Homeರಾಜಕೀಯಮಹಾರಾಷ್ಟ್ರ: ‘ಶಿಂಧೆ ನಮ್ಮ ನಾಯಕ’ ಎಂದು ಉಪ ಸಭಾಪತಿಗೆ ಪತ್ರ ಕಳುಹಿಸಿದ ಬಂಡಾಯ ಶಾಸಕರು

ಮಹಾರಾಷ್ಟ್ರ: ‘ಶಿಂಧೆ ನಮ್ಮ ನಾಯಕ’ ಎಂದು ಉಪ ಸಭಾಪತಿಗೆ ಪತ್ರ ಕಳುಹಿಸಿದ ಬಂಡಾಯ ಶಾಸಕರು

- Advertisement -
- Advertisement -

ಏಕನಾಥ್ ಶಿಂಧೆ ಬಣದ 37 ಶಿವಸೇನೆ ಶಾಸಕರು ಗುರುವಾರ ತಡರಾತ್ರಿ ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್ ನರಹರಿ ಝಿರ್ವಾಲ್ ಅವರಿಗೆ ಪತ್ರವೊಂದನ್ನು ಕಳುಹಿಸುವುದರೊಂದಿಗೆ ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಮತ್ತಷ್ಟು ಉತ್ತುಂಗಕ್ಕೇರಿದೆ. ಪತ್ರದಲ್ಲಿ ಶಿಂಧೆ ಅವರು ತಾನು ಶಿವಸೇನೆ ಶಾಸಕಾಂಗ ಪಕ್ಷದ ನಾಯಕ ಎಂದು ಸ್ವತಃ ಘೋಷಿಸಿದ್ದು, ಭರತ್‌ಶೆಟ್ ಗೊಗವಾಲೆ ಅವರನ್ನು ಪಕ್ಷದ ಮುಖ್ಯ ಸಚೇತಕರಾಗಿ ನೇಮಿಸಲಾಗಿದೆ ಎಂದು ಹೇಳಿದ್ದಾರೆ.

“ಏಕನಾಥರಾವ್ ಸಂಭಾಜಿ ಶಿಂಧೆ ಶಿವಸೇನೆ ಶಾಸಕಾಂಗ ಪಕ್ಷದ ನಾಯಕರಾಗಿ ಮತ್ತು ಶಿವಸೇನೆ ಶಾಸಕಾಂಗ ಪಕ್ಷದ ಮುಖ್ಯ ಸಚೇತಕರಾಗಿ ಭರತ್‌ಶೆಟ್ ಗೊಗವಾಲೆ ಅವರನ್ನು ಶಿವಸೇನೆ ಶಾಸಕಾಂಗ ಪಕ್ಷದ ಅಡಿಯಲ್ಲಿರುವ ಸದಸ್ಯರು ನೇಮಕ ಮಾಡಿದ್ದಾರೆ. ನೇಮಕಾತಿಯ ಮರುದೃಢೀಕರಣಕ್ಕೆ ಸಂಬಂಧಿಸಿದಂತೆ ಜೂನ್ 23 2022 ರ ದಿನಾಂಕದ ನಿರ್ಣಯದ ಪ್ರತಿಯನ್ನು ನಾನು ಇಲ್ಲಿ ಲಗತ್ತಿಸುತ್ತಿದ್ದೇನೆ” ಎಂದು ಪತ್ರದಲ್ಲಿ ಬರೆಯಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಂಧೆ ಅವರ ಬಂಡಾಯದ ನಂತರ ಶಿವಸೇನೆ ಶಾಸಕಾಂಗ ಪಕ್ಷದ ನಾಯಕರಾಗಿ ಅಜಯ್ ಚೌಧರಿ ಅವರನ್ನು ಉದ್ಧವ್‌ ನೇತೃತ್ವದ ಶಿವಸೇನೆ ಬಣ ನೇಮಕ ಮಾಡಿತ್ತು. ಅಜಯ್ ಚೌಧರಿ ಅವರು ಉಪ ಸ್ಪೀಕರ್‌ ಅವರನ್ನು ಭೇಟಿಯಾಗಿ ಪಕ್ಷದ ಶಿಸ್ತು ಉಲ್ಲಂಘಿಸಿ ಬಂಡಾಯ ಬಣಕ್ಕೆ ಸೇರಿರುವ 12 ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರ ಅತಂತ್ರ: ಇಲ್ಲಿವರೆಗೆ ಏನಾಯಿತು? ಸಂಕ್ಷಿಪ್ತ ವರದಿ ಇಲ್ಲಿದೆ

ಈ ಮಧ್ಯೆ, ಬಂಡಾಯ ಶಾಸಕರು ‘24 ಗಂಟೆಗಳ ಒಳಗೆ’ ಹಿಂದಿರುಗಿದರೆ ಮಹಾರಾಷ್ಟ್ರದ ಮೈತ್ರಿ ಸರ್ಕಾರದಿಂದ ಹೊರಬರುವ ಬಗ್ಗೆ ಚರ್ಚಿಸುವುದಾಗಿ ಶಿವಸೇನೆ ನಾಯಕ ಸಂಜಯ್ ರಾವತ್‌ ಘೋಷಿಸಿದ್ದರು. ಆದರೂ ಕಾಂಗ್ರೆಸ್ ಮತ್ತು ಎನ್‌ಸಿಪಿ ಎರಡೂ ಮೈತ್ರಿ ಪಕ್ಷಗಳು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ತಮ್ಮ ಬೆಂಬಲವನ್ನು ವಾಗ್ದಾನ ಮಾಡಿದ್ದಾರೆ.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಗುರುವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, “ಈ ಸರ್ಕಾರಕ್ಕೆ ಬಹುಮತ ಇದೆಯೆ ಅಥವಾ ಇಲ್ಲವೆ ಎಂಬುವುದನ್ನು ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚನೆ ಮಾಡಿ ಪರೀಕ್ಷಿಸಲಾಗುವುದು” ಎಂದು ಹೇಳಿದ್ದಾರೆ.

ಎನ್‌ಸಿಪಿ ಶಾಸಕರನ್ನು ಭೇಟಿ ಮಾಡಿದ ಶರದ್‌ ಪವಾರ್‌ ಅವರು, ಶಿವಸೇನೆ ಶಾಸಕರು ಹಿಂತಿರುಗುತ್ತಾರೆ ಮತ್ತು ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಎಂವಿಎ ಬಹುಮತವನ್ನು ಸಾಬೀತುಪಡಿಸುತ್ತದೆ ಎಂದು ಭರವಸೆ ನೀಡಿದ ಅವರು, “ಬಂಡಾಯಕ್ಕೆ ಬಿಜೆಪಿಯೇ ಕಾರಣ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಸಿಎಂ ಗೃಹ ಕಚೇರಿ ಬಿಟ್ಟು ಸ್ವಂತ ಮನೆಗೆ ತೆರಳಿದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

“ಶಾಸಕರು ಹಿಂದಿರುಗಿದಾಗ ಅವರು ಹೇಗೆ ಅಲ್ಲಿಗೆ ಹೋದರು ಎಂಬ ವಾಸ್ತವವನ್ನು ವಿವರಿಸುತ್ತಾರೆ. ಅವರು ಇಲ್ಲಿಗೆ ಬಂದು ಶಿವಸೇನೆಯೊಂದಿಗಿದ್ದೇವೆ ಎಂದು ಸ್ಪಷ್ಟಪಡಿಸಿ ಮೈತ್ರಿ ಸರ್ಕಾರವು ಬಹುಮತ ಸಾಬೀತುಪಡಿಸಲಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...