Homeಕರ್ನಾಟಕಮೋದಿ ಭೇಟಿಗಾಗಿ ಡಾಂಬರೀಕರಣ ಮಾಡಿದ್ದ 6 ಕೋಟಿ ವೆಚ್ಚದ ರಸ್ತೆ ಮೂರೇ ದಿನಕ್ಕೆ ಕುಸಿತ, ವರದಿ...

ಮೋದಿ ಭೇಟಿಗಾಗಿ ಡಾಂಬರೀಕರಣ ಮಾಡಿದ್ದ 6 ಕೋಟಿ ವೆಚ್ಚದ ರಸ್ತೆ ಮೂರೇ ದಿನಕ್ಕೆ ಕುಸಿತ, ವರದಿ ಕೇಳಿದ ಪ್ರಧಾನಿ ಕಚೇರಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆ ಬೆಂಗಳೂರಿನಲ್ಲಿ ಸುಮಾರು 6 ಕೋಟಿ ರೂಪಾಯಿ ವೆಚ್ಚದಲ್ಲಿ ಡಾಂಬರೀಕರಣ ಮಾಡಿ ಅಭಿವೃದ್ಧಿ ಪಡಿಸಿದ್ದ ರಸ್ತೆ ಮೂರೇ ದಿನದಲ್ಲಿ ಕಿತ್ತು ಹೋಗಿರುವ ಪೋಟೋ, ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಇದರಿಂದ ಮುಜುಗರಕ್ಕೀಡಾಗಿರುವ ಪ್ರಧಾನಿ ಕಾರ್ಯಾಲಯವು ರಾಜ್ಯ ಸರ್ಕಾರದಿಂದ ಸಮಗ್ರ ವರದಿ ಕೇಳಿದೆ.

ಎರಡು ದಿನಗಳ ರಾಜ್ಯ ಪ್ರವಾಸದ ಅಂಗವಾಗಿ ಪ್ರಧಾನಿ ಮೋದಿ ಬೆಂಗಳೂರಿಗೆ ಬಂದಿದ್ದರು. ಆಗ ಬಿಬಿಎಂಪಿ 24 ಕೋಟಿ ರೂಪಾಯಿ ವೆಚ್ಚ ಮಾಡಿ ರಸ್ತೆ, ವಿದ್ಯುತ್‌ ದೀಪ, ಚರಂಡಿ ವ್ಯವಸ್ಥೆ ಸೇರಿದಂತೆ ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಿತ್ತು. ಇದರ ಭಾಗವಾಗಿ ಜ್ಞಾನಭಾರತಿಯ ಡಾ.ಬಿ.ಆರ್.ಅಂಬೇಡ್ಕರ್‌ ಸ್ಕೂಲ್ ಆಫ್‌ ಎಕಾನಮಿಕ್ಸ್‌ (ಬೇಸ್‌) ಕ್ಯಾಂಪಸ್‌ ಬಳಿ 6 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಮಾಡಲಾಗಿತ್ತು. ಅದೇ ರಸ್ತೆ ಕುಸಿದಿದೆ.

ಈ ರಸ್ತೆಯ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲಾಣದಲ್ಲಿ ವೈರಲ್ ಆಗಿದ್ದವು. ಕಳಪೆ ಕಾಮಗಾರಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದರು. ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಸಾಕ್ಷಿ ಎಂದೆಲ್ಲ ಟೀಕೆ ವ್ಯಕ್ತವಾಗಿತ್ತು. ಇದರಿಂದ ಪ್ರಧಾನಿ ಕಚೇರಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ವರದಿ ಕೇಳಿದೆ.

ಇದನ್ನೂ ಓದಿ: ಮಂಡ್ಯ: ಬರ್ಬರವಾಗಿ ಕೊಲೆಯಾದ ಮಹಿಳೆಯರ ಸುಳಿವು ನೀಡಿದರೆ 1 ಲಕ್ಷ ಬಹುಮಾನ

ಪ್ರಧಾನ ಮಂತ್ರಿ ಕಚೇರಿ ಅಧಿಕಾರಿಗಳು ಗುರುವಾರ ಮುಖ್ಯಮಂತ್ರಿ ಕಚೇರಿಗೆ ಕರೆ ಮಾಡಿ, ಘಟನೆಯ ವರದಿಯನ್ನು ತಕ್ಷಣವೇ ಸಲ್ಲಿಸುವಂತೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದರಿಂದ ಸಿಎಂ ಬಸವರಾಜ ಬೊಮ್ಮಾಯಿ ಅವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ವಿವರಣೆಯನ್ನು ಸಲ್ಲಿಸುವಂತೆ ಹೇಳಿದ್ದು, ಕಳಪೆ ಕಾಮಗಾರಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಸೂಚಿಸಿದ್ದಾರೆ.

ತನಿಖೆಗೆ ಸೂಚಿಸಿರುವ ಸಿಎಂ ಬೊಮ್ಮಾಯಿ, ಈ ಪ್ರದೇಶದಲ್ಲಿ ನೀರಿನ ಪೈಪ್ ಸೋರಿಕೆಯಿಂದ ರಸ್ತೆ ಕುಸಿದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಕಳಪೆ ಕಾಮಗಾರಿ ಮಾಡಿದ ಅಧಿಕಾರಿಯನ್ನು ಅಮಾನತುಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಭೇಟಿಗೂ ಮುನ್ನ ಮೈಸೂರು ರಸ್ತೆ ಮತ್ತು ಬಳ್ಳಾರಿ ರಸ್ತೆ ಸೇರಿದಂತೆ 14 ಕಿಮೀ ಉದ್ದದ ರಸ್ತೆಗಳನ್ನು ಮರುನಿರ್ಮಾಣ ಮಾಡಲು 24 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ ಎಂದು ಬಿಬಿಎಂಪಿ ಇತ್ತೀಚೆಗೆ ಮಾಹಿತಿ ನೀಡಿದೆ.

ಬಿಬಿಎಂಪಿ ಪ್ರಕಾರ, ಕೆಂಗೇರಿಯಿಂದ ಕೊಮ್ಮಘಟ್ಟದವರೆಗಿನ ಏಳು ಕಿಮೀ ಉದ್ದದ ರಸ್ತೆಯನ್ನು 6 ಕೋಟಿ ರೂಪಾಯಿ ವೆಚ್ಚದಲ್ಲಿ ಡಾಂಬರೀಕರಣಗೊಳಿಸಲಾಗಿದೆ. ನಗರಕ್ಕೆ ಭೇಟಿ ನೀಡಿದ್ದ ಸಮಯದಲ್ಲಿ ಪ್ರಧಾನಿ ಮೋದಿ ಈ ಮಾರ್ಗದಲ್ಲಿ ಪ್ರಯಾಣಿಸಿದ್ದರು. ರಾತ್ರಿಯಿಡೀ ಸುರಿದ ಮಳೆಯಿಂದಾಗಿ ರಸ್ತೆ ಕುಸಿದಿದೆ ಎಂದು ಬಿಬಿಎಂಪಿ ಹೇಳಿದೆ.

ಬೆಂಗಳೂರು ನಗರದ ಮೂಲಸೌಕರ್ಯಗಳ ಕಳಪೆ ಪರಿಸ್ಥಿತಿಯು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕ ಹೈಕೋರ್ಟ್ ಕೂಡ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡು, ಆದಷ್ಟು ಬೇಗ ರಸ್ತೆ ಗುಂಡಿಗಳನ್ನು ತುಂಬಲು ಬಿಬಿಎಂಪಿಗೆ ನಿರ್ದೇಶನ ನೀಡಿದೆ.


ಇದನ್ನೂ ಓದಿ: ಪಠ್ಯಪುಸ್ತಕ ವಿವಾದಕ್ಕೆ ಆರ್‌.ಅಶೋಕ್‌ ಸ್ಪಷ್ಟೀಕರಣ: ಒಕ್ಕಲಿಗರನ್ನು ಒಡೆದು ಆಳುವ ಹುನ್ನಾರವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...