Homeರಾಜಕೀಯಮಹಾರಾಷ್ಟ್ರ: ‘ಶಿಂಧೆ ನಮ್ಮ ನಾಯಕ’ ಎಂದು ಉಪ ಸಭಾಪತಿಗೆ ಪತ್ರ ಕಳುಹಿಸಿದ ಬಂಡಾಯ ಶಾಸಕರು

ಮಹಾರಾಷ್ಟ್ರ: ‘ಶಿಂಧೆ ನಮ್ಮ ನಾಯಕ’ ಎಂದು ಉಪ ಸಭಾಪತಿಗೆ ಪತ್ರ ಕಳುಹಿಸಿದ ಬಂಡಾಯ ಶಾಸಕರು

- Advertisement -
- Advertisement -

ಏಕನಾಥ್ ಶಿಂಧೆ ಬಣದ 37 ಶಿವಸೇನೆ ಶಾಸಕರು ಗುರುವಾರ ತಡರಾತ್ರಿ ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್ ನರಹರಿ ಝಿರ್ವಾಲ್ ಅವರಿಗೆ ಪತ್ರವೊಂದನ್ನು ಕಳುಹಿಸುವುದರೊಂದಿಗೆ ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಮತ್ತಷ್ಟು ಉತ್ತುಂಗಕ್ಕೇರಿದೆ. ಪತ್ರದಲ್ಲಿ ಶಿಂಧೆ ಅವರು ತಾನು ಶಿವಸೇನೆ ಶಾಸಕಾಂಗ ಪಕ್ಷದ ನಾಯಕ ಎಂದು ಸ್ವತಃ ಘೋಷಿಸಿದ್ದು, ಭರತ್‌ಶೆಟ್ ಗೊಗವಾಲೆ ಅವರನ್ನು ಪಕ್ಷದ ಮುಖ್ಯ ಸಚೇತಕರಾಗಿ ನೇಮಿಸಲಾಗಿದೆ ಎಂದು ಹೇಳಿದ್ದಾರೆ.

“ಏಕನಾಥರಾವ್ ಸಂಭಾಜಿ ಶಿಂಧೆ ಶಿವಸೇನೆ ಶಾಸಕಾಂಗ ಪಕ್ಷದ ನಾಯಕರಾಗಿ ಮತ್ತು ಶಿವಸೇನೆ ಶಾಸಕಾಂಗ ಪಕ್ಷದ ಮುಖ್ಯ ಸಚೇತಕರಾಗಿ ಭರತ್‌ಶೆಟ್ ಗೊಗವಾಲೆ ಅವರನ್ನು ಶಿವಸೇನೆ ಶಾಸಕಾಂಗ ಪಕ್ಷದ ಅಡಿಯಲ್ಲಿರುವ ಸದಸ್ಯರು ನೇಮಕ ಮಾಡಿದ್ದಾರೆ. ನೇಮಕಾತಿಯ ಮರುದೃಢೀಕರಣಕ್ಕೆ ಸಂಬಂಧಿಸಿದಂತೆ ಜೂನ್ 23 2022 ರ ದಿನಾಂಕದ ನಿರ್ಣಯದ ಪ್ರತಿಯನ್ನು ನಾನು ಇಲ್ಲಿ ಲಗತ್ತಿಸುತ್ತಿದ್ದೇನೆ” ಎಂದು ಪತ್ರದಲ್ಲಿ ಬರೆಯಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಂಧೆ ಅವರ ಬಂಡಾಯದ ನಂತರ ಶಿವಸೇನೆ ಶಾಸಕಾಂಗ ಪಕ್ಷದ ನಾಯಕರಾಗಿ ಅಜಯ್ ಚೌಧರಿ ಅವರನ್ನು ಉದ್ಧವ್‌ ನೇತೃತ್ವದ ಶಿವಸೇನೆ ಬಣ ನೇಮಕ ಮಾಡಿತ್ತು. ಅಜಯ್ ಚೌಧರಿ ಅವರು ಉಪ ಸ್ಪೀಕರ್‌ ಅವರನ್ನು ಭೇಟಿಯಾಗಿ ಪಕ್ಷದ ಶಿಸ್ತು ಉಲ್ಲಂಘಿಸಿ ಬಂಡಾಯ ಬಣಕ್ಕೆ ಸೇರಿರುವ 12 ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರ ಅತಂತ್ರ: ಇಲ್ಲಿವರೆಗೆ ಏನಾಯಿತು? ಸಂಕ್ಷಿಪ್ತ ವರದಿ ಇಲ್ಲಿದೆ

ಈ ಮಧ್ಯೆ, ಬಂಡಾಯ ಶಾಸಕರು ‘24 ಗಂಟೆಗಳ ಒಳಗೆ’ ಹಿಂದಿರುಗಿದರೆ ಮಹಾರಾಷ್ಟ್ರದ ಮೈತ್ರಿ ಸರ್ಕಾರದಿಂದ ಹೊರಬರುವ ಬಗ್ಗೆ ಚರ್ಚಿಸುವುದಾಗಿ ಶಿವಸೇನೆ ನಾಯಕ ಸಂಜಯ್ ರಾವತ್‌ ಘೋಷಿಸಿದ್ದರು. ಆದರೂ ಕಾಂಗ್ರೆಸ್ ಮತ್ತು ಎನ್‌ಸಿಪಿ ಎರಡೂ ಮೈತ್ರಿ ಪಕ್ಷಗಳು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ತಮ್ಮ ಬೆಂಬಲವನ್ನು ವಾಗ್ದಾನ ಮಾಡಿದ್ದಾರೆ.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಗುರುವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, “ಈ ಸರ್ಕಾರಕ್ಕೆ ಬಹುಮತ ಇದೆಯೆ ಅಥವಾ ಇಲ್ಲವೆ ಎಂಬುವುದನ್ನು ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚನೆ ಮಾಡಿ ಪರೀಕ್ಷಿಸಲಾಗುವುದು” ಎಂದು ಹೇಳಿದ್ದಾರೆ.

ಎನ್‌ಸಿಪಿ ಶಾಸಕರನ್ನು ಭೇಟಿ ಮಾಡಿದ ಶರದ್‌ ಪವಾರ್‌ ಅವರು, ಶಿವಸೇನೆ ಶಾಸಕರು ಹಿಂತಿರುಗುತ್ತಾರೆ ಮತ್ತು ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಎಂವಿಎ ಬಹುಮತವನ್ನು ಸಾಬೀತುಪಡಿಸುತ್ತದೆ ಎಂದು ಭರವಸೆ ನೀಡಿದ ಅವರು, “ಬಂಡಾಯಕ್ಕೆ ಬಿಜೆಪಿಯೇ ಕಾರಣ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಸಿಎಂ ಗೃಹ ಕಚೇರಿ ಬಿಟ್ಟು ಸ್ವಂತ ಮನೆಗೆ ತೆರಳಿದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

“ಶಾಸಕರು ಹಿಂದಿರುಗಿದಾಗ ಅವರು ಹೇಗೆ ಅಲ್ಲಿಗೆ ಹೋದರು ಎಂಬ ವಾಸ್ತವವನ್ನು ವಿವರಿಸುತ್ತಾರೆ. ಅವರು ಇಲ್ಲಿಗೆ ಬಂದು ಶಿವಸೇನೆಯೊಂದಿಗಿದ್ದೇವೆ ಎಂದು ಸ್ಪಷ್ಟಪಡಿಸಿ ಮೈತ್ರಿ ಸರ್ಕಾರವು ಬಹುಮತ ಸಾಬೀತುಪಡಿಸಲಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...