Homeಮುಖಪುಟಬೆಂಗಳೂರಿನ ಮತದಾರರಿಗೆ ರಸ್ತೆಗಳು, ಟ್ರಾಫಿಕ್, ಮತ್ತು ನೀರು ಮುಖ್ಯ ಸಮಸ್ಯೆಗಳು: ಜನಾಗ್ರಹ ಸಮೀಕ್ಷೆ ವರದಿ

ಬೆಂಗಳೂರಿನ ಮತದಾರರಿಗೆ ರಸ್ತೆಗಳು, ಟ್ರಾಫಿಕ್, ಮತ್ತು ನೀರು ಮುಖ್ಯ ಸಮಸ್ಯೆಗಳು: ಜನಾಗ್ರಹ ಸಮೀಕ್ಷೆ ವರದಿ

ಶೇಕಡಾ 94ರಷ್ಟು ಜನರಿಗೆ 2021-22 ಆರ್ಥಿಕ ಸಾಲಿನಲ್ಲಿ ಬಿಬಿಎಂಪಿ ವಾರ್ಡ್ ಗಳಿಗೆ ನೀಡಿದ 60 ಲಕ್ಷ ರೂಪಾಯಿಗಳ ಬಗ್ಗೆ ತಿಳಿದಿಲ್ಲ ಎನ್ನುತ್ತದೆ ವರದಿ

- Advertisement -
- Advertisement -

ಬೆಂಗಳೂರಿನ ಮತದಾರರು ರಸ್ತೆಗಳು, ಟ್ರಾಫಿಕ್, ಮತ್ತು ನೀರು ಮುಖ್ಯ ಸಮಸ್ಯೆಗಳೆಂದು ಭಾವಿಸುತ್ತಾರೆ. ಆದರೆ ಈ ಸಮಸ್ಯೆಯ ಪರಿಹಾರಕ್ಕಾಗಿ ಸಮೀಕ್ಷೆಯಲ್ಲಿ ಭಾಗವಹಿಸಿದ್ದ ಶೇಕಡಾ 88ರಷ್ಟು ಮಂದಿಯು BBMP ತಮ್ಮ ವಾರ್ಡ್ ಕೌನ್ಸಿಲರ್ ಗಳನ್ನು ಈವರೆಗೆ ಭೇಟಿಯಾಗಿಲ್ಲ. ಶೇಕಡಾ 87 ರಷ್ಟು ಜನರಿಗೆ ವಾರ್ಡ್ ಸಮಿತಿಗಳ ಬಗ್ಗೆ ತಿಳಿದಿಲ್ಲ. ಶೇಕಡಾ 95ರಷ್ಟು ಮಂದಿ ಎಂದೂ ವಾರ್ಡ್ ಸಮಿತಿ ಸಭೆಗೆ ಹೋಗಿಲ್ಲ. ಶೇಕಡಾ 22ರಷ್ಟು ಮಂದಿ ನೇರವಾಗಿ ಶಾಸಕರ ಬಳಿ ತೆರಳಿ ತಮ್ಮ ತೊಂದರೆಗಳನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಹೋಲಿಸಿದ್ದಲ್ಲಿ ಕೇವಲ 12% ಜನ ಮಾತ್ರ ತಮ್ಮ ಸ್ಥಳೀಯ ಕೌನ್ಸಿಲರ್ ಗಳನ್ನು ಭೇಟಿಯಾಗಿದ್ದಾರೆ ಎಂದು ಜನಾಗ್ರಹ ನಗರ ರಾಜಕೀಯ ಸಮೀಕ್ಷೆ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಸೆಪ್ಟಂಬರ್ ತಿಂಗಳಿನಲ್ಲಿ ಬಿಬಿಎಂಪಿ ಚುನಾವಣೆ ನಡೆಯಲಿದ್ದು, ಅದಕ್ಕೆ ಮುಂಚಿತವಾಗಿ ಜನಾಗ್ರಹ ಸೆಂಟರ್ ಫಾರ್ ಸಿಟಿಝನ್ ಶಿಪ್ ಆಂಡ್ ಡೆಮಾಕ್ರಸಿ ಸಂಸ್ಥೆಯು ಕೇಂದ್ರ ನಗರ ರಾಜಕೀಯ ಸಮೀಕ್ಷೆಯನ್ನು ನಡೆಸಿದೆ. ಇದರ ಭಾಗವಾಗಿ ಸ್ಥಳೀಯ ಆಡಳಿತ, ಜೀವನದ ಗುಣಮಟ್ಟದ ಮೇಲೆ ಪರಿಣಾಮ ಬೀರುವ ಸಮಸ್ಯೆಗಳು, ಮುಂಬರುವ ಬಿಬಿಎಂಪಿ ಚುನಾವಣೆಗಳಿಂದ ಮತದಾರರ ನಿರೀಕ್ಷೆ ಇತ್ಯಾದಿ ಪ್ರಶ್ನೆಗಳ ಆಧಾರದಲ್ಲಿ ಜೂನ್ 21 ರಂದು ವರದಿ ಬಿಡುಗಡೆ ಮಾಡಿದ್ದು, ಬೆಂಗಳೂರಿನ ಶೇಕಡಾ 83ರಷ್ಟು ಮತದಾರರ ಪ್ರಕಾರ ಬಿಬಿಎಂಪಿ ಚುನಾವಣೆಯು ನಗರವು ಎದುರಿಸುತ್ತಿರುವ ಸಮಸ್ಯೆಗಳ ಆಧಾರದ ಮೇಲೆ ನಡೆಯಬೇಕೆ ಹೊರತು ಬೇರೆ ವಿಷಯಗಳ ಮೇಲಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಮೀಕ್ಷೆಯ ಮುಖ್ಯಾಂಶಗಳು:

  • ಶೇಕಡಾ 17ರಷ್ಟು ನಾಗರಿಕರಿಗೆ ಮಾತ್ರ BBMP ಮಾಜಿ ಮೇಯರ್ ಹೆಸರು ತಿಳಿದಿದೆ. ಇದಕ್ಕೆ ಹೋಲಿಸಿದ್ದಲ್ಲಿ ಶೇಕಡಾ 97ರಷ್ಟು ಮಂದಿಗೆ ಪ್ರಧಾನ ಮಂತ್ರಿಯ ಹೆಸರು ತಿಳಿದಿದ್ದು, ಶೇಕಡಾ 83ರಷ್ಟು ಮಂದಿಗೆ ರಾಜ್ಯದ ಮುಖ್ಯಮಂತ್ರಿಯ ಹೆಸರು ತಿಳಿದಿದೆ.
  • ಶೇಕಡಾ 88ರಷ್ಟು ಮಂದಿಯು ತಮ್ಮ ವಾರ್ಡ್ ಕೌನ್ಸಿಲರ್ ಗಳನ್ನು ಈ ವರೆಗೆ ಭೇಟಿಯಾಗಿಲ್ಲ. ಶೇಕಡಾ 87 ರಷ್ಟು ಜನರಿಗೆ ವಾರ್ಡ್ ಸಮಿತಿಗಳ ಬಗ್ಗೆ ತಿಳಿದಿಲ್ಲ. ಶೇಕಡಾ 95ರಷ್ಟು ಮಂದಿ ಎಂದೂ ವಾರ್ಡ್ ಸಮಿತಿ ಸಭೆಗೆ ಹೋಗಿಲ್ಲ. ಶೇಕಡಾ 22ರಷ್ಟು ಮಂದಿ ನೇರವಾಗಿ ಎಂಎಲ್ ಎ ಬಳಿ ತೆರಳಿ ತಮ್ಮ ತೊಂದರೆಗಳನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಹೋಲಿಸಿದ್ದಲ್ಲಿ ಕೇವಲ 12% ಜನ ಮಾತ್ರ ತಮ್ಮ ಸ್ಥಳೀಯ ಕೌನ್ಸಿಲರ್ ಗಳನ್ನು ಭೇಟಿಯಾಗಿದ್ದಾರೆ.
  • ಶೇಕಡಾ 94ರಷ್ಟು ಜನರಿಗೆ 2021-22 ಆರ್ಥಿಕ ಸಾಲಿನಲ್ಲಿ ಬಿಬಿಎಂಪಿ ವಾರ್ಡ್ ಗಳಿಗೆ ನೀಡಿದ 60 ಲಕ್ಷ ರೂಪಾಯಿಗಳ ಬಗ್ಗೆ ತಿಳಿದಿಲ್ಲ
  • ಬೆಂಗಳೂರಿನ ಶೇಕಡಾ 87ರಷ್ಟು ಮತದಾರರ ಪ್ರಕಾರ BBMP ಪ್ರಬಲ ಕೌನ್ಸಿಲರ್ ಗಳಿಂದ ತಮ್ಮ ವಾರ್ಡ್‌ಗಳಿಗೆ ಉತ್ತಮ ಸೇವೆ ಒದಗಿಸಿ ಮೂಲಸೌಕರ್ಯದಲ್ಲಿ ಸುಧಾರಣೆಯನ್ನು ತರಲು ಸಾಧ್ಯ
  • ಬೆಂಗಳೂರಿನ ಶೇಕಡಾ 23ರಷ್ಟು ಮತದಾರರ ಸಮಸ್ಯೆಯು ಫುಟ್ಪಾತ್ ಗೆ ಸಂಬಂಧಿಸಿದ್ದು, 20 ಪ್ರತಿಶತ ಜನ ಕಸ ನಿರ್ವಹಣೆ ತಮ್ಮ ಸಮಸ್ಯೆಯೆಂದು ಸೂಚಿಸಿದ್ದು, 16 ಶೇಕಡಾವಾರಿನಷ್ಟು ಮಂದಿ ಸಂಚಾರ ಮತ್ತು 15 ಪ್ರತಿಶತ ಮಂದಿ ಸ್ವಚ್ಛ ಕುಡಿಯುವ ನೀರಿನ ಕೊರತೆಯನ್ನು ತಮ್ಮ ಮುಖ್ಯ ಸಮಸ್ಯೆಯನ್ನಾಗಿ ಎತ್ತಿಹಿಡಿದಿದ್ದಾರೆ
  • ಬೆಂಗಳೂರಿನ 89% ಮತದಾರರಿಗೆ ಪರಿಸರ ಸಮಸ್ಯೆಗಳು ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಕಾಳಜಿ ಇದ್ದು, ಕೇವಲ 25% ಮತದಾರರು ಕೌನ್ಸಿಲರ್‌ಗಳು ಪರಿಸರ ಸಮಸ್ಯೆಗಳಿಗೆ ಗಮನಾರ್ಹ ಪ್ರಾಮುಖ್ಯತೆಯನ್ನು ನೀಡುತ್ತಾರೆ ಎಂದು ಭಾವಿಸುತ್ತಾರೆ.

ಜನಾಗ್ರಹ ನಾಗರಿಕ ಸಹಭಾಗಿತ್ವ ವಿಭಾಗದ ಮುಖ್ಯಸ್ಥ ಶ್ರೀನಿವಾಸ್ ಅಲವಿಲ್ಲಿ ಮಾತನಾಡಿ, “ಬೆಂಗಳೂರಿನ ಬಹುತೇಕ ಮತದಾರರು ಬಿಬಿಎಂಪಿ ಚುನಾವಣೆಗಾಗಿ ಕಾಯುತ್ತಿದ್ದಾರೆ. ಆದರೆ ವರದಿಯ ಪ್ರಕಾರ ಬಿಬಿಎಂಪಿ, ವಾರ್ಡ್ ಕಾರ್ಪೊರೇಟರ್‌ಗಳು, ವಾರ್ಡ್ ಸಮಿತಿಗಳು ಇತ್ಯಾದಿಗಳ ಪಾತ್ರವನ್ನು ಕೆಲವೇ ಕೆಲವರು ಮಾತ್ರ ಅರ್ಥೈಸಿಕೊಂಡಿದ್ದಾರೆ. ಅವರೆಲ್ಲರ ಪ್ರಕಾರ ಬೆಂಗಳೂರಿಗರನ್ನು ಕಾಡುವ ಸಮಸ್ಯೆಯ ಆಧಾರದ ಮೇಲೆ ಸ್ಥಳೀಯ ಚುನಾವಣೆಯನ್ನು ನಡೆಸಬೇಕು. ನಮ್ಮ ನಗರವನ್ನು ಅಭಿವೃದ್ಧಿಪಡಿಸಲು ನಮ್ಮ ಸ್ಥಳೀಯ ಆಡಳಿತಾಂಗವನ್ನು ಬಲಪಡಿಸಬೇಕಾಗಿದೆ. ಇದು ಸ್ಥಳೀಯ ಚುನಾವಣೆಯಲ್ಲಿ ಭಾಗವಹಿಸುವುದರಿಂದ ಸಾಧ್ಯವಾಗುತ್ತದೆ. ನಮ್ಮ ನಗರಕ್ಕೆ ಸಧೃಡ ಭವಿಷ್ಯದ ಯೋಜನೆಯನ್ನು ಪ್ರಸ್ತುತಪಡಿಸಲು ಮತ್ತು ಅದರ ಆಧಾರದ ಮೇಲೆ ಮತಗಳನ್ನು ಕೇಳಲು ನಾವು ರಾಜಕೀಯ ಪಕ್ಷಗಳಿಗೆ ಮನವಿ ಮಾಡುತ್ತೇವೆ. ಮಾಧ್ಯಮದವರು ರಾಜ್ಯ ಮತ್ತು ರಾಷ್ಟೀಯ ಮಟ್ಟದ ಚುನಾವಣೆಗೆ ನೀಡುವ ಪ್ರಾಮುಖ್ಯತೆಯನ್ನು ಬಿಬಿಎಂಪಿ ಚುನಾವಣೆಗೂ ನೀಡಬೇಕು ಎಂದು ಕೇಳಿಕೊಳ್ಳುತ್ತಿದ್ದೇನೆ.” ಎಂದರು.

ಬೆಂಗಳೂರಿನ ಬಹುತೇಕ ನಾಗರಿಕರಿಗೆ ಮತ್ತು ಮತದಾರರಿಗೆ ವಾರ್ಡ್ ಮಟ್ಟದ ಆಡಳಿತಾಂಗದ ಬಗ್ಗೆ ಸಂಪೂರ್ಣವಾಗಿ ತಿಳಿದಿಲ್ಲ. ಆದರೆ, ಅವರ ಪ್ರಕಾರ ಒಳ್ಳೆಯ ಪಾದಾಚಾರಿ ಮಾರ್ಗ, ಸ್ವಚ್ಛ ಪರಿಸರ, ಸಶಕ್ತ ಸಂಚಾರಿ ವ್ಯವಸ್ಥೆ, ಸ್ವಚ್ಛ ಕುಡಿಯುವ ನೀರಿನ ವ್ಯವಸ್ಥೆ ಬೇಕಾಗಿದೆ ಎನ್ನುತ್ತಾರೆ.

ಶ್ರೇಣೀಕೃತ ಯಾದೃಚ್ಛಿಕ ಮಾದರಿ ವಿಧಾನವನ್ನು ಬಳಸಿ ನಡೆಸಲಾದ ಈ ಸಮೀಕ್ಷೆಯಲ್ಲಿ, ಬೆಂಗಳೂರಿನ ಎಂಟು ವಲಯಗಳಲ್ಲಿ ಇರುವ 27 ವಾರ್ಡ್ ಗಳ 503 ನಾಗರಿಕರು ಭಾಗವಹಿಸಿದ್ದಾರೆ. 16ನೇ ಡಿಸೆಂಬರ್ 2021 ರಿಂದ 2ನೇ ಜನವರಿ 2022ರ ವರೆಗೆ ನಡೆಸಲಾದ ಈ ಸಮೀಕ್ಷೆಯಲ್ಲಿ ವಿವಿಧ ವಯೋಮಿತಿ ಮತ್ತು ಆರ್ಥಿಕ ಹಾಗು ಸಾಮಾಜಿಕ ಹಿನ್ನಲೆಗೆ ಸೇರಿದ ವ್ಯಕ್ತಿಗಳು ಭಾಗವಹಿಸಿದ್ದಾರೆ.

ಈ ಸಮೀಕ್ಷೆಯ ವರದಿಯನ್ನು ಕನ್ನಡ ಮತ್ತು ಇಂಗ್ಲಿಷ್ ನಲ್ಲಿ ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ; ನಾವು ಯಾರಂತ ಜನರೇ ನಮಗೆ ಪರಿಚಯಿಸುತ್ತಾರೆ: ಟ್ರಾನ್ಸ್‌ಜೆಂಡರ್‌ ‘ಶಬ್ಬು’ ಜೀವನಗಾಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...