲಿಂ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡಿದ್ದು ನಾವೇ, ದಲಿತ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡಿದ್ದೂ ನಾವೇ, ಇಂದು ಮಹಿಳೆ ಅದೂ ಆದಿವಾಸಿ ಬುಡಕಟ್ಟು ಜನಾಂಗದ ಮಹಿಳೆಯನ್ನು ರಾಷ್ಟ್ರಪತಿ ಮಾಡುವುದು ನಾವೇ… ಏಕೆಂದರೆ ನಾವು ಜಾತಿವಾದಿಗಳಲ್ಲಾ-ರಾಷ್ಟ್ರವಾದಿಗಳು. (ವಾಟ್ಸಪ್‌‌ನಲ್ಲಿ ಬಂದಿದ್ದು) ಎಂದು ಮಂಗಳವಾರ ಸಚಿವರು, ವಿಧಾನಪರಿಷತ್ ಸಭಾನಾಯಕರು ಆದ ಕೋಟಾ ಶ್ರೀನಿವಾಸ ಪೂಜಾರಿಯವರು ಟ್ವೀಟ್ ಮಾಡಿದ್ದರು.

ಆ ಟ್ವೀಟ್‌ಗೆ ನೂರಾರು ಜನರು ಪ್ರತಿಕ್ರಿಯಿಸಿ ನೀವು ತಪ್ಪು ಮಾಹಿತಿ ನೀಡುತ್ತಿದ್ದೀರಿ ಎಂದಿದ್ದಾರೆ. “ಬಿಜೆಪಿಯವರೆಲ್ಲರೂ ವಾಟ್ಸಾಪ್ ಯೂನಿವರ್ಸಿಟಿಯ ವಿಧೇಯ ವಿದ್ಯಾರ್ಥಿಗಳು, ಅದೇ ಅವರ ಜ್ಞಾನದ ಮೂಲ! ಕೋಟಾ ಶ್ರೀನಿವಾಸ್ ಪೂಜಾರಿ ಅವರೇ, ವಾಟ್ಸಾಪ್ ಬಿಟ್ಟು ಪುಸ್ತಕಗಳನ್ನು ಓದಿ ಜ್ಞಾನಾರ್ಜನೆ ಮಾಡಿಕೊಳ್ಳಿ, ನೀವು ಮೊದಲಲ್ಲ, ಇವರೆಲ್ಲ ಮೊದಲೇ ರಾಷ್ಟ್ರಪತಿಗಳಾಗಿದ್ದಾರೆ. ಜಾಕಿರ್ ಹುಸೇನ್(ಮುಸ್ಲಿಂ), ಆರ್.ಕೆ ನಾರಾಯಣ್(ದಲಿತ), ಪ್ರತಿಭಾ ಪಾಟೀಲ್ ಮಹಿಳೆ” ಎಂದು ಶಿವಶೆಟ್ಟಿ ಎಂಬುವವರು ಪ್ರತಿಕ್ರಿಯೆ ನೀಡಿದ್ದಾರೆ.

ಸ್ವತಂತ್ರ ಭಾರತದ ಮೊದಲ ಮುಸ್ಲಿಂ ರಾಷ್ಟ್ರಪತಿ : ಝಾಕಿರ್ ಹುಸೇನ್, ಸ್ವತಂತ್ರ ಭಾರತದ ಮೊದಲ ಸಿಖ್ ಧರ್ಮದ ರಾಷ್ಟ್ರಪತಿ : ಗ್ಯಾನಿ ಜೈಲ್ ಸಿಂಗ್, ಸ್ವತಂತ್ರ ಭಾರತದ ಮೊದಲ ದಲಿತ ರಾಷ್ಟ್ರಪತಿ : ಕೆ ಆರ್ ನಾರಾಯಣನ್, ಹಾಗೆ, ಸ್ವತಂತ್ರ ಭಾರತದ ಮೊದಲ ಮಹಿಳಾ ರಾಷ್ಟ್ರಪತಿ : ಪ್ರತಿಭಾ ಪಾಟೀಲ್ ಎಂದು ಇರ್ಷಾದ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಮುಖಂಡ, ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಹ ಪ್ರತಿಕ್ರಿಯೆ ನೀಡಿದ್ದು, ವಾಟ್ಸ್‌ಅಪ್‌ನಲ್ಲಿ ಬಂದಿರುವುದನ್ನು ಪೋಸ್ಟ್ ಮಾಡುವ ಮುನ್ನ ಇತಿಹಾಸ ಓದಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. “ವಾಟ್ಸ್‌ಅಪ್ ಯೂನಿವರ್ಸಿಟಿಯ ವಿಧೇಯ ವಿದ್ಯಾರ್ಥಿಗಳಾದ BJPಯವರ ಜ್ಞಾನದ ಮಟ್ಟವಿದು.‌ಕೋಟಾ ಶ್ರೀನಿವಾಸ ಪೂಜಾರಿಯವರೆ, “ಸಚಿವರಾಗಿದ್ದುಕೊಂಡು ವಾಟ್ಸ್‌ಅಪ್‌ನಲ್ಲಿ ಬಂದಿದನ್ನು ಯಥಾವತ್ತಾಗಿ ಪೋಸ್ಟ್‌ ಮಾಡುತ್ತಾರೆಂದರೆ ಅವರ ಬುದ್ದಿಗೆ ಎಷ್ಟು ಮಂಕು ಕವಿದಿರಬಹುದು? ಪೂಜಾರಿಯವರೆ ವಾಟ್ಸ್‌ಅಪ್‌ನಲ್ಲಿ ಬಂದಿರುವುದನ್ನು ಪೋಸ್ಟ್ ಮಾಡುವ ಮುನ್ನ ಇತಿಹಾಸ ಓದಿಕೊಳ್ಳಿ” ಎಂದಿದ್ದಾರೆ.

ರಾಷ್ಟ್ರದ ಮೊದಲ ಮುಸ್ಲಿಂ ರಾಷ್ಟ್ರಪತಿ ಕಾಂಗ್ರೆಸ್‌ನ ಕೊಡುಗೆ! ರಾಷ್ಟ್ರದ ಮೊದಲ ಸಿಖ್ ರಾಷ್ಟ್ರಪತಿ ಕಾಂಗ್ರೆಸ್‌ನ ಕೊಡುಗೆ! ರಾಷ್ಟ್ರದ ಮೊದಲ ದಲಿತ ರಾಷ್ಟ್ರಪತಿ ಕಾಂಗ್ರೆಸ್‌ನ ಕೊಡುಗೆ! ಅಷ್ಟೆ ಏಕೆ, ಮೊದಲ‌ ಮಹಿಳಾ ರಾಷ್ಟ್ರಪತಿಯ ಕೊಡುಗೆಯೂ ಕಾಂಗ್ರೆಸ್‌ನದ್ದೆ! ಆದರೆ ಕಾಂಗ್ರೆಸ್ ಯಾವತ್ತೂ ಇದನ್ನು ಪ್ರಚಾರಕ್ಕೆ ಬಳಸಲಿಲ್ಲ. ಇದೇ ವ್ಯತ್ಯಾಸ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಅಲ್ಲದೆ ಬಹಳಷ್ಟು ಜನ ಟ್ವಿಟರ್‌ನಲ್ಲಿ ಪ್ರತಿಕ್ರಿಯೆ ನಿಡಿದ್ದು, ದಯವಿಟ್ಟು ವಾಟ್ಸಾಪ್ ಯೂನಿವರ್ಸಿಟಿಯಿಂದ ಹೊರಬನ್ನಿ ಎಂದು ಸಲಹೆ ನೀಡಿದ್ದಾರೆ.

ಪುಸ್ತಕಗಳನ್ನು ಓದಿ ಮೊದಲ ಸ್ತರದ ಮಾಹಿತಿಯನ್ನು ಪಡೆಯದೆ ವಾಟ್ಸಾಪ್‌ನಲ್ಲಿ ಬಂದಿದ್ದೆಲ್ಲ ನಿಜ ಎಂದು ನಂಬಿ ವಾದಿಸುವವರನ್ನು ವಾಟ್ಸಾಪ್ ಯೂನಿವರ್ಸಿಟಿಯಿಂದ ಬಂದಿದ್ದೀರಾ ಎಂದು ಕರೆಯಲಾಗುತ್ತದೆ.

ಇದನ್ನೂ ಓದಿ: ಚಾಮರಾಜಪೇಟೆ ಈದ್ಗಾ ಮೈದಾನ ಬಿಬಿಎಂಪಿಗೆ ಸೇರಿಲ್ಲ: ಆಯುಕ್ತರ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...