Homeಮುಖಪುಟಕುವೆಂಪು, ನಾಡಗೀತೆಗೆ ಅಪಮಾನಿಸಿದ 'ರೋಹಿತ್ ಚಕ್ರತೀರ್ಥ'ಗೆ ಕುಲಪತಿಗಳಿಂದ ಸನ್ಮಾನ: ತೀವ್ರ ವಿರೋಧ

ಕುವೆಂಪು, ನಾಡಗೀತೆಗೆ ಅಪಮಾನಿಸಿದ ‘ರೋಹಿತ್ ಚಕ್ರತೀರ್ಥ’ಗೆ ಕುಲಪತಿಗಳಿಂದ ಸನ್ಮಾನ: ತೀವ್ರ ವಿರೋಧ

- Advertisement -
- Advertisement -

ರಾಷ್ಟ್ರಕವಿ ಕುವೆಂಪುರವರಿಗೆ ಅವಮಾನಿಸಿ, ನಾಡಗೀತೆ ತಿರುಚಿದ ಆರೋಪ ಎದುರಿಸುತ್ತಿರುವ, ವಿವಾದಾತ್ಮಕ ಪಠ್ಯ ಪರಿಷ್ಕರಣೆ ಸಮಿತಿಯ ಮಾಜಿ ಅಧ್ಯಕ್ಷರಾದ ರೋಹಿತ್ ಚಕ್ರತೀರ್ಥರನ್ನು ಮಂಗಳೂರು ವಿವಿ ಕುಲಪತಿಗಳು ಸನ್ಮಾನಿಸುವುದು ಚರ್ಚೆಗೆ ಗ್ರಾಸವಾಗಿದ್ದು, ತೀವ್ರ ವಿರೋಧ ವ್ಯಕ್ತವಾಗಿದೆ.

ಚಿಂತನಗಂಗಾ ಮತ್ತು ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಜೂನ್ 25ರ ಶನಿವಾರ ಸಂಜೆ 5 ಗಂಟೆಗೆ ಮಂಗಳೂರಿನ ಡೊಂಗರಕೇರಿ ಕೆನರಾ ಹೈಸ್ಕೂಲ್‌ನ ಭುವನೇಂದ್ರ ಸಭಾಂಗಣದಲ್ಲಿ ರೋಹಿತ್ ಚಕ್ರತೀರ್ಥ ಅವರಿಗೆ ‘ನಾಗರಿಕ ಸನ್ಮಾನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆ ಕಾರ್ಯಕ್ರಮದಲ್ಲಿ ‘ಭರತಖಂಡದ ಗತವೈಭವ ಮತ್ತು ಅಳಿಸಿಹೋದ ಇತಿಹಾಸ’ ಎಂಬ ವಿಷಯದ ಬಗ್ಗೆ ರೋಹಿತ್ ಚಕ್ರತೀರ್ಥ ಅವರು ವಿಷಯ ಮಂಡಿಸಲಿದ್ದು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ ಪಿ ಸುಬ್ರಹ್ಮಣ್ಯ ಯಡಪಡಿತ್ತಾಯರು ವಹಿಸಲಿರುವುದಾಗಿ ತಿಳಿದುಬಂದಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ಷೇಪಗಳು ವ್ಯಕ್ತವಾಗಿವೆ.

ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ನಾಡಿನ ಖ್ಯಾತನಾಮರು, ಮಹಾನ್ ಚೇತನಗಳಿಗೆ ಅವಮಾನ ಎಸಗಿರುವ, ನಾಡಗೀತೆಗೆ ಅಪಮಾನ ಎಸಗಿರುವ, ರಾಜ್ಯದಲ್ಲಿ ಸಾರ್ವತ್ರಿಕ ಆಕ್ರೋಶಕ್ಕೆ ಗುರಿಯಾಗಿರುವ ರೋಹಿತ್ ಚಕ್ರತೀರ್ಥ ಗೆ ಮಂಗಳೂರಿನ ಬಲಪಂಥೀಯ ವೇದಿಕೆಯೊಂದು ಶನಿವಾರ (ಜೂನ್ 25) ನಾಗರಿಕ ಸನ್ಮಾನ ನಡೆಸುತ್ತಿದೆ ಎಂಬ ಮಾಹಿತಿ ತಿಳಿದು ಆಘಾತವಾಯಿತು. ಇಡೀ ಕರ್ನಾಟಕ ಈ ವ್ಯಕ್ತಿಯ ವಿರುದ್ದ ಆಕ್ರೋಶಗೊಂಡಿರುವಾಗ, ಬಸವಣ್ಣ, ಕುವೆಂಪು, ನಾರಾಯಣ ಗುರುಗಳ ಅನುಯಾಯಿಗಳು ಪ್ರತಿಭಟನೆ ನಿರತರಾಗಿರುವ ಸಂದರ್ಭದಲ್ಲಿ ಮಂಗಳೂರಿನಂತಹ ವಿದ್ಯಾವಂತ ಜನರಿರುವ ನಗರದಲ್ಲಿ ಇದು ಘಟಿಸಬಾರದಿತ್ತು. ಅದರಲ್ಲಿಯೂ ನಾಗರಿಕ ಸನ್ಮಾನದ ಸಭಾಧ್ಯಕ್ಷತೆಯನ್ನು ಮಂಗಳೂರು ವಿ ವಿಯ ಕುಲಪತಿಗಳಾದ ಮಾನ್ಯ ಯಡಪಡಿತ್ತಾಯರು ವಹಿಸಲಿರುವುದು ಕಂಡು ಮನಸ್ಸು ವಿಷಣ್ಣವಾಯಿತು ಎಂದು ಮಂಗಳೂರಿನ ಯುವ ಹೋರಾಟಗಾರ ಮುನೀರ್ ಕಾಟಿಪಳ್ಳ ಬೇಸರ ವ್ಯಕ್ತಪಡಿಸಿದ್ದಾರೆ.

ಕುವೆಂಪು, ಅಂಬೆಡ್ಕರ್ ರಂತಹ ಮಹಾ ಚೇತನಗಳನ್ನು ಅವಮಾನಿಸುವ, ಅತ್ಯಂತ ಕೊಳಕು ಪದಗಳಿಂದ ನಾಡಿನ ಸಾಹಿತಿ ಬರಹಗಾರರನ್ನು ಟ್ರೋಲ್ ಮಾಡುವುದರಲ್ಲಿ ಕುಖ್ಯಾತಗೊಂಡಿರುವ ವ್ಯಕ್ತಿಯೊಬ್ಬನಿಗೆ ಸನ್ಮಾನ ಮಾಡುವ ಸಭೆಯ ಅಧ್ಯಕ್ಷತೆಯನ್ನು ವಿವಿಯ ಕುಲಪತಿಗಳು ವಹಿಸುತ್ತಾರೆ ಅಂತಾದರೆ ಕನಿಷ್ಟಪಕ್ಷ ಸಾರ್ವಜನಿಕ ಲಜ್ಜೆಯೂ ಈ ನಾಡಿನಲ್ಲಿ ಇಲ್ಲದಾಯಿತೇ ಎಂದು ಚಡಪಡಿಸುವಂತಾಗುತ್ತಿದೆ. ಇದು ಸರಿಯಲ್ಲ. ಮಂಗಳೂರಿನಲ್ಲಿ ಇಂತಹ ಕಾರ್ಯಕ್ರಮ ನಡೆಯುವುದು ಇಡೀ ರಾಜ್ಯದಲ್ಲಿ ನಮ್ಮ ನಗರದ ಘನತೆಗೆ ಕುಂದು ತರುತ್ತದೆ.‌ ಆಯೋಜಕರು ಕಾರ್ಯಕ್ರಮ ಕೈ ಬಿಡಬೇಕು. ಕುಲಪತಿಗಳಾದ ಮಾನ್ಯ ಯಡಪಡಿತ್ತಾಯರಾದರು ಈ ಕಾರ್ಯಕ್ರದಲ್ಲಿ ನಾನಿಲ್ಲ ಎಂತ ಹೇಳಬೇಕು. ಅದಾಗಲಿಲ್ಲ ಅಂತಾದರೆ ಮಂಗಳೂರಿನ ಪ್ರಜ್ಞಾವಂತರು, ನಾಗರಿಕ ಸಂಘಟನೆಗಳು ಕಾರ್ಯಕ್ರಮದ ರದ್ದತಿಗೆ ಆಗ್ರಹಿಸಿ ಪ್ರತಿಭಟನೆಗಳನ್ನು ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪಠ್ಯ ಪರಿಷ್ಕರಣೆಯಲ್ಲಿ ವಿವಿಧ ಮಹಾನ್ ವ್ಯಕ್ತಿಗಳ ಪಾಠವನ್ನು ಕೈಬಿಡಲಾಗಿದೆ, ತಿರುಚಲಾಗಿದೆ ಎಂಬ ಆರೋಪಗಳು ಜೋರಾಗಿ ಕೇಳಿಬರುತ್ತಿವೆ. ಅಲ್ಲದೆ ಆದಿವಾಸಿಗಳನ್ನು ಅವಮಾನಿಸಿದ್ದಾರೆ ಎಂದೂ ಕುವೆಂಪುರವರ ರಚಿಸಿದ ನಾಡಗೀತೆಯನ್ನು ತಿರುಚಿದ್ದಾರೆಂದು ರೋಹಿತ್ ಚಕ್ರತೀರ್ಥ ವಿರುದ್ಧ ದೂರು ದಾಖಲಾಗಿದೆ. ಇಂತಹ ಸಂದರ್ಭದಲ್ಲಿ ಅವರಿಗೆ ಸನ್ಮಾನ ಏರ್ಪಡಿಸುತ್ತಿರುವುದು ವಿರೋಧಕ್ಕೆ ಕಾರಣವಾಗಿದೆ.


ಇದನ್ನೂ ಓದಿ: ವಾಟ್ಸಾಪ್ ಯೂನಿವರ್ಸಿಟಿಯ ವಿಧೇಯ ವಿದ್ಯಾರ್ಥಿ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಟ್ವೀಟ್‌ಗೆ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಏನು ಹೇಳಿದರೂ ಕಾರ್ಯಕ್ರಮವನ್ನಂತೂ ಹೇಗೂ ಆ ಪ್ರತಿಗಾಮಿಗಳು ನಿಲ್ಲಿಸುವುದಿಲ್ಲ. ಕಡೇ ಪಕ್ಷ ಕುಲಪತಿ “ಯಡವಟ್ಟಾಯ”ನಾದರೂ ಹೋಗುವುದನ್ನು ಕೈ ಬಿಡದಿದ್ದಲ್ಲಿ ರಾಜ್ಯದಾದ್ಯಂತ ಹಲವು ಗಣ್ಯರು, ಕಾರ್ಯಕರ್ತರು ಯಾವುದಾದರೂ ಗಾಂಧಿ ಪ್ರತಿಮೆ ಬಳಿ ಸೇರಿ, ಕಪ್ಪು ಪಟ್ಟಿ ಕಟ್ಟಿಕೊಂಡು, “ಯಡವಟ್ಟಾಯ”ನ ಫೋಟೋವನ್ನು ತಲೆಕೆಳಗಾಗಿ ಇಟ್ಕೊಂಡು, ಎರಡು-ಮೂರು ಗಂಟೆ ಕಾಲ ಧರಣಿಯನ್ನಾದರೂ ಮಾಡುವುದು ನಾವು ಮಾಡಬಹುದಾದ ಕನಿಷ್ಠ ಪ್ರತಿಭಟನೆ ಅಂತ ನನ್ನ ಅನ್ನಿಸಿಕೆ.

  2. ಈ ಅಯ್ಯೊಗ್ಯ ಉಪಕುಲಪತಿ ಸಾರ್ವಜನಿಕರ ತೆರಿಗೆ ಹಣದಿಂದ ಸಂಬಳ ಸಾರಿಗೆ ಪಡಿತಾ ಇದ್ದಾನೆ, ಈತನಿಗೆ ಕನಿಷ್ಠ ಜ್ಞಾನವು ಇಲ್ಲವೇ?ನಾಡಿನಾದ್ಯಂತ ಚಕ್ರತೀರ್ಥನ ಮೇಲೆ ಇಷ್ಟು ವಿರೋಧವ್ಯಕ್ತ ಆಗುತ್ತಿರುವ ಈ ಸಮಯದಲ್ಲಿ,ಅದು ಸಾರ್ವಜನಿಕರ ತೆರಿಗೆ ಹಣದಿಂದಆತನಿಗೆ ಸನ್ಮಾನ ಯಾವ ಪುರುಷಾರ್ಥಕ್ಕೆ? ಒಂದು ಪಕ್ಷ ಈ ಕುಲಪತಿಯು ಚಕ್ರತೀರ್ಥನ ಸಮುದಾಯದವನೆ ಆಗಿದ್ದರೆ ಮತ್ತು ಸನ್ಮಾನ ಮಾಡುವ ತೇವಲಿದ್ದರೆ ಆತನ ಸ್ವಂತಹಣದಲ್ಲಿ ಖಾಸಗಿಯಾಗಿ ಮಾಡಿಕೊಳ್ಳಲಿ,

LEAVE A REPLY

Please enter your comment!
Please enter your name here

- Advertisment -

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...